Breaking News

Laxminews 24x7

ಇಂದು ನಡೆಯಲಿದೆ ಬಿಜೆಪಿ ನಾಯಕರ ಹೈ ವೋಲ್ಟೇಜ್​ ಮೀಟಿಂಗ್​!

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಚುನಾವಣೆ ಗೆಲ್ಲಲು ಬಿಜೆಪಿ ಮಹಾತಂತ್ರ ರಚಿಸುತ್ತಿದ್ದು ದೆಹಲಿಯಲ್ಲಿ ಸಭೆ ನಂತರ ರಾಜ್ಯದಲ್ಲೂ ಮಹತ್ವಕಾರಿ ಸಭೆ ನಡೆಯಲಿದೆ. ಕಾರ್ಯಕಾರಿಣಿಯಲ್ಲಿ ರಾಷ್ಟ್ರೀಯ ನಾಯಕರು ಸೂಚಿಸಿರುವ ಕಾರ್ಯತಂತ್ರಗಳು, ಕೊಟ್ಟ ಕಾರ್ಯಗಳ ಅನುಷ್ಠಾನ ಸಂಬಂಧ ಸಭೆ ನಡೆಯಲಿದ್ದು ಇಂದು ರಾಜ್ಯ ನಾಯಕರ ಹೈವೋಲ್ಟೇಜ್ ಮೀಟಿಂಗ್ ನಡೆಯಲಿದೆ. ಆ ತಂತ್ರಗಳನ್ನು ಇಲ್ಲಿ ಜಾರಿ ಮಾಡುವ ಬಗ್ಗೆ ಮಹತ್ವದ ಚರ್ಚೆ ನಡೆಯಲಿದ್ದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ …

Read More »

ಧಾರವಾಡದಲ್ಲಿ ಶುರುವಾಯ್ತು ಹತ್ತಿ ವ್ಯಾಪಾರಿಗಳ ವಿರುದ್ಧ ರೈತರ ಹೋರಾಟ

ಧಾರವಾಡ: ಹತ್ತಿ ಬೆಳೆಗಾರರ ಜೊತೆ ವ್ಯಾಪಾರಿಗಳು ಚೆಲ್ಲಾಟವಾಡುತ್ತಿರುವ ಬಗ್ಗೆ ಮಾಹಿತಿ ಲಭಿಸಿದ್ದು ವ್ಯಾಪಾರಿಗಳು ಮಾಡಿದ್ದೇ ರೇಟು, ಆಡಿದ್ದೇ ಆಟ ಎನ್ನುವಂತಹ ಪರಿಸ್ಥಿತಿ ನಿರ್ಮಾಣ ಆಗಿದೆ. ವ್ಯಾಪಾರಿಗಳ ಚೆಲ್ಲಾಟದಿಂದ ರೈತರು ರೋಸಿ ಹೋಗಿದ್ದು ಪ್ರತಿರೋಧ ವ್ಯಕ್ತಪಡಿಸುತ್ತಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಏಕಾಏಕಿ ಹತ್ತಿ ಬೆಲೆ ಕುಸಿತಗೊಂಡಿದೆ. ಆರಂಭದಲ್ಲಿ ಕ್ವಿಂಟಾಲ್ ಹತ್ತಿಗೆ 10 ಸಾವಿರದ ಮೇಲೆ ದರ ಇತ್ತು. ಆದರೆ ಇತ್ತೀಚೆಗೆ ದಿಢೀರ ವ್ಯಾಪಾರಿಗಳು ದರ ಕಡಿಮೆ ಮಾಡಿದ್ದಾರೆ. ಈಗ ಪ್ರತೀ ಕ್ವಿಂಟಾಲ್​ಗೆ 8500ರೂ. ವರೆಗೆ …

Read More »

ಮಧ್ಯಾಹ್ನ ಆದರೆ ಸೀತೆ ಜೊತೆ ಹೆಂಡ ಕುಡಿದುಕೊಂಡು ಕುಳಿತುಕೊಂಡಿರುತ್ತಿದ್ದ ರಾಮ; ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ಕೆ.ಎಸ್. ಭಗವಾನ್

