ನವದೆಹಲಿ: ಕುಟುಂಬ ರಾಜಕಾರಣ ಮಾಡುವ ಪಕ್ಷಗಳು ಮಹಿಳೆಯರ ಸಬಲೀಕರಣವಾದರೆ ತಮ್ಮ ಆಂತರಿಕ ಅಧಿಕಾರ ಅಧಿಕಾರಕ್ಕೆ ಧಕ್ಕೆಯಾಗಬಹುದು ಎಂಬ ಭಯದಿಂದ ಮಹಿಳಾ ಮೀಸಲಾತಿಯನ್ನು ವಿರೋಧಿಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಸೋಲಾಗಿದಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಿ ಮೋದಿ ಕಾಂಗ್ರೆಸ್, ಡಿಎಂಕೆ, ಟಿಎಂಸಿ, ಎಸ್ಪಿ ಮತ್ತು ಇತರ ಪಕ್ಷಗಳ ವಿರುದ್ಧ ಆಕ್ರೋಶ ಹೊರಹಾಕಿದರು. ಸಂಸತ್ತಿನಲ್ಲಿ ಮಸೂದೆ ಬಿದ್ದಾಗ ಕಾಂಗ್ರೆಸ್ ಸಂಭ್ರಮಿಸಿದ್ದನ್ನು ಉಲ್ಲೇಖಿಸಿದ ಮೋದಿ, ದೇಶದ …
Read More »543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು
ನವದೆಹಲಿ: ಪ್ರಸ್ತುತ ಇರುವ 543 ಲೋಕಸಭಾ ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸವಾಲು ಎಸೆದಿದ್ದಾರೆ. ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಿದ ಬೆನ್ನಲ್ಲೇ ಎಕ್ಸ್ನಲ್ಲಿ ಖರ್ಗೆ ಅವರು ದೀರ್ಘ ಪೋಸ್ಟ್ ಮಾಡಿ ಮೋದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ ದೇಶವನ್ನು ಉದ್ದೇಶಿಸಿ ಮಾಡುವ ಅಧಿಕೃತ ಭಾಷಣವನ್ನು ಮೋದಿ ಅವರು ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿದ್ದಾರೆ. ಸರ್ಕಾರವು …
Read More »ವಿದ್ಯುತ್ ದರ ಏರಿಕೆ ವಾಪಸ್ ಪಡೆದು ಜನ ನೆಮ್ಮದಿಯಾಗಿ ಬದುಕೋಕೆ ಅವಕಾಶ ಮಾಡಿ – ಸರ್ಕಾರಕ್ಕೆ ಬಿಎಸ್ವೈ ಆಗ್ರಹ
ಚಿಕ್ಕಮಗಳೂರು: ವಿದ್ಯುತ್ ದರವನ್ನು ರಾಜ್ಯ ಸರ್ಕಾರ ಹುಚ್ಚಂಬಟ್ಟೆ ಏರಿಕೆ ಮಾಡಿದೆ. ಇದು ಸರಿಯಾದ ನಿರ್ಧಾರ ಅಲ್ಲ. ದರ ಹೀಗೆ ಏರಿಕೆಯಾದ್ರೆ ಸಾಮಾನ್ಯ ಜನ ಬದುಕೋದು ಹೇಗೆ ಎಂದು ಸರ್ಕಾರದ ವಿರುದ್ಧ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಕಿಡಿಕಾರಿದ್ದಾರೆ. ಚಿಕ್ಕಮಗಳೂರಿನಲ್ಲಿ ವೀರಶೈವ ಲಿಂಗಾಯತ ಸಮುದಾಯ ಭವನ ಉದ್ಘಾಟನೆಗೆ ಅವರು ಆಗಮಿಸಿದ್ದರು. ಈ ವೇಳೆ ಮಾಧ್ಯಮಗಳ ಜೊತೆ ಅವರು ಮಾತನಾಡಿ, ವಿದ್ಯುತ್ ದರ ಏರಿಕೆ ವಿಚಾರವಾಗಿ ಪ್ರತಿಕ್ರಿಯಿಸಿದರು. ಸರ್ಕಾರ ವಿದ್ಯುತ್ ದರ ಏರಿಸಿರುವ …
Read More »ಬೇಸಿಗೆ ಆರಂಭದಲ್ಲೇ 99 ಅಡಿಗೆ ಕುಸಿದ ಕೆಆರ್ಎಸ್
