ಬೆಂಗಳೂರು : ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿರುವವರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಬರುವ ಜೂನ್ ಒಳಗಾಗಿ 8 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ವಿತರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ್ ಕತ್ತಿ ಭರವಸೆ ನೀಡಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಕೋವಿಡ್ ಲಾಕ್ ಡೌನ್ ಅವಧಿಯಲ್ಲಿ ಹೊಸ ಪಡಿತರ ಚೀಟಿ ಕೋರಿ ಸಲ್ಲಿಸಿರುವ ಅರ್ಜಿಗಳ ಸ್ಥಳ ಪರಿಶೀಲನೆ ಕಾರ್ಯ ನಿಧಾನವಾಗಿದೆ …
Read More »ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷತೆ ಎಂ.ಬಿ. ಪಾಟೀಲ್ ಅಧಿಕಾರ ಸ್ವೀಕಾರ
ಬೆಂಗಳೂರು: ಬಿಜೆಪಿ ಪಾಳಯದಲ್ಲಿ ಚುನಾವಣ ಸಿದ್ಧತೆ ಗರಿ ಗೆದರುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಕೂಡ ಚುನಾವಣೆಗೆ ಕಹಳೆ ಮೊಳಗಿಸಿದೆ. ಪ್ರದೇಶ ಕಾಂಗ್ರೆಸ್ನ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ಎಂ.ಬಿ. ಪಾಟೀಲ್ ಸೋಮವಾರ ಜವಾಬ್ದಾರಿ ಸ್ವೀಕರಿಸಿದ್ದಾರೆ. ಸಮಾರಂಭವು ಕಾಂಗ್ರೆಸ್ನ ಚುನಾವಣ ಪ್ರಚಾರದ ಆರಂಭ ದಂತೆಯೇ ಇತ್ತು ಹಾಗೂ ರಾಜ್ಯ ಮುಖಂಡರ ಒಗ್ಗಟ್ಟು ಪ್ರದರ್ಶನಕ್ಕೂ ವೇದಿಕೆಯಾಯಿತು. ಎಂ.ಬಿ.ಪಾಟೀಲ್ ಮಾತನಾಡಿ, ಸಾಮಾಜಿಕ ನ್ಯಾಯಕ್ಕಾಗಿ ಕರ್ನಾ ಟಕದಲ್ಲಿ ಕಾಂಗ್ರೆಸ್ ಸರಕಾರ ಅಧಿ ಕಾರಕ್ಕೆ ಬರಬೇಕಾಗಿದೆ. ಅನ್ನ, ಅಕ್ಷರ, …
Read More »ಮೊದಲ ದಿನವೇ ಎಸ್ಎಸ್ಎಲ್ಸಿ ʻ 6 ನಕಲಿ ವಿದ್ಯಾರ್ಥಿಗಳು ʼ ವಶಕ್ಕೆ
ಬೆಂಗಳೂರು : ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ( Karnataka SSLC Exam ) ಆರಂಭಗೊಂಡಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೊಡಿ ಪಟ್ಟಣದ ಆರ್.ಡಿ ಕಾಲೇಜಿನಲ್ಲಿ ಮೊದಲ ದಿನವೇ 6 ನಕಲಿ ವಿದ್ಯಾರ್ಥಿಗಳು ವಶಕ್ಕೆ ಪಡೆಯಲಾಗಿದೆ. ಇದರಲ್ಲಿ ಐವರು ವಿದ್ಯಾರ್ಥಿಗಳು ಹಾಗೂ ಓರ್ವ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿದ್ದು, ಶಿಕ್ಷಣ ಇಲಾಖೆ ಇಂದು ಹಿಜಾಬ್ ಸಂಘರ್ಷದ ನಡುವೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಿರುವುದು ಈಗ ಎಲ್ಲರ …
Read More »IPL 2022: ಟಾಸ್ ಗೆದ್ದ ಗುಜರಾತ್ ಬೌಲಿಂಗ್ ಆಯ್ಕೆ.. ರಾಹುಲ್ ಪಡೆ ಫಸ್ಟ್ ಬ್ಯಾಟಿಂಗ್..
