ಬೆಂಗಳೂರು: ವಾಣಿಜ್ಯ ಕಟ್ಟಡಗಳನ್ನು ಹೊರಗಿಟ್ಟು ವಸತಿ ಕಟ್ಟಡಗಳಿಗೆ ಸೀಮಿತವಾಗಿ ಅಕ್ರಮ-ಸಕ್ರಮ ಯೋಜನೆಯನ್ನು ಜಾರಿಗೊಳಿಸುವ ಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದರು. ‘ನಕ್ಷೆ ಉಲ್ಲಂಘಿಸಿ ಹಾಗೂ ಅನುಮೋದನೆ ಇಲ್ಲದ ಬಡಾವಣೆಗಳಲ್ಲಿ ನಿರ್ಮಿಸಿರುವ ಕಟ್ಟಡಗಳನ್ನು ದಂಡ ವಿಧಿಸಿ ಸಕ್ರಮಗೊಳಿಸಲು ರೂಪಿಸಿದ್ದ ಕಾಯ್ದೆಯನ್ನು ಪ್ರಶ್ನಿಸಿರುವ ಅರ್ಜಿ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಉಳಿದಿದೆ. ವಾಣಿಜ್ಯ ಕಟ್ಟಡಗಳನ್ನು ಸಕ್ರಮಗೊಳಿಸುವುದಿಲ್ಲ ಎಂಬ ಪ್ರಮಾಣಪತ್ರ ಸಲ್ಲಿಸಿ ಯೋಜನೆ ಅನುಷ್ಠಾನಕ್ಕೆ ಅನುಮತಿ ಪಡೆಯಲು ಪ್ರಯತ್ನ …
Read More »ನರೇಗಾ ಯೋಜನೆಯಡಿ ತೋಟದ ರಸ್ತೆಗಳನ್ನು ಕೈಗೊಳ್ಳಿ : ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ.
*ಗೋಕಾಕ :* ನಿರಂತರ ಮಳೆಯಿಂದಾಗಿ ಮೂಡಲಗಿ ಹಾಗೂ ಗೋಕಾಕ ತಾಲೂಕುಗಳ ತೋಟದ ರಸ್ತೆಗಳು ಹಾಳಾಗಿದ್ದು, ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸಂಚಾರಕ್ಕೆ ಅನುಕೂಲವಾಗಲು ನರೇಗಾ ಯೋಜನೆಯಡಿ ತೋಟದ ರಸ್ತೆ ಕಾಮಗಾರಿಗಳನ್ನು ಆರಂಭಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು, ಗೋಕಾಕ-ಮೂಡಲಗಿ ತಾಲೂಕುಗಳ ತೋಟದ …
Read More »ಕೆ.ಕೆ.ಕೊಪ್ಪ ಬಳಿಯ ಮಹಾವೀರ ಗೋಶಾಲೆಯಲ್ಲಿ ಒಂದು ಹಸುವನ್ನು ದತ್ತು ಪಡೆದುಕೊಂಡ ನಿತೇಶ್ ಪಾಟೀಲ
ಪುಣ್ಯಕೋಟಿ ದತ್ತು ಯೋಜನೆಯಂತೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕೂಡ ಕೆ.ಕೆ.ಕೊಪ್ಪ ಬಳಿಯ ಮಹಾವೀರ ಗೋಶಾಲೆಯಲ್ಲಿ ಒಂದು ಹಸುವನ್ನು ದತ್ತು ಪಡೆದುಕೊಂಡಿದ್ದಾರೆ ಎಂದು ಉಪ ನಿರ್ದೆಶಕ ಡಾ.