Breaking News

Laxminews 24x7

 ವಸ್ತುಪ್ರದರ್ಶನ ಮೈದಾನದಲ್ಲಿ ದಸರಾದಲ್ಲಿ  ಬಲೂನ್ ಮಾರಲು ಬಂದಿದ್ದ 10 ವರ್ಷದ ಬಾಲಕಿಯ (Girl) ಶವ ಪತ್ತೆಯಾಗಿದೆ.

ಮೈಸೂರು, (ಅಕ್ಟೋಬರ್ 09): ವಸ್ತುಪ್ರದರ್ಶನ ಮೈದಾನದಲ್ಲಿ ದಸರಾದಲ್ಲಿ (Mysuru Dasara 2025) ಬಲೂನ್ ಮಾರಲು ಬಂದಿದ್ದ 10 ವರ್ಷದ ಬಾಲಕಿಯ (Girl) ಶವ ಪತ್ತೆಯಾಗಿದೆ. ಬಾಲಕಿಯ ದೇಹದ ಮೇಲೆ ಬಟ್ಟೆ ಇಲ್ಲದೆ ಮೃತದೇಹ ಪತ್ತೆಯಾದ ಕಾರಣ ಅತ್ಯಾಚಾರ ಎಸಗಿ ಕೊಲೆ (Rape and Murder) ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಮೈಸೂರು ದಸರಾ ಯಾವುದೇ ತೊಂದರೆಗಳಿಲ್ಲದೇ ಅದ್ಧೂರಿ ತೆರೆಕಂಡಿದೆ ಎನ್ನುವಷ್ಟರಲ್ಲೇ ಈ ಪೈಶಾಚಿಕ ಕೃತ್ಯ ನಡೆದಿದೆ.ದಸರಾ ಸಮಯದಲ್ಲಿ ಬಲೂನ್ ವ್ಯಾಪಾರಕ್ಕಾಗಿ ಕಲಬುರಗಿ (Kalaburagi) ಕಡೆಯಿಂದ …

Read More »

 ಪೋಕ್ಸೋ ಪ್ರಕರಣದ ಆರೋಪಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಗ್ಗೆ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ನಡೆಯಿತು.

ಬೆಂಗಳೂರು: ಪೋಕ್ಸೋ ಪ್ರಕರಣದ ಆರೋಪಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಗ್ಗೆ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ನಡೆಯಿತು. ಗೌತಮ್ ಆತ್ಮಹತ್ಯೆ ಮಾಡಿಕೊಂಡವ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ವೈದ್ಯಕೀಯ ಪರೀಕ್ಷೆಯ ಬಳಿಕ ಕುಟುಂಬಸ್ಥರಿಗೆ ಶವ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಗೌತಮ್ ಕೆ.ಆರ್.ಪುರ ಆಕಾಶನಗರದ ನಿವಾಸಿಯಾಗಿದ್ದು, ಈತನ ಸಂಬಂಧಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಈತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದ ಆಡುಗೋಡಿ ಪೊಲೀಸರು ಕಳೆದ ಏಪ್ರಿಲ್​ನಲ್ಲಿ …

Read More »

ರಾಜ್ಯದ ಮಹಿಳಾ ಉದ್ಯೋಗಿಗಳಿಗೆ ಗುಡ್ ನ್ಯೂಸ್; 1 ದಿನದ ವೇತನ ಸಹಿತ ಋತು ಚಕ್ರ ರಜೆ

ಬೆಂಗಳೂರು: ರಾಜ್ಯದ ಮಹಿಳಾ ಉದ್ಯೋಗಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ರಜೆ ನೀಡುವ ಋತು ಚಕ್ರ ರಜೆ ನೀತಿ 2025ಗೆ ಸಚಿವ ಸಂಪುಟ ಸಭೆ ಇಂದು ಒಪ್ಪಿಗೆ ಸೂಚಿಸಿದೆ.‌ ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್ MNCಗಳು, IT ಮತ್ತು ಇತರೆ ಖಾಸಗಿ ಕೈಗಾರಿಕೆಗಳು ಸೇರಿದಂತೆ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ …

Read More »

