Breaking News

Laxminews 24x7

ಬೆಂಗಳೂರಿಗರೇ ಎಚ್ಚರ.. ನಿಮ್ಮ ಮನೆಗೂ ಬರಬಹುದು ಇಂಥಾ ಒಂದು ಖತರ್ನಾಕ್ ನೇಪಾಳಿ ಗ್ಯಾಂಗ್..!

ಬೆಂಗಳೂರು: ವೃದ್ಧೆಯ ಕೈ ಕಾಲು ಕಟ್ಟಿ ದರೋಡೆ ಮಾಡಿದ್ದ ನೇಪಾಳಿ ದಂಪತಿ ಸೇರಿ ಮೂವರನ್ನು ಜೀವನ ಭೀಮಾನಗರ ಪೊಲೀಸರು ಬಂಧಿಸಿದ್ದಾರೆ. ಪ್ರತಾಪ್ ಸಿಂಗ್ ಅಲಿಯಾಸ್ ಪ್ರೇಮ ಬಹದ್ದೂರ್, ಸಂಗೀತಾ ಅಲಿಯಾಸ್ ಸೋನು ದಂಪತಿ ಹಾಗೂ ಸಹಚರ ಬಿಷ್ಣು ಬಹದ್ದೂರ್ ಬಂಧಿತರು.‌ ನೇಪಾಳ ಮೂಲದ ದಂಪತಿಗಳು ಕಳೆದ ಎರಡು ತಿಂಗಳ ಹಿಂದೆ ಬೆಂಗಳೂರಿಗೆ ಬಂದಿದ್ದರು. ನೇಪಾಳ ಮೂಲದ ವ್ಯಕ್ತಿಯನ್ನೇ ಸಂಪರ್ಕ ಮಾಡಿಕೊಂಡು ಜೆ.ಬಿ ನಗರ ಠಾಣಾ ವ್ಯಾಪ್ತಿಯ ನಿವಾಸಿ ವಿನೋದ್ ಎಂಬುವರ ಮನೆಯ …

Read More »

ಗುರ್ಪ್ರೀತ್ ಕೌರ್ ವಿವಾಹವಾದ ಪಂಜಾಬ್ ಸಿಎಂ ಭಗವಂತ್ ಮಾನ್

ಪಂಜಾಬ್ : ಇಂದು ಮುಖ್ಯಮಂತ್ರಿ ಭಗವಂತ್ ಮಾನ್ ಗುರುವಾರ (ಜುಲೈ 7) ಡಾ.ಗುರುಪ್ರೀತ್ ಕೌರ್ ಅವರನ್ನು ವಿವಾಹವಾದರು. ಸಾಂಪ್ರದಾಯಿಕ ಆನಂದ್ ಕರಜ್ ಪ್ರಕಾರ, ಸಿಖ್ ಸಂಪ್ರದಾಯದಂತೆ ಗುರುದ್ವಾರದಲ್ಲಿ ಮದುವೆ ನಡೆಯಿತು. ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮದುವೆಯಲ್ಲಿ ಪಾಲ್ಗೊಂಡು ನವವಿವಾಹಿತ ದಂಪತಿಗಳಿಗೆ ಆಶೀರ್ವದಿಸಿದರು. ಎಎಪಿ ಸಂಸದ ರಾಘವ್ ಚಡ್ಡಾ ಕೂಡ ಉತ್ಸವದಲ್ಲಿ ಭಾಗಿಯಾಗಿದ್ದು, ಸಮಾರಂಭದ ಚಿತ್ರಗಳನ್ನು ಟ್ವೀಟ್ ಮಾಡಿದ್ದಾರೆ. ‘ನಾನು ನನ್ನ …

Read More »