ರಾಜೀವ್ ಕೂಲೇರ ತಿಳಿಸಿದರು. ಜಿಲ್ಲಾಧಿಕಾರಿಗಳು ಹಸು ದತ್ತು ಪಡೆಯುವ ಮೂಲಕ ಇತರರಿಗೂ ಸ್ಫೂರ್ತಿಯಾಗಿದ್ದಾರೆ. ಇದೇ ರೀತಿ ಸಾರ್ವಜನಿಕರು ಕೂಡ ಜಾನುವಾರುಗಳನ್ನು ದತ್ತು ಸ್ವೀಕರಿಸುವ ಮೂಲಕ ಪುಣ್ಯಕೋಟಿ ಯೋಜನೆಯನ್ನು ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿಕೊಂಡರು. ದೇಣಿಗೆ ನೀಡಲು ಅಥವಾ ದತ್ತು ಪಡೆಯಲು ಬಯಸುವವರು …
Read More »ಲಕ್ಷ್ಮೀ ಹೆಬ್ಬಾಳ್ಕರ್ ಬೋಗಸ್ಗಿರಿ ಮಾಡಿ, ಕುಕ್ಕರ್ ಕೊಟ್ಟು ಕಳೆದ ಬಾರಿ ಆರಿಸಿ ಬಂದಿದ್ದಾರೆ.: ಶಿವಾಜಿ ಸುಂಠಕರ್
ಬೆಳಗಾವಿ ತಾಲೂಕಿನ ಬೆಳವಟ್ಟಿ ಗ್ರಾಮ ಪಂಚಾಯತಿ ಅಧ್ಯಕ್ಷ ಬಾಳು ಮಜುಕರ್ ಕಾಂಗ್ರೆಸ್ ಪಕ್ಷ ಸೇರಿದ್ದ ವಿಚಾರ ಸಧ್ಯ ಟ್ವಿಸ್ಟ್ ಪಡೆದುಕೊಂಡಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಎಂಇಎಸ್ ಮುಖಂಡ ಶಿವಾಜಿ ಸುಂಠಕರ್ ಏಕಾಏಕಿ ಕರೆದುಕೊಂಡು ಹೋಗಿ ಕಾಂಗ್ರೆಸ್ ಶಾಲು, ಮಾಲೆ ಹಾಕಿದ್ದಾರೆ. ಇದೆಲ್ಲಾ ಸುಳ್ಳು ಬಾಳು ಮಜುಕರ್ ಕಾಂಗ್ರೆಸ್ ಸೇರಿಲ್ಲ, ಮುಂದೆಯೂ ಕಾಂಗ್ರೆಸ್ ಸೇರುವುದಿಲ್ಲ ಎಂದಿದ್ದಾರೆ. ಹೌದು ಇತ್ತಿಚಿಗೆ ಬೆಳವಟ್ಟಿ ಗ್ರಾಮ ಪಂಚಾಯತಿ ಅಧ್ಯಕ್ಷ ಎಂಇಎಸ್ ಮುಖಂಡ ಬಾಳು ಮಜುಕರ್ …
Read More »ಮಕ್ಕಳೇ ಮೊಬೈಲ್ ಬಿಡಿ, ಗಿಲ್ಲಿ ದಾಂಡು ಆಡಿ! ಶಾಲೆಗಳಲ್ಲೇ 75 ದೇಸಿ ಕ್ರೀಡೆಗಳ ಪರಿಚಯ
ಹೊಸದಿಲ್ಲಿ: ಇಂದಿನ ಮಕ್ಕಳಿಗೆ ಗ್ರಾಮೀಣ ಕ್ರೀಡೆಗಳು, ಆಟಗಳ ಪರಿಚಯವೇ ಇಲ್ಲ. ಸ್ವಲ್ಪ ಸಮಯ ಸಿಕ್ಕರೂ ಮೊಬೈಲ್, ಲ್ಯಾಪ್ಟಾಪ್ ಮುಂದೆ ಕುಳಿತುಕೊಂಡು ಬಿಡುತ್ತಾರೆ. ಇದು ಎಲ್ಲ ಹೆತ್ತವರ ಅಳಲು. ಇಂಥ ಪರಿಸ್ಥಿತಿಯಲ್ಲಿ ಮಕ್ಕಳಿಗೆ ಶಾಲೆಯಲ್ಲೇ ಗ್ರಾಮೀಣ ಆಟಗಳನ್ನು ಕಲಿಸಿಕೊಟ್ಟರೆ ಹೇಗಿರುತ್ತದೆ? ಹೌದು. ಕೇಂದ್ರ ಸರಕಾರ ಈ ನಿಟ್ಟಿನಲ್ಲಿ ಹೆಜ್ಜೆಯಿಟ್ಟಿದೆ. ಕರ್ನಾಟಕ ಹಾಗೂ ಒಡಿಶಾದ ಗ್ರಾಮೀಣ ಕ್ರೀಡೆಗಳಲ್ಲಿ ಒಂದಾದ ಗಿಲ್ಲಿ ದಾಂಡು (ಚಿನ್ನಿ ದಾಂಡು) ಸೇರಿದಂತೆ ಒಟ್ಟು 75 “ಭಾರತೀಯ ಆಟ’ಗಳನ್ನು ಶಾಲೆಗಳಲ್ಲೇ …
