Breaking News

Laxminews 24x7

PSI ನೇಮಕಾತಿ ಕ್ವೀನ್‍ಪಿನ್ ದಿವ್ಯಾ ಹಾಗರಗಿ ಅರೆಸ್ಟ್

ಬೆಳಗಾವಿ: ಪಿಎಸ್‍ಐ ನೇಮಕಾತಿ ಅಕ್ರಮ ಪ್ರಕರಣದ ಕ್ವೀನ್‍ಪಿನ್ ಬಿಜೆಪಿ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ದಿವ್ಯಾ ಹಾಗರಗಿಯನ್ನು ಶುಕ್ರವಾರ ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಪಿಎಸ್‍ಐ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಕಳೆದ 18 ದಿನಗಳಿಂದ ತಲೆ ಮರೆಸಿಕೊಂಡಿದ್ದರು. ಆದರೆ ಇಂದು ಸಿಐಡಿ ಎಸ್‌ಪಿ. ರಾಘವೇಂದ್ರ ಹೆಗಡೆ, ಡಿವೈಎಸ್‍ಪಿ, ಪ್ರಕಾಶ್ ರಾಠೋಡ್, ಡಿವೈಎಸ್‍ಪಿ ಶಂಕರಗೌಡ ನೇತೃತ್ವದ ತಂಡದಿಂದ ಮಹಾರಾಷ್ಟ್ರದ ಪುಣೆಯ ಹೋಟೆಲ್‍ವೊಂದರ ಬಳಿ ದಿವ್ಯಾ ಹಾಗರಗಿಯನ್ನು …

Read More »

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಟಕ್ಕುಂಟು ಲೆಕ್ಕಕ್ಕಿಲ್ಲವೇ ಎಂದು ರಾಜ್ಯ ಬಿಜೆಪಿ ಟಾಂಗ್

ಬೆಂಗಳೂರು: ಕಾಂಗ್ರೆಸ್ ನಲ್ಲಿ ಎಲ್ಲವೂ ಸಿದ್ದರಾಮಯ್ಯ ಹೇಳಿದಂತೆ ನಡೆಯುತ್ತಿದೆ. ಹಾಗಾದರೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಟಕ್ಕುಂಟು ಲೆಕ್ಕಕ್ಕಿಲ್ಲವೇ ಎಂದು ರಾಜ್ಯ ಬಿಜೆಪಿ ಟಾಂಗ್ ನೀಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಘಟಕ, ಒಂದು ಕಡೆ ಕೆಪಿಸಿಸಿ ಅಧ್ಯಕ್ಷರು ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎಂದು ಹೇಳುತ್ತಿದ್ದಾರೆ. ಮತ್ತೊಂದೆಡೆ ಸಿದ್ದರಾಮಯ್ಯ ಅವರು ತಮ್ಮ ಬೆಂಬಲಿಗರ ಮೂಲಕ ʼಸಿದ್ದರಾಮಯ್ಯ ನೇತೃತ್ವದಲ್ಲೇ ಚುನಾವಣೆʼ ಎಂದು ಹೇಳಿಸುತ್ತಿದ್ದಾರೆ. ಬುರುಡೆ ರಾಮಯ್ಯ ಅವರೇ, ಜಾಣ …

Read More »

ರೈತರಿಗೆ ಸಿಎಂ ಬಸವರಾಜ ಬೊಮ್ಮಾಯಿ ಮತ್ತೊಂದು ಗುಡ್ ನ್ಯೂಸ್: 6.5 ಲಕ್ಷ ಎಕರೆ ಡೀಮ್ಡ್ ಫಾರೆಸ್ಟ್ ನಿಂದ ಹೊರಗೆ

ಮಂಗಳೂರು: ಡೀಮ್ಡ್ ಫಾರೆಸ್ಟ್ ನಿಯಮ ಸರಳಗೊಳಿಸಿ ರಾಜ್ಯದ ರೈತರ ಆತಂಕ ದೂರ ಮಾಡಲು ಸರ್ಕಾರ ಕ್ರಮಕೈಗೊಂಡಿದೆ. ಮೂಡಬಿದರೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, 6.5 ಲಕ್ಷ ಎಕರೆ ಭೂಮಿಯನ್ನು ಡೀಮ್ಡ್ ಫಾರೆಸ್ಟ್ ನಿಂದ ಹೊರಗಿಡಲು ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದು ತಿಳಿಸಿದ್ದಾರೆ. ರಾಜ್ಯದ ರೈತರಿಗೆ ಅನೇಕ ವರ್ಷಗಳಿಂದ ಡೀಮ್ಡ್ ಫಾರೆಸ್ಟ್ ನಿಯಮದಿಂದ ಆತಂಕ ಉಂಟಾಗಿತ್ತು. ಇದನ್ನು ಕೈಬಿಡಬೇಕೆಂದು ರೈತರು ಸರ್ಕಾರದ ಮುಂದೆ ಬೇಡಿಕೆ ಇಟ್ಟಿದ್ದರು. ಇದರ ಅನ್ವಯ 6.5 ಲಕ್ಷ …

