ಧಾರವಾಡ: ‘ಕಾಂತಾರ’ ಸಿನಿಮಾ ಹಿನ್ನೆಲೆಯಲ್ಲಿ ಕರಾವಳಿಯ ಭೂತದ ಕೋಲದ ಆಚರಣೆ ಹಾಗೂ ಹಿಂದುತ್ವದ ವಿಚಾರವಾಗಿ ವಿವಾದಾತ್ಮಕ ಹೇಳಿಕೆ ನೀಡಿರುವ ನಟ ಚೇತನ್ ವಿರುದ್ಧ ಇದೀಗ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕೂಡ ಕಿಡಿಕಾರಿದ್ದು, ಹೇಳಿಕೆ ವಾಪಸ್ ಪಡೆಯುವಂತೆ ಆಗ್ರಹಿಸಿದ್ದಾರೆ. ‘ಕಾಂತಾರ’ ಸಿನಿಮಾ ಹಿನ್ನೆಲೆಯಲ್ಲಿ ನಟ ಚೇತನ್ ಅಪಸ್ವರ ಎತ್ತಿರುವ ವಿಚಾರವಾಗಿ ಪ್ರತಿಕ್ರಿಯಿರುವ ಪ್ರಮೋದ್ ಮುತಾಲಿಕ್, ಚೇತನ್ಗೆ ಯಾಕೆ ಉರಿ? ಎಂದು ಕಿಡಿಕಾರಿದ್ದಾರೆ. ಧಾರವಾಡದಲ್ಲಿ ಇಂದು ಸುದ್ದಿಗಾರರ ಜತೆ ಮಾತನಾಡಿದ ಮುತಾಲಿಕ್, …
Read More »ರಾಜ್ಯದ ‘SSLC’ ವಿದ್ಯಾರ್ಥಿಗಳಿಗೆ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ ಮಹತ್ವದ ಸುತ್ತೋಲೆ
ಬೆಂಗಳೂರು : 2022-23 ಸಾಲಿನ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಗೆ ವಿದ್ಯಾರ್ಥಿಗಳು ಸಾಮಾನ್ಯ ವಿಷಯಗಳ ಜೊತೆ ಎರಡು ತಾಂತ್ರಿಕ ವಿಷಯಗಳನ್ನು ಅಭ್ಯಾಸ ಮಾಡಿ ಪರೀಕ್ಷೆ ತೆಗೆದುಕೊಳ್ಳುವುದು ಕಡ್ಡಾಯವಾಗಿರುತ್ತದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಆದೇಶಿಸಿದೆ. ಈ ಕುರಿತು ಪರೀಕ್ಷಾ ಮಂಡಳಿ ನಿರ್ದೇಶಕರಾದ ಹೆಚ್ ಎನ್ ಗೋಪಾಲಕೃಷ್ಣ ಸುತ್ತೋಲೆ ಹೊರಡಿಸಿದ್ದು ಎರಡು ತಾಂತ್ರಿಕ ವಿಷಯಗಳಲ್ಲಿ ಒಂದು ಥಿಯರಿ ಮತ್ತೊಂದು ಪ್ರಾಯೋಗಿಕ ಪರೀಕ್ಷೆ ವಿಷಯವಾಗಿರುತ್ತದೆ. ಕಿರಿಯ ತಾಂತ್ರಿಕ …
Read More »ಇಂದಿನಿಂದ ವಾಹನ ಚಾಲನೆ ವೇಳೆ ಸೀಟ್ ಬೆಲ್ಟ್ ಕಡ್ಡಾಯ, ತಪ್ಪಿದರೇ 1 ಸಾವಿರ ದಂಡ – ಡಿಜಿ, ಐಜಿಪಿ ಪ್ರವೀಣ್ ಸೂದ್
ಬೆಂಗಳೂರು: ವಾಹನಗಳಲ್ಲಿ ತೆರಳುತ್ತಿದ್ದ ವೇಳೆಯಲ್ಲಿ ವಾಹನ ಚಾಲನೆ ವೇಳೆಯಲ್ಲಿ ಸೀಟ್ ಬೆಲ್ಟ್ ಧರಿಸದ ಕಾರಣ, ಅಪಘಾತಗಳಲ್ಲಿ ವಾಹನ ಸವಾರರು ಸಾವನ್ನಪ್ಪುವುದು ಹೆಚ್ಚಾಗಿತ್ತು. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದಿಂದ ವಾಹನ ಚಾಲನೆ ವೇಳೆ ಸೀಟ್ ಬೆಲ್ಡ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಈಗಾಗಲೇ ಮುಂಬೈನಲ್ಲಿ ಈ ನಿಯಮ ನವೆಂಬರ್ 1ರಿಂದ ಜಾರಿಗೊಳ್ಳಲಿದೆ. ಇದೇ ವೇಳೆ ಕರ್ನಾಟಕದಲ್ಲಿಯೂ ವಾಹನ ಚಾಲನೆ ವೇಳೆ ಸೀಟ್ ಬೆಲ್ಡ್ ಧರಿಸುವುದನ್ನು ಕಡ್ಡಾಯಗೊಳಿಸಿ, ಡಿಜಿ-ಐಜಿಪಿ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ. ಕೇಂದ್ರ …
Read More »ನೇಮಕಾತಿ ಹಗರಣ | ಧಮ್ ಇದ್ದರೆ ತನಿಖೆ ನಡೆಸಿ: ಬೊಮ್ಮಾಯಿಗೆ H.D.K. ಸವಾಲು
ಮೈಸೂರು: ‘ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನೇಮಕಾತಿಯಲ್ಲಿ ನಡೆದಿರುವ ಅಕ್ರಮ ವ್ಯವಹಾರಗಳ ದಾಖಲೆಗಳನ್ನು ರಾಹುಲ್ ಗಾಂಧಿಗೆ ಕಳುಹಿಸುತ್ತೀರೇಕೆ? ನಿಮಗೆ ಧಮ್ ಇದ್ದರೆ ಸಚಿವ ಸಂಪುಟದಲ್ಲಿಟ್ಟು ತನಿಖೆ ಮಾಡಿಸಿ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸವಾಲು ಹಾಕಿದರು. ಮುಖ್ಯಮಂತ್ರಿಯು ಬೀದರ್ ಜಿಲ್ಲೆಯ ಔರಾದ್ನಲ್ಲಿ ನಡೆದ ಬಿಜೆಪಿಯ ಜನಸಂಕಲ್ಪ ಯಾತ್ರೆಯಲ್ಲಿ ನೀಡಿದ್ದ ಹೇಳಿಕೆಗೆ ಇಲ್ಲಿ ತಿರುಗೇಟು ಕೊಟ್ಟ ಅವರು, ‘ದಾಖಲೆಗಳನ್ನು ರಾಹುಲ್ಗೆ ಕಳುಹಿಸಿ ಏನು …
Read More »KSRTC: ಕೆಎಸ್ಆರ್ಟಿಸಿ ಸಿಬ್ಬಂದಿಗೆ ₹50 ಲಕ್ಷ ಪ್ರೀಮಿಯಂ ರಹಿತ ಅಪಘಾತ ವಿಮೆ
ಬೆಂಗಳೂರು: ಕೆಎಸ್ಆರ್ಟಿಸಿ ಸಿಬ್ಬಂದಿಗೆ ₹50 ಲಕ್ಷದ ತನಕ ಅಪಘಾತ ವಿಮಾ ಸೌಲಭ್ಯ ದೊರಕಿಸುವ ಯೋಜನೆಯನ್ನು ನಿಗಮ ಜಾರಿಗೆ ತಂದಿದೆ. ಈ ಸಂಬಂಧ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ಬಿಐ) ಜತೆ ಒಡಂಬಡಿಕೆಯನ್ನು ಕೆಎಸ್ಆರ್ಟಿಸಿ ಬುಧವಾರ ಮಾಡಿಕೊಂಡಿದೆ. ನಿಗಮದ ಅಧ್ಯಕ್ಷ ಚಂದ್ರಪ್ಪ ಸಮ್ಮುಖದಲ್ಲಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಮತ್ತು ಎಸ್ಬಿಐ ಉಪ ಪ್ರಧಾನ ವ್ಯವಸ್ಥಾಪಕ ಪಂಕಜ್ ತಪ್ಲಿಯಾಲ್ ಒಪ್ಪಂದಕ್ಕೆ ಸಹಿ ಹಾಕಿದರು. ಅಪಘಾತದಲ್ಲಿ ಸಿಬ್ಬಂದಿ ಮೃತಪಟ್ಟರೆ ಅವಲಂಬಿತರಿಗೆ ಈವರೆಗೆ ಪರಿಹಾರ ಸಿಗುತ್ತಿರಲಿಲ್ಲ. ಹೊಸ …
Read More »K.P.T.C.L. ಪರೀಕ್ಷೆ ಅಕ್ರಮ ಮತ್ತೊರ್ವ ಆರೋಪಿಯನ್ನು ಬಂಧಿಸುವಲ್ಲಿ ಗೋಕಾಕ್ ನಗರ ಪೊಲೀಸರು ಯಶಸ್ವಿ
ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಮತ್ತೊರ್ವ ಆರೋಪಿಯನ್ನು ಬಂಧಿಸುವಲ್ಲಿ ಗೋಕಾಕ್ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಭೀಮಶಿ(ಭೀಮಪ್ಪ) ಸಿದ್ದಪ್ಪ ಗುದಿಗೊಪ್ಪ ಬಂಧಿತ ಆರೋಪಿ. ಈತ ಇಲೆಕ್ಟ್ರಾನಿಕ್ ಡಿವೈಸ್ಗಳನ್ನೂ ವಿದ್ಯಾರ್ಥಿಗಳಿಗೆ ಕೊಟ್ಟವನು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಲು ಮತ್ತು ಇಲೆಕ್ಟ್ರಾನಿಕ್ ಡಿವೈಸ್ ಖರೀದಿ ಮಾಡಲು ಹಣ ಕೊಟ್ಟವನು. ಈತನಿಂದ 6 ಮೊಬೈಲ್ ಮತ್ತು ಒಂದು ಲ್ಯಾಪಟಾಪ್ ಮತ್ತು 3 ಇಲೆಕ್ಟ್ರಾನಿಕ್ ಡಿವೈಸ್ ಮತ್ತು ಒಂದು ಕಾರನ್ನು ಜಪ್ತಿ ಮಾಡಲಾಗಿದೆ. ಬಂಧಿತ ಆರೋಪಿಯನ್ನು …
Read More »ನನ್ನ ಆಯ್ಕೆ ಮಾಡಿದ ಎಲ್ಲರಿಗೂ ಧನ್ಯವಾದ: A.I.C.C.ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನನ್ನನ್ನು ಆಯ್ಕೆ ಮಾಡಿದ ಎಲ್ಲರಿಗೂ ಧನ್ಯವಾದ. ಜೊತೆಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೂ ಧನ್ಯವಾದ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಎಐಸಿಸಿ ಅಧ್ಯಕ್ಷರಾಗಿ ಕನ್ನಡಿಗ, ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ತಮ್ಮ ಆಯ್ಕೆ ಘೋಷಣೆ ಆಗುತ್ತಿದ್ದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು ನನ್ನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ದೇಶಾದ್ಯಂತ ಪಕ್ಷವನ್ನು ಸಂಘಟಿಸಲು ಮತ್ತಷ್ಟು ಪ್ರಯತ್ನಿಸುವೆ. ಬೂತ್ ಮಟ್ಟದಲ್ಲಿ …
Read More »ಇದು ಸ್ಮಶಾನವೋ..? ಗಾಡಿ ಪಾರ್ಕಿಂಗ್ ಜಾಗವೋ..? ಮಾಜಿ ಮೇಯರ್ ವಿಜಯ್ ಮೋರೆ
ಈ ಸ್ಮಶಾನ ಭೂಮಿಯನ್ನು ವಿವಿಧ ಸಂಘಟನೆಗಳು ಕೂಡಿಕೊಂಡು ನಂದನವನವಾಗಿ ಅಭಿವೃದ್ಧಿ ಮಾಡಿದ್ದರು. ಆದರೆ ಮಹಾನಗರ ಪಾಲಿಕೆ ಅಧಿಕಾರಿಗಳ ನಿರ್ವಹಣೆ ಕೊರತೆಯಿಂದ ಈ ಸ್ಮಶಾನ ಭೂಮಿ ಹಲವು ಸಮಸ್ಯೆಗಳ ತಾಣವಾಗಿ ಮಾರ್ಪಟ್ಟಿದೆ. ಅಲ್ಲದೇ ಇದು ಸ್ಮಶಾನವೋ..? ಗಾಡಿ ಪಾರ್ಕಿಂಗ್ ಜಾಗವೋ..? ಎಂದು ಜನ ಪ್ರಶ್ನಿಸುತ್ತಿದ್ದಾರೆ. ಎಲ್ಲಿ ಬೇಕಾದಲ್ಲಿ ನಿಲ್ಲಿಸಿರುವ ಹಳೆಯ ವಾಹನಗಳು, ಕಸ ವಿಲೇವಾರಿ ವಾಹನಗಳು, ಹದಗೆಟ್ಟ ರಸ್ತೆ. ಹೌದು ನೀವು ನೋಡುತ್ತಿರುವ ಈ ದೃಶ್ಯ ಬೆಳಗಾವಿಯ ಪ್ರಸಿದ್ಧ ಸದಾಶಿವ ನಗರ …
