Breaking News

Laxminews 24x7

ಸಿದ್ಧಗಂಗಾ ಶ್ರೀ, ಆದಿ ಶ್ರೀಗಳ “ಅನ್ನ-ಅಕ್ಷರ ದಾಸೋಹ’ ಕೈಬಿಟ್ಟ ಚಕ್ರತೀರ್ಥ ಸಮಿತಿ

ಬೆಂಗಳೂರು: ಇಲ್ಲಿಯವರೆಗೂ ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಸಾಹಿತಿಗಳ ಹೆಸರು ಮತ್ತು ಪಠ್ಯವನ್ನು ಕೈಬಿಡಲಾಗುತ್ತಿದೆ ಎಂಬ ವಿವಾದ ಇದೀಗ, ಮಠ-ಮಂದಿರಗಳತ್ತ ತಿರುಗಿದೆ. ರಾಜ್ಯದ ಪ್ರಮುಖ ಮಠಗಳಲ್ಲಿ ಒಂದಾಗಿರುವ ಆದಿಚುಂಚನಗಿರಿಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಹಾಗೂ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯವರ ಕೈಂಕರ್ಯಗಳನ್ನೇ ಬಿಡಲಾಗಿದೆ.   ಬಡ ವಿದ್ಯಾರ್ಥಿಗಳಿಗೆ ಅನ್ನ, ಅಕ್ಷರ ದಾಸೋಹ ನಡೆಸುತ್ತಿದ್ದರು. ಈ ಮೂಲಕ ಮಠವು ಶೈಕ್ಷಣಿಕ ಸೇವೆ ಸಲ್ಲಿಸುತ್ತಿದ್ದು, ಮೂಲ ಶಿಕ್ಷಣ ಮತ್ತು ವೃತ್ತಿ ಶಿಕ್ಷಣವನ್ನು ಕಾಲೇಜುಗಳಲ್ಲಿ ನೀಡುತ್ತಿದೆ ಎನ್ನುವ ಸಾಲುಗಳನ್ನು …

Read More »

ಸಿಡಿಲು ಬಡಿದು ಮಹಿಳೆ ಸಾವು : ಏಳು ಜನರಿಗೆ ಗಂಭೀರ ಗಾಯ

ರಟ್ಟೀಹಳ್ಳಿ : ಪಟ್ಟಣದ ಹೊರವಲಯದ ಜಮೀನೊಂದರಲ್ಲಿ ಬಿತ್ತನೆ ಕಾರ್ಯದಲ್ಲಿ ತೊಡಗಿದ್ದ ವೇಳೆ ಮಂಗಳವಾರ ಸಂಜೆ ಸಿಡಿಲು ಬಡಿದು ಮಹಿಳೆ ಸಾವಿಗೀಡಾಗಿದ್ದು ಏಳು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪಟ್ಟಣದ ಕೋಟೆ ನಿವಾಸಿ ಕರಿಯಮ್ಮ ರಂಗಪ್ಪ ಪರಸಪ್ಪನವರ (35) ಮೃತರು. ಲತಾ ಮಾರುತೆಪ್ಪ ಸುಣಗಾರ, ಮಾರುತೆಪ್ಪ ಸುಣಗಾರ, ಸುಧಾ ಪರಸಪ್ಪನವರ, ರತ್ನಾ ಉಪ್ಪಾರ, ಸಾಕಮ್ಮ ಸುಣಗಾರ, ರವೀಂದ್ರ ಪರಸಪ್ಪನವರ, ಜುಬೇದಾ ಬಾಗಲಮನಿ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ರಟ್ಟೀಹಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ …

Read More »

ಆಪ್​ ಸಚಿವನ ಮನೆಯಲ್ಲಿ ಸಿಕ್ಕಿದ ಸಂಪತ್ತು ನೋಡಿ ಇಡಿ ಅಧಿಕಾರಿಗಳೇ ಶಾಕ್​!

