ಮದುವೆ ಆದ 10 ತಿಂಗಳ ನಂತರ ಪತ್ನಿಗೆ ತಾನು ಮದುವೆ ಆಗಿದ್ದು ಅವನಲ್ಲ, ಅವಳು ಎಂಬ ವಿಷಯ ತಿಳಿದು ಶಾಕ್ ಆಗಿರುವ ಘಟನೆ ಇಂಡೊನೇಷ್ಯಾದಲ್ಲಿ ನಡೆದಿದೆ. ಮಹಿಳೆಗೆ ಡೇಟಿಂಗ್ ಆಪ್ ನಲ್ಲಿ ಪರಿಚಯವಾದ ವ್ಯಕ್ತಿ ಒಬ್ಬ ಸರ್ಜನ್ ಆಗಿದ್ದು, ಉದ್ಯಮಿ ಕೂಡ ಆಗಿದ್ದ. ಪರಸ್ಪರ ಪರಿಚಯ ಆದ ನಂತರ ಇಬ್ಬರೂ ಗುಟ್ಟಾಗಿ ಮದುವೆ ಆದರು. ಈ ವೇಳೆ ಗಂಡ ಕುಟುಂಬದಿಂದ ದೂರ ಹೋಗುವುದಾಗಿ ತಿಳಿಸಿದ್ದ. ದಂಪತಿ ದಕ್ಷಿಣ ಸುಮರ್ತಾಗೆ ವಲಸೆ …
Read More »ಅಮಿತ್ ಶಾ ಮಗನಿಗೆ ಅಗ್ನಿಪಥ್ ಕೆಲಸಕ್ಕೆ ಹೋಗಲು ಹೇಳಿ’: ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ, ಜೂನ್ 20: ಸೇನೆಗೆ ಸೇರಿ ಅಲ್ಪಾವಧಿಗೆ ಸೇವೆ ಸಲ್ಲಿಸಲು ಯುವಕರಿಗೆ ಅವಕಾಶ ಕಲ್ಪಿಸುವ ಅಗ್ನಿಪಥ್ ಸ್ಕೀಂ ಬಗ್ಗೆ ವ್ಯಾಪಕ ವಿರೋದ ವ್ಯಕ್ತವಾಗುತ್ತಿದೆ. ದೇಶದ ಹಲವು ಭಾಗಗಳಲ್ಲಿ ಇಂದು (ಜೂನ್ 20) ಭಾರತ್ ಬಂದ್ ಕರೆ ನೀಡಲಾಗಿದೆ. ವಿರೋಧ ಪಕ್ಷ ಕಾಂಗ್ರೆಸ್ ಮೋದಿ ಸರಕಾರವನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಳ್ಳುತ್ತಿದೆ. ಅಗ್ನಿಪಥ್ ಸ್ಕೀಂ ಬಗ್ಗೆ ಕಾಂಗ್ರೆಸ್ ನಾಯಕಿ ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಕೇಂದ್ರ ಸರಕಾರವನ್ನು ಲೇವಡಿ ಮಾಡಿದ್ದು, ಕೇಂದ್ರ …
Read More »ಪ್ರಿಯಾಂಕಾಹಾಗೂ ರಾಹುಲ್ ಜೊತೆ ಇಂಟರ್ ನ್ಯಾಷನಲ್ ಎಕ್ಜಿಬಿಷನ್ ವೀಕ್ಷಿಸಿದ ಸತೀಶ್ ಜಾರಕಿಹೊಳಿ
ಬೆಂಗಳೂರಿನ ಇಂಟರ್ ನ್ಯಾಷನಲ್ ಎಕ್ಜಿಬಿಷನ್ ವತಿಯಿಂದ ನೆಲಮಂಗಲ ರಸ್ತೆ ಬಳಿ ಆಯೋಜಿಸಲಾದ ನೂತನ ತಂತ್ರಜ್ಞಾನ ಯಂತ್ರೋಪಕರಣ ಪ್ರದರ್ಶನವನ್ನು ಪ್ರಿಯಾಂಕಾ ಜಾರಕಿಹೊಳಿ ಹಾಗೂ ರಾಹುಲ್ ಜಾರಕಿಹೊಳಿ ಜೊತೆ ವೀಕ್ಷಿಸಲಾಯಿತು. ತಂತ್ರಜ್ಞಾನ ಪ್ರದರ್ಶನದಲ್ಲಿ ಹೈಟೆಕ್ ತಂತ್ರಜ್ಞಾನ ಯಂತ್ರೋಪಕರಣ ವೀಕ್ಷಿಸಿ ಮಾಹಿತಿ ಪಡೆಯಲಾಯಿತು. ಉತ್ತರ ಕರ್ನಾಟಕದಲ್ಲಿ ಗುಣಮಟ್ಟದ ಕಂಪನಿಯ ತಂತ್ರಜ್ಞಾನ ಅಳವಡಿಸುವ ಉದ್ದೇಶದಿಂದ ಕಂಪನಿಯ ಆಯೋಜಕರೊಂದಿಗೆ ಚರ್ಚಿಸಲಾಯಿತು. ಭವಿಷ್ಯತ್ತಿನಲ್ಲಿ ಉತ್ತರ ಕರ್ನಾಟಕದಲ್ಲಿ ಆಧುನಿಕ ತಂತ್ರಜ್ಞಾನವನ್ನು ಅವಿಷ್ಕಾರಗೊಳಿಸುವ ಉದ್ದೇಶದಿಂದ ಇಂದು ಬೆಂಗಳೂರಿನ ಇಂಟರ್ ನ್ಯಾಷನಲ್ ಎಕ್ಜಿಬಿಷನ್ …
Read More »ಆಕ್ಸಿಜನ್ ಕೊಡುವುದಕ್ಕೆ ಆಗದವರು ಇಂದು ಯೋಗ ಮಾಡಲು ಬಂದಿದ್ದಾರೆ: ಸಿದ್ದರಾಮಯ್ಯ
ಬೆಂಗಳೂರು: ಆಕ್ಸಿಜನ್ ಕೊಡುವುದಕ್ಕೆ ಆಗದವರು ಇಂದು ಯೋಗ ಮಾಡಲು ಬಂದಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯಕ್ಕೆ ಪ್ರಧಾನಿ ಮೋದಿ ಬಂದಿದ್ದಾರೆ. 19/20 ರಲ್ಲಿ ಬಾರಿ ಪ್ರವಾಹ ಬಂದಿತ್ತು. ಆಗ ಪ್ರಧಾನಿಯವರು ಇಲ್ಲಿಗೆ ಬರಲಿಲ್ಲ. ನೊಂದ ಜನರಿಗೆ ಸಾಂತ್ವನ ಹೇಳಲಿಲ್ಲ. ರಾಜ್ಯಕ್ಕೆ ವಿಶೇಷ ಅನುದಾನ ಕೊಡಲಿಲ್ಲ. ಈಗ ಅವರಿಗೆ ರಾಜ್ಯದ ನೆನಪಾಗಿದೆ. ಆಕ್ಸಿಜನ್ ಕೊಡುವುದಕ್ಕೆ …
Read More »ಮೋದಿ ಭೇಟಿ ವಿರೋಧಿಸಲು ಬೆಂಗಳೂರಿಗೆ ಹೊರಟ ಕಾಂಗ್ರೆಸ್ ಕಿಸಾನ್ ಸದಸ್ಯರು ವಶಕ್ಕೆ
ಚಿಕ್ಕಮಗಳೂರು: ಕಾಂಗ್ರೆಸ್ ನಾಯಕರಾದ ಸೋನಿಯಾ, ರಾಹುಲ್ ಗಾಂಧಿ ಅವರಿಗೆ ಇಡಿ ಮೂಲಕ ಕಿರುಕುಳ ನೀಡಲಾಗುತ್ತಿದೆ ಎಂದು ಪ್ರಧಾನಿ ಮೋದಿ ಅವರ ಕರ್ನಾಟಕ ಭೇಟಿ ವಿರೋಧಿಸಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಹೊರಟ್ಟಿದ್ದ ಕಾಂಗ್ರೆಸ್ ಕಿಸಾನ್ ಘಟಕದ ಸಚಿನ್ ಮೀಗಾ ಸಹಿತ 23 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿಗೆ ಹೊರಡಲು ಸಿದ್ಧರಾಗಿ ನಗರದ ನಿರೀಕ್ಷಣಾ ಮಂದಿರಕ್ಕೆ ಬಂದಿದ್ದ ಸಚಿನ್ ಮೀಗಾ, ಸಿ.ಎನ್.ಅಕ್ಮಲ್, ರಸೂಲ್ ಖಾನ್, ಇತರರನ್ನು …
Read More »ಗೋಕಾಕ: ಹಿರೆನಂದಿ ಗ್ರಾಮದಲ್ಲಿ ಹಡಪದ ಸಮಾಜದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ನೇಮಕ.
