ಬೆಂಗಳೂರು: 2023 ರ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಾಂಚಜನ್ಯ ಮೊಳಗಿಸಿದೆ. ರಾಯಚೂರು ಜಿಲ್ಲೆಯಿಂದಲೇ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಮತಬೇಟೆ ಆರಂಭಿಸಿದೆ. ರಾಯಚೂರಿನ ಗಿಲ್ಲೆಸಗೂರಿನಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ನಿಮ್ಮ ಹಗರಣಗಳನ್ನೆಲ್ಲ ಬಯಲು ಮಾಡುತ್ತೇವೆ. ನಿಮ್ಮ ಯೋಗ್ಯತೆಗಳನ್ನು ಜನರ ಮುಂದೆ ಇಡುತ್ತೇವೆ ಎಂದು ಹೇಳುವ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ. ಮುಂದಿನ ಅಧಿವೇಶನದಲ್ಲಿ …
Read More »ಮೂರು ಹೆಣ್ಣು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ
ಅಥಣಿ (ಬೆಳಗಾವಿ): ಪಕ್ಕದ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಬಿಳ್ಳೂರ ಗ್ರಾಮದ ಹೊರವಲಯದಲ್ಲಿ ತಾಯಿ ಮತ್ತು ಮೂರು ಹೆಣ್ಣು ಮಕ್ಕಳು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಸೋಮವಾರ ನಡೆದಿದೆ. ಮೃತ ಮಹಿಳೆ ಬೆಳಗಾವಿ ಮೂಲದವರಾಗಿದ್ದು, ಮಹಾರಾಷ್ಟ್ರ ವ್ಯಕ್ತಿಯನ್ನು ಮದುವೆಯಾಗಿದ್ದರು. ಮೂರು ಹೆಣ್ಣು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ: ಮೃತಪಟ್ಟವರನ್ನು ತಾಯಿ ಸುನೀತಾ ತುಕಾರಾಮ ಮಾಳಿ (27), ಮಕ್ಕಳಾದ ಅಮೃತಾ ತುಕಾರಾಮ ಮಾಳಿ (13), ಅಂಕಿತ ತುಕಾರಾಮ ಮಾಳಿ (10) ಮತ್ತು …
Read More »ಬೆಳಗಾವಿಯ ಸುವರ್ಣಸೌಧ ನಿರ್ಮಾಣಗೊಂಡು 10 ವರ್ಷ, ಒಂದು ಅಧಿವೇಶನ ಕೇವಲ 10 ದಿನಕ್ಕೆ ಮಾತ್ರ ಸಿಮೀತ
ಬೆಳಗಾವಿಯ ಸುವರ್ಣಸೌಧ ನಿರ್ಮಾಣಗೊಂಡು 10 ವರ್ಷ ಆಗಿದೆ. ಆದರೂ ಕೇವಲ ಕಟ್ಟಡವಾಗಿಯೇ ಈ ಶಕ್ತಿ ಸೌಧ ಉಳಿದುಕೊಂಡಿದೆ. ವರ್ಷದಲ್ಲಿ ಅಪರೂಪಕ್ಕೆ ಎನ್ನುವಂತೆ ಒಂದು ಬಾರಿ ಅಧಿವೇಶನ ನಡೆಯೋದು ಬಿಟ್ಟರೆ ಮತ್ಯಾವುದಕ್ಕೂ ಇದು ಉಪಯೋಗಕ್ಕೆ ಬರುತ್ತಿಲ್ಲ. ಹೌದು ಉತ್ತರ ಕರ್ನಾಟಕ ಜನರ ಶಕ್ತಿ ಕೇಂದ್ರವಾಗಿದ್ದ ಸುವರ್ಣಸೌಧಕ್ಕೆ ಈವರೆಗಿನ ಯಾವ ಸರ್ಕಾರಗಳು ಶಕ್ತಿ ತುಂಬುವ ಕೆಲಸ ಮಾಡಲಿಲ್ಲ. ಈ ಸುವರ್ಣಸೌಧ ಕಟ್ಟಿ ಹತ್ತು ವರ್ಷವಾಗಿದೆ. ಈ ಹತ್ತು ವರ್ಷದಲ್ಲಿ ಅಧಿವೇಶನ ನಡೆದಿದ್ದು ಕೇವಲ …
Read More »ಎಟಿಎಂ ಎಕ್ಸಚೆಂಜ್ ಮಾಡಿ ಹಣ ಕದ್ದಿದ್ದ ಆರೋಪಿ ಅಂದರ್