ವಿವಾದಾತ್ಮಕ ಹೇಳಿಕೆಗಳ ಮೂಲಕ ಸದಾ ಸುದ್ದಿಯಲ್ಲಿರುವ ಚಿಂತಕ ಕೆ.ಎಸ್. ಭಗವಾನ್ ಇದೀಗ ಮರ್ಯಾದ ಪುರುಷೋತ್ತಮ ಶ್ರೀರಾಮನ ಕುರಿತು ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ. ಮಧ್ಯಾಹ್ನ ಆದರೆ ಸಾಕು ಸೀತೆ ಜೊತೆ ಹೆಂಡ ಕುಡಿದುಕೊಂಡು ಕುಳಿತಿರುತ್ತಿದ್ದ ರಾಮ ಆಕೆಗೂ ಕುಡಿಸುತ್ತಿದ್ದ ಎಂದು ಹೇಳಿದ್ದಾರೆ.   ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯಲ್ಲಿ ನಡೆದ ಪುಸ್ತಕ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಅವರು ಈ ವಿವಾದಾತ್ಮಕ ಹೇಳಿಕೆ ನೀಡಿದ್ದು, ವಾಲ್ಮೀಕಿ ರಾಮಾಯಣದ ಉತ್ತರ ಕಾಂಡದಲ್ಲಿ ಇದರ ಬಗ್ಗೆ …

Read More »

ಚುನಾವಣೆ ಹತ್ತಿರದಲ್ಲಿ ಬದಲಾದ ಬಿಜೆಪಿ ವರಸೆ: ಕರ್ನಾಟಕದಲ್ಲಿ ಮುಸ್ಲಿಮರಿಗೆ ಟಿಕೆಟ್‌?

ಬೆಂಗಳೂರು, ಜನವರಿ 20: 2023ರ ವಿಧಾನಸಭೆ ಮತ್ತು 2024ರ ಲೋಕಸಭೆ ಚುನಾವಣೆಗೂ ಮುನ್ನ ಮುಸ್ಲಿಂ ಮತದಾರರನ್ನು ಸೆಳೆಯಲು ಬಿಜೆಪಿ ಕ್ರಮ ಕೈಗೊಳ್ಳಲಿದೆ ಎಂದು ಉನ್ನತ ಶಿಕ್ಷಣ ಸಚಿವ ಸಿ ಎನ್ ಅಶ್ವಥ್ ನಾರಾಯಣ್ ಗುರುವಾರ ಹೇಳಿದ್ದಾರೆ. ಎಲ್ಲಾ ಮುಸ್ಲಿಮರು ಕೆಟ್ಟವರು ಎಂದು ಬಿಜೆಪಿ ಎಂದಿಗೂ ಹೇಳಿಲ್ಲ. ಆದರೆ, ಕಾಂಗ್ರೆಸ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒಂದೇ ಸಮುದಾಯವನ್ನು ಓಲೈಸುವ ರೀತಿಯಲ್ಲಿ ನಮ್ಮ ಪಕ್ಷ ಎಂದಿಗೂ ತುಷ್ಟೀಕರಣ ರಾಜಕಾರಣ ಮಾಡಿಲ್ಲ …

Read More »

ಟೆಲಿಕಾಂ ಗ್ರಾಹಕರಿಗೆ ಶಾಕಿಂಗ್​ ಸುದ್ದಿ! ರೀಚಾರ್ಜ್​ ಬೆಲೆ ಏರಿಕೆ ಮಾಡಿದ ಕಂಪೆನಿ

ಭಾರತದಲ್ಲಿ ಟೆಲಿಕಾಂ ಕಂಪೆನಿಗಳು (Telecom Company) ಇತ್ತೀಚೆಗೆ ಭಾರೀ ಮುಂಚೂಣಿಯಲ್ಲಿದೆ. ಇದಕ್ಕೆ ಮುಖ್ಯ ಕಾರಣ ಕಂಪೆನಿಗಳು ನೀಡುತ್ತಿರುವ ರೀಚಾರ್ಜ್​ ಯೋಜನೆಗಳು ಅಂತಾನೇ ಹೇಳ್ಬಹುದು. ಈ ಟೆಲಿಕಾಂ ಕಂಪೆನಿಗಳು ವರ್ಷದಿಂದ ವರಷಕ್ಕೆ ಹೊಸ ಹೊಸ ರೀಚಾರ್ಜ್​ ಯೋಜನೆಗಳನ್ನು (Recharge Plans) ಪರಿಚಯಿಸುತ್ತಿರುತ್ತದೆ. ಇನ್ನು ದೇಶದಲ್ಲಿರುವಂತಹ ಟೆಲಿಕಾಂ ಕಂಪೆನಿಗಳು ಅಭಿವೃದ್ಧಿಯ ಸ್ಥಾನಗಳ ಬಗ್ಗೆ ಹೇಳುವುದಾದರೆ ಜಿಯೋ (Jio) ಮೊದಲ ಸ್ಥಾನದಲ್ಲಿದೆ. ಅದೇ ರೀತಿಯಲ್ಲಿ ಏರ್​​ಟೆಲ್​ ಟೆಲಿಕಾಂ ಕಂಪೆನಿಗಳಲ್ಲಿ ಅತೀ ಹೆಚ್ಚು ಗ್ರಾಹಕರನ್ನು ಹೊಂದಿರುವ …

