Breaking News

Laxminews 24x7

ಬೆಳಗಾವಿ: ಯುವಕನ ಮಿದುಳು ನಿಷ್ಕ್ರಿಯ, ನಾಲ್ವರಿಗೆ ಅಂಗಾಂಗ ದಾನ

ಬೆಳಗಾವಿ: ರಸ್ತೆ ಅಪಘಾತದಲ್ಲಿ ಗಾಯಗೊಂಡು ಮಿದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗಗಳನ್ನು ನಾಲ್ವರಿಗೆ ದಾನ ಮಾಡಲಾಗಿದೆ. ಇಲ್ಲಿನ ಕೆಎಲ್‌ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ಯುವಕನ ಹೃದಯವನ್ನು ಇನ್ನೊಬ್ಬರಿಗೆ ಯಶಸ್ವಿಯಾಗಿ ಕಸಿ ಮಾಡಲಾಯಿತು.   ಖಾನಾ‍ಪುರ ತಾಲ್ಲೂಕಿನ ಜಾಂಬೋಟಿ ಹತ್ತಿರದ ಅಮಟೆ ಗ್ರಾಮದ ನಿವಾಸಿ ಸಹದೇವ ಅರ್ಜುನ ಗಾಂವಕರ (26) ಎಂಬ ಯುವಕ ಈಚೆಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಕೆಎಲ್‌ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ …

Read More »

”ಕಾಂಗ್ರೆಸ್ಸಿನ ಅತೃಪ್ತ ಶಾಸಕರು ಮುಂಬೈಗೆ ಹೋಗಿದ್ದಾಗ ನಾನೂ ತೆರಳಿದ್ದೆ: ನವ್ಯಶ್ರೀ

ಬೆಳಗಾವಿ: ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವದಲ್ಲಿದ್ದಾಗ ಅತೃಪ್ತ ಶಾಸಕರ ಜತೆ ಮುಂಬೈಗೆ ತೆರಳಿದ್ದೆ. ಅಲ್ಲಿಂದ ರಹಸ್ಯವಾಗಿ ಮಾಹಿತಿ ಕಳುಹಿಸಿದ್ದೆ ಎಂದು ಚನ್ನಪಟ್ಟಣದ ಸಾಮಾಜಿಕ ಕಾರ್ಯಕರ್ತೆ ನವ್ಯಶ್ರೀ ರಾವ್‌ ಶನಿವಾರ ಹೇಳಿದ್ದಾರೆ.   ತೋಟಗಾರಿಕೆ ಇಲಾಖೆಯ ಖಾನಾಪುರದ ಸಸ್ಯ ಪಾಲನಾಲಯದ ಸಹಾಯಕ ನಿರ್ದೇಶಕ ರಾಜಕುಮಾರ ಟಾಕಳೆ ವಿರುದ್ಧ ದೂರು ನೀಡಲು ಬೆಳಗಾವಿಗೆ ಬಂದಿರುವ ಅವರು, ತಾವು ಯಾರನ್ನೂ ಹನಿಟ್ರ್ಯಾಪ್ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.   ‘ಕಾಂಗ್ರೆಸ್ಸಿನ ಅತೃಪ್ತ ಶಾಸಕರು ಮುಂಬೈಗೆ ಹೋಗಿದ್ದಾಗ …

Read More »

ಶಿಕಾರಿಪುರ ಕ್ಷೇತ್ರ ಬಿಟ್ಟು ಕೊಡುವ ಹೇಳಿಕೆಗೆ ಬಿಎಸ್‌ವೈ -U TURN ???!!