ಇನ್ಮುಂದೆ 5 ಕೆ.ಜಿ ಅಕ್ಕಿ ಬದಲು ಇಂದಿರಾ ಆಹಾರ ಕಿಟ್ ವಿತರಣೆ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಎಎವೈ ಮತ್ತು ಪಿಹೆಚ್‌ಹೆಚ್ ಪಡಿತರಕ್ಕೆ ಪರ್ಯಾಯವಾಗಿ ಫಲಾನುಭವಿಗಳಿಗೆ ಇಂದಿರಾ ಆಹಾರ ಕಿಟ್‌ಗಳನ್ನು (ಪೌಷ್ಠಿಕ ಆಹಾರದ ಕಿಟ್) ವಿತರಿಸಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಹೆಚ್ಚುವರಿಯಾಗಿ ನೀಡಲಾಗುವ 5 ಕೆ.ಜಿ ಅಕ್ಕಿಯ ಬದಲಾಗಿ ಪ್ರತಿ ಪಡಿತರ ಚೀಟಿಗೆ ಇಂದಿರಾ ಆಹಾರ ಕಿಟ್ ನೀಡಲು ತೀರ್ಮಾನಿಸಲಾಗಿದೆ. ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಹೆಚ್ಚುವರಿ ಅಕ್ಕಿ ನೀಡಲು ಆಯವ್ಯಯದಲ್ಲಿ ಹಂಚಿಕೆ ಮಾಡಿರುವ 6,426 ಕೋಟಿ ರೂ. ಅನುದಾನದಲ್ಲಿ …

Read More »

ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ- ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ -ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ನಮ್ಮ ಪೆನಲ್‌ದಿಂದ ಸ್ಪರ್ಧಿಸುವ ಎಲ್ಲ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ. ಗೆಲ್ಲಬೇಕೆಂದೇ ನಾವು ಸ್ಪರ್ಧೆ ಮಾಡುತ್ತಿದ್ದೇವೆ ಎಂದು ಅರಬಾವಿ ಶಾಸಕ, ಬೆಮೂಲ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪೆನಲ್‌ದಿಂದ 16 ಸ್ಥಾನಗಳ ಪೈಕಿ 13 ಸ್ಥಾನಗಳಿಗೆ ಸ್ಪರ್ಧೆ ಮಾಡಲಾಗುವುದು. ಈಗಾಗಲೇ 7 ಜನ ಅಭ್ಯರ್ಥಿಗಳು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ …

Read More »

ಬೆಳಗಾವಿ DCC ಬ್ಯಾಂಕ ಚುನಾವಣೆಯನ್ನು ಎದುರಿಸಲು ನಮ್ಮ ಗುಂಪು ಸಿದ್ಧ:ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ- ಇದೇ ಅಕ್ಟೋಬರ್ 19 ರಂದು ನಡೆಯುವ ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರ ಬ್ಯಾಂಕಿನ ಚುನಾವಣೆಯನ್ನು ಎದುರಿಸಲು ನಮ್ಮ ಗುಂಪು ಸಿದ್ಧಗೊಂಡಿದ್ದು, ಬ್ಯಾಂಕಿನ ಅಧಿಕಾರ ಚುಕ್ಕಾಣಿ ಹಿಡಿಯಲು ಸನ್ನದ್ಧರಾಗಿದ್ದೇವೆ ಎಂದು ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದರು. ಗುರುವಾರದಂದು ಇಲ್ಲಿನ ಬಿಡಿಸಿಸಿ ಬ್ಯಾಂಕಿಗೆ ತಮ್ಮ ಬೆಂಬಲಿಗರಿಂದ ನಾಮಪತ್ರಗಳನ್ನು ಸಲ್ಲಿಸಿದ ಬಳಿಕ‌ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯನ್ನು ಸಮರ್ಥವಾಗಿ ಎದುರಿಸಿ, ನಮ್ಮ ಗುಂಪಿಗೆ ಬಹುಮತ ಪಡೆಯಲು‌ ಮತದಾರರ …

Read More »

ಶೀಗಿ ಹುಣ್ಣಿಮೆ: ವಿಶೇಷ ಬಸ್​ಗಳಲ್ಲಿ ಯಲ್ಲಮ್ಮನ ಗುಡ್ಡಕ್ಕೆ 10 ಸಾವಿರಕ್ಕೂ ಹೆಚ್ಚು ಭಕ್ತರ ಪ್ರಯಾಣ

ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಸವದತ್ತಿ ರೇಣುಕಾ ದೇವಿ ದರ್ಶನ ತೆರಳುವ ಭಕ್ತಾದಿಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ದೀಪಾವಳಿ ಅಮಾವಾಸ್ಯೆವರೆಗೆ ಶುಕ್ರವಾರ, ರವಿವಾರ ಹಾಗೂ ಮಂಗಳವಾರ ಹುಬ್ಬಳ್ಳಿ ಹಾಗೂ ನವಲಗುಂದದಿಂದ ಯಲ್ಲಮ್ಮನ ಗುಡ್ಡಕ್ಕೆ ನೇರವಾಗಿ ವಿಶೇಷ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಶೀಗಿ ಹುಣ್ಣಿಮೆಯ ಪ್ರಯುಕ್ತ ಅವಳಿ ನಗರದಿಂದ ಸವದತ್ತಿಯ ರೇಣುಕಾದೇವಿ ದರ್ಶನಕ್ಕೆ ತೆರಳುವ ಭಕ್ತಾದಿಗಳು ಹಾಗೂ …

Read More »

ಮುಡಾ ಪ್ರಕರಣ: ಬಿ ವರದಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ಆದೇಶ ಇಂದು ಪ್ರಕಟ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಅವರ ಕುಟುಂಬದವರ ವಿರುದ್ಧದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ಸಂಬಂಧ ಲೋಕಾಯುಕ್ತ ಸಲ್ಲಿಸಿರುವ ಬಿ ರಿಪೋರ್ಟ್ ಪ್ರಶ್ನಿಸಿ ಹಾಗೂ ತನಿಖಾಧಿಕಾರಿ ಬದಲಾವಣೆ ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶವನ್ನು ಗುರುವಾರ (ಅ.9) ಪ್ರಕಟಿಸುವುದಾಗಿ ತಿಳಿಸಿದೆ. ಗುರುವಾರ ಆದೇಶ ಪ್ರಕಟಿಸುವುದಾಗಿ ಹೇಳಿದ ಕೋರ್ಟ್: ಪ್ರಕರಣ ಸಂಬಂಧ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ, ಅ.8ರಂದು ಅಂತಿಮ ಆದೇಶ ನೀಡುವುದಾಗಿ …

Read More »

ಆರ್​.ಅಶೋಕ್​ ಬೆಂಗಾವಲು ವಾಹನದ ಚಾಲಕ ಆತ್ಮಹತ್ಯೆ

ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್​. ಅಶೋಕ್​ ಅವರ ಪೊಲೀಸ್​​ ಬೆಂಗಾವಲು ವಾಹನದ ಚಾಲಕ (ನಗರ ಸಶಸ್ತ್ರ ಮೀಸಲು ಪೊಲೀಸ್​ ಪಡೆ) ಶರಣಪ್ಪ (33) ಅವರು ಬುಧವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ಯಾಟರಾಯನಪುರ ಠಾಣಾ ವ್ಯಾಪ್ತಿಯ ಬಾಪೂಜಿನಗರದ ಬಾಡಿಗೆ ಮನೆಯಲ್ಲಿ ಶರಣಪ್ಪ ಅವರು ಪತ್ನಿ ಶೈಲಶ್ರೀ ಹಾಗೂ ಇಬ್ಬರು ಹೆಣ್ಣು ಮಕ್ಕಳ ಜೊತೆಗೆ ನೆಲೆಸಿದ್ದರು. ಶೈಲಶ್ರೀ ಅವರು ಮಾಗಡಿ ರಸ್ತೆ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೆಬಲ್‌ ಆಗಿ ಕೆಲಸ ಮಾಡುತ್ತಿದ್ದಾರೆ. …

Read More »

ಸಿಜೆಐ ಮೇಲಿನ ದಾಳಿ ಪ್ರಕರಣ: ವಕೀಲನ ವಿರುದ್ಧ ಬೆಂಗಳೂರಲ್ಲಿ FIR ದಾಖಲು

ಬೆಂಗಳೂರು: ಇತ್ತೀಚೆಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್‌.ಗವಾಯಿ ಅವರ ಮೇಲೆ ದಾಳಿ ಮಾಡಿದ ಹಿರಿಯ ವಕೀಲ ರಾಕೇಶ್‌ ಕಿಶೋರ್‌ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಿರಿಯ ವಕೀಲ ಭಕ್ತವತ್ಸಲ ಎಂಬುವರು ನೀಡಿದ ದೂರಿನ ಮೇರೆಗೆ ವಿಧಾನಸೌಧ ಠಾಣೆ ಪೊಲೀಸರು ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ರಾಕೇಶ್‌ ಕಿಶೋರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅ.6ರಂದು ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣವೊಂದರ ವಿಚಾರಣೆ ವೇಳೆ ವಕೀಲ ರಾಕೇಶ್‌ ಕಿಶೋರ್‌ ಏಕಾಏಕಿ ಮುಖ್ಯ ನ್ಯಾಯಮೂರ್ತಿ …

Read More »