ನವದೆಹಲಿ: ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆಪ್​ ಸಚಿವ ಸತ್ಯೇಂದ್ರ ಜೈನ್​ ಮನೆಯಿಂದ ಭಾರೀ ಸಂಪತ್ತು ಜಪ್ತಿ ಮಾಡಲಾಗಿದೆ. ಅಕ್ರಮ ಹಣ ವರ್ಗಾವಣೆಯಲ್ಲಿ ಸಚಿವರ ನಿವಾಸದ ಮೇಲೆ ದಾಳಿ ಮಾಡಿದ ಇಡಿ ಅಧಿಕಾರಿಗಳೇ ಬೆಚ್ಚಿಬಿದ್ದಿದ್ದಾರೆ. ಸೋಮವಾರ ದೆಹಲಿಯ ನಿವಾಸದಲ್ಲಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ 2 ಕೋಟಿ ರೂ. ನಗದು, 1.8 ಕೆ.ಜಿ. ಚಿನ್ನದ ನಾಣ್ಯವನ್ನು ವಶಕ್ಕೆ ಪಡೆದಿದ್ದಾರೆ. ಸದ್ಯಕ್ಕೆ ಜೂನ್​ 1 ರಿಂದ 9 ರವರೆಗೆ ಇಡಿ ವಶದಲ್ಲಿರುವುದರಿಂದ ಅಧಿಕಾರಿಗಳು ಪ್ರಕರಣದ …

Read More »

‘ವಿಕ್ರಂ’ ಮುಂದೆ ‘ಕೆಜಿಎಫ್ 2’ ಬಚ್ಚಾ: ಮತ್ತೆ ಖ್ಯಾತೆ ತೆಗೆದ ಕಮಾಲ್!

ಎರಡು ದಕ್ಷಿಣದ ಸಿನಿಮಾಗಳು ಭಾರತದ ಬಾಕ್ಸಾಫೀಸ್‌ನಲ್ಲಿ ಬೇಜಾನ್ ಸದ್ದು ಮಾಡುತ್ತಿದೆ. ‘ಕೆಜಿಎಫ್ 2’ ಬಾಕ್ಸಾಫೀಸ್‌ನಲ್ಲಿ ದಾಂಧಲೆ ಎಬ್ಬಿಸಿದ್ದು ಪ್ರತ್ಯೇಕವಾಗಿ ಹೇಳಬೇಕಿಲ್ಲ. ಇನ್ನೊಂದು ಕಡೆ ಕಳೆದ ವಾರವಷ್ಟೇ ಬಿಡುಗಡೆಯಾಗಿದ್ದ ಕಮಲ್ ಹಾಸನ್ ಅಭಿನಯದ ‘ವಿಕ್ರಂ’ ಸಿನಿಮಾ ಗಳಿಕೆಯಲ್ಲಿ ಹಿಂದೆ ಬಿದ್ದಿಲ್ಲ. ದಕ್ಷಿಣ ಭಾರತದಲ್ಲಿ ಎರಡು ಸಿನಿಮಾಗಳ ವಿಜಯೋತ್ಸವ ನಡೆಯುತ್ತಿದೆ. ‘ಕೆಜಿಎಫ್ 2’ ಉತ್ತರದಲ್ಲೂ ದಾಖಲೆ ಬರೆದು ಬಂದಿದೆ. ಇನ್ನೊಂದು ಕಡೆ ‘ವಿಕ್ರಂ’ ವಿದೇಶದಲ್ಲಿಯೂ ಅಬ್ಬರಿಸುತ್ತಿದೆ. ದಕ್ಷಿಣದಲ್ಲಿ ಈ ಎರಡೂ ಸಿನಿಮಾ ಗೆಲುವಿನ …

Read More »