ಸಾರ್ವಜನಿಕರೇ ಗಮನಿಸಿ..! ಇಂದಿನಿಂದ ರಾಜ್ಯಾಧ್ಯಂತ ‘ಗುತ್ತಿಗೆ ನೌಕರ’ರ ಪ್ರತಿಭಟನೆ: ‘ಸರ್ಕಾರಿ ಆಸ್ಪತ್ರೆ’ಯ ‘ಆರೋಗ್ಯ ಸೇವೆ’ಯಲ್ಲಿ ವ್ಯತ್ಯಯ

ಬೆಂಗಳೂರು: ತಮ್ಮ ವಿವಿಧ ಬೇಡಿಕೆ ಈಡೇರಿಸುವಂತ ಆಗ್ರಹಿಸಿ ಆರೋಗ್ಯ ಇಲಾಖೆಯ ( Health Department ) ಗುತ್ತಿಗೆ, ಹೊರಗುತ್ತಿಗೆ ನೌಕರರು ಇಂದು ಬೆಂಗಳೂರು ಚಲೋ ( Bengaluru Cholo ) ನಡೆಸೋ ಮೂಲಕ ಪ್ರತಿಭಟನೆಗೆ ಇಳಿಯಲಿದ್ದಾರೆ. ಈ ಹಿನ್ನಲೆಯಲ್ಲಿ ಇಂದಿನಿಂದ ಸರ್ಕಾರಿ ಆಸ್ಪತ್ರೆಗಳ ( Government Hospital ) ಆರೋಗ್ಯ ಸೇವೆಯಲ್ಲಿ ( Health Service ) ವ್ಯತ್ಯಯ ಉಂಟಾಗಲಿದೆ.   ಹೌದು.. ರಾಜ್ಯ ಸರ್ಕಾರ ಈವರೆಗೆ ಆರೋಗ್ಯ ಇಲಾಖೆಯ …

Read More »

ರೈಲ್ವೆ ಗೇಟ್ ದಾಟಿ ಹಳಿ ಮೇಲೇ ನಿಂತ ಲಾರಿ; ಬಂದಪ್ಪಳಿಸಿಯೇ ಬಿಡ್ತು ಎಕ್ಸ್​ಪ್ರೆಸ್​ ಟ್ರೇನ್​!

ಬೀದರ್: ರೈಲ್ವೆ ಗೇಟ್​ ದಾಟಿ ಬಂದ ಲಾರಿಯೊಂದು ಹಳಿ ಮೇಲೇ ನಿಂತು ಬಿಟ್ಟಿದ್ದರಿಂದ ಎಕ್ಸ್​ಪ್ರೆಸ್​ ಟ್ರೇನ್​ ಬಂದು ಅದಕ್ಕೆ ಅಪ್ಪಳಿಸಿದಂಥ ಅಪಘಾತವೊಂದು ಸಂಭವಿಸಿದೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನಲ್ಲಿ ಈ ಅವಘಡ ಉಂಟಾಗಿದೆ. ಭಾಲ್ಕಿ ತಾಲೂಕಿನ ಹಲಬುರ್ಗಾ ಬಳಿ ರೈಲು ಬರುವ ಸಮಯದೊಳಕ್ಕೆ ಹೋಗಿ ಬಿಡೋಣ ಎಂದುಕೊಂಡು ವೇಗವಾಗಿ ಬಂದ ಚಾಲಕ ಲಾರಿಯನ್ನು ನುಗ್ಗಿಸಿದ್ದಾನೆ. ಆದರೆ ಅಷ್ಟರಲ್ಲಿ ಮತ್ತೊಂದು ಭಾಗದಲ್ಲಿ ಎರಡನೇ ಗೇಟ್ ಹಾಕಲ್ಪಟ್ಟಿದ್ದರಿಂದ ಮುಂದಕ್ಕೆ ಹೋಗಲಾಗದೆ ಲಾರಿ ಹಳಿ ಮೇಲೇ …

Read More »

ಔಟ್​..! ಹುಬ್ಬಳ್ಳಿ ಪೊಲೀಸರ ಮುಂದೆ ಸ್ಫೋಟಕ ಹೇಳಿಕೆ ನೀಡಿದ ಹಂತಕರು..!

