Breaking News

Laxminews 24x7

ಕಟಾವಿಗೆ ಬಂದಿದ್ದ ಮೆಕ್ಕೆಜೋಳ ಸುಟ್ಟು ಭಸ್ಮ

ಹಾವೇರಿ: ವಿದ್ಯುತ್ ಟ್ರಾನ್ಸ್‌ಫಾರ್ಮರ್ ಬ್ಲಾಸ್ಟ್ ಆಗಿ ಕಟಾವಿಗೆ ಬಂದಿದ್ದ ಮೆಕ್ಕೆಜೋಳ ಸುಟ್ಟು ಭಸ್ಮವಾದ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಹೊಸಶಿಡೇನೂರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತ ಪರಮೇಶಪ್ಪ ನಂದೀಹಳ್ಳಿ ಎಂಬವರಿಗೆ ಸೇರಿದ್ದ ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳ ಸಂಪೂರ್ಣ ಸುಟ್ಟು ಭಸ್ಮವಾಗಿದೆ.  ಪರಮೇಶಪ್ಪ ಅವರು ತಮ್ಮ ನಾಲ್ಕು ಎಕರೆ ಜಮೀನಿನಲ್ಲಿ ಬೆಳೆದಿದ್ದು, ಸುಮಾರು ಎರಡೂವರೆ ಲಕ್ಷ ರೂಪಾಯಿ ಮೌಲ್ಯದ ಮೆಕ್ಕೆಜೋಳ ಸುಟ್ಟು ಕರಕಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ …

Read More »

ಮಹಾ ಶಿವರಾತ್ರಿ: ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಭಕ್ತರಿಗಾಗಿ ಹೊಸ ಆ್ಯಪ್ ಬಿಡುಗಡೆ

ಲಕ್ನೋ: ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರಿಗಾಗಿ ಶ್ರೀ ಕಾಶಿ ವಿಶ್ವನಾಥ ದೇವಸ್ಥಾನ ಟ್ರಸ್ಟ್ ನಿಂದ ಹೊಸ ಅಪ್ಲಿಕೇಶನ್ ಬಿಡುಗಡೆ ಮಾಡಲಾಗಿದೆ. ಮಹಾ ಶಿವರಾತ್ರಿಯ ಸಂದರ್ಭದಲ್ಲಿ ಕಾಶಿ ವಿಶ್ವನಾಥನ ದರ್ಶನ ಪಡೆಯಲು ಹಲವು ಭಕ್ತಾದಿಗಳು ತುಂಬಾ ದಿನದಿಂದ ಕಾಯುತ್ತಿರುತ್ತಾರೆ. ಭಕ್ತರಿಗಾಗಿ ದೇವಸ್ಥಾನ ಟ್ರಸ್ಟ್ ಒಂದು ಹೊಸ ಅಪ್ಲಿಕೇಶನ್ ಬಿಟ್ಟಿದೆ. ಈ ಅಪ್ಲಿಕೇಶನ್ ನಲ್ಲಿ ಭಕ್ತರು ನೋಂದಾಯಿಸಿಕೊಳ್ಳುವ ಮೂಲಕ ದರ್ಶನವನ್ನು ಪಡೆಯಬಹುದು. ಈ ಆ್ಯಪ್ ಮೂಲಕ ಯಾವ ವೇಳೆ ಕಾಶಿ ದರ್ಶನ …

Read More »

ಜಲಜೀವನ ಮಿಷನ್ ಯೋಜನೆ ಕಳಪೆಯಾದರೆ ಕ್ರಿಮಿನಲ್‌ ಮೊಕದ್ದಮೆ

ಶಿವಮೊಗ್ಗ: ‘ ಗ್ರಾಮೀಣ ಭಾಗದಲ್ಲಿ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರು ಒದಗಿಸುವ ಈ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಕಳಪೆ ಗುಣಮಟ್ಟದ ಕಾಮಗಾರಿ ಕಂಡುಬಂದರೆ ಅಧಿಕಾರಿಗಳನ್ನೇ ನೇರ ಹೊಣೆ ಮಾಡಲಾಗುವುದು. ಗುತ್ತಿಗೆದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಎಚ್ಚರಿಸಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿದರು. ಜಲಜೀವನ ಮಿಷನ್ ಯೋಜನೆ ಅನುಷ್ಠಾನದಲ್ಲಿ ಕರ್ನಾಟಕ ದೇಶದಲ್ಲಿ 14ನೇ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ …

Read More »

ಶಿವಕುಮಾರ್ ಗೂಂಡಾ, ಸಿದ್ದರಾಮಯ್ಯ ಜಾತಿವಾದಿ: ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ : ‘ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರು ಸರಿಯಾಗಿ ಕೆಲಸ ಮಾಡಿದರೆ ಗೂಂಡಾ ಡಿ.ಕೆ.ಶಿವಕುಮಾರ್, ಜಾತಿವಾದಿ ಸಿದ್ದರಾಮಯ್ಯ ಬಂದರೂ ಬಿಜೆಪಿ ಸೋಲಿಸಲು ಸಾಧ್ಯವಿಲ್ಲ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ವಾಗ್ದಾಳಿ ನಡೆಸಿದರು. ಶನಿವಾರ ಭದ್ರಾವತಿ ಕ್ಷೇತ್ರದ ಜೆಡಿಎಸ್‌ ಮುಖಂಡರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು, ‘ಜಾತಿ ಕುಲದ ಲೆಕ್ಕಾಚಾರ ಬದಿಗಿಟ್ಟು ಕೆಲಸ ಮಾಡಬೇಕು. ಲಿಂಗಾಯತರು, ಒಕ್ಕಲಿಗರು ಎನ್ನುತ್ತಾ ಜಾತಿಯ ಲೆಕ್ಕಾಚಾರಕ್ಕೆ ಅವಕಾಶ ಮಾಡಿಕೊಡಬಾರದು’ ಎಂದು ಹೇಳಿದರು. ‘ಎಲ್ಲರೂ ಹಿಂದೂಗಳು, ಹಿಂದುತ್ವ ಗೆಲ್ಲಿಸುತ್ತೇವೆ …

Read More »

ಮಗನ ಪ್ರಿಯತಮೆಗೆ ರೌಡಿಗಳಿಂದ ಧಮ್ಕಿ ಹಾಕಿಸಿದ ಪ್ರಭಾವಿ ರಾಜಕಾರಣಿ

ಬೆಂಗಳೂರು: ಪ್ರಭಾವಿ ರಾಜಕಾರಣಿಯೊಬ್ಬರು ಮಗನ ಪ್ರಿಯತಮೆಗೆ ರೌಡಿಗಳಿಂದ ಧಮ್ಕಿ ಹಾಕಿಸಿದ್ದಾರೆ. ರಾಜಕಾರಣಿ ಪುತ್ರನ ಗರ್ಲ್‍ಫ್ರೆಂಡ್‍ಗೆ ಹುಳಿಮಾವು ರೌಡಿಶೀಟರ್ ನಂದೀಶ್‍ನಿಂದ ಧಮ್ಕಿ ಆರೋಪ ವ್ಯಕ್ತವಾಗಿದೆ. ಬೆಂಗಳೂರು ಬಿಟ್ಟು ಹೋಗು, ಇಲ್ಲ ನಿನ್ನ ಖಾಸಗಿ ಫೋಟೋ ವೀಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಯುವತಿಯ ಖಾಸಗಿ ಫೋಟೋ ವೀಡಿಯೋಗಳನ್ನು ಅವಳ ತಂದೆ ಹಾಗೂ ಆಕೆಯ ಬಾಯ್‍ಫ್ರೆಂಡ್‍ಗೆ ವಾಟ್ಸಾಪ್ ಮಾಡಿದ್ದಾನೆ.  ಉತ್ತರ ಭಾರತದ 25 ವರ್ಷದ ಯುವತಿಯು ಆಗ್ನೇಯ ವಿಭಾಗ ಸೈಬರ್ ಕ್ರೈಂ ಪೊಲೀಸರಿಗೆ ರೌಡಿಶೀಟರ್ …

Read More »

ಅಸ್ಪೃಶ್ಯತೆ ಹೇಗಿರುತ್ತದೆ ಎಂಬ ಅರಿವಾಗಿದೆ’; ಗ್ರಾಮ ವಾಸ್ತವ್ಯದ ನಂತರ ಸಚಿವ ಆರ್ ಅಶೋಕ್ ಹೇಳಿಕೆ

