Breaking News

Laxminews 24x7

ದೂಧಗಂಗಾ ನದಿಯಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

ನಿಪ್ಪಾಣಿ (ಬೆಳಗಾವಿ): ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನ ಮಾಂದೂರು ಗ್ರಾಮದ ಬಳಿ ದೂಧಗಂಗಾ ನದಿಯಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬರು ಶನಿವಾರ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮಾಂದೂರಿನ ನಿವಾಸಿ ಶಿವಾಜಿ ಕೊರವಿ (54) ಮೃತಪಟ್ಟವರು. ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ ಮುಂದುವರಿದಿದ್ದು, ಗ್ರಾಮದ ಹೊರವಲಯದಲ್ಲಿ ದೂಧಗಂಗಾ ನದಿ ಧುಮ್ಮಿಕ್ಕುತ್ತಿದೆ. ಶನಿವಾರ ಬೆಳಿಗ್ಗೆ ಮೀನು ಹಿಡಿಯಲು ನದಿಗೆ ಇಳಿದಿದ್ದ ಶಿವಾಜಿ ನೋಡನೋಡುತ್ತಿದ್ದಂತೆ ನೀರಿನ ಸೆಳವಿಗೆ ಸಿಕ್ಕು ತೇಲಿಹೋದರು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಹಾಗೂ …

Read More »

ರಕ್ಕಸಕೊಪ್ಪ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಭರ್ತಿಗೆ ನಾಲ್ಕೇ ಅಡಿ ಬಾಕಿ

ಬೆಳಗಾವಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ಕಳೆದೊಂದು ವಾರದಿಂದ ಸುರಿಯುತ್ತಿರುವ ಉತ್ತಮ ಮಳೆಯಿಂದಾಗಿ ಮಾರ್ಕಂಡೇಯ ನದಿ ಉಕ್ಕಿ ಹರಿಯುತ್ತಿದ್ದು, ತಾಲ್ಲೂಕಿನ ರಕ್ಕಸಕೊಪ್ಪ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದೆ. ಭರ್ತಿಗೆ ಕೇವಲ ನಾಲ್ಕೇ ಅಡಿ ಬಾಕಿ ಇದೆ.   2,475 ಅಡಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಶುಕ್ರವಾರದ ಬೆಳಿಗ್ಗೆವರೆಗೆ 2,471 ಅಡಿ ನೀರು ಸಂಗ್ರಹವಾಗಿದೆ. ‘ಪ್ರತಿವರ್ಷ ಜುಲೈ ಅಂತ್ಯಕ್ಕೆ ಭರ್ತಿಯಾಗುತ್ತಿತ್ತು. ಆದರೆ, ಖಾನಾಪುರ, ಬೆಳಗಾವಿ ತಾಲ್ಲೂಕು ಹಾಗೂ ಮಹಾರಾಷ್ಟ್ರದಲ್ಲಿ ಬಿಟ್ಟುಬಿಡದೆ ಮಳೆಯಾಗುತ್ತಿರುವುದರಿಂದ …

Read More »

ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಸಾಕಷ್ಟು ಅವಾಂತರಗಳು ಜಿಲ್ಲೆಗೆ ಬರದೇ, ಎಲ್ಲೋ ಕುಳಿತ ಉಸ್ತುವಾರಿ ಸಚಿವ: ಸತೀಶ ಜಾರಕಿಹೊಳಿ

ಬೆಳಗಾವಿ: ‘ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಸಾಕಷ್ಟು ಅವಾಂತರಗಳು ಉಂಟಾಗುತ್ತಿವೆ. ಪ್ರವಾಹ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ. ಇಷ್ಟಾದರೂ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗೆ ಬರದೇ, ಎಲ್ಲೋ ಕುಳಿತು ಮಾತನಾಡುತ್ತಿದ್ದಾರೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಕಿಡಿ ಕಾರಿದರು.   ‘ಗಡಿ ಜಿಲ್ಲೆಯಲ್ಲಿ ಬಿಟ್ಟೂಬಿಡದೆ ಮಳೆ ಸುರಿಯುತ್ತಿದೆ. ಈಗಾಗಲೇ ಶಾಲೆ, ಮನೆಗಳ ಕಟ್ಟಡಗಳೂ ಕುಸಿದಿವೆ. ಜೀವ ಹಾನಿಯಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿಲ್ಲ. ಜಿಲ್ಲಾ ಉಸ್ತುವಾರಿ ವಹಿಸಿಕೊಂಡ ಗೋವಿಂದ ಕಾರಜೋಳ …