Read More »

ಸುಮಲತಾರನ್ನ ಬಿಜೆಪಿ ಪಕ್ಷಕ್ಕೆ ಆಹ್ವಾನ ಮಾಡಿದ್ದೇವೆ: ಸಿ.ಪಿ ಯೋಗೇಶ್ವರ್

ರಾಮನಗರ: ಮಂಡ್ಯ ಸಂಸದೆ ಸುಮಲತಾರನ್ನ ಪಕ್ಷಕ್ಕೆ ಆಹ್ವಾನ ಮಾಡಿದ್ದೇವೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ನಮ್ಮ ಪಕ್ಷ ಅವರಿಗೆ ಬೆಂಬಲ ನೀಡಿತ್ತು. ಈ ಹಿನ್ನೆಲೆ ನಮ್ಮ ಪಕ್ಷಕ್ಕೆ ಬನ್ನಿ ಎಂದು ಆಹ್ವಾನ ಮಾಡಿದ್ದೇವೆ. ಮದುವೆ ಸಮಾರಂಭದಲ್ಲಿ ಅವರನ್ನ ಭೇಟಿ ಮಾಡಿದ್ದೆವು, ಸಿಎಂ ಸಹ ಇದ್ದರು. ಅವರು ತಿಳಿಸುತ್ತೇವೆ ಎಂದು ಹೇಳಿದ್ದಾರೆ. ಮುಂದೆ ನೋಡೋಣ ಎಂದರು. ಮದ್ದೂರು ಕ್ಷೇತ್ರದಿಂದ ಅಭಿಷೇಕ್ ಅಂಬರೀಶ್ ಬಿಜೆಪಿಯಿಂದ …

Read More »

ಹಿಂದಿಯನ್ನ ರಾಷ್ಟ್ರೀಯ ಭಾಷೆಯನ್ನಾಗಿ ಮಾಡಿದ್ರೆ ತಪ್ಪೇನಿಲ್ಲ: ಮುರುಗೇಶ್ ನಿರಾಣಿ

ಮೈಸೂರು/ಚಿಕ್ಕಮಗಳೂರು/ ವಿಜಯಪುರ: ಹಿದಿಯನ್ನು ರಾಷ್ಟ್ರೀಯ ಭಾಷೆಯನ್ನಾಗಿ ಮಾಡಿದರೆ ತಪ್ಪೇನಿಲ್ಲ ಎಂದು ಸಚಿವ ಮುರುಗೇಶ್ ನಿರಾಣಿ ಹೇಳುವ ಮೂಲಕ ವಿವಾದಕ್ಕೀಡಾಗಿದ್ದಾರೆ. ಸುದೀಪ್, ಅಜಯ್ ದೇವಗನ್ ಮಧ್ಯೆ ಹಿಂದಿವಾರ್ ಸಂಬಂಧ ಪ್ರತಿಕ್ರಿಯಿಸಿದ ಅವರು, ಕನ್ನಡ ಪ್ರಾದೇಶಿಕ ಭಾಷೆ, ಹಿಂದಿ ರಾಷ್ಟ್ರೀಯ ಭಾಷೆ. ಹಿಂದಿ ಭಾಷೆಯೂ ನಮಗೆ ಬೇಕು. ಬೇರೆ ಭಾಷೆ ಕಲಿಯುವುದರಲ್ಲಿ ತಪ್ಪೇನಿಲ್ಲ. ಹಿಂದಿಯನ್ನ ರಾಷ್ಟ್ರೀಯ ಭಾಷೆಯನ್ನಾಗಿ ಮಾಡಬೇಕು ಎಂಬುದು ಮೊದಲಿನಿಂದಲೂ ಇದೆ, ಇದರಿಂದ ತಪ್ಪೇನಿಲ್ಲ ಎಂದರು.ಹೆಚ್ಚು ಭಾಷೆ ಕಲಿಯೋದ್ರಿಂದ ನಾವು ಶ್ರೀಮಂತರಾಗುತ್ತೇವೆ. ನಾವು …

