Breaking News

Laxminews 24x7

ರಾಷ್ಟ್ರಕವಿ ಕುವೆಂಪು ರವರನ್ನು ನಿಂದಿಸಿದ ರೋಹಿತ್ ಚಕ್ರತೀರ್ಥರನ್ನು ಪಠ್ಯಪುಸ್ತಕ ಪುನರ್ ಪರಿಶೀಲನಾ ಸಮೀತಿಯಿಂದ ವಜಾಗೊಳಿಸುವಂತೆ ರಾಜ್ಯಸರಕಾರಕ್ಕೆ ಒತ್ತಾಯ

ರಾಷ್ಟ್ರಕವಿ ಕುವೆಂಪು ರವರನ್ನು ನಿಂದಿಸಿದ ರೋಹಿತ್ ಚಕ್ರತೀರ್ಥರನ್ನು ಪಠ್ಯಪುಸ್ತಕ ಪುನರ್ ಪರಿಶೀಲನಾ ಸಮೀತಿಯಿಂದ ವಜಾಗೊಳಿಸುವಂತೆ ರಾಜ್ಯಸರಕಾರಕ್ಕೆ ಒತ್ತಾಯಿಸುವ ಹಿನ್ನೆಲೆಯಲ್ಲಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರಕವಿ ಕುವೆಂಪುರವರನ್ನು ನಿಂದಿಸಿ ಅವಮಾನ ಮಾಡಿದ ಕುರಿತಂತೆ ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಪಠ್ಯಪುಸ್ತಕ ಪುನರ್ ಪರಿಶೀಲನಾ ಸಮೀತಿಯನ್ನು ವಜಾಗೊಳಿಸುವಂತೆ ಬೆಳಗಾವಿ ನಗರದ ರಾಣಿ ಚೆನ್ನಮ್ಮಾ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿದರು. ಈ ವೇಳೆ ರೋಹಿತ್ ಚಕ್ರತೀರ್ಥರ …

Read More »

ಬೆಳಗಾವಿಯಲ್ಲಿ ಮಂದಿರ ವರ್ಸೆಸ್ ಮಸೀದಿ ವಿವಾದ ತಾರಕಕ್ಕೇ

ಬೆಳಗಾವಿಯಲ್ಲಿ ಮಂದಿರ ವರ್ಸೆಸ್ ಮಸೀದಿ ವಿವಾದ ತಾರಕಕ್ಕೇರಿದ್ದು, ಬಿಜೆಪಿ ಸರ್ಕಾರ ಬೆಲೆಏರಿಕೆ ನಿಯಂತ್ರಿಸಲು ವಿಫಲವಾದ ಹಿನ್ನೆಲೆಯಲ್ಲಿ ಇದನ್ನು ಮುಚ್ಚಿಡಲು ಮಂದಿರ ಮಸೀದಿ ವಿವಾದಗಳನ್ನು ಸೃಷ್ಟಿ ಮಾಡುತ್ತಿದೆ ಎಂದು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ರಾಜ್ಯಾಧ್ಯಕ್ಷ ದಸ್ತಗೀರ್ ಅಗಾ ಹೇಳಿದ್ದಾರೆ. ಬೆಳಗಾವಿ ನಗರದಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ರಾಜ್ಯಾಧ್ಯಕ್ಷ ದಸ್ತಗೀರ್ ಅಗಾ, ಬಾಪಟ್ ಗಲ್ಲಿಯಲ್ಲಿರುವ ಶಾಹಿ ಮಸೀದಿ ಬ್ರಾಹ್ಮಣರು ಮುಸ್ಲಿಮರು ಸೇರಿ ಕಟ್ಟಿದ್ದಾರೆ. ಬಿಜೆಪಿ ಸರ್ಕಾರ …

Read More »