ಉಡುಪಿ: ಗ್ರಾಮ ವಾಸ್ತವ್ಯದಲ್ಲಿ (Village Stay) ಹೊಸ ಅನುಭವ, ಹೊಸ ವಿಚಾರ ಸಿಕ್ಕಿದೆ. ಅಸ್ಪೃಷ್ಯತೆ ಹೇಗಿರುತ್ತದೆ ಎಂಬ ಅನುಭವ ನನಗೆ ಆಗಿದೆ ಎಂದು ಕಂದಾಯ ಸಚಿವ ಆರ್​.ಅಶೋಕ್ (R Ashok) ನುಡಿದಿದ್ದಾರೆ. ಉಡುಪಿಯ ಬ್ರಹ್ಮಾವರ ತಾಲೂಕಿನ ಕೆಂಜೂರಿನಲ್ಲಿ ಗ್ರಾಮ ವಾಸ್ತವ್ಯದ ನಂತರ ಅವರು ಮಾತನಾಡಿದರು. ಮುಖ್ಯ ವಾಹಿನಿಗೆ ಬಾರದ ನೂರಾರು ಜನಾಂಗಗಳಿವೆ. ಕಣ್ಣೆದುರು ಸಮಸ್ಯೆ ಇದ್ದರೂ ಕಣ್ಮುಚ್ಚಿಕೊಂಡು ಓಡಾಡುತ್ತಿದ್ದೇವೆ. ಜೀವನದಲ್ಲಿ ನೋಡದೆ ಇರುವ ಸತ್ಯಸಂಗತಿಗಳು ಅರಿವಾಗಿವೆ ಎಂದು ಆರ್​.ಅಶೋಕ್ ಅನುಭವ …

Read More »

ಶಾಸಕ ಜಮೀರ್ ಅಹ್ಮದ್ ವಿರುದ್ಧ ಭೂಕಬಳಿಕೆ ಆರೋಪ; ಎಫ್​ಐಆರ್​​ ದಾಖಲು

ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್​ಗೆ (Zameer Ahmed Khan) ಸಂಕಷ್ಟ ಎದುರಾಗಿದೆ. ಜಮೀರ್ ಹಾಗೂ ಕುಟುಂಬಸ್ಥರ ವಿರುದ್ಧ ಭೂಕಬಳಿಕೆ ಆರೋಪ ಎದುರಾಗಿದ್ದು, ಬೆಂಗಳೂರಿನ ಸಂಪಿಗೇಹಳ್ಳಿ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ನ್ಯಾಯಾಲಯದ ಆದೇಶದ ಮೇರೆಗೆ ಜಮೀರ್ ಅಹ್ಮದ್ ಹಾಗೂ ಸಹೋದರರ ವಿರುದ್ಧ ಎಫ್​ಐಆರ್ (FIR) ದಾಖಲು ಮಾಡಲಾಗಿದೆ. ಜಮೀರ್ ಕುಟುಂಬದ ವಿರುದ್ಧ ಶಾಹೀತಾ ನಾಸೀನ್, ತಸ್ನೀಮ್ ಫಾತೀಮಾ ಎಂಬುವವರು ನಿವೇಶನ ಕಬಳಿಕೆ ಯತ್ನ ಆರೋಪದಡಿ ಕೋರ್ಟ್​ಗೆ ಖಾಸಗಿ ದೂರು …

Read More »

ದಾವುದ್ ಅಲ್ಲ, ಅವರಪ್ಪ ಬಂದ್ರು ಕೂಡ ಏನು ಮಾಡಲು ಆಗಲ್ಲ: ಪ್ರಮೋದ್ ಮುತಾಲಿಕ್

ಬಾಗಲಕೋಟೆ: ಭಾರತದ ಮೇಲೆ ದಾಳಿ ನಡೆಸಲು ಪಾತಕಿ ದಾವುದ್ ಇಬ್ರಾಹಿಂ ಶಡ್ಯಂತ್ರ ಹಿನ್ನೆಲೆ ದಾವುದ್ ಅಲ್ಲ, ದಾವುದ್ ಅಪ್ಪ ಬಂದ್ರು ಕೂಡ ಏನು ಮಾಡಲು ಆಗುವುದಿಲ್ಲ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸವಾಲು ಹಾಕಿದ್ದಾರೆ. ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಾವುದ್ ಅಲ್ಲ, ದಾವುದ್ ಅಪ್ಪ ಬಂದ್ರು ಕೂಡ ಏನು ಮಾಡಲು ಆಗಲ್ಲ. ಇವತ್ತು ನಮ್ಮ ದೇಶದ ನಾಯಕತ್ವ ಬಹಳ ಪ್ರಕಾರವಾಗಿದೆ. ನರೇಂದ್ರ ಮೋದಿ ಅವರು ನಮ್ಮ ದೇಶದ ಸುರಕ್ಷತೆಯಲ್ಲಿ …