ಗೋಕಾಕ್ :ತಾಲೂಕಿನ.ಹಿರೇನಂದಿ ಹೋಬಳಿ ಘಟಕ ಶ್ರೀ ಶಿವಶರಣ ಹಡಪದ.ಅಪ್ಪಣ್ಣ ಸಮಾಜಸೇವಾ ಸಂಘದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಹಾಗೂ ಸದಸ್ಯರು. ನೇಮಕಾತಿ ಆಯ್ಕೆ ಮಾಡಲಾಯಿತು. ಗೋಕಾಕ್ ತಾಲೂಕ ಅಧ್ಯಕ್ಷರು ಸಿದ್ದಪ್ಪ ನಾವಲಗಿ.ಉಪಾಧ್ಯಕ್ಷರು ಶಿವು ಯಾರನಾಳ. ಸಭೆಯ ಅಧ್ಯಕ್ಷರಾದ ಜಿಲ್ಲಾ ಕಮಿಟಿಯ ಸಹಕಾರ್ಯದರ್ಶಿ ಶ್ರೀಕಾಂತ ನಾವಿ. ಹಾಗೂ ಬೆಳಗಾವಿ ಜಿಲ್ಲಾ ಕಮಿಟಿಯ ಸದಸ್ಯರು ಶಿವಲಿಂಗ ನಾವಿ ಸಾಹಿತ್ಯ ಗಳಾದ ಶ್ರೀ ಈಶ್ವರ್ ಚಂದ್ರ ಎಸ್ ಬೆಟಿಗೇರಿ. ಹಿರೇನಂದಿ ಘಟಕದ ಕಾರ್ಯಾಧ್ಯಕ್ಷರು . ಅರ್ಜುನ್ …
Read More »ಧನ ಸಂಪತ್ತಿಗಾಗಿ ಆರೋಗ್ಯ ಸಂಪತ್ತು ನಿರ್ಲಕ್ಷ್ಯ: ಶಿವಾಚಾರ್ಯ ಸ್ವಾಮೀಜಿ ಕಳವಳ
ಬೆಳಗಾವಿ: ‘ಎಲ್ಲ ಸಂಪತ್ತುಗಳಿಗಿಂತ ಆರೋಗ್ಯ ಸಂಪತ್ತು ದೊಡ್ಡದು. ಇಂದು ಎಲ್ಲರೂ ಧನ ಸಂಪತ್ತಿಗಾಗಿ ಆರೋಗ್ಯ ಸಂಪತ್ತು ನಿರ್ಲಕ್ಷಿಸುತ್ತಿದ್ದಾರೆ’ ಎಂದು ಬಾಳೆಹೊನ್ನೂರಿನ ರಂಭಾಪುರಿ ಪೀಠದ ಡಾ.ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು. ಇಲ್ಲಿನ ಹುಕ್ಕೇರಿ ಹಿರೇಮಠದಲ್ಲಿ ಅಂತರರಾಷ್ಟ್ರೀಯ ಯೋಗ ದಿನ ಅಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ ಯೋಗ ಶಿಬಿರದಲ್ಲಿ ಮಾತನಾಡಿದ ಅವರು, ‘ಇಂದು ಜನರು ಆರೋಗ್ಯ ಕಡೆಗಣಿಸುತ್ತಿದ್ದಾರೆ. ಬಳಿಕ ಜೀವನವಿಡೀ ಗಳಿಸಿದ ಹಣವನ್ನು ಆರೋಗ್ಯಕ್ಕಾಗಿ ವ್ಯಯಿಸುತ್ತಿದ್ದಾರೆ. ಯೋಗದಿಂದ ಆರೋಗ್ಯ ಮತ್ತು ಮಾನಸಿಕ ಶಾಂತಿ …
Read More »ಅಪರಿಚಿತ ವಾಹನ ಡಿಕ್ಕಿ ಹೊಡೆದು ನವಿಲು ಸ್ಥಳದಲ್ಲೇ ಸಾವನ್ನಪ್ಪಿದೆ.
ಹಿರೇಬಾಗೇವಾಡಿ: ಇಲ್ಲಿನ ಬಡೇಕೊಳ್ಳಮಠ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸೋಮವಾರ ಅಪರಿಚಿತ ವಾಹನ ಡಿಕ್ಕಿ ಹೊಡೆದು ನವಿಲು ಸ್ಥಳದಲ್ಲೇ ಸಾವನ್ನಪ್ಪಿದೆ. ಹೆದ್ದಾರಿ ಒಂದು ಬದಿಯಿಂದ ಮತ್ತೊಂದು ಬದಿಗೆ ದಾಟುವಾಗ ನವಿಲಿಗೆ ವಾಹನ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಹಿರೇಬಾಗೇವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಅರಣ್ಯ ಇಲಾಖೆಯವರಿಗೆ ಮೃತ ನವಿಲು ಒಪ್ಪಿಸಿದರು.