ಎಟಿಎಂಗೆ ಹೋದ ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ ಪಾಸವರ್ಡ ತಿಳಿದುಕೊಂಡು 37,500 ರೂಪಾಯಿ ಹಣ ದೋಚಿದ್ದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ್ ಮಾಹಿತಿ ನೀಡಿದ್ದಾರೆ. ಮಂಗಳವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಎಸ್ಪಿ ಡಾ.ಸಂಜೀವ್ ಪಾಟೀಲ್ ಚಿಕ್ಕೋಡಿ ತಾಲೂಕಿನ ಹಾಲಟ್ಟಿ ಗ್ರಾಮದ ವಿಜಯಾ ರಾನಪ್ಪ ಎಂಬ ಮಹಿಳೆ ಅ.3ರಂದು ಎಟಿಎಂನಲ್ಲಿ ಹಣ ತೆಗೆದುಕೊಳ್ಳಲು ಹೋದಾಗ, ಯಾವುದೋ ಒಬ್ಬ ವ್ಯಕ್ತಿ ಸಹಾಯ …
Read More »ಮಳೆರಾಯನ ಅಬ್ಬರ: ಬೆಳೆ ಹಾನಿ ಭೀತಿಯಲ್ಲಿ ರೈತರು
ಕಳೆದ ಎರಡ್ಮೂರು ದಿನಗಳಿಂದ ಬೆಳಗಾವಿ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಕಷ್ಟ ಪಟ್ಟು ಬೆಳೆದ ವಿವಿಧ ಬೆಳೆಗಳ ಹಾನಿಯಾಗುವ ಭೀತಿಯನ್ನು ರೈತರು ಅನುಭವಿಸುತ್ತಿದ್ದಾರೆ. ಹೌದು ಹಲಗಾ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಭಾರಿ ಮಳೆಯಿಂದ ಬೆಳೆ ಹಾನಿ ಸಾಧ್ಯತೆಯಿದೆ. ಆಲೂಗಡ್ಡೆ, ಸೋಯಾಬೀನ್, ಬಾಸ್ಮತಿ ಭತ್ತ ಸೇರಿ ಇನ್ನಿತರ ಬೆಳೆಗಳು ಕಟಾವಿಗೆ ಬಂದಿವೆ. ಆದರೆ ಇದೀಗ ಬಿಟ್ಟು ಬಿಡದೇ ಮಳೆಯಾಗುತ್ತಿರುವ ಹಿನ್ನೆಲೆ ಕೈಯಿಗೆ ಬಂದ ತುತ್ತು ಬಾಯಿಗೆ ಬಾರದ …
Read More »ಈದ್ ಮಿಲಾದ್ ಸಂಭ್ರಮಾಚರಣೆಯಲ್ಲಿ ಲಾಂಗ್ ಹಿಡಿದು ಕುಣಿದ ಯುವಕರು ಅರೆಸ್ಟ್
ಈದ್ ಮಿಲಾದ್ ಹಬ್ಬದಂದು ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದು ಪರಸ್ಪರ ಹೊಟೆದಾಡಿಕೊಂಡಿದ್ದರು. ಪ್ರಕರಣ ಸಂಬಂಧ ದೂರು ಪ್ರತಿ ದೂರು ದಾಖಲಾಗಿತ್ತು. ಬೆಳಗಾವಿ: ರಾಮದುರ್ಗದಲ್ಲಿ ಈದ್ ಮಿಲಾದ್ ಹಬ್ಬದಂದು ಹಿಂದೂ ಯುವಕರ ಮೇಲೆ ಹಲ್ಲೆಗೈದಿದ್ದ ಇಬ್ಬರು ಅಪ್ರಾಪ್ತರು ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ಎರಡು ದಿನಗಳ ಹಿಂದೆ ಈದ್ ಮಿಲಾದ್ ಹಬ್ಬದಂದು ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದು …
Read More »2022 ಆದರೂ ಅಚ್ಚೇ ದಿನ್ ಬಂದಿಲ್ಲ: ಸಿದ್ದರಾಮಯ್ಯ ತೀವ್ರ ವಾಗ್ದಾಳಿ
ಬಳ್ಳಾರಿ: ಪ್ರಧಾನಿ ಮೋದಿ 2014ರಲ್ಲಿ ಅಚ್ಚೇ ದಿನ್ ಬರುತ್ತದೆ ಅಂದರು, 2022 ಆದ್ರೂ ಅಚ್ಚೇ ದಿನ್ ಬಂದಿಲ್ಲ. ಪ್ರಧಾನಿ ಬರೀ ಸುಳ್ಳು ಹೇಳುತ್ತಾರೆ ಎಂದು ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ‘ಭಾರತ ಜೋಡೋ’ ಯಾತ್ರೆಯ ಅಂಗವಾಗಿ ಬಳ್ಳಾರಿಯಲ್ಲಿ ಅ. 15ರಂದು ಬೃಹತ್ ಸಮಾವೇಶ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮಂಗಳವಾರ ಮುನ್ಸಿಪಲ್ ಮೈದಾನಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ‘ಬಳ್ಳಾರಿ ಜಿಲ್ಲೆ ಕಾಂಗ್ರೆಸ್ …