11 ಐಎಎಸ್ ಅಧಿಕಾರಿಗಳ ವರ್ಗಾವಣೆ: ರಾಜ್ಯ ಸರ್ಕಾರ

ಬೆಂಗಳೂರು: 11 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಜನೀಶ್ ಗೋಯಲ್​ಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ. ಐಎಸ್​ಎನ್ ಪ್ರಸಾದ್​ ಅಭಿವೃದ್ಧಿ ಆಯುಕ್ತರ ಹೆಚ್ಚುವರಿ ಜವಾಬ್ದಾರಿ ಹೊಂದಿದ್ದಾರೆ.   ಉಮಾಶಂಕರ್ ಅವರನ್ನು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ರಶ್ಮಿ ವಿ.ಮಹೇಶ್- ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ, ಪಂಕಜ್ ಕುಮಾರ್ ಪಾಂಡೆ- ವಾಣಿಜ್ಯ ಹಾಗೂ ಕೈಗಾರಿಕೆ ಇಲಾಖೆಯ ಕಾರ್ಯದರ್ಶಿಯಾಗಿ, ರಾಮ್ …

Read More »

ರೈತರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ: ರೈತ ಶಕ್ತಿ ಯೋಜನೆಯಡಿ 1250 ರೂ. ಡೀಸೆಲ್ ಸಹಾಯಧನ

ರಾಯಚೂರು: 2022-23ನೇ ಸಾಲಿನ ರೈತ ಶಕ್ತಿ ಯೋಜನೆಯಡಿ ಕರ್ನಾಟಕ ಸರ್ಕಾರ ಕೃಷಿ ಉತ್ಪಾದಕತೆ ಹೆಚ್ಚಿಸಿ, ಇಂಧನ ಕಡಿಮೆ ಮಾಡುವ ದೃಷ್ಠಿಯಿಂದ ಪ್ರತಿ ಎಕರೆಗೆ 250 ರೂ.ಗಳಂತೆ ಗರಿಷ್ಟ 5 ಎಕರೆಗೆ 1250 ರೂ.ಗಳ ನೇರ ನಗದು ಮೂಲಕ ಡೀಸೆಲ್ ಸಹಾಯಧನ ನೀಡಲಾಗುತ್ತದೆ.   ಇಲ್ಲಿಯ ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯದ ವತಿಯಿಂದ ರೈತ ಶಕ್ತಿ ಯೋಜನೆಯಡಿ ಸಹಾಯಧನ ಸೌಲಭ್ಯ ನೀಡಲಿದ್ದು, ಈ ಯೋಜನೆಯಡಿ ರೈತರು ಸೌಲಭ್ಯ ಪಡೆಯಲು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ …

Read More »

ಯಾರಿಗೆ ಬೇಕು ಎಷ್ಟು ವೋಟು: ರಾಜ್ಯಸಭಾ ಚುನಾವಣೆಗೆ ಮತ ಲೆಕ್ಕಾಚಾರ ಹೇಗಿದೆ?

ಬೆಂಗಳೂರು: ಬದಲಾದ ರಾಜಕೀಯ ಲೆಕ್ಕಾಚಾರದಲ್ಲಿ ರಾಜ್ಯಸಭೆಯ ನಾಲ್ಕನೇ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಮೂರು ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೋಷಿಸಿದೆ. ಕಾಂಗ್ರೆಸ್- ಬಿಜೆಪಿ ಬೆಂಬಲದ ನಿರೀಕ್ಷೆಯಿಂದ ಜೆಡಿಎಸ್ ಆರಂಭದಲ್ಲಿ ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕಿಳಸಿತ್ತು. ಆದರೆ ಜೆಡಿಎಸ್ ಲೆಕ್ಕಾಚಾರವನ್ನು ತಲೆಕೆಳಗು ಮಾಡಿ ಕಾಂಗ್ರೆಸ್ ತಾವೂ ಎರಡನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಮನ್ಸೂರ್ ಅಲಿ ಖಾನ್ ಅವರು ಕಾಂಗ್ರೆಸ್ ಎರಡನೇ ಅಭ್ಯರ್ಥಿಯಾಗಿದ್ದಾರೆ.   ಇದರ ನಡುವೆ ನಾಲ್ಕನೇ ಸ್ಥಾನಕ್ಕಾಗಿ ಬಿಜೆಪಿಯೂ ತನ್ನ ಅಭ್ಯರ್ಥಿಯನ್ನು ಘೋಷಣೆ …

Read More »

ಆರ್‍ಎಸ್‍ಎಸ್ ದೃಷ್ಟಿಯಲ್ಲಿ ಹಿಂದೂ ಆಗಲೂ 40 ಪರ್ಸೆಂಟ್ ಕಮಿಷನ್, ಬ್ಲೂ ಫಿಲ್ಮ್, ನೋಡಬೇಕಾ..? ಗಣಿ ಲೂಟಿ ಮಾಡಬೇಕಾ..? ಚೆಕ್‍ನಲ್ಲಿ ದುಡ್ಡು ಪಡೆದು ಜೈಲಿಗೆ ಹೋಗಬೇಕಾ..?