Read More »ಖರ್ಗೆಗೆ ಭರ್ಜರಿ ಗೆಲುವು – 24 ವರ್ಷಗಳ ಬಳಿಕ ಗಾಂಧೀಯೇತರ ವ್ಯಕ್ತಿಗೆ ಕಾಂಗ್ರೆಸ್ ಪಟ್ಟ
ನವದೆಹಲಿ: 24 ವರ್ಷದ ಬಳಿಕ ಗಾಂಧಿಯೇತರ ವ್ಯಕ್ತಿ ಶತಮಾನದ ಇತಿಹಾಸ ಹೊಂದಿರುವ ಕಾಂಗ್ರೆಸ್ (Congress) ಪಕ್ಷದ ಸಾರಥಿಯಾಗಿದ್ದಾರೆ. ರಾಜ್ಯಸಭೆಯ ಪ್ರತಿಪಕ್ಷದ ನಾಯಕನಾಗಿದ್ದ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಎಐಸಿಸಿ (AICC) ಅಧ್ಯಕ್ಷರಾಗಿದ್ದಾರೆ. ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಹೊಸ ಅಧ್ಯಕ್ಷರ ಆಯ್ಕೆಗೆ ನಡೆದಿದ್ದ ಚುನಾವಣೆಯ ಮತ ಎಣಿಕೆಯ ಫಲಿತಾಂಶ ಇಂದು ಹೊರಬಿದ್ದಿದ್ದು, ಮಲ್ಲಿಕಾರ್ಜುನ ಖರ್ಗೆ ನೂತನ ಸಾರಥಿಯಾಗಿದ್ದಾರೆ. ಎಐಸಿಸಿ (AICC) ಅಧ್ಯಕೀಯ ಚುನಾವಣೆಯಲ್ಲಿ ಒಟ್ಟು 9,385 ಮತಗಳು ಚಲಾವಣೆಗೊಂಡಿದ್ದವು. ಇದರಲ್ಲಿ …
Read More »ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ತೊಡೆತಟ್ಟುವುದು ಫಿಕ್ಸ್..?
ಬೆಂಗಳೂರು,ಅ.19- ಎಲ್ಲ ರಾಜಕೀಯ ವದಂತಿಗಳಿಗೆ ತೆರೆ ಎಳೆದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ವಕ್ಷೇತ್ರ ವರುಣಾದಿಂದಲೇ ಸ್ರ್ಪಸಿದರೆ ಬಿ.ಎಸ್.ಯಡಿಯೂರಪ್ಪ ಪುತ್ರ ವಿಜಯೇಂದ್ರ ಕೂಡ ಇಲ್ಲಿಂದಲೇ ಕಣಕ್ಕಿಳಿಯಲು ಮುಂದಾಗಿದ್ದಾರೆ. ಶತಾಯಗತಾಯ 2023ರ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರನ್ನು ತವರು ನೆಲದಲ್ಲೇ ಹಿಮ್ಮೆಟ್ಟಿಸಬೇಕೆಂದು ರಣತಂತ್ರ ರೂಪಿಸಿರುವ ಬಿಜೆಪಿ ಮಾಜಿ ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರನ್ನು ವರುಣಾದಿಂದಲೇ ಸ್ರ್ಪಸಲು ಮನವೊಲಿಸಿದೆ. ಈಗಾಗಲೇ ಯಡಿಯೂರಪ್ಪ ಅವರು ತಾವು 2023ರ ವಿಧಾನಸಭೆ ಚುನಾವಣೆಯಲ್ಲಿ ಸ್ರ್ಪಸದೆ …
Read More »
Laxmi News 24×7