Read More »ಬೇರೆಯವರ ಹೆಂಡತಿ ಬಗ್ಗೆ ಮಾತನಾಡುವಾಗ ಎಲ್ಲರೂ ಹುಷಾರಾಗಿಬೇಕು
ಬೇರೆಯವರ ಹೆಂಡತಿ ಬಗ್ಗೆ ಮಾತನಾಡುವಾಗ ಎಲ್ಲರೂ ಹುಷಾರಾಗಿಬೇಕು ಎನ್ನುವುದಕ್ಕೆ ನಿದರ್ಶನವಾಗಿ ಚಿಕ್ಕೋಡಿಯಲ್ಲೊಂದು ಘಟನೆ ನಡೆದಿದೆ. ಆತ್ಮೀಯ ಸ್ನೇಹಿತರ ನಡುವೆ ಹೆಂಡತಿ ವಿಚಾರ ಬಂದು ಅದು ಕೊಲೆಯಲ್ಲಿ ಅಂತ್ಯಗೊಂಡಿದೆ. ಆಗಿದ್ದೇನೆಂದರೆ, ಹೆಂಡತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಗೆಳೆಯನನ್ನು ವ್ಯಕ್ತಿಯೊಬ್ಬ ಹೆಂಡ ಕುಡಿಸಿ ಕೊಲೆ ಮಾಡಿದ್ದಾನೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿಯ ಸುನೀಲ್ ಸಾಳುಂಕೆ(೩೪) ಕೊಲೆಯಾದವನು. ಮಹಾಂತೇಶ ಮತ್ತು ರಾಜು ಎಂಬವರನ್ನು ಈ ಕೊಲೆಗೆ ಸಂಬಂಧಿಸಿ ಬಂಧಿಸಲಾಗಿದೆ. ಅಕ್ಟೋಬರ್ ೭ರಂದು ಈ ಕೊಲೆ …
Read More »ತಾಯಿ ಮತ್ತು ಮೂರು ಮಕ್ಕಳು ಸಾವು
ಬೆಳಗಾವಿ ಮೂಲದ ಮೂರು ಹೆಣ್ಣು ಮಕ್ಕಳು ಹಾಗೂ ತಾಯಿಯ ಶವ ಮಹಾರಾಷ್ಟ್ರದ ಜತ್ತ ತಾಲೂಕಿನ ಬಿಳ್ಳೂರು ಗ್ರಾಮದ ಕೆರೆಯಲ್ಲಿ ಪತ್ತೆಯಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದ ನಿವಾಸಿ ಆಗಿರುವ ಸುನಿತಾ ತುಕಾರಾಮ್ ಮಾಳಿ ಮತ್ತು ಪುತ್ರಿಯರಾದ ಅಮೃತಾ, ಅಂಕಿತಾ ಹಾಗೂ ಐಶ್ವರ್ಯಾ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದೆ. ಕಳೆದ ಭಾನುವಾರ ಮುಂಜಾನೆ ಮನೆ ಬಿಟ್ಟು ಹೋಗಿದ್ದ ಮಹಿಳೆ ಮತ್ತು ಮೂವರು ಪುಟ್ಟ ಹೆಣ್ಮಕ್ಕಳು ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. …
Read More »ಬಲಗೈ ಸಮುದಾಯಕ್ಕೆ ಪ್ರಾತಿನಿಧ್ಯ ಕೊಡಲು ನಾರಾಯಣಸ್ವಾಮಿ ಒತ್ತಾಯ
ಹುಬ್ಬಳ್ಳಿ: ‘ಬಲಗೈ ಸಮುದಾಯದವರಿಗೆ ಪಕ್ಷದಲ್ಲಿ ಕಡಿಮೆ ಅವಕಾಶ ನೀಡಲಾಗಿದೆ. ಪಕ್ಷಕ್ಕೆ ಈ ಸಮುದಾಯದ ಬಗ್ಗೆ ತಪ್ಪು ಕಲ್ಪನೆ ಮೂಡಿಸಲಾಗಿದ್ದು, ಜನಸಂಖ್ಯೆಗೆ ಅನುಗುಣವಾಗಿ ಸೂಕ್ತ ಪ್ರಾತಿನಿಧ್ಯ ಸಿಗಬೇಕು’ ಎಂದು ಛಲವಾದಿ ನಾರಾಯಣಸ್ವಾಮಿ ಒತ್ತಾಯಿಸಿದರು. ನಗರದಲ್ಲಿ ಭಾನುವಾರ ನಡೆದ ದಮನಿತರ ಚಿಂತನ ಸಭೆಯಲ್ಲಿ ಮಾತನಾಡಿ, ‘ಪಕ್ಷದಲ್ಲಷ್ಟೇ ಅಲ್ಲದೆ, ಸರ್ಕಾರ ಮತ್ತು ಅಧಿಕಾರಶಾಹಿ ವರ್ಗದಲ್ಲೂ ಆಯಕಟ್ಟಿನ ಹುದ್ದೆಗಳನ್ನು ನೀಡಬೇಕು’ ಎಂದರು. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮಾತನಾಡಿ, ‘ಹಿಂದೂ ಧರ್ಮದಲ್ಲಿರುವ …
Read More »
Laxmi News 24×7