Breaking News

Laxminews 24x7

ಆನ್ ಲೈನ್‌ನಲ್ಲಿ ಸುಲಭವಾಗಿ ವೋಟರ್ ಐಡಿಗೆ ಆಧಾರ್ ಲಿಂಕ್ ಮಾಡಿ

ಕೇಂದ್ರ ಚುನಾವಣಾ ಆಯೋಗದ ಆದೇಶದಂತೆ ಬೆಳಗಾವಿಯ ಉತ್ತರ ಹಾಗೂ ದಕ್ಷಿಣ ಮತಕ್ಷೇತ್ರಗಳಲ್ಲಿ ಮತದಾರರ ಗುರುತಿನ ಚೀಟಿ ಸಂಖ್ಯೆಗೆ ಆದಾರ್ ಸಂಖ್ಯೆಯನ್ನು ಜೋಡಣೆ ಮಾಡಲು ನಿರ್ಧರಿಸಿದ್ದು ಕೂಡಲೇ ಎಲ್ಲಾ ಮತದಾರರು ಮತದಾರರ ಗುರುತಿನ ಚೀಟಿಗೆ ಆಧಾರ್‌ಕಾರ್ಡ್ ಸಂಖ್ಯೆಯನ್ನು ಲಿಂಕ್ ಮಾಡಿಕೊಳ್ಳುವಂತೆ ಮಹಾನಗರ ಪಾಲಿಕೆ ಅಧಿಕಾರಿಗಳು ಕೋರಿದ್ದಾರೆ. ಕೇಂದ್ರ ಚುನಾವಣಾ ಆಯೋಗದ ಆದೇಶದಂತೆ ಬೆಳಗಾವಿಯ ಉತ್ತರ ಹಾಗೂ ದಕ್ಷಿಣ ಮತಕ್ಷೇತ್ರಗಳಲ್ಲಿ ಮತದಾರರ ಗುರುತಿನ ಚೀಟಿ ಸಂಖ್ಯೆಗೆ ಆದಾರ್ ಸಂಖ್ಯೆಯನ್ನು ಜೋಡಣೆ ಮಾಡಲು ನಿರ್ಧರಿಸಿದ್ದು …

Read More »

ಯಮಕನಮರ್ಡಿ ಕ್ಷೇತ್ರದಲ್ಲಿ ನಮ್ಮವರೇ ನನ್ನ ವಿರುದ್ಧ ಹಣ ಹಂಚಿದ್ದರಿಂದ ಲೀಡ ಕಡಿಮೆ: ಸತೀಶ್ ಜಾರಕಿಹೊಳಿ

ಯಮಕನಮರ್ಡಿ ಕ್ಷೇತ್ರದಲ್ಲಿ ನಮ್ಮವರೇ ನನ್ನ ವಿರುದ್ಧ ಹಣ ಹಂಚಿದ್ದರಿಂದ ನನ್ನ ಗೆಲುವಿನ ಅಂತರ ಕಡಿಮೆಯಾಗಲು ಕಾರಣವಾಯಿತು. ಎಂದು ಅಚ್ಚರಿ ಹೇಳಿಕೆಯನ್ನು ನೀಡಿದ್ದು ಸಧ್ಯ ಸತೀಶ್ ಜಾರಕಿಹೊಳಿ ವಿರುದ್ಧ ಹಣ ಹಂಚಿದ ಕಾಂಗ್ರೆಸ್ ನಾಯಕರು ಯಾರು ಎನ್ನುವ ಚರ್ಚೆ ರಾಜ್ಯ ರಾಜಕಾರಣದಲ್ಲೀಗ ಪ್ರಾರಂಭವಾಗಿದೆ. ಬೆಳಗಾವಿ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಸತೀಶ್ ಜಾರಕಿಹೊಳಿರವರು, ಇದೇ ವೇಳೆ ಕಳೆದ ಬಾರಿ ಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿ ಗೆಲುವಿನ ಅಂತರ ಕಡಿಮೆಯಾದ ಕುರಿತಂತೆ ಮಾಧ್ಯಮಗಳ ಪ್ರಶ್ನೆಗೆ …

Read More »