Read More »ಆ.2ರಿಂದ 15ರವರೆಗೆ ತ್ರಿವರ್ಣ ಧ್ವಜ ಅಭಿಯಾನ ನಡೆಸಲು ಪ್ರಧಾನಿ ಸಲಹೆ
ನವದೆಹಲಿ: ಸ್ವಾತಂತ್ರ್ಯದ ಅಮೃತ ಮಹೋತ್ಸವವು ಒಂದು ದೊಡ್ಡ ಮಟ್ಟದ ಸಾಮೂಹಿಕ ಚಳವಳಿಯ ರೂಪ ಪಡೆಯುತ್ತಿದೆ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ ಅವರು, “ಎಲ್ಲರೂ ಆ.2ರಿಂದ 15ರವರೆಗೆ ತ್ರಿವರ್ಣ ಧ್ವಜವನ್ನು ತಮ್ಮ ಸಾಮಾಜಿಕ ಜಾಲತಾಣಗಳ ಪ್ರೊಫೈಲ್ ಚಿತ್ರವಾಗಿ ಬಳಸಿ’ ಎಂದು ದೇಶವಾಸಿಗಳಿಗೆ ಕರೆ ನೀಡಿದ್ದಾರೆ. ಭಾನುವಾರ ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ನಲ್ಲಿ ಮಾತನಾಡಿದ ಅವರು, ಆ.13ರಿಂದ 15ರವರೆಗೆ ಆಯೋಜಿಸಲಾಗಿರುವ “ಹರ್ ಘರ್ ತಿರಂಗಾ’ ಅಭಿಯಾನದ …
Read More »ಗಾಳಿಪಟ-2ʼ ಟ್ರೇಲರ್ ರಿಲೀಸ್ :
ಯೋಗರಾಜ್ ಭಟ್ ನಿರ್ದೇಶನದ ʼಗಾಳಿಪಟ-2ʼ ಚಿತ್ರದ ಬಹು ನಿರೀಕ್ಷಿತ ಟ್ರೇಲರ್ ರಿಲೀಸ್ ಆಗಿದೆ. ಚಿತ್ರದ ಬಗ್ಗೆ ಚಂದವನದಲ್ಲಿ ದೊಡ್ಡ ನಿರೀಕ್ಷೆಯಿದೆ. ಈಗಾಗಲೇ ಆ ನಿರೀಕ್ಷೆಯನ್ನು ಚಿತ್ರದ ಹಾಡು ಹಾಗೂ ಕ್ಯಾರೆಕ್ಟರ್ ಟೀಸರ್ ದುಪ್ಪಟ್ಟುಗೊಳಿಸಿದೆ. ಇದೀಗ ಟ್ರೇಲರ್ ರಿಲೀಸ್ ಆಗಿದ್ದು, ಹೊಸ ಬಗೆಯ ಕಥೆಯಿಂದ ಗಮನ ಸೆಳೆಯುತ್ತಿದೆ. ʼನೀನು ಬಗೆಹರಿಯದ ಹಾಡುʼ, ʼದೇವ್ಲೆ ದೇವ್ಲೆʼ,ʼಎಕ್ಸಾಂ ಹಾಡುʼ ಮಿಲಿಯನ್ ಗೂ ಅಧಿಕ ವೀಕ್ಷಣೆ ಪಡೆದುಕೊಂಡು ಸೂಪರ್ ಹಿಟ್ ಸಾಲಿಗೆ ಸೇರಿದೆ. ಟ್ರೇಲರ್ …
Read More »ಸಿಎಂ ಬೊಮ್ಮಾಯಿಗೆ ಕಪ್ಪು ಬಾವುಟ ಪ್ರದರ್ಶನ ಯತ್ನ: ಯುವಕರು ಪೊಲೀಸ್ ವಶಕ್ಕೆ
ಗಂಗಾವತಿ: ಇತಿಹಾಸ ಪ್ರಸಿದ್ಧ ಕಿಷ್ಕಿಂದಾ ಅಂಜನಾದ್ರಿ ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಮಾದಿಗ ಸಮಾಜದ ಯುವಕರು ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನಿಸಿದಾಗ ಪೊಲೀಸರು ಮಧ್ಯಪ್ರವೇಶ ಮಾಡಿ ಇಬ್ಬರನ್ನು ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ಗಂಗಾವತಿ ನಗರದ ಸೋಮನಾಥ ಕಂಪ್ಲಿ ಹಾಗೂ ಬಾಳಪ್ಪ ಕಾಮದೊಡ್ಡಿ ಎಂಬ ಯುವಕರು ಸದಾಶಿವ ವರದಿ ಅನುಷ್ಠಾನದ ಮೂಲಕ ಎಸ್ಸಿ ಮೀಸಲಾತಿ ಯನ್ನು …