ನಿನ್ನೆ ನೀಡಿದ ಹೇಳಿಕೆಗೆ ಬೇರೆ ಅರ್ಥ ಕಲ್ಪಿಸಲಾಗುತ್ತಿದೆ. ನಾನು ನೀಡಿದ ಹೇಳಿಕೆ ಬಗ್ಗೆ ಸಾಕಷ್ಟು ಗೊಂದಲ ಆಗಿದೆ. ನಾನು ವಿಧಾನಸಭೆ ಚುನಾವಣೆಗೆ ನಿಲ್ಲಲ್ಲ. ನನ್ನನ್ನು ಶಿಕಾರಿಪುರದ ಜನ ಚುನಾವಣೆಗೆ ನಿಲ್ಲಲು ಒತ್ತಾಯ ಮಾಡಿದ್ರು. ಆದ್ರೆ ನಾನು ನಿಲ್ಲೋದಿಲ್ಲ, ವಿಜಯೇಂದ್ರ ನಿಲ್ತಾರೆ ಎಂದು ಹೇಳಿದ್ದೇನೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ನಿನ್ನೆ ನಾನು ಹೇಳಿದ ಹೇಳಿಕೆ ಅನಿರೀಕ್ಷಿತ, ಅಲ್ಲಿನ ಜನ ನೀವೇ ಶಿಕಾರಿಪುರದಿಂದ ಸ್ಪರ್ಧೆ ಮಾಡಬೇಕೆಂದು ಒತ್ತಾಯ ಮಾಡಿದ್ದರು. ಅದಕ್ಕೆ …

Read More »

ಅಥಣಿ ಪೋಲಿಸ್ ಠಾಣೆಗೆ ಮೊದಲಬಾರಿಎಸ್ ಪಿ ಸಂಜಿವ್ ಪಾಟೀಲ ಭೇಟಿ

ಬೆಳಗಾವಿ ಜಿಲ್ಲಾ ನೂತನ ಎಸ್ ಪಿ ಯಾಗಿ ಅಧಿಕಾರ ವಹಿಸಿದ ಬಳಿಕ ಅಥಣಿ ಪೋಲಿಸ್ ಠಾಣೆಗೆ ಮೊದಲಬಾರಿಎಸ್ ಪಿ ಸಂಜಿವ್ ಪಾಟೀಲ ಭೇಟಿ ನೀಡಿದರು. ಅಥಣಿ ಪಿಎಸ್ಐ ಕುಮಾರ್ ಹಾಡಕರ್ ಮತ್ತು ಸಿಬ್ಬಂದಿಗಳಿಂದ ಗೌರವ ಸಮರ್ಪಣೆ ಪಡೆದ ನಂತರ ಅಥಣಿ ಪೋಲಿಸ್ ಠಾಣೆಯ ಎಎಸ್ಐ, ಮತ್ತು ಸಿಬ್ಬಂದಿಗಳ ಕಾರ್ಯ ವೈಖರಿ ಬಗ್ಗೆ ಖುದ್ದು ಮಾಹಿತಿ ಪಡೆದರು . ಬಳಿಕ ಮಾಧ್ಯಮಗಳೊಂದಿಗೆ ಸುದ್ದಿಗೋಷ್ಠಿ ನಡೇಸಿ ಮಾತನಾಡಿದ ಅವರು ಮಾರ್ಚ್ ತಿಂಗಳಲ್ಲಿ ಅಥಣಿ …

Read More »

ಕಂಠಪೂರ್ತಿ ಕುಡಿದು ಟೈಟಾಗಿ ಶಾಲೆಗೆ ಬಂದ ಶಿಕ್ಷಕಿ ಮಾಡಿದ್ದಾಳೆ ಇಂಥಾ ಕೆಲಸ..!

ಛತ್ತೀಸ್‌ಗಢದ ಟಿಕಾಯತ್‌ಗಂಜ್‌ನಲ್ಲಿ ಅಚ್ಚರಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ಶಿಕ್ಷಕಿಯೊಬ್ಬಳು ಕಂಠಪೂರ್ತಿ ಕುಡಿದು ಶಾಲೆಗೆ ಬಂದಿದ್ದಾಳೆ. ಮಕ್ಕಳಿಗೆ ಪಾಠ ಹೇಳುವಷ್ಟು ತ್ರಾಣವೇ ಅವಳಿಗೆ ಇರಲಿಲ್ಲ. ಕುಡಿದ ಅಮಲಿನಲ್ಲಿ ಪ್ರಜ್ಞೆಯೇ ಇಲ್ಲದಂತೆ ತರಗತಿಯಲ್ಲಿ ಬಿದ್ದುಕೊಂಡಿದ್ದಾಳೆ.   ಅದೇ ಸಮಯದಲ್ಲಿ ಶಿಕ್ಷಣಾಧಿಕಾರಿ ಶಾಲೆಯ ಪರಿಶೀಲನೆಗಾಗಿ ಸ್ಥಳಕ್ಕೆ ಬಂದರು. ಕುಡಿದು ತರಗತಿಯಲ್ಲಿ ಮಲಗಿದ್ದ ಶಿಕ್ಷಕಿಯನ್ನು ನೋಡಿ ದಂಗಾಗಿ ಹೋಗಿದ್ದಾರೆ. ಆಕೆಯನ್ನು ಎಬ್ಬಿಸಲು ಪ್ರಯತ್ನಿಸಿದ್ರೂ ಸಾಧ್ಯವಾಗಲೇ ಇಲ್ಲ. ಬೆಳಗ್ಗೆ 11 ಗಂಟೆ ಸುಮಾರಿಗೆ ಶಿಕ್ಷಣಾಧಿಕಾರಿ ಶಾಲೆಗೆ ಆಗಮಿಸಿದ್ದರು. …