Read More »

ಮೂವರು ಸಹೋದರಿಯರ ಸಾಮೂಹಿಕ ಆತ್ಮಹತ್ಯೆ ಒಂಬತ್ತು ದಿನಗಳ ನಂತರ ಬೆಳಕಿಗೆ ಬಂದ ಪ್ರಕರಣ

ತುಮಕೂರು: ತಂದೆ, ತಾಯಿ ಹಾಗೂ ಆಸರೆಯಾಗಿದ್ದ ಅಜ್ಜಿಯನ್ನೂ ಕಳೆದುಕೊಂಡ ಮೂವರು ಅನಾಥ ಸಹೋದರಿಯರು ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿದ್ದು, ಒಂಬತ್ತು ದಿನಗಳ ನಂತರ ಘಟನೆ ಬೆಳಕಿಗೆ ಬಂದಿದೆ. ಮೂವರ ಶವಗಳೂ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಬರಕನಹಾಲ್ ತಾಂಡಾದ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ.  ರಂಜಿತಾ(24), ಬಿಂದು(21), ಚಂದನಾ(18) ಆತ್ಮಹತ್ಯೆಗೈದ ಸಹೋದರಿಯರು.

Read More »

ಉತ್ತರ’ದತ್ತಲೇ ಎಲ್ಲರ ಕಣ್ಣು!: ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಮುಖಂಡರ ಪ್ರವಾಸ, ಯಾತ್ರೆ

ಹುಬ್ಬಳ್ಳಿ: ಚುನಾವಣೆ ಘೋಷಣೆಯಾಗುವ ಮೊದಲೇ ಉತ್ತರ ಕರ್ನಾಟಕ ಭಾಗದತ್ತ ಎಲ್ಲ ರಾಜಕೀಯ ಪಕ್ಷಗಳು ದಾಂಗುಡಿ ಇಡುತ್ತಿದ್ದು, ಎಲ್ಲ ಹಿರಿಯ ನಾಯಕರ ಕಣ್ಣು ಇತ್ತಲೇ ನೆಟ್ಟಿದೆ. ಕಳೆದ ಒಂದು ವಾರದಲ್ಲಿ ಉತ್ತರ ಕರ್ನಾಟಕವನ್ನೇ ಕೇಂದ್ರೀಕರಿಸಿಕೊಂಡಿರುವ ರಾಜಕೀಯ ನೇತಾರರರು ಪ್ರಚಾರ ರ್ಯಾಲಿಯಲ್ಲಿ ತೊಡಗಿದ್ದಾರೆ. ಗುರುವಾರವಂತೂ ಮೂರೂ ರಾಜಕೀಯ ಪಕ್ಷಗಳ ಘಟಾನುಘಟಿಗಳು ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದಲ್ಲಿ ಪ್ರಚಾರದಲ್ಲಿ ತೊಡಗಿದ್ದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಬ್ಬರಿಗೂ ಈ …

Read More »