Read More »ಸತೀಶ ಜಾರಕಿಹೊಳಿ ಫೌಂಡೇಶನ್ನಿಂದ ಸೌಂಡ್ ಸಿಸ್ಟಮ್-ಕುರ್ಚಿಗಳ ವಿತರಣೆ
ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅದಕ್ಕಾಗಿ ಸತೀಶ್ ಜಾರಕಿಹೊಳಿ ಫೌಂಡೇಶನ್ನಿಂದ ಘಟಪ್ರಭಾ ಸೇವಾದಳದಲ್ಲಿ ವಿದ್ಯಾರ್ಥಿಗಳಿಗೆ ಆರ್ಮಿ, ಪೆÇಲೀಸ್ ತರಬೇತಿಯನ್ನು ಉಚಿತ ನೀಡಲಾಗುತ್ತಿದೆ ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಹೇಳಿದರು. ಬೆಳಗಾವಿಯ ಜಾಧವ ನಗರದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಕಚೇರಿಯಲ್ಲಿ ಸತೀಶ ಜಾರಕಿಹೊಳಿ ಫೌಂಢೇಶನ್ದಿಂದ ಬೆಳಗಾವಿಯ ದಕ್ಷಿಣ ಹಾಗೂ ಉತ್ತರ ಮತಕ್ಷೇತ್ರದಲ್ಲಿರುವ ವಿವಿಧ ಸಮುದಾಯಗಳಿಗೆ ಸೌಂಡ್ ಸಿಸ್ಟಮ್ ಹಾಗು ಕುರ್ಚಿಗಳನ್ನು ಯುವ …
Read More »ಭ್ರಷ್ಟ ಬಿಜೆಪಿಯನ್ನು ಬುಡ ಸಮೇತ ಕಿತ್ತು ಹಾಕುವುದೇ ಎಎಪಿ ಗುರಿ:
ಬೆಂಗಳೂರು : ಮುಂಬರುವ ಬಿಬಿಎಂಪಿ (ಪಾಲಿಕೆ) ಚುನಾವಣೆ ಭ್ರಷ್ಟ ಬಿಜೆಪಿ ವಿರುದ್ಧ ಜನಸಾಮಾನ್ಯರು ನಡೆಸುವ ಹಣಾಹಣಿಯಾಗಲಿದೆ. ಪಕ್ಷ ಸ್ಥಾಪನೆಯ ಹತ್ತೇ ವರ್ಷದಲ್ಲಿ ದೇಶದೆಲ್ಲೆಡೆ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜಯ ಸಾಧಿಸಿದ್ದಲ್ಲದೇ, ಎರಡು ರಾಜ್ಯದಲ್ಲಿ ಸರ್ಕಾರ ರಚನೆ ಮಾಡಿರುವ ಆಮ್ ಆದ್ಮಿ ಪಾರ್ಟಿಯು ದೇಶದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪಕ್ಷವಾಗಿದೆ. ನಾವು ಕೆಲಸ ಮಾಡುತ್ತಿರುವುದರಿಂದ ಚುನಾವಣೆಗಳಲ್ಲಿ ಗೆಲ್ಲುತ್ತಿದ್ದೇವೆ.! ದೇಶದ ಜನರು “ಅರವಿಂದ್ ಕೇಜ್ರಿವಾಲ್ ಮಾದರಿ” ಅನ್ನು ಗುರುತಿಸಿದ್ದಾರೆ. ಪಾಲಿಕೆ ಚುನಾವಣೆ ಯಾವ ಕ್ಷಣದಲ್ಲಾದರೂ …
Read More »
Laxmi News 24×7