Breaking News

Laxminews 24x7

ಬೈಲಹೊಂಗಲ: ಉಪವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟನೆ

ಬೈಲಹೊಂಗಲ: ಮಲಪ್ರಭಾ ಏತ ನೀರಾವರಿಗಾಗಿ ಭೂ ಸ್ವಾಧೀನಗೊಂಡ ಪ್ರದೇಶವನ್ನು 50 ವರ್ಷಗಳ ನಂತರ 2022 ರಲ್ಲಿ ದಾಖಲಿಸಿರುವ ತಹಶೀಲ್ದಾರ್ ಕ್ರಮವನ್ನು ರದ್ದುಪಡಿಸುವಂತೆ ಆಗ್ರಹಿಸಿ ಉಪವಿಭಾಗಾಧಿಕಾರಿ ಕಚೇರಿ ಎದುರು ರೈತರು ಸೋಮವಾರ ಪ್ರತಿಭಟನೆ ನಡೆಸಿದರು.   ಹೊಸೂರು ಮಡಿವಾಳೇಶ್ವರ ಮಠದ ಗಂಗಾಧರ ಮಹಾಸ್ವಾಮೀಜಿ, ವೇದಮೂರ್ತಿ ಮಾಹಾಂತಯ್ಯ ಆರಾದ್ರಿಮಠ ಶಾಸ್ತ್ರಿಗಳು, ಪಟ್ಟಣದ ಬೆಳಗಾವಿ ರಸ್ತೆಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡುವುದರ ಮೂಲಕ ಪ್ರತಿಭಟನೆಗೆ ಚಾಲನೆ ನೀಡಿದರು. ಚನ್ನಮ್ಮ ವೃತ್ತದಿಂದ ಇಂಚಲ …

Read More »

ಚಿಕ್ಕೋಡಿ: ಅಕ್ರಮ ಮದ್ಯ ಮಾರಾಟ ಮಾಡಿದ ವ್ಯಕ್ತಿಗೆ 3 ವರ್ಷ ಕಠಿಣ ಶಿಕ್ಷೆ; 20 ಸಾವಿರ ದಂಡ

ಚಿಕ್ಕೋಡಿ: ಅಕ್ರಮ ಸಾರಾಯಿ ಮಾರಾಟ ಮಾಡಿದ ವ್ಯಕ್ತಿಗೆ ಚಿಕ್ಕೋಡಿ ಜೆಎಂಎಫ್‌ಸಿ ನ್ಯಾಯಾಲಯ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 20 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದೆ. ಚಿಕ್ಕೋಡಿ ತಾಲೂಕಿನ ಜೈನಾಪೂರ ಗ್ರಾಮದ ಆನಂದ ಮಹಾದೇವ ಗರಬುಡೆ ಎಂಬಾತನೆ ಶಿಕ್ಷೆಗೆ ಗುರಿಯಾದ ವ್ಯಕ್ತಿಯಾಗಿದ್ದಾನೆ. ಕಳೆದ 24-09- 2015 ರಂದು ಜೈನಾಪೂರ ಕ್ರಾಸ್ ಹತ್ತಿರ ಅಕ್ರಮ ಸಾರಾಯಿ ಮಾರಾಟ ಮಾಡುವ ಕುರಿತು ಆರೋಪಿ ಮೇಲೆ ಅಬಕಾರಿ ಉಪ ನಿರೀಕ್ಷಕ ವಿ.ಎ.ಕಳ್ಳಿಕದ್ದಿ …

Read More »

ಜೂಜುಕೋರರಿಗೆ ಬಿಸಿ: ಬೆಳಗಾವಿಯಿಂದ ಮತ್ತೊಬ್ಬ ಮಟ್ಕಾ ಬುಕ್ಕಿ ಗಡಿಪಾರು

ಬೆಳಗಾವಿ: ನಗರದಲ್ಲಿ ಮಟ್ಕಾ, ಓಸಿ ಆಡಲು ಜನರನ್ನು ಪ್ರೇರೇಪಿಸುತ್ತಿದ್ದ ಬುಕ್ಕಿಯನ್ನು ಬೆಳಗಾವಿ ಜಿಲ್ಲೆಯಿಂದ ಗಡಿಪಾರು ಮಾಡುವ ಮೂಲಕ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವೀಂದ್ರ ಗಡಾದಿ ಜೂಜುಕೋರರಿಗೆ ಬಿಸಿ ಮುಟ್ಟಿಸಿದ್ದಾರೆ. ಇಲ್ಲಿಯ ಅನಗೋಳದ ಪರುಶರಾಮ ಬಾಬು ಮೇತ್ರಿ ಎಂಬಾತನನ್ನು ಒಂದು ವರ್ಷಗಳ ಕಾಲ 2023 ಸೆ. 18ರ ವರೆಗೆ ಗಡಿಪಾರು ಮಾಡಲಾಗಿದೆ. ಬೆಳಗಾವಿಯಿಂದ ಬಳ್ಳಾರಿ ಜಿಲ್ಲೆಗೆ ಗಡಿಪಾರು ಮಾಡಿ ಗಡಾದಿ ಆದೇಶ ಹೊರಡಿಸಿದ್ದಾರೆ.   ಪರುಶರಾಮ ಮೇತ್ರಿ ವಿರುದ್ಧ ಏಳು ಪ್ರಕರಣಗಳು …

Read More »

ಖಿಲಾರದಡ್ಡಿಗೆ ಕೊನೆಗೂ ಬಂತು ಬಸ್‌!