ಇಂದು ಮುಂಬೈ ವಾಂಖೆಡೆ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರೋ 4ನೇ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿ ಆಗುತ್ತಿವೆ. ಮೊದಲು ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಫೀಲ್ಡಿಂಗ್ ಆಯ್ದುಕೊಂಡಿದೆ. ಹೀಗಾಗಿ ಕೆ.ಎಲ್ ರಾಹುಲ್ ಪಡೆ ಬ್ಯಾಟಿಂಗ್ . ಗುಜರಾತ್ ಟೈಟಾನ್ಸ್ ತಂಡ ಶುಭ್ಮನ್ ಗಿಲ್, ಮ್ಯಾಥ್ಯೂ ವೇಡ್ (ಕೀಪರ್), ವಿಜಯ್ ಶಂಕರ್, ಅಭಿನವ್ ಮನೋಹರ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, …
Read More »ಪರೀಕ್ಷೆ ಬರೆಯುತ್ತಿದ್ದಾಗ ಹಠಾತ್ ಹೃದಯಾಘಾತ; SSLC ವಿದ್ಯಾರ್ಥಿನಿ ಸಾವು
ಮೈಸೂರು: ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಟಿ.ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ. ಅನುಶ್ರೀ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ವಿದ್ಯಾರ್ಥಿನಿ. ಪರೀಕ್ಷೆ ಬರೆಯುತ್ತಿದ್ದ ವೇಳೆ ಅನುಶ್ರೀ ಹಠಾತ್ ಕುಸಿದು ಬಿದ್ದಿದ್ದಾಳೆ. ಕೂಡಲೇ ಪರೀಕ್ಷಾ ಸಿಬ್ಬಂದಿ ಆಕೆಯನ್ನ ಟಿ.ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ ಅನ್ನೋ ಮಾಹಿತಿ ಲಭ್ಯವಾಗಿದೆ.
Read More »ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ಹೂ ನೀಡಿ ಸ್ವಾಗತಿಸಿದ :ಶಾಸಕ ಅನಿಲ್ ಬೆನಕೆ!
ಬೆಳಗಾವಿ: ಶಾಲಾ- ಕಾಲೇಜುಗಳಲ್ಲಿ ‘ಧರ್ಮವಸ್ತ್ರ’ ಧರಿಸಿ ಬರಕೂಡದು ಎಂಬ ಹೈಕೋರ್ಟ್ ಆದೇಶದ ಮಧ್ಯೆಯೇ, ಇಂದಿನಿಂದ ಆರಂಭವಾದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬೆಳಗಾವಿಯ ಶಾಲೆಯೊಂದರಲ್ಲಿ ಮಕ್ಕಳು ಹಿಜಾಬ್ ಧರಿಸಿ ಬಂದಿದ್ದು, ಬಿಜೆಪಿ ಶಾಸಕ ಅನಿಲ್ ಬೆನಕೆ ಮಕ್ಕಳಿಗೆ ಹೂ ನೀಡಿ ಸ್ವಾಗತಿಸಿದ್ದಾರೆ. ನಗರದ ಸರ್ದಾರ್ ಹೈಸ್ಕೂಲ್ನಲ್ಲಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಆಗಮಿಸಿದಾಗ, ಉಪಸ್ಥಿತರಿದ್ದ ಶಾಸಕ ಅನಿಲ ಬೆನಕೆ ಅವರು, ಮಕ್ಕಳಿಗೆ ಗುಲಾಬಿ ಹೂ ನೀಡಿ ಶುಭ ಕೋರಿದ್ದಾರೆ. ಇದೇ ವೇಳೆ ಹಿಜಾಬ್ ಧರಿಸಿ …
Read More »ದೇವೇಗೌಡರ ಪತ್ನಿ ಚನ್ನಮ್ಮಗೆ ಐಟಿ ನೋಟಿಸ್! ಕಬ್ಬಿನ ಗದ್ದೆಗೆ ಅಧಿಕಾರಿಗಳನ್ನ ಆಹ್ವಾನಿಸಿದ ರೇವಣ್ಣ
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚನ್ನಮ್ಮ ಅವರಿಗೆ ಐಟಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಈ ಕುರಿತು ಹಾಸನದಲ್ಲಿ ಸೋಮವಾರ ಸುದ್ದಿಗಾರೊಂದಿಗೆ ಮಾತನಾಡಿದ ಮಾಜಿ ಸಚಿವ ಎಚ್.ಡಿ.ರೇವಣ್ಣ, ನಮ್ಮ ತಾಯಿಗೆ ಐಟಿ ಅಧಿಕಾರಿಗಳಿಂದ ನೋಟಿಸ್ ಬಂದಿದೆ. ಒಬ್ಬ ಮಾಜಿ ಪ್ರಧಾನಿ ಪತ್ನಿಗೆ ಹೀಗೆ ಮಾಡ್ತಾರಾ? ದೊಡ್ಡಪುರದ ಬಳಿ ನಮ್ಮ ತಾಯಿ ಹೆಸರಿನ ಜಮೀನಿನಲ್ಲಿ ಕಬ್ಬು ಬೆಳೆದಿದ್ದೀವಿ. ನಮ್ಮ ತಾಯಿಗೆ ಸೇರಿದ ಗದ್ದೆಯಲ್ಲಿ ಕಬ್ಬು ಬೆಳೆದಿದ್ದಕ್ಕೆ ಐಟಿ ನೋಟಿಸ್ ಜಾರಿ ಮಾಡಿದೆ. …