Read More »

‘ಮುಂದಿನ ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ.: ಕೆ.ಬಿ.ಕೋಳಿವಾಡ

ರಾಣೆಬೆನ್ನೂರು (ಹಾವೇರಿ ಜಿಲ್ಲೆ): ‘ಮುಂದಿನ ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ. ನನ್ನ ಪುತ್ರ ಪ್ರಕಾಶ ಕೋಳಿವಾಡ ಅವರಿಗೆ ರಾಣೆಬೆನ್ನೂರು ಕ್ಷೇತ್ರ ಬಿಟ್ಟು ಕೊಡುತ್ತಿದ್ದೇನೆ’ ಎಂದು ಕಾಂಗ್ರೆಸ್‌ ಮುಖಂಡ ಹಾಗೂ ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಹೇಳಿದರು.   ಇಲ್ಲಿನ ವಾಗೀಶನಗರದ ತಮ್ಮ ಗೃಹ ಕಚೇರಿಯಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿ, ‘ನನ್ನ ನಿರ್ಧಾರವನ್ನು ಹೈಕಮಾಂಡ್‌ಗೆ ತಿಳಿಸಿದ್ದೇನೆ. ಪುತ್ರನೇ ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ’ ಎಂದರು. ‘ರಾಜ್ಯ ಚುನಾವಣಾ ರಾಜಕೀಯದಿಂದ …

Read More »

ನನ್ನ ವಿರುದ್ಧದ ಷಡ್ಯಂತ್ರದ ಹಿಂದೆ ಕಾಂಗ್ರೆಸ್ ಮಹಾನಾಯಕ ಇದ್ದಾರೆ; ನವ್ಯಶ್ರೀ

ಬೆಳಗಾವಿ: ತಮ್ಮ ವಿರುದ್ಧದ ಬ್ಲಾಕ್ ಮೇಲ್ ಹಾಗೂ ವಂಚನೆ ಪ್ರಕರಣದ ಬಗ್ಗೆ ಹೊಸ ಬಾಂಬ್ ಸಿಡಿಸಿರುವ ಕಾಂಗ್ರೆಸ್ ಯುವ ನಾಯಕಿ ನವ್ಯಶ್ರೀ ಇದರ ಹಿಂದೆ ಕಾಂಗ್ರೆಸ್ ಮಹಾನಾಯಕರೊಬ್ಬರ ಕೈವಾಡವಿದೆ ಎಂದು ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನವ್ಯಶ್ರೀ, ನನ್ನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟದಾಗಿ ಬೆಂಬಿಸಲಾಯ್ತು. ಆ ಸಂದರ್ಭದಲ್ಲಿ ನಾನು ವಿದೇಶದಲ್ಲಿದ್ದೆ. ವಾಪಸ್ ಭಾರತಕ್ಕೆ ಬಂದಾಗ ಈ ಬಗ್ಗೆ ಗೊತ್ತಾಯಿತು. ಪರಿಶೀಲನೆ ನಡೆಸಿ ದೂರು ಕೊಡಬೇಕು ಎನ್ನುವಷ್ಟರಲ್ಲಿ ರಾಜಕುಮಾರ ಟಾಕಳೆ ರಾತ್ರೋರಾತ್ರಿ …

Read More »