ಕೆಟ್ಟು ನಿಂತ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಿಟ್ಟ ಸ್ಪೇಶಲ್ ಬಸ್

ಇತ್ತೀಚೆಗೆ ಬೆಳಗಾವಿ ವಿಮಾನ ನಿಲ್ದಾಣದಿಂದ ರೈಲು ನಿಲ್ದಾಣದ ವರೆಗೆ ಹೊಸ ಬಸ್‍ಸೌಲಭ್ಯವನ್ನು ಪ್ರಾರಂಭಿಸಿತ್ತು. ಆದರೆ ಇಂದು ಆ ಸರಕಾರಿ ಬಸ್ ಕೆಟ್ಟು ನಿಂತಿದ್ದು ಕೆಎಸ್‍ಆರ್‍ಟಿಸಿ ಮತ್ತೆ ಡಕೋಟಾ ಬಸ್‍ನ್ನೇ ನೀಡಿದೆ ಎಂದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇತ್ತೀಚೆ ಬೆಳಗಾವಿಯ ವಿಮಾನ ನಿಲ್ದಾಣದಿಂದ ರೈಲು ನಿಲ್ದಾಣದ ವರೆಗೆ ಪ್ರಯಾಣಿಕರ ಅನುಕೂಲಕ್ಕಾಗಿ ಕಳೆದ ವಾರವಷ್ಟೇ ಹೊಸ ಬಸ್ ಸೌಲಭ್ಯವನ್ನು ಪ್ರಾರಂಭಿಸಲಾಗಿತ್ತು. ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ಈ ಬಸ್ ಸೌಲಭ್ಯಕ್ಕೆ ಹಸಿರು ನಿಶಾನೆಯನ್ನು ತೋರಿ ಚಾಲನೆಯನ್ನು …

Read More »

ಕರ್ನಾಟಕ, ದಲ್ಲಿ ಜೂನ್ 11 ರವರೆಗೆ ಭಾರೀ ಮಳೆ

ಬೆಂಗಳೂರು : ಪಶ್ಚಿಮ ಮಾರುತಗಳ ಪರಿಣಾಮದಿಂದಾಗಿ ದಕ್ಷಿಣ ಭಾರತದಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆ ಸುರಿಯುವ (Heavy Rainfall alert) ಸಾಧ್ಯತೆಯಿದೆ. ಅದ್ರಲ್ಲೂ ಜೂನ್ 11 ರವರೆಗೆ ಕರ್ನಾಟಕ ಮತ್ತು ಕೇರಳದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.   ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ಕೆಲವು ರಾಜ್ಯಗಳಲ್ಲಿ ಮಳೆ ಕೆಲವು ದಿನಗಳಿಂದಲೂ ಬಿಡುವು ಪಡೆದಿದೆ. ಆದರೆ ಕರ್ನಾಟಕದ ಕರಾವಳಿ ಭಾಗದಲ್ಲಿ …

Read More »

ಪ್ರತಿಯೊಬ್ಬ ‍ಪ್ರಜೆಯ ತಲೆ ಮೇಲೆ ₹ 1.75 ಲಕ್ಷ ಸಾಲ ಹೇರಿದ್ದಾರೆ ಮೋದಿ

ಬೆಳಗಾವಿ: ‘ನರೇಂದ್ರ ಮೋದಿ ಪ್ರಧಾನಿ ಆದ ಮೇಲೆ ₹ 155 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಲೆಕ್ಕ ಹಾಕಿ ನೋಡಿದರೆ ಪ್ರತಿಯೊಬ್ಬ ‍ಪ್ರಜೆಯ ತಲೆ ಮೇಲೆ ₹ 1.75 ಲಕ್ಷ ಸಾಲ ಹೇರಿದ್ದಾರೆ. ಇಂಥವರಿಂದ ದೇಶ ಉಳಿಯುತ್ತದೆಯೇ’ ಎಂದು ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.   ನಗರದಲ್ಲಿ ಮಂಗಳವಾರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ‘ಸ್ವಾತಂತ್ರ್ಯ ಬಂದಾಗಿನಿಂದ 2014ರವರೆಗೆ ದೇಶದ ಸಾಲ ₹ 53.11 …

Read More »