Read More »

ಅಕ್ರಮ ಪಡಿತರ ಅಕ್ಕಿ ಸಾಗಾಟ – ಇಬ್ಬರ ಬಂಧನ

ರಾಯಚೂರು: ನಗರದ ಗದ್ವಾಲ್ ರಸ್ತೆಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ದಂಧೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾಯಚೂರು ತಾಲೂಕಿನ ಚಂದ್ರಬಂಡಾ ಗ್ರಾಮದ ವೀರೇಶ್ ಹಾಗೂ ತಿಮ್ಮಾಪುರಪೇಟೆಯ ಈರಣ್ಣ ಬಂಧಿತ ಆರೋಪಿಗಳು. ಬಡವರಿಗೆ ಸೇರಬೇಗಿದ್ದ ಅಕ್ಕಿಯ ಚೀಲವನ್ನು ಆರೋಪಿಗಳು ಬದಲಿಸಿ ಸಾಗಾಟ ಮಾಡುತ್ತಿದ್ದರು. ಮಾಹಿತಿ ತಿಳಿದ ಮಾರ್ಕೆಟ್ ಯಾರ್ಡ್ ಪೊಲೀಸರು ದಾಳಿ ನಡೆಸಿ ಪಡಿತರ ಅಕ್ಕಿ ಸಮೇತ ವಾಹನ ಜಪ್ತಿ ಮಾಡಿದ್ದಾರೆ. ಪೊಲೀಸರು ತಪಾಸಣೆ ನಡೆಸಿದಾಗಿ 17 ಕ್ವಿಂಟಾಲ್ ಅಕ್ಕಿ …

Read More »

ಸಿಎಂಗೆ ಸ್ವಾಭಿಮಾನ ಇದ್ದರೆ ಬಚ್ಚಲು ಬಾಯಿ ಈಶ್ವರಪ್ಪರನ್ನು ವಜಾ ಮಾಡಲಿ: ಡಿಕೆಶಿ

ಬೆಂಗಳೂರು: ಸಿಎಂಗೆ ಸ್ವಾಭಿಮಾನ ಇದ್ದಿದ್ದರೆ ಈ ಬಚ್ಚಲು ಬಾಯಿಯ ಈಶ್ವರಪ್ಪರನ್ನು ವಜಾ ಮಾಡಬೇಕಿತ್ತು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿಡಿಕಾರಿದರು. ಯಾವ ಪಕ್ಷದವರು ಯಾವ ರೀತಿ ಮಾತನಾಡುತ್ತಿದ್ದಾರೆ ಎಂದು ಜನರು ಗಮನಿಸುತ್ತಿದ್ದಾರೆ. ನಿನ್ನೆ ಖರ್ಗೆಯವರು ಬಂದು ಬೆಂಬಲ ಕೊಟ್ಟರು. ಬೇರೆ ರಾಜ್ಯಗಳಿಂದಲೂ ಕರೆ ಬರುತ್ತಿವೆ. ಕರ್ನಾಟಕದ ಕಾಂಗ್ರೆಸ್ ಶಾಸಕರು ಒಳ್ಳೇ ಕೆಲಸ ಮಾಡ್ತಿದ್ದಾರೆ. ಧರಣಿ ಮಾಡುತ್ತಿರುವುದು ಒಳ್ಳೆಯದು ಎಂದು ಬೇರೆ ರಾಜ್ಯಗಳ ರಾಜಕಾರಣಿಗಳು ಹೇಳುತ್ತಿದ್ದಾರೆ ಎಂದು ಖರ್ಗೆ ಹೇಳಿದರು. ಈಶ್ವರಪ್ಪ …

Read More »