ಹುಬ್ಬಳ್ಳಿ : ಚಂದ್ರಶೇಖರ್​​​ ಗುರೂಜಿ ಬೇನಾಮಿ ಆಸ್ತಿಗಳ ಸೀಕ್ರೆಟ್ ಔಟ್​ ಆಗಿದ್ದು, ಹುಬ್ಬಳ್ಳಿ ಪೊಲೀಸರ ಮುಂದೆ ಹಂತಕರು ಸ್ಫೋಟಕ ಹೇಳಿಕೆ ನೀಡಿದ್ಧಾರೆ. ಚಂದ್ರಶೇಖರ್​​​ ಗುರೂಜಿ ಮುಂಬೈ, ಹುಬ್ಬಳ್ಳಿ, ಬೆಂಗಳೂರು ಸೇರಿ ಹಲವೆಡೆ ಆಸ್ತಿ ಮಾಡಿದ್ದಾರೆ. ಗುರೂಜಿ ಎಲ್ಲೆಲ್ಲಿ ಆಸ್ತಿ ಮಾಡಿದ್ರು ಅಂತಾ ಶಿಷ್ಯ ಬಾಯಿಬಿಟ್ಟಿದ್ದಾನೆ. ಮಾಜಿ ನೌಕರ ಮಹಾಂತೇಶ್​ ಶಿರೂರಗೆ ಪೊಲೀಸ್ ಡ್ರಿಲ್​​​ ಮಾಡಿದ್ದು, ಕಳೆದ ರಾತ್ರಿ ಕಮಿಷನರ್ ಲಾಬೂರಾಮ್​​​ ವಿಚಾರಣೆ ನಡೆಸಿದ್ಧಾರೆ. 5 ಕೋಟಿ ಆಸ್ತಿ ವಿಚಾರಕ್ಕೆ ಕೊಲೆ ಮಾಡಿದ್ದಾಗಿ …

Read More »

ಚಂದ್ರಶೇಖರ ಗುರೂಜಿ ನಮಗೆ ಮಾನಸಿಕವಾಗಿ ಸಾಕಷ್ಟು ಕಿರುಕುಳ ನೀಡ್ತಾ ಇದ್ದರು. ಅದಕ್ಕಾಗಿ ನಾವೇ ಕೊಂದಿದ್ದೇವೆ..

ಹುಬ್ಬಳ್ಳಿ(ಜು.07):  ಚಂದ್ರಶೇಖರ ಗುರೂಜಿ ನಮಗೆ ಮಾನಸಿಕವಾಗಿ ಸಾಕಷ್ಟು ಕಿರುಕುಳ ನೀಡ್ತಾ ಇದ್ದರು. ಅದಕ್ಕಾಗಿ ನಾವೇ ಕೊಂದಿದ್ದೇವೆ..! ಇದು ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಹಂತಕರು ಪೊಲೀಸರ ವಿಚಾರಣೆ ವೇಳೆ ಹೇಳಿಕೊಂಡಿರುವುದಾಗಿ ಮೂಲಗಳು ತಿಳಿಸಿವೆ. ಚಂದ್ರಶೇಖರ ಗುರೂಜಿ ಕೊಲೆ ಬಳಿಕ ರಾಮದುರ್ಗ ಮಾರ್ಗವಾಗಿ ಬಾಗಲಕೋಟೆಗೆ ತೆರಳುತ್ತಿದ್ದ ಮಹಾಂತೇಶ ಶಿರೂರ ಹಾಗೂ ಮಂಜುನಾಥ ಮರೇವಾಡ ಅವರನ್ನು ಪೊಲೀಸರು ಬಂಧಿಸಿದ್ದರು. ಅಲ್ಲಿಂದ ಅರೆಸ್ಟ್‌ ಮಾಡಿ ಕರೆದುಕೊಂಡು ಬಂದ ಮೇಲೆ ಬರೋಬ್ಬರಿ 20 ಗಂಟೆಗೂ …

Read More »

ರಾಜ್ಯಸಭೆಗೆ ನಾಲ್ವರ ನೇಮಕ: ಏನಿದೆ ವಿಶೇಷ, ಏನೇನಕ್ಕೆ ಆದ್ಯತೆ?