ಇಸ್ಲಾಂ ಅನ್ನೋದು ಧರ್ಮವಲ್ಲ, ಕಾಮುಕರ ಗ್ಯಾಂಗ್: ರಾಧಾಕೃಷ್ಣ ಅಡ್ಯಂತಾಯ

ಮಂಗಳೂರು: ಇಸ್ಲಾಂ ಅನ್ನೋದು ಧರ್ಮವಲ್ಲ, ಅದೊಂದು ಕ್ರೌರ್ಯ, ಕಾಮುಕರ ಗ್ಯಾಂಗ್ ಎಂಬುದಾಗಿ ಅರ್ಥೈಸಿಕೊಳ್ಳಬಹುದು ಎಂದು ಹಿಂದೂ ಜಾಗರಣ ವೇದಿಕೆ ಮುಖಂಡ ರಾಧಾಕೃಷ್ಣ ಅಡ್ಯಂತಾಯ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ನಡೆದ ಹಿಂದೂ ಜಾಗೃತಿ ಸಭೆಯ ಪ್ರಧಾನ ಭಾಷಣದಲ್ಲಿ ಈ ರೀತಿ ಹೇಳಿದ್ದಾರೆ. ಇಸ್ಲಾಂ ಎನ್ನುವಂತದ್ದು ಧರ್ಮವಲ್ಲ, ಮತವಲ್ಲ, ಸಂಸ್ಕೃತಿಯಲ್ಲ, ಸಭ್ಯತೆಯಲ್ಲ, ಸಂಸ್ಕಾರವಲ್ಲ, ಮಾನವೀಯತೆಯೂ ಅಲ್ಲ. ಅದೊಂದು ಕ್ರೌರ್ಯ, ಅಮಾನುಷತೆ, ಅತ್ಯಾಚಾರ, ಲೂಟಿಕೋರರ ತಂಡ. ಅದೊಂದು …

Read More »

(KRDIL) ಅಧಿಕಾರಿಗಳು ನಿರ್ಮಿಸಿದ್ದ ಕಟ್ಟಡದ ಗೇಟ್ ಮೈಮೇಲೆ ಬಿದ್ದು ಬಾಲಕ ಮೃತಪಟ್ಟಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಬಾಗಲಕೋಟೆ: ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ(KRDIL) ಅಧಿಕಾರಿಗಳು ನಿರ್ಮಿಸಿದ್ದ ಕಟ್ಟಡದ ಗೇಟ್ ಮೈಮೇಲೆ ಬಿದ್ದು ಬಾಲಕ ಮೃತಪಟ್ಟಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಾಲಕ ರಂಜಿತ್ ಸೂರಗೊಂಡ(8) ಮೈ ಮೇಲೆ ಗೇಟ್ ಬಿದ್ದು ಮೃತಪಟ್ಟಿದ್ದಾನೆ. ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರಸ್ತುತ ವೀಡಿಯೋ ವೈರಲ್ ಆಗಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಡೆದಿದ್ದೇನು? ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದ ಬಸವೇಶ್ವರ ಸಮುದಾಯ ಭವನದ ಮುಂದೆ ಗೇಟ್ ಅಳವಡಿಸಲಾಗಿತ್ತು. ಮೇ 31 …

Read More »

ಆಮ್ ಆದ್ಮಿ ಪಕ್ಷಕ್ಕೆ ಶಾಶ್ವತ ಮುಖ್ಯಮಂತ್ರಿ ಸಿಕ್ಕರು

ನಟ, ರಾಜಕಾರಣಿ ಮುಖ್ಯಮಂತ್ರಿ ಚಂದ್ರು ಇಂದು ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆಗೊಂಡಿದ್ದಾರೆ. ನಿನ್ನೆಯಷ್ಟೇ ಅವರು ಆಮ್ ಆದ್ಮಿ ಪಾರ್ಟಿ ಸೇರಲಿದ್ದಾರೆ ಎಂದು ಅಧಿಕೃತವಾಗಿ ಪಾರ್ಟಿಯ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿತ್ತು. ಅಲ್ಲದೇ, ಕೆಲವು ದಿನಗಳ ಹಿಂದೆಯಷ್ಟೇ ಚಂದ್ರು ಕೂಡ ಈ ಕುರಿತು ಮಾತನಾಡಿದ್ದಾರೆ. ಇಂದು ಬೆಂಗಳೂರಿನಲ್ಲಿ ನಡೆದ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್, ಕರ್ನಾಟಕ ರಾಜ್ಯ ಆಮ್ ಆದ್ಮಿ ಪಾರ್ಟಿ ಅಧ್ಯಕ್ಷ ಪೃಥ್ವಿ ರೆಡ್ಡಿ, ಬೆಂಗಳೂರು ನಗರ …

Read More »