ಬೆಳಗಾವಿ | ಮತಾಂತರ ಶಂಕೆ: ಪಾದ್ರಿ, ಆದಿವಾಸಿಗಳ ಮೇಲೆ ಹಿಂದುತ್ವ ಸಂಘಟನೆಯ ದಾಳಿ

ಬೆಳಗಾವಿ: ಕ್ರೈಸ್ತ ಪಾದ್ರಿಯೊಂದಿಗೆ ಗೋವಾಗೆ ತೆರಳುತ್ತಿದ್ದ ಮಹಾರಾಷ್ಟ್ರದ 40 ಜನ ಆದಿವಾಸಿಗಳನ್ನು ಇಲ್ಲಿನ ಪೊಲೀಸರು, ಮರಳಿ ಕೊಲ್ಹಾ‍ಪುರಕ್ಕೆ ಕಳುಹಿಸಿದರು. ಇವರನ್ನು ಮತಾಂತರಕ್ಕೆ ಕರೆದೊಯ್ಯಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ನಗರದಲ್ಲಿ ಕೆಲಕಾಲ ತ್ವೇಷಮಯ ವಾತಾವರಣ ನಿರ್ಮಾಣವಾಗಿತ್ತು.   ಮಹಾರಾಷ್ಟ್ರದ ಈ ಬುಡಕಟ್ಟು ಜನರನ್ನು ಮತಾಂತರಕ್ಕೆ ಕರೆದೊಯ್ಯಲಾಗುತ್ತಿದೆ ಎಂದು ಆರೋಪಿಸಿ, ಸಾಂಗ್ಲಿಯಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಸೋಮವಾರ ರಾತ್ರಿ ಪಾದ್ರಿ ಮೇಲೆ ಹಲ್ಲೆ ನಡೆಸಿದ್ದರು. ಅವರಿಂದ ತಪ್ಪಿಸಿಕೊಂಡ ಪಾದ್ರಿ ಹಾಗೂ ಬುಡಕಟ್ಟು ಜನರು ಬೆಳಗಾವಿ …

Read More »

ಅನಿರ್ದಿಷ್ಟಾವಧಿ ಧರಣಿ: ಶಿಕ್ಷಕರ ಸ್ಥಾನಕ್ಕೆ ಅಂಗನವಾಡಿ ಕಾರ್ಯಕರ್ತೆಯರ ಪಟ್ಟು

ಬೆಂಗಳೂರು: ಸೇವೆ ಕಾಯಂ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ನೇತೃತ್ವದಲ್ಲಿ ಬುಧವಾರದಿಂದ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.   ಕಾರ್ಯಕರ್ತೆಯರಿಗೆ ಶಿಕ್ಷಕರ ಸ್ಥಾನಮಾನ ನೀಡಬೇಕು. ಪ್ರತಿ ತಿಂಗಳು ₹ 31 ಸಾವಿರ ವೇತನ ನೀಡಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು. ‘ರಾಜ್ಯದಲ್ಲಿ ಮಿನಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಬೇಕು. ಆರೋಗ್ಯ ವಿಮೆ ಜಾರಿಗೆ ತರಬೇಕು. ತೀವ್ರತರಹದ …

Read More »

ಬಿಜೆಪಿ ಸರ್ಕಾರದ ಭ್ರಷ್ಟಾಚಾರ ತನಿಖೆಗೆ ಆಯೋಗ: ಸಿದ್ದರಾಮಯ್ಯ

ಬಾಗಲಕೋಟೆ: ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ತಕ್ಷಣ ಬಿಜೆಪಿ ಸರ್ಕಾರದಲ್ಲಿನ ಭ್ರಷ್ಟಾಚಾರ ಹಗರಣಗಳ ತನಿಖೆಗೆ ಆಯೋಗ ರಚಿಸಲಾಗುವುದು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಪ್ರಜಾಧ್ವನಿ ಬಸ್‌ ಯಾತ್ರೆ ಅಂಗವಾಗಿ ಬುಧವಾರ ಹಮ್ಮಿಕೊಂಡಿದ್ದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಕಾಮಗಾರಿಗೆ ಶೇ 40ರಷ್ಟು ಕಮಿಷನ್‌ ಪಡೆದಿರುವುದು, ಪಿಎಸ್‌ಐ, ಪಿಡಬ್ಲ್ಯುಡಿ ಸಹಾಯಕ ಎಂಜಿನಿಯರ್ ನೇಮಕಾತಿ ಸೇರಿದಂತೆ ಹಲವು ಹಗರಣಗಳ ತನಿಖೆ ನಡೆಸಿ, ಕಠಿಣ ಕ್ರಮಕೈಗೊಳ್ಳಲಾಗುವುದು ಎಂದರು.   ಸ್ಯಾಂಟ್ರೊ …

Read More »