ಮಂಡ್ಯ: ಬೇಸಿಗೆ ಆರಂಭದಲ್ಲೇ ಕೆಆರ್ಎಸ್ ನೀರಿನ ಮಟ್ಟ 99 ಅಡಿಗೆ ಕುಸಿದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಜಲಾಶಯದಲ್ಲಿ ಬೇಸಿಗೆ ಆರಂಭದಲ್ಲೇ ನೀರಿನ ಮಟ್ಟ ಇಳಿಕೆ ಕಂಡಿದೆ. ಒಂದು ವೇಳೆ ಮುಂಗಾರು ತಡವಾದ್ರೆ ಬೆಂಗಳೂರು ಮಾತ್ರವಲ್ಲದೇ ಕಾವೇರಿ ನೀರು ಅವಲಂಬಿಸಿರುವ ಜನರಿಗೆ ನೀರಿನ ಸಮಸ್ಯೆ ಎದುರಾಗುವ ಭೀತಿಯಿದೆ. ಈ ವರ್ಷ ಕೆಆರ್ಎಸ್ ಅಣೆಕಟ್ಟೆ ಅವಧಿಗೂ ಮುನ್ನವೇ ಭರ್ತಿಯಾಗುವ ಮೂಲಕ ದಾಖಲೆ ಬರೆದಿತ್ತು. ಇದೀಗ 124.80 ಗರಿಷ್ಠ ಮಟ್ಟ ಸಂಗ್ರಹ …
Read More »ಸಿದ್ದರಾಮಯ್ಯ ಸೇತುವೆ ಬಳಿ ಈಜಲು ತೆರಳಿದ್ದ ಮೂವರಲ್ಲಿ ಓರ್ವ ನಾಪತ್ತೆ – ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ
ಚಿಕ್ಕಮಗಳೂರು: ಎನ್ಆರ್ ಪುರದ ಸಿದ್ದರಾಮಯ್ಯ ಸೇತುವೆ ಬಳಿ ಈಜಲು ತೆರಳಿದ್ದ ಮೂವರಲ್ಲಿ ಓರ್ವ ನಾಪತ್ತೆಯಾಗಿದ್ದು, ನೀರಿನಲ್ಲಿ ಮುಳುಗಿ ಸಾವನಪ್ಪಿದ ಶಂಕೆ ವ್ಯಕ್ತವಾಗಿದೆ. ಸಿದ್ದರಾಮಯ್ಯ ಸೇತುವೆ ಕೆಳಭಾಗದ ಭದ್ರಾ ನದಿಯ ಹಿನ್ನೀರಿನಲ್ಲಿ ಎನ್.ಆರ್.ಪುರದ ಸಿಗುವಾನಿ ಗ್ರಾಮದ ಮೂವರು ಯುವಕರು ಈಜಲು ತೆರಳಿದ್ದರು. ಇಬ್ಬರು ಮೇಲೆ ಬಂದರೂ ಮತ್ತೋರ್ವ ಮಾತ್ರ ನಾಪತ್ತೆಯಾಗಿದ್ದು, ಆತನ ಸುಳಿವು ಸಿಕ್ಕಿಲ್ಲ. ಆತ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರು ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ತಂಡಗಳು ಶವಕ್ಕಾಗಿ ಹುಡುಕಾಟ ನಡೆಸುತ್ತಿವೆ. ಅಗ್ನಿಶಾಮಕದಳದ …
Read More »ಕೈ ಯುವ ನಾಯಕ ಫೈರೋಜ್ ಹತ್ಯೆ| ಮತ್ತೆ ಮೂವರ ಬಂಧನ – ಬಂಧಿತರ ಸಂಖ್ಯೆ 12ಕ್ಕೆ ಏರಿಕೆ
ಧಾರವಾಡ: ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಹತ್ಯೆಗೆ ಸಂಬಂಧಿಸಿದಂತೆ ಇದೀಗ ಮತ್ತೆ ಮೂವರನ್ನು ಬಂಧಿಸಲಾಗಿದೆ. ಮೈನುದ್ದಿನ್ ನದಾಫ್, ಸಾಗರ ಕಲಾಲ್ ಮತ್ತು ಅಲಾವುದ್ದೀನ್ ಉರ್ಫ್ ರಹೀಂ ಬಂಧಿತ ಆರೋಪಿಗಳು. ಈ ಮೂಲಕ ಈ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಆರೋಪಿಗಳ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಈ ಕುರಿತು ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಈ ಮೊದಲು 9 ಮಂದಿಯನ್ನು ಬಂಧಿಸಿದ್ದೆವು. ಈಗ ಮತ್ತೆ ಮೂವರನ್ನು ಬಂಧನ …
Read More »ಜನಗಣತಿಗೆ ಗೈರಾದ್ರೆ ಕಠಿಣ ಕ್ರಮ – 1 ಸಾವಿರ ದಂಡದೊಂದಿಗೆ 3 ವರ್ಷ ಜೈಲು
ಬೆಂಗಳೂರು: ಜನಗಣತಿಗೆ ಗೈರಾದ್ರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಜಿಬಿಎ ಖಡಕ್ ಎಚ್ಚರಿಕೆ ನೀಡಿದೆ. ಗೈರುಹಾಜರಾತಿಗೆ ಜಿಬಿಎಯಿಂದ 1,000 ರೂ ದಂಡ ಜೊತೆಗೆ 3 ವರ್ಷ ಕಾರಾಗೃಹ ಶಿಕ್ಷೆ ಎಂದು ಎಚ್ಚರಿಸಿದೆ. ಅಗತ್ಯವಿದ್ದಲ್ಲಿ ಮೊಕದ್ದಮೆ ದಾಖಲಿಸಲಾಗುವುದು ಎಂದು ಅಧಿಕಾರಿಗಳಿಗೆ ಆಯುಕ್ತರು ಎಚ್ಚರಿಕೆ ಕೊಟ್ಟಿದ್ದಾರೆ. ಗಣತಿಗೆ ನಿಯೋಜಿಸಲ್ಪಟ್ಟಿರುವ ಗಣತಿ ಬ್ಲಾಕ್ ಹಾಗೂ ಸೂಪರ್ವೈಸರ್ ಸರ್ಕಲ್ ಗಳಲ್ಲಿ ಕರ್ತವ್ಯಕ್ಕೆ ಹಾಜರಾಗದ ಗಣತಿದಾರರು ಮತ್ತು ಸೂಪರ್ವೈಸರ್ಗಳ ವಿರುದ್ಧ ಜನಗಣತಿ ಕಾಯ್ದೆಯ 1948ರ ಸೆಕ್ಷನ್ …