ಅರ್ಜುನ್ ಸರ್ಜಾಗೆ ಮತ್ತೊಂದು ಆಘಾತ: ತಾಯಿ ಲಕ್ಷ್ಮೀದೇವಿ ವಿಧಿವಶ

ಬೆಂಗಳೂರು: ಖ್ಯಾತ ನಟ ಅರ್ಜುನ್ ಸರ್ಜಾ ತಾಯಿ ಧ್ರುವ ಸರ್ಜಾ ಅಜ್ಜಿ, ಹಿರಿಯ ನಟ ಶಕ್ತಿ ಪ್ರಸಾದ್ ಪತ್ನಿ ಲಕ್ಷ್ಮೀದೇವಿ ನಿಧನರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಲಕ್ಷ್ಮೀದೇವಿ ಇಂದು ಮಾಧ್ಯಾಹ್ನ 12 ಗಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ ಎನ್ನು ಮಾಹಿತಿ ಲಭ್ಯವಾಗಿದೆ. ಲಕ್ಷ್ಮೀದೇವಿ ಅವರಿಗೆ 84 ವರ್ಷ ವಯಸ್ಸಾಗಿತ್ತು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಲಕ್ಷ್ಮೀದೇವಿ ಅವರನ್ನು ಕಳೆದ 22 ದಿಗಳಿಂದ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. …

Read More »

ಹೊನ್ನಾಳಿಯ ರೇಣುಕಾಚಾರ್ಯ ಮನೆಗೆ ಬಂದ ಯಡಿಯೂರಪ್ಪ; BSY ಕಂಡು ಕಣ್ಣೀರಾದ ಶಾಸಕ

ದಾವಣಗೆರೆ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಮನೆಗೆ ಭೇಟಿ ನೀಡಿದ್ದು, ಮಾಜಿ ಸಿಎಂ ಅವರನ್ನು ಕಂಡು ರೇಣುಕಾಚಾರ್ಯ ಭಾವುಕರಾಗಿ ಕಣ್ಣೀರಿಟ್ಟ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಮನೆಗೆ ಭೇಟಿ ನೀಡಿದ ಮಾಜಿ ಸಿಎಂ ಯಡಿಯೂರಪ್ಪ, ಕೆಲ ಕಾಲ ಚರ್ಚೆ ನಡೆಸಿದರು. ಈ ವೇಳೆ ಯಡಿಯೂರಪ್ಪನವರ ಆಡಳಿತ ವೈಖರಿ ನೆನೆದು ರೇಣುಕಾಚಾರ್ಯ ಭಾವುಕರಾದರು. ಯಡಿಯೂರಪ್ಪ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಹೇಳಿದ್ದಾರೆ. ಆದರೆ ಪಕ್ಷ …

Read More »

ನನಗೂ ಸಿಎಂ ಆಗಬೇಕೆಂಬ ಆಸೆ ಇದೆ.: ಜಮೀರ್ ಅಹ್ಮದ್

ರಾಜ್ಯ ಒಳ್ಳೆಯದಾಗಬೇಕೆಂದ್ರೆ ಜನ 2023ರಲ್ಲಿ ಸಿದ್ದರಾಮಯ್ಯ ಸಿಎಂ ಆಗಬೇಕು ಅಂತಾ ಬಯಸುತ್ತಿದ್ದಾರೆ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್‌ ಹೇಳಿದ್ದಾರೆ. ನಗರದಲ್ಲಿ‌ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ನನ್ನ ಅಭಿಪ್ರಾಯ ಹೇಳಿದ್ದೇನೆ.ನಾವು ಯಾರು ತೀರ್ಮಾನ ಮಾಡಕ್ಕಾಗಲ್ಲ.ನಮ್ಮ ನಾಯಕಿ ಸೋನಿಯಾ ಗಾಂಧಿ ಇದ್ದಾರೆ. ನನ್ನ ಅಭಿಪ್ರಾಯ ಹೇಳೋದು ತಪ್ಪೇನಿಲ್ಲಲ್ಲ.ನಮ್ಮ ಸಂವಿಧಾನದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವಕಾಶ ಮಾಡಿಕೊಟ್ಟಿದ್ದಾರೆ. ಹಾಗಾಗಿ ನನ್ನ ಅಭಿಪ್ರಾಯ ಹೇಳಿದ್ದೇನೆ ಎಂದರು, ಯಾರೇ ಇದ್ರು ಬಾಯಿ ಮುಚ್ಚಿಕೊಂಡು ಕೆಲಸ …

Read More »