Breaking News

Laxminews 24x7

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ

ಚಾಲಕನ ನಿಯಂತ್ರಣ ತಪ್ಪಿ ಸರಕಾರಿ ಬಸ್‌ವೊಂದು ಅಪಘಾತಕ್ಕೀಡಾದ ಘಟನೆ ಪುಣಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ೪ರಲ್ಲಿ ನಡೆದಿದೆ. ಹೌದು ಚಾಲಕನ ನಿಯಂತ್ರಣ ತಪ್ಪಿ ಸರಕಾರಿ ಬಸ್‌ವೊಂದು ಬೆಳಗಾವಿ ಹಿರೇಬಾಗೇವಾಡಿ ಮಧ್ಯೆ ಕಮಕಾರಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ ೪ ರಲ್ಲಿ ಬಸ್ ಪಲ್ಟಿಯಾಗಿದೆ.. ಸರಕಾರಿ ಬಸ್ ಕೊಲ್ಹಾಪೂರದಿಂದ ರಾಣೇಬೆನ್ನೂರಿಗೆ ಪ್ರಯಾಣ ಬೆಳೆಸಿತ್ತು. ಇದರಲ್ಲ್ಲಿ ಒಟ್ಟು ೩೫ ಜನ ಪ್ರಯಾಣ ಮಾಡುತ್ತಿದ್ದರು. ಜಿಟಿ ಜಿಟಿ ಮಳೆಯಾಗುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ …

Read More »

ಬೆಳಗಾವಿಯಲ್ಲಿ ​​​​​​​ಇನ್ನೂ ಪತ್ತೆಯಾಗದ ಚಿರತೆ: ಹೊರಗೆ ಬಾರದ ಜನ

ಬೆಳಗಾವಿ: ನಗರದ ಜನವಸತಿ ಪ್ರದೇಶದಲ್ಲಿ ಶುಕ್ರವಾರ ಮಧ್ಯಾಹ್ನ ನುಗ್ಗಿದ ಚಿರತೆ 24 ತಾಸುಗಳ ನಂತರವೂ ಸೆರೆ ಸಿಕ್ಕಿಲ್ಲ. ಅರಣ್ಯ ಇಲಾಖೆ ಹಾಗೂ ಪೊಲೀಸ್ ಸಿಬ್ಬಂದಿ ನಿರಂತರ ಶೋಧ ನಡೆಸಿದ್ದಾರೆ. ಇನ್ನೊಂದೆಡೆ, ಚಿರತೆ ಭಯದಿಂದಾಗಿ ಈ ಪ್ರದೇಶದಲ್ಲಿ ಜನರು ಮನೆಯಿಂದ ಹೊರಬಂದಿಲ್ಲ. ಪ್ರತಿ ದಿನ ವಾಯು ವಿಹಾರಿಗಳಿಂದ ತುಂಬಿರುತ್ತಿದ್ದ ಇಲ್ಲಿನ ಜಾಧವ ನಗರ, ಹನುಮಾನ್ ನಗರ, ಸಹ್ಯಾದ್ರಿ ನಗರ, ಟಿ.ವಿ ಸೆಂಟರ್ ಮುಂತಾದ ಪ್ರದೇಶದ ರಸ್ತೆಗಳು ಶನಿವಾರ ಬೆಳಿಗ್ಗೆ ಬಿಕೋ ಎನ್ನುತ್ತಿದ್ದವು. ಶಾಲೆ, …

Read More »