ತೆಲಸಂಗ: ಸಮೀಪದ ಖಿಲಾರದಡ್ಡಿ ಗ್ರಾಮಕ್ಕೆ ಕೊನೆಗೂ ಸೋಮವಾರ ಬಸ್‌ ಬಂದಿದ್ದು, ಬಸ್ಸೇ ಕಾಣದ ಗ್ರಾಮಸ್ಥರಲ್ಲಿ ಸಂಭ್ರಮವೋ ಸಂಭ್ರಮ. ಸ್ವಾತಂತ್ರ್ಯ ದೊರೆತು 75 ವರ್ಷವಾದರೂ ಖಿಲಾರದಡ್ಡಿ ಗ್ರಾಮಕ್ಕೆ ಬಸ್‌ ವ್ಯವಸ್ಥೆ ಇರಲಿಲ್ಲ. ಸದ್ಯ ಬಸ್‌ ಗ್ರಾಮದಲ್ಲಿ ಬರುತ್ತಿದ್ದಂತೆ ಗ್ರಾಮಸ್ಥರೆಲ್ಲ ಸೇರಿ ಚಾಲಕ, ನಿರ್ವಾಹಕ, ನಿಯಂತ್ರಣಾಧಿಕಾರಿಯನ್ನು ಸತ್ಕರಿಸಿ ಬಸ್‌ ಗೆ ಪೂಜೆ ಸಲ್ಲಿಸಿ, ಕುಣಿದು ಕುಪ್ಪಳಿಸಿದರು.   280ಕ್ಕೂ ಹೆಚ್ಚು ಶಾಲಾ ಮಕ್ಕಳು ಬಂದು ಹೋಗುವುದು ಸೇರಿ 16 ಕಿ.ಮೀ ನಿತ್ಯ ಕಾಲ್ನಡಿಗೆಯಲ್ಲಿಯೇ ಶಾಲೆಗೆ …

Read More »

ಯಕ್ಷಗಾನಕ್ಕೆ ಅಡ್ಡಿಯಾದೀತೆಂದು ಆಜಾನ್‌ ಕಿರಿಕಿರಿ ಸಹಿಸಲಾಗದು-ಪ್ರಮೋದ್‌ ಮುತಾಲಿಕ್

ಮಂಗಳೂರು: ‘ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆ ಮೇಲೆ ನಿಷೇಧ ಹೇರಿರುವುದು ಸುಪ್ರೀಂ ಕೋರ್ಟ್‌. ಈ ಆದೇಶದಿಂದ ಯಕ್ಷಗಾನಕ್ಕೆ ತೊಂದರೆ ಆಗುತ್ತದೆ ಎಂಬ ಕಾರಣಕ್ಕೆ ಮುಸ್ಲೀಮರ ಆಜಾನ್‌ನಿಂದ ನಿತ್ಯವೂ ಆಗುವ ಕಿರಿಕಿರಿಯನ್ನು ಸಹಿಸಲಾಗದು’ ಎಂದು ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಹೇಳಿದರು.   ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಯಕ್ಷಗಾನ ಪ್ರತಿನಿತ್ಯ ನಡೆಯುವುದಿಲ್ಲ. ಅದಕ್ಕೆ ಧ್ವನಿವರ್ಧಕ ಬಳಸುವುದರಿಂದ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುವುದನ್ನು ಎಂದಾದರೆ, ಅದನ್ನು ತಡೆಯಲು ಕ್ರಮವಹಿಸಬೇಕು’ ಎಂದರು. ‘ಮಸೀದಿಗಳಲ್ಲಿ …

Read More »