Read More »

ಡೀಲಿಂಗ್ ಸರ್ಕಾರದಲ್ಲಿ ದುಡ್ಡಿದ್ದವನಿಗೆ ಉದ್ಯೋಗ ಎಂದ ಮೇಲೆ ಬಡವರು ಪರೀಕ್ಷೆ ಬರೀಬೇಕು ಯಾಕೆ – ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ಅರ್ಹತಾ ಪರೀಕ್ಷೆಯ ಮೂಲಕ ಸರ್ಕಾರಿ ಉದ್ಯೋಗ ಭರ್ತಿ ಮಾಡುವುದೇಕೆ? ಈ ಸರ್ಕಾರದಲ್ಲಿ ದುಡ್ಡಿದ್ದವನಿಗೆ ಉದ್ಯೋಗ ಎಂದ ಮೇಲೆ ಬಡವರು ಯಾಕೆ ಪರೀಕ್ಷೆ ಬರೆಯಬೇಕು ಎಂದು ಕಾಂಗ್ರೆಸ್ ಟ್ವಿಟ್ಟರ್ ಮೂಲಕ ಪ್ರಶ್ನೆ ಮಾಡಿದೆ. ಟ್ವೀಟ್‍ನಲ್ಲಿ ಏನಿದೆ? ರಾಜ್ಯದ ಬೊಮ್ಮಾಯಿ ನೇತೃತ್ವದ ಸರ್ಕಾರ ಡಬಲ್ ಇಂಜೀನ್ ಸರ್ಕಾರವಲ್ಲ. ಇದು ಡೀಲಿಂಗ್ ಸರ್ಕಾರ. ಈ ಸರ್ಕಾರದಲ್ಲಿ ಪ್ರತಿ ಸರ್ಕಾರಿ ಉದ್ಯೋಗಕ್ಕೂ ಇಂತಿಷ್ಟು ರೇಟ್ ಎಂದು ಫಿಕ್ಸ್ ಆಗಿದೆ. PSI ನೇಮಕಾತಿಯಲ್ಲಿ …

Read More »

ಸಂಕಷ್ಟಕ್ಕೆ ಸಿಲುಕಿದ ʼಕಹೋ ನಾ ಪ್ಯಾರ್ ಹೈʼ ನಟಿ ಅಮೀಷಾ

ಎರಡು ದಶಕಗಳ ಹಿಂದೆ ಚಿತ್ರರಂಗದಲ್ಲಿ‌ ಸೆನ್ಸೇಶನ್ ಸೃಷ್ಟಿಸಿದ್ದು ಕಹೋ ನಾ ಪ್ಯಾರ್ ಹೈ ಹಿಂದಿ ಚಿತ್ರ. ಹೃತಿಕ್ ರೋಷನ್ ಈ ಚಿತ್ರದ ಮೂಲಕವೇ ಬಹಳಷ್ಟು ಖ್ಯಾತಿ ಪಡೆದಿದ್ದರು. 22 ವರ್ಷದ ಹಿಂದಿನ ಚಿತ್ರದ ಬಗ್ಗೆ ಈಗೇಕೆ ಪೀಠಿಕೆ ಎಂದಿರಾ? ಈ ಚಿತ್ರದ ನಟಿ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ.   ಹೃತಿಕ್ ರೋಷನ್‌ಗೆ ನಾಯಕಿಯಾಗಿ ನಟಿಸಿ ಜನರ ಮನಗೆದ್ದಿದ್ದ ಖ್ಯಾತ ನಟಿ ಅಮೀಶಾ ಪಟೇಲ್ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. …

Read More »

ಪುಷ್ಪಾ’ ಸ್ಟಾರ್ ಅಲ್ಲು ಅರ್ಜುನ್ ಡೈಲಾಗ್ ಮರುಸೃಷ್ಟಿಸಿದ ಹೂ ವ್ಯಾಪಾರಿ…!

