Breaking News

Laxminews 24x7

ಅಕ್ರಮ ನಿವೇಶನ ಹಂಚಿಕೆ ಲೋಕಾಯುಕ್ತರ ಮೊರೆ ಹೋದ ರಾಜಕುಮಾರ ಟೋಪಣ್ಣವರ

ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಕ್ರಮ ನಿವೇಶನ ಹಂಚಿಕೆಯ ವಿರುದ್ಧ ಲೋಕಾಯುಕ್ತರ ಮೊರೆ ಹೋಗಲಾಗಿದೆ ಎಂದು ಆಮ್ ಆದ್ಮಿ ಉತ್ತರ ವಲಯ ಉಸ್ತುವಾರಿ ರಾಜಕುಮಾರ ಟೋಪಣ್ಣವರ ಹೇಳಿದರು. ಶುಕ್ರವಾರ ನಗರದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಕಳೆದ ಮಾ. 16,17 ರಂದು ಬುಡಾದಿಂದ ಆನ್ ಲೈನ್ ಆಕ್ಷನ್ ಮಾಡಿದರು. ಮಾ.18 ರಂದು ಬುಡಾದವರು ಹೋಳಿ ಹಬ್ಬದ ದಿನ ಮ್ಯಾನ್ಯೂವಲ್ ಆಕ್ಷನ್ ಮಾಡಿ ನಿವೇಶನ ಹಂಚಿಕೆ ಮಾಡಿರುವ ಕುರಿತು ಅಂದಿನ ಜಿಲ್ಲಾಧಿಕಾರಿಗೆ ಮನವಿ …

Read More »

ವರ್ಷದಲ್ಲಿ ಬೆಳಗಾವಿ ಜಿಲ್ಲಾ ಪೊಲೀಸರ ದೊಡ್ಡ ಸಾಧನೆ, ಜಪ್ತಿ ಮಾಡಿ ಮೂಲ ಮಾಲೀಕರಿಗೆ ವಾಪಸ್

ಒಂದು ವರ್ಷದಲ್ಲಿ ಪೊಲೀಸರು 301 ಅಪರಾಧಗಳನ್ನು ಬಹಿರಂಗಪಡಿಸಿದ್ದಾರೆ ಮತ್ತು 324 ಆರೋಪಿಗಳನ್ನು ಬಂಧಿಸಲಾಗಿದೆ. ಒಟ್ಟು 17 ಕೋಟಿ 54 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. 4 ಕೋಟಿ 18 ಲಕ್ಷ, ಎಂಟು ಕೆಜಿ 369 ಗ್ರಾಂ ಚಿನ್ನ , 4 ಲಕ್ಷದ 91 ಸಾವಿರದ 7 ಕೆಜಿ ಬೆಳ್ಳಿ, 1 ಕೋಟಿ 24 ಲಕ್ಷ ರೂ. 3 ಕೋಟಿ 99 ಲಕ್ಷ ರೂ, 7 ಕೋಟಿ 47 ಲಕ್ಷ ಮೌಲ್ಯದ …

Read More »

ಬೆಳಗಾವಿಯ ಸುವರ್ಣ ವಿಧಾನ ಸೌಧ ಸಜ್ಜಾಗುತಿದ್ತೆ ಅಧಿವೇಶನಕ್ಕೆ

ಗಂಟು ಮೂಟೆ ಕಟ್ಟಿಕೊಂಡು ಕರ್ನಾಟಕ ಸರಕಾರ ಬೆಳಗಾವಿಯ ಸುವರ್ಣ ವಿಧಾನ ಸೌಧಕ್ಕೆ ಶಿಫ್ಟ್ ಆಗುತ್ತಿದೆ. ಸೋಮವಾರದಿಂದ ಚಳಿಗಾಲದ ಅಧಿವೇಶನ. ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ‌ ನಡೆಯಲಿದ್ದು, ಅದಕ್ಕಾಗಿ‌ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಬೆಳಗಾವಿ ‌ಮಹಾನಗರದಲ್ಲಿ ಹತ್ತು ದಿನಗಳ ಕಾಲ ಸಚಿವರು, ಅಧಿಕಾರಿಗಳು, ವಿವಿಧ ಪಕ್ಷದ ನಾಯಕರು, ಗಣ್ಯಾತಿ ಗಣ್ಯರು ಓಡಾಡುತ್ತಾರೆ. ಹೀಗಾಗಿ ನಗರದ ರಸ್ತೆಗಳನ್ನು ಸುಧಾರಿಸುವ ಕೆಲಸ ಒಂದು ಕಡೆ ನಡೆದರೆ, ಸುವರ್ಣ ವಿಧಾನಸೌಧಕ್ಕೆ ಹೊಸ‌ ಸ್ವರೂಪ ನೀಡುವ ಕಾರ್ಯವೂ …