Read More »

ಯಮಕನಮರಡಿ ಮತಕ್ಷೇತ್ರದ ಕೇದನೂರ ಮತ್ತು ಮಣ್ಣಿಕೇರಿ ಗ್ರಾಮಗಳ ಸಂತ್ರಸ್ತರಿಗೆ ಸತೀಶ ಜಾರಕಿಹೊಳಿ ಫೌಂಡೇಶನ್ ನೆರವಿನ ಹಸ್ತ

ಮಹಾಮಳೆಯಿಂದ ಕುಸಿದು ಬಿದ್ದಿರುವ ಯಮಕನಮರಡಿ ಮತಕ್ಷೇತ್ರದ ಕೇದನೂರ ಮತ್ತು ಮಣ್ಣಿಕೇರಿ ಗ್ರಾಮಗಳ ಸಂತ್ರಸ್ತರಿಗೆ ಸತೀಶ ಜಾರಕಿಹೊಳಿ ಫೌಂಡೇಶನ್ ನೆರವಿನ ಹಸ್ತ ಚಾಚಿದೆ. ಹೌದು ಬೆಳಗಾವಿ ನಗರ ಹಾಗೂ ತಾಲೂಕಿನಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬಿರಿದಿದ್ದಾನೆ. ಸಾಕಷ್ಟು ಮನೆಗಳು ಧರೆಗೆ ಉರುಳಿದ್ರೆ, ಹೊಲದಲ್ಲಿ ಬೆಳೆದಿದ್ದ ಬೆಳೆಗಳು ಜಲಾವೃತವಾಗಿ ಹಾನಿಯಾಗಿವೆ. ಹೀಗೆ ಬೆಳಗಾವಿ ತಾಲೂಕಿನ ಯಮಕನಮರಡಿ ಮತಕ್ಷೇತ್ರದ ಕೇದನೂರ ಮತ್ತು ಮಣ್ಣಿಕೇರಿ ಗ್ರಾಮದಲ್ಲಿ ಪ್ರಕಾಶ ರಾಮಚಂದ್ರ, ಶಾಂತಾ ಯಲ್ಲಪ್ಪ ವರ್ಗೆ, ರೇಖಾ ಬಾಳು ರಾಜಾಯಿ, …

Read More »

ಸರಿಯಾದ ಒಳಚರಂಡಿ ವ್ಯವಸ್ಥೆಯಿಲ್ಲದೇ ಮನೆಗೆ ನೀರು ನುಗ್ಗಿ ತೊಂದರೆ, ಶಾಸಕರ ವಿರುದ್ಧ ಆಕ್ರೋಶ

ಬೆಳಗಾವಿ ನಗರದ ರಾಷ್ಟ್ರೀಯ ಹೆದ್ದಾರಿ 4ಕ್ಕೆ ಹೊಂದಿಕೊಂಡಿರುವ ಉಜ್ವಲ್ ನಗರದಲ್ಲಿ ಸರಿಯಾದ ಒಳಚರಂಡಿ ವ್ಯವಸ್ಥೆಯಿಲ್ಲದೇ ಹೈವೆ ಸೇರಿದಂತೆ ಸರ್ವೀಸ್ ರಸ್ತೆಯ ಮೇಲೆ ನೀರು ಹರಿಯುತ್ತಿದ್ದು ಅಕ್ಕ ಪಕ್ಕದ ನಿವಾಸಿಗಳ ಮನೆಗೆ ನೀರು ನುಗ್ಗಿ ತೊಂದರೆಯಾಗುತ್ತಿದೆ ಎಂದು ಸ್ಥಳೀಯ ನಿವಾಸಿಗಳು ಸ್ಥಳೀಯ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ನಗರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಸ್ತೆಯ ಮೇಲೆಲ್ಲ ನೀರು ನಿಂತಿದ್ದು ವಾಹನ ಸವಾರರ ಕಷ್ಟ ಹೇಳತೀರದ್ದಾಗಿದೆ. ಇನ್ನು …