ಆರ್‍ಎಸ್‍ಎಸ್ ದೃಷ್ಟಿಯಲ್ಲಿ ಹಿಂದೂ ಆಗಲೂ 40 ಪರ್ಸೆಂಟ್ ಕಮಿಷನ್ ಹೊಡೆಯಬೇಕಾ..? ಬ್ಲೂ ಫಿಲ್ಮ್ ನೋಡಬೇಕಾ..? ಗಣಿ ಲೂಟಿ ಮಾಡಬೇಕಾ..? ಚೆಕ್‍ನಲ್ಲಿ ದುಡ್ಡು ಪಡೆದು ಜೈಲಿಗೆ ಹೋಗಬೇಕಾ..? ಏನು ಮಾಡಬೇಕು..? ಹೇಳಿಬಿಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಸರಣಿ ಟ್ವೀಟ್ ಮೂಲಕ ಆರ್‍ಆರ್‍ಎಸ್ ವಿರುದ್ಧ ಹರಿಹಾಯ್ದಿರುವ ಮಾಜಿ ಸಿಎಂ ಸಿದ್ದರಾಮಯ್ಯ ನಾನು ಪ್ರಶ್ನೆ ಮಾಡಿದ್ದು ಆರ್‍ಎಸ್‍ಎಸ್ ಎಂಬ ಸಂಸ್ಥೆಯನ್ನು, ಉತ್ತರಿಸುತ್ತಿರುವವರು ರಾಜ್ಯ ಬಿಜೆಪಿ ನಾಯಕರು. ಇವರು ಯಾಕೆ ಎದೆ ಬಡಿದುಕೊಳ್ಳುತ್ತಿದ್ದಾರೆ..? …

Read More »

ಯಲ್ಲಮ್ಮನ ಗುಡ್ಡದಲ್ಲಿ ಸಡನ್ ಜೆಸಿಬಿ ದಾಳಿ ಎಲ್ಲ ಮನೆ ಗಳು ಧ್ವಂಸ

: ಯಲ್ಲಮ್ಮನ ಗುಡ್ಡದಲ್ಲಿ ಸಡನ್ ಜೆಸಿಬಿ ದಾಳಿ ಎಲ್ಲ ಮನೆ ಗಳು ಧ್ವಂಸ ಸವದತ್ತಿ: ಸುಮಾರು ವರ್ಷ ಗಳಿಂದ ವಾಸಿಸುತ್ತಿದ್ದ ಲಂಬಾಣಿ ಜನರು ಅಲ್ಲಿ ಶೆಡ್ಡು ಗಳನ್ನ ನಿರ್ಮಿಸಿ ವಾಸಿಸುತ್ತಿದ್ದ ಜನರಿಗೆ ಇವಾಗ ಬಿಗ್ ಶಾಕ್ ಆಗಿದೆ ಜಿಸಿಬಿ ಹಿಂದ ಎಲ್ಲ ಶೆಡ್ಡು ಗಳಾನ ತೆರವು ಗೊಳಿಸಿ ಅವರಿಗೆ ಆಶ್ರಯ ಇಲ್ಲದಂತಾಗಿದೆ ಯಾಕೆ ಏಕಾ ಏಕಿ ಖಾಲಿ ಮಾಡಿಸುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ಕೊಡದೆ ಲಾಟಿ ರುಚಿ ತೋರಿಸುವ ಮೂಲಕ …

Read More »