Read More »

46 ಸಾವಿರ ನೇಕಾರ ಕುಟುಂಬಗಳ ವಿದ್ಯಾರ್ಥಿಗಳಿಗೆ ಮಕ್ಕಳ ವಿದ್ಯಾನಿಧಿ ಬಿಡುಗಡೆ?

ನೇಕಾರರ ಮಕ್ಕಳ ವಿದ್ಯಾನಿಧಿ ಯೋಜನೆಗೆ 46 ಸಾವಿರ ನೇಕಾರ ಕುಟುಂಬಗಳ ವಿದ್ಯಾರ್ಥಿಗಳಿಗೆ ಗುರುತಿಸಲಾಗಿದ್ದು, ಶೀಘ್ರವಾಗಿ ವಿದ್ಯಾನಿಧಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನೇಕಾರ್ ಸಮ್ಮಾನ್ ಯೋಜನೆಯಡಿ ಕೈಮಗ್ಗ ನೇಕಾರರಿಗೆ ಡಿಬಿಟಿ ಮೂಲಕ ಸಹಾಯಧನ ವರ್ಗಾವಣೆಗೆ ಚಾಲನೆ ನೀಡಿದರು. 46 ಸಾವಿರ ನೇಕಾರ ಕುಟುಂಬದ ವಿದ್ಯಾರ್ಥಿಗಳ ದಾಖಲೆಗಳನ್ನು ಹದಿನೈದು ದಿನದೊಳಗೆ ಪಡೆದು ಪಟ್ಟಿಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಮುಖ್ಯಮಂತ್ರಿಗಳು, ವಿದ್ಯಾರ್ಥಿಗಳಿಗೆ …

Read More »

ಬೆಳಗಾವಿಯಲ್ಲಿ ರಾಷ್ಟ್ರಮಟ್ಟದ ಟ್ರ್ಯಾಕಿಂಗ್ ( ಚಾರಣ) ಶಿಬಿರಕ್ಕೆ ಚಾಲನೆ

ನಮ್ಮ ಯುವ ಜನಾಂಗವು ರಾಷ್ಟ್ರದ ಸಂಪತ್ತಾಗಿದ್ದು ದೇಶದ ಸಂಸ್ಕೃತಿ ಪರಂಪರೆ ಹಾಗೂ ಪರಿಸರವನ್ನು ತಿಳಿದುಕೊಳ್ಳುವುದು ಅವಶ್ಯವಾಗಿದೆ. ಪರಿಸರವನ್ನು ಸಂರಕ್ಷಿಸಿ ಅದನ್ನು ಪೋಷಿಸಿ ಬೆಳೆಸುವುದು ಕೂಡ ನಮ್ಮ ಕರ್ತವ್ಯವಾಗಿದೆ ಎಂದು ಎನ್ ಸಿಸಿಯ ಪ್ರಮುಖ ಧ್ಯೇಯವಾಗಿದೆ ಎಂದು ಬೆಳಗಾವಿಯೇ ಎನ್ ಸಿ ಸಿ ಗ್ರೂಪ್ ಕಮಾಂಡರ್ ಕರ್ನಲ್ ಎಸ್ ಶ್ರೀನಿವಾಸ ಹೇಳಿದರು. ಅವರು ಬೆಳಗಾವಿಯ ಜಾದವ್ ನಗರದಲ್ಲಿ ಬೆಳಗಾವಿ ಎನ್ ಸಿ ಸಿ ಗ್ರೂಪ್ ಅಡಿಯಲ್ಲಿ ಜರುಗುತ್ತಿರುವ ಅಖಿಲ ಭಾರತ ಟ್ರ್ಯಾಕಿಂಗ್ …

Read More »

ವಕೀಲರಿಗೆ ಭದ್ರತೆ ಇಲ್ಲದಂತಾಗಿದೆ.