Read More »

ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ ಫಲನುಭವಿಗಳಿಗೆ ಭಾಗ್ಯಲಕ್ಷಿ ಬಾಂಡಗಳನ್ನು ವಿತರಣೆ ಮಾಡಿದ ಶಾಸಕ ಅನಿಲ ಬೆನಕೆ :

ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಅವರು ಶನಿವಾರದಂದು ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಶು ಅಭಿವೃಧ್ದಿ ಯೋಜನೆಯಡಿ ಬೆಳಗಾವಿ ನಗರದ ಬಡಕಲ ಗಲ್ಲಿಯ ಬನಶಂಕರಿ ಕಾರ್ಯಾಲಯದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪಾ ರವರ ಮಹತ್ವದ ಯೋಜನೆಯಾದ ಭಾಗ್ಯಲಕ್ಷಿö್ಮÃ ಬಾಂಡಗಳನ್ನು ಫಲಾನುಭವಿಗಳಿಗೆ ವಿತರಣೆ ಮಾಡಿದರು.   ಹೆಣ್ಣು ಮಕ್ಕಳನ್ನು ಮುಖ್ಯವಾಹಿನಿಗೆ ಕರೆತರಲು, ಹೆಣ್ಣು ಮಕ್ಕಳ ಭದ್ರತೆ ಹಾಗೂ ಹೆಣ್ಣು ಭ್ರೂಣ ಹತ್ಯೆಯನ್ನು ತಡೆಯುವ …

Read More »

ಜೈಲಿನಲ್ಲಿದ್ದ ಸ್ನೇಹಿತರಿಗೆ ಮಾದಕ ವಸ್ತು ಪೂರೈಕೆ

ಬೆಂಗಳೂರು: ಜೈಲಿನಲ್ಲಿರುವ ಸ್ನೇಹಿತರಿಗೆ ಮಾದಕ ವಸ್ತು ಸರಬರಾಜು ಮಾಡಲು ಯತ್ನಿಸಿದ ಇಬ್ಬರು ಯುವತಿಯರನ್ನ ಪರಪ್ಪನ ಅಗ್ರಹಾರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಚಾಮರಾಜಪೇಟೆ ಮೂಲದ ಸಂಗೀತಾ ಅಲ್ಫೋನ್ಸ್ ಮತ್ತು ಛಾಯಾ ಎಂದು ಗುರುತಿಸಲಾಗಿದೆ. ಜೈಲಿನಲ್ಲಿರುವ ಸ್ನೇಹಿತರಾದ ಲೋಹಿತ್‍ ಹಾಗೂ ಕಾಳಪ್ಪ ಎಂಬುವವರನ್ನು ಜುಲೈ 12ರಂದು ಭೇಟಿಯಾಗಲು ಬಂದಿದ್ದರು. ಸಂಗೀತಾ ಹಾಗೂ ಛಾಯಾರನ್ನ ಭದ್ರತಾ ಸಿಬ್ಬಂದಿ ಪರಿಶೀಲಿಸಿದಾಗ ಇಬ್ಬರೂ ಸಹ ಗುಪ್ತಾಂಗದಲ್ಲಿ ಏನನ್ನೋ ಅಡಗಿಸಿಟ್ಟಿರುವುದು ಪತ್ತೆಯಾಗಿದೆ.

Read More »