ಮಹಿಳೆಯರು ಮತ್ತಷ್ಟು ಸಾಧನೆ ಮಾಡಬೇಕಿದೆ”: ಯುವ ನಾಯಕ ರಾಹುಲ ಜಾರಕಿಹೊಳಿ

ಯಾವುದೇ ದೇಶದ ಏಳಿಗೆ ಆ ದೇಶದ ಮಹಿಳೆಯರ ಪ್ರಗತಿಯನ್ನು ಅವಲಂಬಿಸಿದೆ. ಹೀಗಾಗಿ ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಹೀಗೆ ಎಲ್ಲ ರಂಗಗಳಲ್ಲಿ ಮಹಿಳೆಯರು ಮತ್ತಷ್ಟು ಸಾಧನೆ ಮಾಡಬೇಕಿದೆ” ಎಂದು ಯುವ ನಾಯಕ ರಾಹುಲ ಜಾರಕಿಹೊಳಿ ಅಭಿಪ್ರಾಯ ಪಟ್ಟರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬೆಳಗಾವಿ ವಲಯದ ಕಾಕತಿ, ಗೌಂಡವಾಡ, ಮುತ್ಯಾನ ಹಟ್ಟಿ ಗ್ರಾಮದ ಸ್ವ ಸಹಾಯ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಗೌಡವಾಡದ ಮೋನಿಕ ಸಮುದಾಯ ಭವನದಲ್ಲಿ ಜರುಗಿದ ಸಾಮೂಹಿಕ ವರಮಹಾಲಕ್ಷ್ಮಿ ಪೂಜಾ, …

Read More »

ಸಿದ್ದರಾಮಯ್ಯ ಅವರ ವಾಹನ ಮೇಲೆ ಮೊಟ್ಟೆ ಎಸೆದ ಬಗ್ಗೆ ನಾನು ಕೂಡ ತೀವ್ರವಾಗಿ ಖಂಡಿಸುತ್ತೇನೆ.: ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಾಹನ ಮೇಲೆ ಮೊಟ್ಟೆ ಎಸೆದಿರುವುದನ್ನು ಒಪ್ಪಲಾಗದು.ಅದೇ ರೀತಿ ಸಿದ್ದರಾಮಯ್ಯ ಅವರು ಸಾರ್ವಕರ್ ಅವರ ಬಗ್ಗೆ ನೀಡಿದ ಹೇಳಿಕೆಯೂ ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ವಾಹನ ಮೇಲೆ ಮೊಟ್ಟೆ ಎಸೆದ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಖಂಡಿಸಿದ್ದಾರೆ. ನಾನು ಕೂಡ ತೀವ್ರವಾಗಿ ಖಂಡಿಸುತ್ತೇನೆ. ವೈಚಾರಿಕ ಭಿನ್ನಾಭಿಪ್ರಾಯ ಏನೇ …

Read More »

ಮೊಟ್ಟೆ ಎಸೆತ ಖಂಡಿಸಿ ಬಾದಾಮಿಯಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ

ಬಾಗಲಕೋಟೆ : ಮಾಜಿ ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ಖಂಡಿಸಿ ಅವರು ಪ್ರತಿನಿಧಿಸುತ್ತಿರುವ ಕ್ಷೇತ್ರ ಬಾದಾಮಿಯಲ್ಲಿ ಶುಕ್ರವಾರ ಕಾಂಗ್ರೆಸ್ ಕಾರ್ಯಕರ್ತರಿಂದ ಭಾರಿ ಪ್ರತಿಭಟನೆ ನಡೆಸಲಾಗಿದೆ. ಬಾದಾಮಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸಿದ್ದರಾಮಯ್ಯ ಅಭಿಮಾನಿಗಳು ರಸ್ತೆ ತಡೆದು, ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ವೇಳೆ ಟ್ರಾಫಿಕ್ ಜಾಮ್ ಆಗಿ ನೂರಾರು ವಾಹನಗಳು ಸಾಲುಗಟ್ಟಿ ನಿಲ್ಲಬೇಕಾಯಿತು. ಬೃಹತ್ ಪ್ರತಿಭಟನಾ ರ‍್ಯಾಲಿ …

Read More »