ದೇಶದಲ್ಲಿ ನ್ಯಾಯಾಂಗ ವ್ಯವಸ್ಥೆಯಲ್ಲಿ ವಕೀಲರ ಪಾತ್ರ ಮಹತ್ವದಾಗಿದ್ದು, ಆದ್ರೆ ವಕೀಲರಿಗೆ ಭದ್ರತೆ ಇಲ್ಲದಂತಾಗಿದೆ. ಹೀಗಾಗಿ ವಕೀಲರಿಗೆ ಭದ್ರತೆಯನ್ನು ಒದಗಿಸುವ ಕಾನೂನನ್ನು ರಾಜ್ಯದಲ್ಲಿ ತರುವಂತೆ ಒತ್ತಾಯಿಸಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಚಿಕ್ಕೋಡಿ ತಾಲ್ಲೂಕು ವಕೀಲರ ಸಂಘದಿಂದ ತಹಶೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಚಿಕ್ಕೋಡಿ ತಾಲ್ಲೂಕು ವಕೀಲರ ಸಂಘದ ಕಚೇರಿಯಿಂದ ಮಿನಿ ವಿಧಾನಸೌಧದವರೆಗೂ ಪ್ರತಿಭಟನಾ ಮೆರವಣಿಗೆ ಕೈಗೊಂಡ ವಕೀಲರು ಕೆಲ ಕಾಲ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿ …

Read More »

ಅತಿ ಕಡಿಮೆ ದರದಲ್ಲಿ “ಇ ಬೈಕ್, ಇ ಸೈಕಲ್” ರೈಡಿಂಗ್ ಲಭ್ಯ

ಜನರ ಓಡಾಟಕ್ಕಾಗಿ ಅನುಕೂಲವಾಗಲು ಸ್ಮಾರ್ಟ್ ಸಿಟಿ ಸಹಯೋಗದಲ್ಲಿ ಇ ಸೈಕಲ್ ಹಾಗೂ ಇ ಬೈಕ್ ಗಳನ್ನು ಶಾಸಕ ಅಭಯ ಪಾಟೀಲ ಅವರು ಚಾಲನೆ ನೀಡಿದರು. ಬೆಳಗಾವಿಯ ಶಾಹಸಪುರದ ಶಿವ ಚರಿತ್ರೆ ಹತ್ತಿರ ಇ ಸೈಕಲ್ ಹಾಗೂ ಇ ಬೈಕ್ ಗಳಿಗೆ ಚಾಲನೆ ನೀಡದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಅಭಯ ಪಾಟೀಲ ಅವರು, 100 ಇ ಸೈಕಲ್, 100 ಇ ಬೈಕ್ ಹಾಗೂ 100 ಸೈಕಲ್ ಹೀಗೆ 300 …

Read More »

ಅಥಣಿ ಡಿಪೋ ಅಧಿಕಾರಿಗಳ ವಿರುದ್ದ ವಿದ್ಯಾರ್ಥಿಗಳು ಮತ್ತು ಪೋಷಕರ ಆಕ್ರೋಶ

ಅಥಣಿ ತಾಲೂಕಿನ ಕೊಟ್ಟಲಗಿ ಗ್ರಾಮದಲ್ಲಿ ಸಮಯಕ್ಕೆ ಸರಿಯಾಗಿ ಬಸ್ಸುಗಳು ಬರುತ್ತಿಲ್ಲ ಇದರಿಂದಾಗಿ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆ ಆಗುತ್ತಿದೆ ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಕೊಟ್ಟಲಗಿ ಗ್ರಾಮವು ಅಥಣಿ ತಾಲೂಕಿನ ಕೊನೆಯ ಹಳ್ಳಿಯಾಗಿದ್ದು ಬಸ್ಸುಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಾಚರಣೆ ಮಾಡುವ ಅಗತ್ಯ ಇದೆ. ಎರಡು ಮೂರು ಬಸ್ಸುಗಳು ಏಕಕಾಲಕ್ಕೆ ಬಂದರೆ ಮಾತ್ರ ಪ್ರಯಾಣಿಕರಿಗೆ ಅನುಕೂಲವಾಗುತ್ತಿದೆ. ಬಸ್ಸುಗಳು ಹೆಚ್ಚಿನ ಪ್ರಯಾಣಿಕರನ್ನು ತುಂಬಿಕೊಳ್ಳುತ್ತಿದ್ದು ವಿದ್ಯಾರ್ಥಿಗಳು ಪುಟ್ ಬೋರ್ಡನಲ್ಲಿ ನಿಂತು ಪ್ರಯಾಣ ಮಾಡುವ ಪರಿಸ್ಥಿತಿ ಇದೆ …