ಗೋಕಾಕ ತಾಲೂಕಿನ ಭಾಗದಲ್ಲಿ ಮತ್ತೆ ಪ್ರವಾಹ ಭೀತಿ

ಜಿಲ್ಲಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು ಮೂಡಲಗಿ ತಾಲೂಕಿನ ನಾಲ್ಕು ಸೇತುವೆಗಳು ಜಲಾವೃತವಾಗಿದೆ. ಕೆಲ ಬೈಕ್ ಸವಾರರು ಅಪಾಯ ಲೆಕ್ಕಿಸದೇ ಜಲಾವೃತವಾದ ಸೇತುವೆ ಮೇಲೆಯೇ ಸಂಚರಿಸಿದ್ದಾರೆ. ಪ್ರಮುಖವಾಗಿ ಅವರಾದಿ – ಮಹಾಲಿಂಗಾಪುರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ, ಸುಣಧೋಳ -ಮೂಡಲಗಿಗೆ ಸಂಪರ್ಕ ಕಲ್ಪಿಸುವ ಸೇತುವೆ, ವಡೇರಹಟ್ಟಿ-ಉದಗಟ್ಟಿಗೆ ಸಂಪರ್ಕ ಕಲ್ಪಿಸುವ ಸೇತುವೆ ಹಾಗೂ ಮೂಡಲಗಿ-ಭೈರನಹಟ್ಟಿಗೆ ಸಂಪರ್ಕ ಕಲ್ಪಿಸುವ ಸೇತುವೆ ಜಲಾವೃತವಾಗಿವೆ. ಪರಿಣಾಮ ಈ ಗ್ರಾಮಗಳು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಗೆ ಸಂಚಾರ ಸ್ಥಗಿತವಾಗಿದೆ. ಸದ್ಯ ಬಳ್ಳಾರಿ ನಾಲಾ, …

Read More »

ಅಪ್ರಾಪ್ತ ಬಾಲಕಿ ವಿವಾಹಕ್ಕೆ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿದ ಭೂಪ; ವರ ಮಹಾಶಯ ಅರೆಸ್ಟ್

ಬೆಂಗಳೂರು: ಅಪ್ರಾಪ್ತ ಬಾಲಕಿಯನ್ನು ವಿವಾಹವಾಗಲು ವರ ಮಹಾಶಯನೊಬ್ಬ ಆಧಾರ್ ಕಾರ್ಡ್ ನ್ನೇ ನಕಲು ಮಾಡಿ ಸಿಕ್ಕಿ ಬಿದ್ದ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಆರೋಪಿ ಮದುಮಗ ಮನು ಎಂದು ಗುರುತಿಸಲಾಗಿದೆ. ಕಾನೂನು ಪ್ರಕಾರ ಯುವತಿಗೆ ವಿವಾಹವಾಗಲು 18 ವರ್ಷ ಆಗಿರಬೇಕು. ಆದರೆ ಮನು ಎಂಬ ಯುವಕ ಅಪ್ರಾಪ್ತ ಯುವತಿ ವಿವಾಹವಾಗಲೆಂದು ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ವಿವಾಹಕ್ಕೆ ಸಿದ್ಧತೆ ನಡೆಸಿದ್ದಾನೆ. ಯುವತಿಯ ಆಧಾರ್ ಕಾರ್ಡ್ ನಲ್ಲಿ ಆಕೆ ಹುಟ್ಟಿದ ದಿನಾಂಕ, ವರ್ಷವನ್ನೇ …

Read More »

ಯಮಕನಮರಡಿಯಲ್ಲಿ ಕಿರಾಣಿ ಅಂಗಡಿ ಮಾಲೀಕನ ಕೊಲೆ

ಯಮಕನಮರಡಿ: ಇಲ್ಲಿನ ಯಮಕನಮರಡಿಯಲ್ಲಿ ಕಿರಾಣಿ ಅಂಗಡಿ ಮಾಲೀಕರೊಬ್ಬರನ್ನು ಶನಿವಾರ ಬರ್ಬರವಾಗಿ ಕೊಲೆಗೈಯ್ಯಲಾಗಿದೆ.   ಹೊಸಪೇಟೆ ನಿವಾಸಿ ಪರಶುರಾಮ ಸಿದ್ದಲಿಂಗಯ್ಯ ಹಲಕರ್ಣಿ(32) ಕೊಲೆಯಾದವರು. ಬಸವರಾಜ ಭರಮಪ್ಪ ಗಲಾಟಿ (30) ಮಂಜುನಾಥ ಲಕ್ಷ್ಮಣ ಪುಟ್ಜಾನೆ (24), ಕೆಂಪಣ್ಣ ಅರ್ಜುನ್ ನೇಸರ್ಗಿ ಕೊಲೆಗೈದ ಆರೋಪಿಗಳು.   ಕೊಲೆ ನಡೆದ ಕೆಲವೇ ಹೊತ್ತಿನಲ್ಲಿ ಆರೋಪಿಗಳಾದ ಮಂಜುನಾಥ ಹಾಗೂ ಕೆಂಪಣ್ಣ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾರೆ. ಇನ್ನೊಬ್ಬ ಾರೋಪಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

Read More »