ನವದೆಹಲಿ: ರಾಜ್ಯಸಭೆಗೆ ನಾಲ್ವರು ಖ್ಯಾತ ಗಣ್ಯವ್ಯಕ್ತಿಗಳನ್ನು ನೇಮಕ ಮಾಡಿರುವ ಆಡಳಿತಾರೂಢ ಬಿಜೆಪಿ ಈ ಮೂಲಕ ಬಹುತೇಕ ಭೇಷ್ ಎನಿಸಿಕೊಂಡಿದೆ. ಇದು ಕೂಡ ಅಚ್ಚರಿ ಮೂಡಿಸುವಂಥ ನೇಮಕವೇ ಆಗಿದ್ದರೂ, ಬಹುತೇಕ ಎಲ್ಲರೂ ಒಪ್ಪುವಂಥ ನೇಮಕವೂ ಆಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.   ದಕ್ಷಿಣ ಭಾರತಕ್ಕೇ ಆದ್ಯತೆ ಸಾಮಾನ್ಯವಾಗಿ ಕೇಂದ್ರ ಸರ್ಕಾರ ಉತ್ತರ ಭಾರತೀಯರಿಗೇ ಮಣೆ ಹಾಕುತ್ತದೆ, ದಕ್ಷಿಣ ಭಾರತವನ್ನು ಅಷ್ಟಾಗಿ ಗಣನೆಗೆ ತೆಗೆದುಕೊಳ್ಳುವುದಿಲ್ಲ ಎಂಬ ಆರೋಪ ಅಲ್ಲಲ್ಲಿ ಕೇಳಿ ಬಂದಿದೆ. ಆದರೆ ಈ …

Read More »

ಬಿ ಸ್ವತ್ತುಗಳಿಗೆ ಎರಡು ತಿಂಗಳಲ್ಲಿ ಎ ಖಾತೆ ಪರಿವರ್ತನೆ ಭಾಗ್ಯ: ರಾಜ್ಯಾದ್ಯಂತ ಲಕ್ಷಾಂತರ ಮಂದಿಗೆ ಅನುಕೂಲ..

ಬೆಂಗಳೂರು: ರಾಜ್ಯದ ಲಕ್ಷಾಂತರ ಸ್ವತ್ತುದಾರರಿಗೆ ನೆಮ್ಮದಿ ತರುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ರಾಜ್ಯಾದ್ಯಂತ ಇರುವ ಬಿ ಖಾತಾ ಸ್ವತ್ತುಗಳನ್ನು ಎರಡು ತಿಂಗಳಿನಲ್ಲಿ ಎ ಖಾತೆಗೆ ಪರಿವರ್ತನೆ ಮಾಡಲು ಸರ್ಕಾರ ಮುಂದಾಗಿದ್ದು, ಇದರಿಂದಾಗಿ ಬೊಕ್ಕಸಕ್ಕೆ ಕೋಟ್ಯಂತರ ರೂ.ಗಳ ಆದಾಯ ಬರುವ ನಿರೀಕ್ಷೆ ಇದೆ.   ಬೆಂಗಳೂರಿನಲ್ಲಿ ಅಕ್ರಮ-ಸಕ್ರಮ ವಿಚಾರ ಸುಪ್ರೀಂಕೋರ್ಟ್ ಮುಂದಿದೆ. ಹಾಗಾಗಿ ರಾಜಧಾನಿ ಹೊರತುಪಡಿಸಿ ಇನ್ನುಳಿದ ನಗರಗಳಲ್ಲಿ ಬಿ ಖಾತೆಗಳನ್ನು ಎ ಖಾತೆಗಳಾಗಿ ಪರಿವರ್ತನೆ ಮಾಡಲಾಗುತ್ತದೆ. ಅಂದಾಜು 10 …