ಸಿದ್ದುಗೆ ರಾಜೀವ್ ಎಚ್ಚರಿಕೆ

ಬೆಂಗಳೂರು,- ಅಧಿಕಾರದಲ್ಲಿದ್ದಾಗ ವೀರಶೈವ- ಲಿಂಗಾಯತ ಎಂದು ಸಮಾಜ ಒಡೆಯೋಕೆ ಹೋಗಿ ಕೈಸುಟ್ಟು ಕೊಂಡಿದ್ದೀರಾ. ಈಗ ಆರ್ಯ- ದ್ರಾವಿಡ ಎಂದು ಒಡೆದು ಮತ್ತೊಮ್ಮೆ ಕೈಸುಟ್ಟುಕೊಳ್ಳುತ್ತಿದ್ದಿರಾ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಕುಡುಚಿ ಶಾಸಕ ಪಿ.ರಾಜೀವ್ ತಿರುಗೇಟು ನೀಡಿದ್ದಾರೆ. ಆರ್ಟಿ ನಗರದಲ್ಲಿರುವ ಸಿಎಂ ಖಾಸಗಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌ಎಸ್‌ಎಸ್‌ ವರು ಭಾರತೀಯರಲ್ಲ ಎಂದು ಹೇಳಿ ಸಿದ್ದರಾಮಯ್ಯ  ಆರ್‌ಎಸ್‌ಎಸ್‌ ಸ್ವಯಂಸೇವಕರು ಮತ್ತು ಕಾರ್ಯಕರ್ತರ ಭಾವನೆಗೆ ನೋವು ತಂದಿದ್ದಾರೆ. ಅಂಬೇಡ್ಕರ್ರವರ ¿ಹೂ ಈಸ್ ಶೂದ್ರ¿ …

Read More »

ಮೇ 31ರಂದು ವಿಶ್ವ ತಂಬಾಕು ರಹಿತ ದಿನ

ಹುಬ್ಬಳ್ಳಿ: ನಗರದ ಸಿದ್ದಪ್ಪ ಕಂಬಳಿ ರಸ್ತೆಯಲ್ಲಿರುವ ಲ್ಯಾಮಿಂಗ್ಟನ್ ಬಾಲಕ ಮತ್ತು ಬಾಲಕಿಯರ ಪ್ರೌಢಶಾಲೆಯಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ಆರೋಗ್ಯ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಲ್ಯಾಮಿಂಗ್ಟನ್ ಪ್ರೌಢಶಾಲೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ, ಕಾನೂನು ಸಾಕ್ಷರತಾ ಕಾರ್ಯಕ್ರಮವನ್ನು ಮೇ 31ರಂದು ಮಧ್ಯಾಹ್ನ 2 ಗಂಟೆಗೆ ಹಮ್ಮಿಕೊಳ್ಳಲಾಗಿದೆ.   ಕಾರ್ಯಕ್ರಮವನ್ನು ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಹಾಗೂ …

Read More »

ಡಾ.ರಾಜ್​ಕುಮಾರ್ ಅಕಾಡೆಮಿಯಿಂದ 8 ಮಂದಿ U.P.S.C. ಪಾಸ್:

ಕೇಂದ್ರ ಲೋಕಸೇವಾ ಆಯೋಗ (UPSC) ದೇಶದ ಅತ್ಯುನ್ನತ ನಾಗರಿಕ ಸೇವೆಗಳ ನೇಮಕಕ್ಕೆ ಪರೀಕ್ಷೆಯನ್ನು ನಡೆಸಿತ್ತು. 2021ನೇ ಸಾಲಿನ ಈ ಪರೀಕ್ಷೆಯ ಫಲಿತಾಂಶ ಇಂದು ( ಮೇ 30) ಪ್ರಕಟವಾಗಿದೆ. ಈ ಅತ್ಯುನ್ನತ ಪರೀಕ್ಷೆಯಲ್ಲಿ ದೇಶದ ಸುಮಾರು 685 ಮಂದಿ ತೇರ್ಗಡೆಯಾಗಿದ್ದಾರೆ.   2021ನೇ ಸಾಲಿನ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಕರ್ನಾಟಕದಿಂದ 27 ಮಂದಿ ತೇರ್ಗಡೆಯಾಗಿದ್ದರ ಬಗ್ಗೆ ಇದೂವರೆಗೂ ಮಾಹಿತಿ ಸಿಕ್ಕಿದೆ. ವಿಶೇಷ ಅಂದರೆ ಇವರಲ್ಲಿ ಡಾ.ರಾಜ್​ಕುಮಾರ್ ಸಿವಿಲ್ ಸರ್ವಿಸ್ ಅಕಾಡೆಮಿಯಲ್ಲಿ ತರಬೇತಿ …

Read More »