Read More »ಒಬಿಸಿ ಮೀಸಲಾತಿ ಅಂತಿಮಗೊಳಿಸಿಯೇ ಜಿಪಂ, ತಾಪಂ ಚುನಾವಣೆ ನಡೆಸುತ್ತೇವೆ : ಸಚಿವ ಈಶ್ವರಪ್ಪ
ಬೆಂಗಳೂರು : ರಾಜ್ಯದಲ್ಲಿ ಒಬಿಸಿಗಳಿಗೆ ಮೀಸಲಾತಿ ಕಲ್ಪಿಸಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆ ಮಾಡುತ್ತೇವೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ಭರವಸೆ ನೀಡಿದ್ದಾರೆ. ವಿಧಾನ ಪರಿಷತ್ ಶಾಸನ ರಚನೆ ಕಲಾಪದಲ್ಲಿ ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿದ್ದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ-2022 ಅನ್ನು ಸಚಿವ ಈಶ್ವರಪ್ಪ ಮಂಡಿಸಿದರು.ಕೇಂದ್ರ ಮತ್ತು ರಾಜ್ಯ ಸರ್ಕಾರದ …
Read More »ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಮತ್ತೆ ಭೂಕಂಟಕ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಮತ್ತೆ ಭೂಕಂಟಕ ಎದುರಾಗಿದೆ. ತಮ್ಮ ಅಧಿಕಾರ ಪ್ರಭಾವ ಬಳಸಿಕೊಂಡು ಕಾನೂನು ಬಾಹಿರವಾಗಿ ಸರ್ಕಾರಿ ಜಮೀನು ಮಾರಾಟ ಮಾಡಿರುವ ಆರೋಪ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ಕೇಳಿಬಂದಿದೆ. ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ಕೆ.ಸಿ. ರಾಜಣ್ಣ ಹಾಗೂ ವಕೀಲರ ತಂಡ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಗೆ ದೂರು ನೀಡಿದೆ. ಬಿ ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ದೇವನಹಳ್ಳಿಯ ಹರಳೂರು ಮತ್ತು ಪೂಲನಹಳ್ಳಿಯ …
Read More »ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಗೆ ರಕ್ಷಣಾ ಸಚಿವಾಲಯದಿಂದ ಅನುಮೋದನೆ- ಸಂಸದ ಈರಣ್ಣಾ ಕಡಾಡಿ
ಬೆಳಗಾವಿ: ಸ್ವತಂತ್ರ ಸೇನಾನಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಸ್ಮರಣೆಗಾಗಿ ಕರ್ನಾಟಕ ಸರ್ಕಾರ ಬೆಳಗಾವಿ ಜಿಲ್ಲೆಯ ಸಂಗೋಳ್ಳಿ ಗ್ರಾಮದಲ್ಲಿ ನಿರ್ಮಿಸಿರುವ ಸೈನಿಕ ಶಾಲೆಯನ್ನು ಕೇಂದ್ರ ರಕ್ಷಣಾ ಇಲಾಖೆಯ ಅಧೀನದಲ್ಲಿ ತೆಗೆದುಕೊಳ್ಳುವ ರಾಜ್ಯ ಸರ್ಕಾರದ ಪ್ರಸ್ತಾವನೆಗೆ ಕೇಂದ್ರ ರಕ್ಷಣಾ ಸಚಿವಾಲಯ ಅನುಮೋದನೆ ನೀಡಿರುವುದು ಸ್ವಾಗತಾರ್ಹ ಎಂದು ಸಂಸದ ಈರಣ್ಣ ಕಡಾಡಿ ಹರ್ಷ ವ್ಯಕ್ತಪಡಿಸಿದರು. ರವಿವಾರ ಮಾ-27 ರಂದು ಪತ್ರಿಕಾ ಹೇಳಿಕೆ ನೀಡಿರುವ ಸಂಸದ ಈರಣ್ಣ ಕಡಾಡಿ ಅವರು ದೇಶಾದ್ಯಂತ 100 ಹೊಸ ಸೈನಿಕ …
Read More »
Laxmi News 24×7