Read More »

ಆಪರೇಷನ್ ಬಾಂಬ್ ಸಿಡಿಸಿದ ಸಚಿವ ಮುನಿರತ್ನ

ಕೋಲಾರ: ಕಂದಾಯ ಸಚಿವ ಆರ್.ಅಶೋಕ್ ಆಪರೇಷನ್ ಕಮಲದ ಸುಳಿವು ನೀಡಿದ ಬೆನ್ನಲ್ಲೇ ತೋಟಗಾರಿಕಾ ಸಚಿವ ಮುನಿರತ್ನ 10 ಕಾಂಗ್ರೆಸ್ ನಾಯಕರ ಟೀಂ ನ್ನು ಕರೆತರುತ್ತಿದ್ದೇವೆ ಎಂದು ಹೇಳಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮುನಿರತ್ನ, ಸಮ್ಮಿಶ್ರ ಸರ್ಕಾರ ಇದ್ದಾಗ ನಾವು 17 ಶಾಸಕರು ಬಿಜೆಪಿಗೆ ಬಂದಿದ್ದೆವು. ಈಗ 10 ಶಾಸಕರು ಸಜ್ಜಾಗಿದ್ದಾರೆ. ಶೀಘ್ರದಲ್ಲಿಯೇ ಅವರನ್ನು ಬಿಜೆಪಿಗೆ ಕರೆತರಲಾಗುವುದು ಎಂದರು. ಒಟ್ಟು 22 ಶಾಸಕರು ರೆಡಿ ಇದ್ದಾರೆ ಅವರಲ್ಲಿ ನಾವು 10 ಜನರನ್ನು …

Read More »

ಮದುವೆ ಆಗುವುದಾಗಿ ಹೇಳಿ ಲೈಂಗಿಕವಾಗಿ ಬಳಸಿಕೊಂಡ.. ಕೊನೆಗೂ ಕೈಕೊಟ್ಟು ಸಿಕ್ಕಿಬಿದ್ದ

ಹೈದರಾಬಾದ್​:ಸರ್ಕಾರಿ ಅಧಿಕಾರಿಯೋರ್ವ ತನ್ನದೇ ಇಲಾಖೆ ಮಹಿಳೆ ಅಧಿಕಾರಿಯನ್ನು ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿರೋ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಕರ್ನೂಲ್​​ ಜಿಲ್ಲೆಯಲ್ಲಿ ಡ್ರಗ್​ ಇನ್ಸ್​ಪೆಕ್ಟರ್​ ಆಗಿ ಕೆಲಸ ಮಾಡುತ್ತಿರುವ ಅಬೀದ್​ ಅಲಿ ಎಂಬಾತ ತನ್ನ ಸಹೋದ್ಯೋಗಿ ಮಹಿಳೆಗೆ ವಂಚಿಸಿದ ಕಿಡಿಗೇಡಿ.   ಇಬ್ಬರು ಒಂದೇ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ಜತೆಗೆ ಒಂದೇ ಸಮುದಾಯಕ್ಕೆ ಸೇರಿದವರು ಕೂಡ. ಅಬೀದ್​ ಅಲಿ ತನಗೆ ಮದುವೆ ಆಗಿರೋ ವಿಷಯ ಬಚ್ಚಿಟ್ಟು ತನ್ನ ಇಲಾಖೆ ಮಹಿಳಾ ಅಧಿಕಾರಿ …

Read More »