ಸರ್ಕಾರ ಗೂಂಡಾಗಿರಿಯ ಹಾವಿಗೆ ಹಾಲೆರೆಯುತ್ತಿದೆ: ಕಾಂಗ್ರೆಸ್‌

ಬೆಂಗಳೂರು: ಪೋಲಿಸರನ್ನು ಕಟ್ಟಿ ಹಾಕಿ ಸರ್ಕಾರ ಗೂಂಡಾಗಿರಿಯ ಹಾವಿಗೆ ಹಾಲೆರೆಯುತ್ತಿದೆ ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿದೆ. ಸುಳ್ಯದಲ್ಲಿ ನಳಿನ್‌ ಕುಮಾರ್‌ ಕಟೀಲ್‌ ಅವರ ಕಾರಿನ ಮೇಲೆ ದಾಳಿ ಮಾಡಿದ್ದ ಹಿನ್ನೆಲೆಯಲ್ಲಿ ಪೋಲಿಸರು ಬಿಜೆಪಿ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್‌ ಮಾಡಿದ್ದರು. ಆ ವೇಳೆ ಲಾಠಿ ಚಾರ್ಜ್‌ ಮಾಡಿದ್ದ ಪೊಲೀಸರ ಎತ್ತಂಗಡಿ ಮಾಡಿ ಈ ಸರ್ಕಾರ ತಾವು ಎಂದೆಂದಿಗೂ ಗೂಂಡಾಗಿರಿಯ ಪರ ಎಂದು ತೋರಿಸಿ ಪೊಲೀಸರ ನೈತಿಕ ಸ್ಥೈರ್ಯ ಕುಸಿಯುವಂತೆ ಮಾಡಿತ್ತು. ಇದೀಗ …

Read More »

ಅಬಕಾರಿ ನೀತಿ ಪ್ರಕರಣ: ದೆಹಲಿ ಉಪಮುಖ್ಯಮಂತ್ರಿ ಸಿಸೋಡಿಯಾ ನಿವಾಸದ ಮೇಲೆ ಸಿಬಿಐ ದಾಳಿ

ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಮನೆ ಮೇಲೆ ಸಿಬಿಐ ಶುಕ್ರವಾರ (ಆಗಸ್ಟ್ 19) ಬೆಳಗ್ಗೆ ದಾಳಿ ನಡೆಸಿದೆ.   ತಮ್ಮ ನಿವಾಸದ ಮೇಲೆ ಸಿಬಿಐ ದಾಳಿ ನಡೆದಿರುವುದಾಗಿ ಟ್ವೀಟ್ ಮಾಡಿರುವ ಡಿಸಿಎಂ ಸಿಸೋಡಿಯಾ, ತನಿಖೆಗೆ ಎಲ್ಲಾ ರೀತಿಯಿಂದಲೂ ಸಹಕಾರ ನೀಡುವ ಮೂಲಕ ಶೀಘ್ರವೇ ಸತ್ಯ ಹೊರಬರಲಿದೆ ಎಂದು ತಿಳಿಸಿದ್ದಾರೆ. “ನಾವು ಸಿಬಿಐ ಅನ್ನು ಸ್ವಾಗತಿಸುತ್ತೇವೆ. ಶೀಘ್ರವಾಗಿ ಸತ್ಯ ಹೊರಬರಲು ನಾವು ಎಲ್ಲಾ ರೀತಿಯಿಂದಲೂ …

Read More »

ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಬೆದರಿಸಿ ದರೋಡೆಗೈಯ್ಯುತ್ತಿದ್ದ ಏಳು ಜನರ ಬಂಧನ