ಕಲುಷಿತ ನೀರು ಸೇವನೆ, 84 ಮಂದಿ ಆಸ್ಪತ್ರೆಗೆ ದಾಖಲು

ಬಳ್ಳಾರಿ : ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥರಾಗಿ ಪ್ರಾಣ ಕಳೆದುಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಇತ್ತೀಚೆಗೆ ಕಂಪ್ಲಿ ತಾಲೂಕಿನ ಗೋನಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಬಾಲಕಿಯೊಬ್ಬಳು ಮೃತಪಟ್ಟಿದ್ದಳು. ಈ ಘಟನೆ ಮಾಸುವ ಮುನ್ನವೇ ಇದೇ ರೀತಿಯ ಪ್ರಕರಣಗಳು ಜಿಲ್ಲೆಯ ಸಂಡೂರು ತಾಲೂಕಿನ ಅಂಕಮನಾಳ ಗ್ರಾಮದಲ್ಲೂ ನಡೆದಿದೆ. ಗ್ರಾಮದಲ್ಲಿ ಕಳೆದ ಶುಕ್ರವಾರದಿಂದ ಇದುವರೆಗೆ ಒಟ್ಟು 84 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಸ್ವಸ್ಥರನ್ನು ಈಗಾಗಲೇ ಸಂಡೂರು ತಾಲೂಕು ಆಸ್ಪತ್ರೆ, ಬಳ್ಳಾರಿಯ ವಿಮ್ಸ್, …

Read More »

ಹುಬ್ಬಳ್ಳಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ, ಓರ್ವ ಮಹಿಳೆ ಗಾಯಗೊಂಡಿದ್ದಾರೆ.

ಹುಬ್ಬಳ್ಳಿ: ನಗರದ ಹೊರವಲಯದ ಪುಣೆ-ಬೆಂಗಳೂರು ರಸ್ತೆಯಲ್ಲಿ ರಸ್ತೆ ದುರಂತ ಸಂಭವಿಸಿ ಒಂದೇ ಕುಟುಂಬದ ಮೂವರು ಸಾವನ್ನದ್ದಾರೆ. ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡರು. ಹುಬ್ಬಳ್ಳಿ ಸಮೀಪದ ಜಿಗಳೂರ ಗ್ರಾಮದ ಬಳಿ ದುರ್ಘಟನೆ ನಡೆಯಿತು. ಮೃತರನ್ನು ಹನಮಂತಪ್ಪ ಬೇವಿನಕಟ್ಟ ಮತ್ತು ಪತ್ನಿ ರೇಣುಕಾ ಬೇವಿನಕಟ್ಟಿ ಹಾಗು ಅಳಿಯ ರವೀಂದ್ರ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ದರ್ಗಾಗೆ ಗುದ್ದಿದೆ. ಪರಿಣಾಮ, ಕಾರಿನಲ್ಲಿದ್ದ ಮೂವರೂ ಸ್ಥಳದಲ್ಲೇ ಕೊನೆಯುಸಿರೆಳೆದರು. ಬೆಂಗಳೂರಿನಲ್ಲಿ …

Read More »

ಸರಕಾರಿ ರಸ್ತೆಯನ್ನು ಅತಿಕ್ರಮಣ ಮಾಡಿದ್ದರಿಂದ ನಮ್ಮ ಮನೆಯ ಮುಂದೆ ಮಳೆ ನೀರು ನಿಂತು ಮನೆಯೊಳಕ್ಗಕೆ ನೀರು ನುಗ್ಗುತ್ತಿದೆ.

ಸಾರ್ವಜನಿಕರು ಸರಕಾರಿ ರಸ್ತೆಯನ್ನು ಅತಿಕ್ರಮಣ ಮಾಡಿದ್ದರಿಂದ ನಮ್ಮ ಮನೆಯ ಮುಂದೆ ಮಳೆ ನೀರು ನಿಂತು ಮನೆಯೊಳಕ್ಗಕೆ ನೀರು ನುಗ್ಗುತ್ತಿದೆ. ಕೂಡಲೇ ಈ ಸಮಸ್ಯೆಯನ್ನು ಪರಿಹಾರ ಮಾಡಿಕೊಡಿ ಎಂದು ನೆಹರು ನಗರ ನಿವಾಸಿಗಳು ಪಾಲಿಕೆ ಅಧಿಕಾರಿಗಳಿಗೆ ಮನವಿ ಮಾಡಿದರು. ಹೀಗೆ ನೀರು ನಿಂತಿರುವುದನ್ನು ನೋಡಿ ಇದು ಕೆರೆ ಅಂದುಕೊಂಡದರೆ ನಿಮ್ಮ ಭಾವನೆ ತಪ್ಪು. ಇದು ಬೆಳಗಾವಿಯ ನೆಹರು ನಗರದ ರಾಮದೇವ್ ಹೊಟೇಲ್ ಹಿಂದಿನ ರಸ್ತೆಯಿದು. ಸರ್ವಾಜನಿಕರು ಇಲ್ಲಿನ ಸರಕಾರಿ ರಸ್ತೆಯನ್ನು ಅತಿಕ್ರಮಣ …