ಹಾಫ್ ಹೆಲ್ಮೆಟ್ ಧರಿಸುವ ಪೊಲೀಸರಿಗೆ ದಂಡ: ಮುಂದಿನ ದಿನಗಳಲ್ಲಿ ವಾಹನ ಸವಾರರಿಗೂ ಬಿಸಿ

ಬೆಂಗಳೂರು: ಹಾಫ್ ಹೆಲ್ಮೆಟ್ ಧರಿಸದಂತೆ ನಗರದ ಗಲ್ಲಿ-ಗಲ್ಲಿಗಳಲ್ಲಿಯೂ ಸಂಚಾರಿ ಪೊಲೀಸರು ನಿರಂತರವಾಗಿ ಜಾಗೃತಿ ಮೂಡಿಸುತ್ತಿದ್ದಾರೆ. ಸಿಗ್ನಲ್, ಜಂಕ್ಷನ್, ಇನ್ನಿತರ ಆಯಕಟ್ಟಿನ ಸ್ಥಳಗಳಲ್ಲಿ ಐಎಸ್‌ಐ ಮಾರ್ಕ್ ಇರುವ ಹೆಲ್ಮೆಟ್ ಧರಿಸುವಂತೆ ಬೈಕ್ ಸವಾರರಿಗೆ ತಿಳಿ ಹೇಳುತ್ತಿದ್ದಾರೆ. ಆದರೆ ಸುರಕ್ಷತೆಗಾಗಿ ಹೆಲ್ಮೆಟ್ ಧರಿಸುವಂತೆ ಹೇಳುವ ಪೊಲೀಸರು ಅರ್ಧ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಿ ನಿಯಮ ಉಲ್ಲಂಘಿಸುತ್ತಿದ್ದಾರೆ.‌ ಇದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ವಿರೋಧ ಅಳಿಸಿ ಹಾಕಲು ಪೊಲೀಸ್ ಇಲಾಖೆ ಲಾ ಅಂಡ್ …

Read More »

ಬೆಳಗಾವಿ ತಾಲೂಕಿನ ಕೂಲಿ ಕಾರ್ಮಿಕರ ಸಂಘಟನೆ ವತಿಯಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ, ಬೆಳಗಾವಿ ತಾಲೂಕಿನ ಕೂಲಿ ಕಾರ್ಮಿಕರ ಸಂಘಟನೆ ವತಿಯಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಗಾವಿ ನಗರದಲ್ಲಿ ಇಂದು ಮಂಗಳವಾರ ಕೂಲಿ ಕಾರ್ಮಿಕರ ಸಂಘಟನೆ ವತಿಯಿಂದ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕಿನ ಕೂಲಿ ಕಾರ್ಮಿಕರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ತಲೆಯ ಮೇಲೆ ಬುಟ್ಟಿ, ಕೂಲಿ ಕೆಲಸದ ಸಾಮಗ್ರಿ ಹಿಡಿದು ಪ್ಲೇಟ್ …

Read More »

ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ಕರಾಟೆ ಚಾಂಪಿಯನ್‌ಶಿಪ್ ಸ್ಪರ್ಧೆ

ಆತ್ಮ ರಕ್ಷಣೆಗಾಗಿ ಕರಾಟೆ ತರಬೇತಿಯು ಅತ್ಯವಶ್ಯವಾಗಿದೆ.ಈ ಹಿನ್ನೆಲೆ ಬೆಳಗಾವಿ ಜಿಲ್ಲೆಯಲ್ಲಿ ವಿವಿಧೆಡೆ ಕರಾಟೆ ತರಬೇತಿಯನ್ನು ನೀಡಲಾಗುತ್ತಿದೆ. ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಕರಾಟೆ ಮಾಸ್ಟರ್ ಜೀತೇಂದ್ರ ಕಾಕತಿಕರ್ ಹೇಳಿದ್ದಾರೆ. ಬೆಳಗಾವಿ ನಗರದ ಮರಾಠಾ ಮಂದಿರದಲ್ಲಿ ಜಿಲ್ಲಾ ಮಟ್ಟದ ಕರಾಟೆ ಚಾಂಪಿಯನ್ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕುಗಳ ೮೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗಿಯಾಗಿದ್ದರು ಈ ವೇಳೆ ಬೆಳಗಾವಿ ಜಿಲ್ಲಾ ಕರಾಟೆ ಅಸೋಸಿಯೇಶನ್ ಅಧ್ಯಕ್ಷರಾದ ಗಜೇಂದ್ರ ಕಾಕತೀಕರ್ …

Read More »

ಓಸಿ, ಇಸ್ಪೀಟ್ ಆಡಲು ಪ್ರೇರೇಪಿಸುತ್ತಿದ್ದ ಆರೋಪಿ ಗಡಿಪಾರು ಮಾಡಿದ ಡಿಸಿಪಿ ಗಡಾದಿ..!