ವಿಜಯಪುರ: ವಿಜಯಪುರ ನಗರ ಹಾಗೂ ಹೆದ್ದಾರಿಗಳಲ್ಲಿ ಸಂಚರಿಸುತ್ತಿದ್ದ ಜನರನ್ನು ಮಾರಕಾಸ್ತ್ರಗಳಿಂದ ಬೆದರಿಸಿ ದರೋಡೆ ಮಾಡುತ್ತಿದ್ದ ಮಹಾರಾಷ್ಟ್ರ ಮೂಲದ ಮೂವರು ಸೇರಿದಂತೆ ಒಟ್ಟು ಏಳು ಜನರ ತಂಡವನ್ನು ಪೊಲೀಸರು ಬಂಧಿಸಿದ್ದಾರೆ.   ಇಟ್ಟಂಗಿಹಾಳ ದೊಡ್ಡಿಯ ನಿವಾಸಿ ವಿಜಯ ಭೀರಪ್ಪ ಕರಾಡೆ (23), ಆನಂದ ಮಾಯಪ್ಪ ಡೇರೆ, ಹಣಮಂತ ಜಯಪ್ಪ ಖರಾತ (20), ಬಬಲಾದಿ ಗ್ರಾಮದ ನಿವಾಸಿ ಸಚಿನ್ ಮಧು ಗೋಪಣೆ (20), ಮಹಾರಾಷ್ಟ್ರದ ತಿಕ್ಕುಂಡಿ ಕರೆವಾಡಿ ಮೂಲದ ನಿವಾಸಿ ನವನಾಥ ಅಮಗೊಂಡ ಕರಾಡೆ …

Read More »

ನಾವು ಶಶಿಕಲಾ‌ ಜೊಲ್ಲೆಗೆ ಹುಟ್ಟಿದವರಲ್ಲ: ನಲಪಾಡ್ ವಿವಾದಾತ್ಮಕ ಹೇಳಿಕೆ

ಬೆಂಗಳೂರು : ”ನಾವು ಶಶಿಕಲಾ‌ ಜೊಲ್ಲೆಗೆ ಹುಟ್ಟಿದವರಲ್ಲ, ನಾವು ಕಾಂಗ್ರೆಸ್ ಪಕ್ಷದವರು, ಗಾಂಧೀಜಿ ತತ್ವ ಅನುಸರಿಸುತ್ತಿರುವವರು” ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ನೀಡಿರುವ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ.   ಫೇಸ್ ಬುಕ್ ಲೈವ್ ನಲ್ಲಿಸಿದ್ದರಾಮಯ್ಯ ಅವರತ್ತ ಕೊಡಗಿನಲ್ಲಿ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ನಲಪಾಡ್, ಬಿಜೆಪಿಯವರು ಊರುಬಿಟ್ಟು ಓಡಿಹೋಗುವಂತೆ ಮಾಡುತ್ತೇವೆ. ರಾಜ್ಯದ ಎಲ್ಲೆಡೆ ಪ್ರತಿಭಟನೆ ಮಾಡುತ್ತೇವಾ. ಎಲ್ಲಾ ಸಚಿವರಿಗೂ ಮೊಟ್ಟೆ ಕಳುಹಿಸಿ …

Read More »

ಕಾರ್ ಹೊಂದಿದವರ 12584 ಸೇರಿ 3.30 ಲಕ್ಷ ಬಿಪಿಎಲ್, ಅಂತ್ಯೋದಯ ರೇಷನ್ ಕಾರ್ಡ್ ರದ್ದು

ಬೆಂಗಳೂರು: ಐಷಾರಾಮಿ ಕಾರ್ ಹೊಂದಿದವರು ಕೂಡ ಬಿಪಿಎಲ್ ಕಾರ್ಡ್ ಪಡೆದುಕೊಂಡಿರುವುದು ಪತ್ತೆಯಾಗಿದ್ದು 12,584 ಕಾರ್ ಮಾಲೀಕರ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ. 21,679 ಅಂತ್ಯೋದಯ, 3,08,345 ಬಿಪಿಎಲ್ ಪಡಿತರ ಚೀಟಿ ಸೇರಿದಂತೆ ಸುಮಾರು 3.30 ಲಕ್ಷ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದ್ದು, ಕೆಲವು ಪಡಿತರ ಚೀಟಿಗಳನ್ನು ಎಪಿಎಲ್ ಕಾರ್ಡ್ ಗೆ ಬದಲಾಯಿಸಿ ಕೊಡಲಾಗಿದೆ. ರಾಜ್ಯದಲ್ಲಿ ಕಾರ್ ಹೊಂದಿದವರು ಕೂಡ ಪಡಿತರ ಚೀಟಿ ಪಡೆದುಕೊಂಡಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಸಾರಿಗೆ ಇಲಾಖೆಯ ಸಹಕಾರ …

Read More »