Read More »

ನಾನು ಯಾವತ್ತು ಯಾವುದರ ಹಿಂದೆಯೂ ಹೋದವನಲ್ಲ: ಡಾ.ಡಿ. ವೀರೇಂದ್ರ ಹೆಗ್ಗಡೆ

ಮಂಗಳೂರು: ಕೇಂದ್ರ ಸರ್ಕಾರವು ರಾಜ್ಯಸಭೆಗೆ ನಾಮನಿದೇರ್ಶನ ಮಾಡಿರುವುದಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಸಂತಸ ವ್ಯಕ್ತಪಡಿಸಿದ್ದಾರೆ. ದೇವರು ಒಂದು ಅವಕಾಶ ಕೊಟ್ಟಿದ್ದಾನೆ. ಗ್ರಾಮೀಣಾಭಿವೃದ್ಧಿ ಯೋಜನೆ ಹಾಗೂ ನಮ್ಮ ಅನೇಕ ಕಾರ್ಯಕ್ರಮಗಳನ್ನು ಜನತೆಗೆ ಮುಟ್ಟಿಸುವಲ್ಲಿ ಯಶಸ್ವಿಯಾಗಿದ್ದೇವೆ. ಬಹುಶಃ ಇದು ವಿಸ್ತಾರವಾಗಿ ಇಡೀ ದೇಶಕ್ಕೆ ತಲುಪುವ ಸಾಧ್ಯತೆ ಇದೆ ಎಂದರು. ಕಸ್ಟಮರ್ಸ್ ಸರ್ವಿಸ್ ಸೆಂಟರ್ ಮೂಲಕ ಕೇಂದ್ರ ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ಮುಟ್ಟಿಸುವಂತಹ ಏಜೆನ್ಸಿ ಇದೆ. ಈಗಾಗಲೇ ನಾವು 6 ಸಾವಿರ …

Read More »

ಇಂದು ಪಂಜಾಬ್​ ಸಿಎಂ ಮದುವೆ: ವಧು ಗುರುಪ್ರೀತ್​ ಕೌರ್​ ವಯಸ್ಸೆಷ್ಟು? ಇಲ್ಲಿದೆ ಅವರ ಸಂಪೂರ್ಣ ಪರಿಚಯ​

ಚಂಡೀಗಢ: ಇಂದು ಪಂಜಾಬ್ ಜನರ​ ಪಾಲಿಗೆ ವಿಶೇಷ ದಿನ. ಏಕೆಂದರೆ, ಇಡೀ ರಾಜ್ಯವನ್ನು ಪ್ರತಿನಿಧಿಸುವ ಹಾಗೂ ಆಡಳಿತದ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿ ಭಗವಂತ್​ ಮಾನ್​ ಅವರ ವಿವಾಹದ ದಿನ. ಅಂದಹಾಗೆ ಪಂಜಾಬ್​ ಸಿಎಂಗೆ ಇದು ಎರಡನೇ ಮದುವೆ. ಇಷ್ಟು ಕೇಳಿದ ಮೇಲೆ ನಿಮ್ಮ ಮನಸ್ಸಿನಲ್ಲಿ ವಧು ಯಾರು? ಮತ್ತು ವಧುವಿನ ವಯಸ್ಸೆಷ್ಟು? ಎಂಬಿತ್ಯಾದಿ ಪ್ರಶ್ನೆಗಳು ಮೂಡುವುದು ಸಹಜ. ನಿಮ್ಮ ಪ್ರಶ್ನೆಗಳಿಗೆ ಸಂಪೂರ್ಣ ಉತ್ತರವನ್ನು ನಾವು ಕೊಡುತ್ತೇವೆ. ಹೀಗಾಗಿ ಓದುವುದನ್ನು ಮುಂದುವರಿಸಿ… 48 …

Read More »