Read More »

ಈ ಕಲಾವಿದನ ಜೀವನಗಾಥೆ ಕೇಳಿದ್ರೆ ಕಲ್ಲು ಮನಸ್ಸಿನವರ ಕಣ್ಣಲ್ಲಿಯೂ ನೀರು ಬರುತ್ತದೆ

BIG ಬಾಸ್ ಕನ್ನಡ ಒಟಿಟಿಯ ಬಹು ನಿರೀಕ್ಷಿತ ಗ್ರ್ಯಾಂಡ್ ಪ್ರೀಮಿಯರ್ ನಿನ್ನೆ ರಾತ್ರಿ ನಡೆಯಿತು. ಜನಪ್ರಿಯ ರಿಯಾಲಿಟಿ ಶೋನ ಮೊದಲ ಒಟಿಟಿ ಸೀಸನ್ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಕ್ರೇಜ್‌ ಅನ್ನು ಸೃಷ್ಟಿಸಿದೆ. ವಿವಿಧ ವೃತ್ತಿಗಳ 16 ಸೆಲೆಬ್ರಿಟಿ ಸ್ಪರ್ಧಿಗಳು ದೊಡ್ಮೆನೆಗೆ ಎಂಟ್ರಿ ಕೊಟ್ಟಿದ್ದಾರೆ. ಬಿಗ್ ಬಾಸ್ ಮನೆಗೆ ಬರುವ ಹಲವು ಕಂಟೆಸ್ಟಂಟ್‌ಗಳ ಹಿಂದೆ ನೋವಿನ ಕಥೆ ಇರುತ್ತದೆ. ಜೀವನದಲ್ಲಿ ಹತ್ತಾರು ಕಷ್ಟಗಳನ್ನು ಎದುರಿಸಿ, ನೋವನ್ನು ನುಂಗಿ ಬದುಕಿನಲ್ಲಿ ಸಾಧನೆಗೈದಿರುತ್ತಾರೆ. ಅದೇ …

Read More »

ಮಹಾರಾಷ್ಟ್ರ: ಮಹಿಳೆ ಮೇಲೆ ನಿರಂತರ ಅತ್ಯಾಚಾರ ಎಸಗಿ ರಸ್ತೆ ಬದಿ ಎಸೆದ ದುರುಳರು

ಮುಂಬೈ: 35 ವರ್ಷದ ಮಹಿಳೆ ಮೇಲೆ ನಿರಂತರ ಅತ್ಯಾಚಾರ ಎಸಗಿ, ರಸ್ತೆ ಬದಿಗೆ ಎಸೆದು ಹೋದ ಅಮಾನುಷ ಘಟನೆ ಮಹಾರಾಷ್ಟ್ರದ ವಿದರ್ಭ ಪ್ರದೇಶದ ಭಂಡಾರ ಜಿಲ್ಲೆಯಲ್ಲಿ ನಡೆದಿದೆ. ಜುಲೈ 30ರಂದು ಸಂತ್ರಸ್ತ ಮಹಿಳೆ ಕಮರ್‌ಗಾವ್‌ ಗ್ರಾಮಕ್ಕೆ ಸೋದರನ ಮನೆಗೆ ತೆರಳುತ್ತಿದ್ದರು. ಈ ವೇಳೆ ಸ್ನೇಹಿತನ ಸೋಗಿನಲ್ಲಿ ಬಂದ ವ್ಯಕ್ತಿ ಅತ್ಯಾಚಾರ ಎಸಗಿದ್ದ. ಆ ನಂತರ ಆಗಸ್ಟ್‌ 1ರಂದು ಕನ್ಹಾಲ್‌ಮೊಹ್‌ ಪ್ರದೇಶದಲ್ಲಿ ಮತ್ತೊಮ್ಮೆ ಆಗಂತುಕರಿಬ್ಬರು ಮಹಿಳೆ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ನಡುರಸ್ತೆಯಲ್ಲಿ …

Read More »

108 ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ 108 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ. 108 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ಡೈರಕ್ಟರ್ ಜನರಲ್ ಮತ್ತು ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್ ಆದೇಶ ಹೊರಡಿಸಿದೆ.       