ಓಸಿ ಮತ್ತು ಇಸ್ಪೀಟ್ ಆಡಲು ಜನರನ್ನು ಪ್ರೇರೇಪಿಸುತ್ತಿದ್ದ ಆರೋಪಿಯನ್ನು ಒಂದು ವರ್ಷದವರೆಗೆ ಬೆಳಗಾವಿ ಜಿಲ್ಲೆಯಿಂದ ಗಡಿಪಾರು ಮಾಡಿ ಡಿಸಿಪಿ ರವೀಂದ್ರ ಗಡಾದಿ ಆದೇಶ ಹೊರಡಿಸಿದ್ದಾರೆ. ಅನಗೋಳದ ನಿವಾಸಿ ಪರಶುರಾಮ್ ಬಾಬು ಮೇತ್ರಿ ಗಡಿಪಾರು ಶಿಕ್ಷೆಗೆ ಒಳಗಾಗಿರುವ ಆರೋಪಿ. ಸೆಪ್ಟೆಂಬರ್ 19 2022ರಿಂದ ಸೆಪ್ಟೆಂಬರ್ 18 2023ರವರೆಗೆ 1 ವರ್ಷ ಕಾಲ ಬೆಳಗಾವಿ ಜಿಲ್ಲೆಯಿಂದ ಗಡಿಪಾರು ಮಾಡಿ ಡಿಸಿಪಿ ರವೀಂದ್ರ ಗಡಾದಿ ಆದೇಶ ಹೊರಡಿಸಿದ್ದಾರೆ. ಈ ಆರೋಪಿ ವಿರುದ್ಧ ಒಟ್ಟು 7 …

Read More »

ಈಗ ೨೦೨೩ರ ಚುನಾವಣೆಯಲ್ಲಿ ಉಭಯ ನಾಯಕರ ಮಧ್ಯೆ ಮತ್ತೆ ಟಿಕೆಟ್‌ಗೆ ಫೈಟ್ ಶುರುವಾಗಿದೆ. ಇತ್ತೀಚೆಗೆ ಬೈಲಹೊಂಗಲಕ್ಕೆ ಭೇಟಿ ನೀಡಿದ್ದ ಮಾಜಿ ಸಿಎಂ ಬಿಎಸ್‌ವೈ ಈ ವೇಳೆ ಜಾಣನಡೆ ಪ್ರದರ್ಶನ ಮಾಡಿದ್ದಾರೆ. ಗಾಣಿಗ ಸಮಾಜ ಹಾಗೂ ನೌಕರರ ಸಮಾವೇಶಕ್ಕೆಂದು ಬೈಲಹೊಂಗಲಕ್ಕೆ ಬಿಎಸ್ ಯಡಿಯೂರಪ್ಪ ಆಗಮಿಸಿದ್ದರು. ಬೈಲಹೊಂಗಲದ ಪೃಥ್ವಿ ಗಾರ್ಡನ್‌ನಲ್ಲಿ ಮೊನ್ನೆ ನಡೆದಿದ್ದ ಕಾರ್ಯಕ್ರಮ ಹಿನ್ನೆಲೆ ಬೈಲಹೊಂಗಲಕ್ಕೆ ಬರುತ್ತಿದ್ದಂತೆ ಬಿಎಸ್‌ವೈ ಮಾಜಿ ಶಾಸಕ ಜಗದೀಶ ಮೆಟಗುಡ್ಡ ಮನೆಗೆ ಭೇಟಿ ನೀಡಿದ್ದರು. ಮಾಜಿ ಶಾಸಕ ಜಗದೀಶ್ ಮೆಟಗುಡ್ಡ ಮನೆಯಲ್ಲಿ ಉಪಹಾರ ಸೇವಿಸಿ ಕಾರ್ಯಕ್ರಮಕ್ಕೆ ತೆರಳಿದ್ದರು.

ರಾಜ್ಯದಲ್ಲಿ ವಿಧಾನ ಸಭಾ ಚುನಾವಣೆಗಳು ಸಮೀಪಿಸುತ್ತಿದ್ದಂತೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇತ್ತೀಚೆಗೆ ಮಾಜಿ ಸಿಎಂ ಬಿಎಸ್‌ವೈ ಬೈಲಹೊಂಗಕ್ಕೆ ಆಗಮಿಸಿದ್ದು ಈಗ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಹೌದು ಬೈಲಹೊಂಗಲ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ-ಕೆಜೆಪಿ ಕಿಚ್ಚು ಇನ್ನೂ ಆರಿಲ್ಲ. ಬೈಲಹೊಂಗಲ ಕ್ಷೇತ್ರದ ಬಿಜೆಪಿ ಟಿಕೆಟ್‌ಗಾಗಿ ಜಗದೀಶ್ ಮೆಟಗುಡ್ ಹಾಗೂ ಡಾ.ವಿಶ್ವನಾಥ ಪಾಟೀಲ್ ಮಧ್ಯೆ ಪೈಪೋಟಿ ಏರ್ಪಟ್ಟಿದೆ. ೨೦೧೩ರ ವಿಧಾನಸಭೆ ಚುನಾವಣೆಯಲ್ಲಿ ಡಾ. ವಿಶ್ವನಾಥ್ ಪಾಟೀಲ್ …

Read More »