Read More »ಅಗ್ನಿ ಪತ ಬಂದ್ ಕರೆ ಟುಸ್ಸ್ ಆಗಿದೆ ಎಲ್ಲವೂ ಎಂದಿನಂತೆ ಶುರು…
ಬೆಳಗಾವಿ: ಅಗ್ನಿಪಥ ಯೋಜನೆ ವಿರೋಧಿಸಿ ಸೋಮವಾರ ಬೆಳಗಾವಿ ಬಂದ್ ಕರೆ ನೀಡಿದ ಕಾರಣ, ನಗರದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಬೆಳಿಗ್ಗೆಯೇ ಕ್ಷಿಪ್ರಕಾರ್ಯ ಪಡೆ, ನಗರ ಪೊಲೀಸರು, ಮಹಿಳಾ ಪೊಲೀಸ್ ಸಿಬ್ಬಂದಿ ಸೇರಿಕೊಂಡು ನಗರದ ಪ್ರಮುಖ ವೃತ್ತ, ಚೌಕ ಹಾಗೂ ಆಯಕಟ್ಟಿನ ಸ್ಥಳಗಳಲ್ಲಿ ಪರೇಡ್ ನಡೆಸಿದರು. ಇಲ್ಲಿನ ರಾಣಿ ಚನ್ನಮ್ಮ ವೃತ್ತ, ಕಾಲೇಜ್ ರಸ್ತೆ, ಧರ್ಮವೀರ ಸಂಭಾಜಿ ವೃತ್ತ, ಕಿರ್ಲೋಸ್ಕರ್ಯ ರೋಡ್, ಖಡೇಬಜಾರ್ ಸೇರಿದಂತೆ ವಿವಿಧ ರಸ್ತೆಗಳಲ್ಲಿ ಶಸ್ತ್ರಸಜ್ಜಿತ ಪಡೆಗಳು …
Read More »ಬಿಜೆಪಿ ಕಚೇರಿಯ ಬಾಗಿಲು ಕಾಯಲು ಯುವಕರು ಸೈನ್ಯ ಸೇರಬೇಕೆ?: ದಿನೇಶ್ ಗುಂಡೂರಾವ್
ಬೆಂಗಳೂರು: ಬಿಜೆಪಿ ಕಚೇರಿಯ ಬಾಗಿಲು ಕಾಯಲು ಯುವಕರು ಸೈನ್ಯ ಸೇರಬೇಕೆ ಸೆಕ್ಯೂರಿಟಿ ಗಾರ್ಡ್ ಮಾಡಿಕೊಳ್ಳಲು ಬಿಜೆಪಿಯವರಿಗೆ ಸೈನ್ಯಕ್ಕೆ ಸೇರಿದ ಅಗ್ನಿವೀರರೆ ಬೇಕೆ? ಯುವ ಸಮುದಾಯದ ಬಗ್ಗೆ ಬಿಜೆಪಿಯವರ ನಿಲುವೇನು ಎಂಬುದು ಅವರ ಹೇಳಿಕೆಗಳಿಂದಲೇ ತಿಳಿಯುತ್ತದೆ ಎಂದು ಬಿಜೆಪಿ ವಿರುದ್ಧ ಟ್ವಿಟ್ಟರ್ ಮೂಲಕ ಕಾಂಗ್ರೆಸ್ ಮುಖಂಡ ದಿನೇಶ್ ಗುಂಡುರಾವ್ ವಾಗ್ದಾಳಿ ನಡೆಸಿದ್ದಾರೆ.ಟ್ವೀಟ್ನಲ್ಲಿ ಏನಿದೆ? ಅಗ್ನಿಪಥ್ ವಿರುದ್ದ ಹೋರಾಡುತ್ತಿರುವ ಯುವಕರ ಬಗ್ಗೆ ಬಿಜೆಪಿಯವರ ಹೇಳಿಕೆಗಳು ಆ ಪಕ್ಷದ ಮನೋವಿಕಾರವನ್ನು ಅನಾವರಣ ಮಾಡಿದೆ. ಯೋಜನೆಯ ಮೂಲಕ …
Read More »
Laxmi News 24×7