Read More »

ಕಾಸು ಕೊಟ್ಟರೆ ಪ್ರಾಯೋಗಿಕ ಪರೀಕ್ಷೆ ಪಾಸ್..

ದಾವಣಗೆರೆ: ಪಿಎಸ್​ಐ ನೇಮಕಾತಿ ಹಗರಣದ ನಂತರ ಭ್ರಷ್ಟಾಚಾರದ ವಾಸನೆ ಇದೀಗ ಐಟಿಐ ಪರೀಕ್ಷೆಗಳತ್ತಲೂ ಹರಡಿದೆ. ಮೂರು ಸಾವಿರ ರೂ. ಕೈಗಿಟ್ಟರೆ ಸಲೀಸಾಗಿ ನಕಲು ಮಾಡಬಹುದು! ಪ್ರಯೋಗಾಲಯದಲ್ಲಿ ಪರೀಕ್ಷಾ ಮೇಲ್ವಿಚಾರಕರ ಎದುರು ಯಂತ್ರಗಳ ದುರಸ್ತಿ ಹಾಗೂ ಜೋಡಣೆ ಮಾಡುವುದು ನಿಯಮ. ಆದರೆ, ಹೊರಗಿನಿಂದ ರೆಡಿ ಮಾಡಿಸಿಕೊಂಡು ಬಂದವರಿಗೂ ಅಂಕಗಳು ಗ್ಯಾರಂಟಿ! ದಾವಣಗೆರೆ ಜಿಲ್ಲೆಯ ಮಾಯಕೊಂಡದ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಪರೀಕ್ಷಾ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. ಐಟಿಐ ಫಿಟ್ಟರ್ ವಿಭಾಗದ ಎರಡನೇ ವರ್ಷದ …

Read More »

ಉದ್ದ ತೋಳಿನ ಶರ್ಟ್ ಧರಿಸಿ ಬಂದ ಪರೀಕ್ಷಾರ್ಥಿಗಳಿಗೆ ಕೆಪಿಟಿಸಿಎಲ್ ನೀಡಿತು ಶಾಕ್​! ಬಟ್ಟೆ ಕಟ್​ ಕಟ್​

ಕೊಪ್ಪಳ: ರಾಜ್ಯಾದ್ಯಂತ ಇಂದು ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆ ನಡೆಯುತ್ತಿದೆ. ಕೊಪ್ಪಳದಲ್ಲಿ ಪರೀಕ್ಷೆ ಬರೆಯಲು ತುಂಬು ತೋಳಿನ ಅಂಗಿ ಹಾಕಿಕೊಂಡು ಬಂದವರಿಗೆ ಪರೀಕ್ಷಾ ಸಿಬ್ಬಂದಿ ತೋಳು ಕತ್ತರಿಸುವ ಮೂಲಕ ಶಾಕ್ ನೀಡಿದ್ದಾರೆ.   ಪಿಎಸ್‌ಐ ನೇಮಕಾತಿಯಲ್ಲಿನ ಅಕ್ರಮದಿಂದಾಗಿ ಇತರ ನೇಮಕಾತಿ ಪರೀಕ್ಷೆಗಳಿಗೆ ಕಟ್ಟುನಿಟ್ಟಿನ ಕಟ್ಟಳೆ ವಿಧಿಸಲಾಗಿದೆ. ಇಂದು ನಡೆಯುತ್ತಿರುವ ಪರೀಕ್ಷೆಗೆ ತುಂಬು ತೋಳಿನ ಅಂಗಿ ಹಾಕಿ ಬಂದವರನ್ನು ಪರೀಕ್ಷಾ ಕೇಂದ್ರದ ಒಳಗೆ ಬಿಟ್ಟಿಲ್ಲ. ಬೇರೆ ಶರ್ಟ್ ಧರಿಸಿ ಬರುವಂತೆ …

Read More »