ಟಾಲಿವುಡ್ ನಟ ಅಲ್ಲು ಅರ್ಜುನ್‌ರ ಬ್ಲಾಕ್‌ಬಸ್ಟರ್ ಪುಷ್ಪ: ದಿ ರೈಸ್ ಸಿನಿಮಾ ಬಿಡುಗಡೆಯಾಗಿ ಸುಮಾರು ನಾಲ್ಕು ತಿಂಗಳಾಗಿದೆ. ಇನ್ನೂ ಚಿತ್ರದ ಸಂಭಾಷಣೆಗಳು, ಹಾಡುಗಳ ಬಗ್ಗೆ ಕ್ರೇಜ್ ಕಡಿಮೆಯಾಗಿಲ್ಲ. ಇದೀಗ ಅಲ್ಲು ಅವರ ಕಾಶ್ಮೀರದ ಅಭಿಮಾನಿಯೊಬ್ಬರ ಚಿತ್ರದ ಪ್ರಮುಖ ಡೈಲಾಗ್ ಅನ್ನು ಹೇಳಿದ್ದಾರೆ. ಈ ವಿಡಿಯೋ ಸದ್ಯ ವೈರಲ್ ಆಗಿದೆ.ಕಾಶ್ಮೀರದಿಂದ ಆಗಾಗ್ಗೆ ಫೋಟೋಗಳು ಮತ್ತು ವಿಡಿಯೋಗಳನ್ನು ಪೋಸ್ಟ್ ಮಾಡುವ ಟ್ವಿಟ್ಟರ್ ಬಳಕೆದಾರರಾದ ನಮ್ರತಾ, ಇದೀಗ ಹೂವು ಮಾರಾಟಗಾರನ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ …

Read More »

ನಿರುದ್ಯೋಗ ಬಿಕ್ಕಟ್ಟು ಬಗೆಹರಿಸಿ ಮೋದಿಜೀ ಎಂದ ರಾಹುಲ್ ಗಾಂಧಿ

ನವದೆಹಲಿ: ದೇಶದಲ್ಲಿರುವ ನಿರುದ್ಯೋಗದ ಸಮಸ್ಯೆಯ ಬಗ್ಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಿರುದ್ದ ವಾಗ್ದಾಳಿ ನಡೆಸುತ್ತಿರುತ್ತಾರೆ. ಈ ಬಾರಿಯೂ ಇದೇ ವಿಚಾರಕ್ಕೆ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಹೇಟ್-ಇನ್-ಇಂಡಿಯಾ ಮತ್ತು ಮೇಕ್-ಇನ್-ಇಂಡಿಯಾ ಒಟ್ಟಿಗಿರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.   ನಿರುದ್ಯೋಗದ ಬಗ್ಗೆ ಧ್ವನಿ ಎತ್ತಿ ಅಪಾಯಕಾರಿ ನಿರುದ್ಯೋಗದ ಬಿಕ್ಕಟ್ಟನ್ನು ಪರಿಹರಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಟ್ವೀಟ್ ಮೂಲಕ ಮನವಿ ಮಾಡಿಕೊಂಡಿದ್ದಾರೆ. “”ಭಾರತದಿಂದ …

Read More »

ಪೈಲೆಟ್‍ನ ಸಮಯ ಪ್ರಜ್ಞೆಯಿಂದ ಪ್ರಾಣಾಪಾಯದಿಂದ ಪಾರಾದ ಇಬ್ಬರು ಸಚಿವರು

ಬೆಂಗಳೂರು,ಏ.28- ಪೈಲೆಟ್‍ನ ಸಮಯ ಪ್ರಜ್ಞೆಯಿಂದಾಗಿ ಸಚಿವರಿಬ್ಬರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಎಚ್‍ಎಎಲ್ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ನಡೆದಿದೆ. ಸಚಿವರಾದ ಮುರುಗೇಶ್ ಆರ್. ನಿರಾಣಿ ಹಾಗೂ ಎಂ.ಟಿ.ಬಿ.ನಾಗರಾಜ್ ಅವರುಗಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ಬೆಳಗ್ಗೆ ಎಚ್‍ಎಎಲ್ ವಿಮಾನ ನಿಲ್ದಾಣದಿಂದ ಎಂ.ಟಿ.ಬಿ.ನಾಗರಾಜ್ ಮತ್ತು ಮುರುಗೇಶ್ ನಿರಾಣಿ ಅವರು ಮೈಸೂರಿನ ಹುಣಸೂರು ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ನಡೆಯಬೇಕಿದ್ದ ಉದ್ಯಮಿಯಾಗು -ಉದ್ಯೋಗ ನೀಡು ಮತ್ತು ಕೈಗಾರಿಕಾ …

Read More »