Read More »ದಕ್ಷಿಣ ಭಾರತದಲ್ಲಿ ಸುಪ್ರೀಂಕೋರ್ಟ್ ಪೀಠ ಸ್ಥಾಪನೆ ಆಗಲಿ: ಸಿಎಂ
ಬೆಂಗಳೂರು: ದಕ್ಷಿಣ ಭಾರತದಲ್ಲಿ ಸುಪ್ರೀಂಕೋರ್ಟ್ ಪೀಠ ಸ್ಥಾಪನೆ ಆಗಬೇಕು ಅಂತ ಸಿಎಂ ಸಿದ್ದರಾಮಯ್ಯ ಒತ್ತಾಯ ಮಾಡಿದ್ದಾರೆ. ಜಿಕೆವಿಕೆಯಲ್ಲಿ (GKVK) ನಡೆದ ದ್ವೈವಾರ್ಷಿಕ 22ನೇ ರಾಜ್ಯ ಮಟ್ಟದ ನ್ಯಾಯಾಂಗ ಅಧಿಕಾರಿಗಳ ಸಮ್ಮೇಳನ ಉದ್ಘಾಟನೆ ಮಾಡಿ, ಮಾತನಾಡಿದ ಅವರು, ದಕ್ಷಿಣ ಭಾರತದಲ್ಲಿ ಸುಪ್ರೀಂಕೋರ್ಟ್ ಪೀಠ ಸ್ಥಾಪನೆ ಅವಶ್ಯಕತೆ ಇದೆ ಅಂತ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮುಂದೆ ಪ್ರತಿಪಾದಿಸಿದರು. ಸಮ್ಮೇಳನದಲ್ಲಿ ಮಾತಾಡಿದ ಅವರು, ಜಗತ್ತಿನ ಸಂಸ್ಥೆಗಳು ತಾಂತ್ರಿಕ ಬದಲಾವಣೆಗಳಿಂದ ರೂಪಾಂತರಗೊಳ್ಳುತ್ತಿರುವ ಈ ಸಮಯದಲ್ಲಿ, ಕೃತಕ …
Read More »15 ವರ್ಷಗಳ ಹಿಂದೆ ಸಕಲೇಶಪುರ ಜೈಲಿಂದ ಪರಾರಿಯಾಗಿದ್ದ ವಿಚಾರಣಾಧಿನ ಕೈದಿ ಗೋವಾದಲ್ಲಿ ಅಂದರ್
ಹಾಸನ: ಸುಮಾರು 15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡಿದ್ದ ವಿಚಾರಣಾಧೀನ ಕೈದಿಯನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸಕಲೇಶಪುರ ತಾಲೂಕಿನ, ನಲ್ಲುಲ್ಲಿ ಗ್ರಾಮದ ಚನ್ನಕೇಶವ ಎಂದು ಗುರುತಿಸಲಾಗಿದೆ. ಈತ ಕೊಲೆ ಯತ್ನ, ಲೈಂಗಿಕ ದೌರ್ಜನ್ಯ ಹಾಗೂ ದರೋಡೆ ಪ್ರಕರಣದಲ್ಲಿ ಸಕಲೇಶಪುರ ಜೈಲು ಸೇರಿದ್ದ. 2011ರಲ್ಲಿ ಜೈಲಿಂದ ಪರಾರಿಯಾಗಿ ಸುಮಾರು 15 ವರ್ಷ ತಲೆಮರೆಸಿಕೊಂಡಿದ್ದ. ಆರೋಪಿ ಗೋವಾದಲ್ಲಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ ಆತನನ್ನು ಬಂಧಿಸಿದ್ದಾರೆ. ಈತ …
Read More »ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ
ಬೆಂಗಳೂರು: ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ ಹೊರಗೆ ಕರೆತಂದ ಸೊಸೆ ಸುಜಾತಾ ಅವರ ಸಾಹಸಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆ ಪವಿತ್ರಾ ಅವರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡುವ ಭರವಸೆಯನ್ನೂ ನೀಡಿದ್ದಾರೆ. ಈ ಘಟನೆ ಆಕಸ್ಮಿಕವಾದರೂ, ಅದು ಮಹಿಳೆಯೊಬ್ಬರ ಅಪ್ರತಿಮ …
Read More »
Laxmi News 24×7