Breaking News

Laxminews 24x7

ರಣಕುಂಡೆಯೆ ಯುವಕನ ಕೊಲೆ ಪ್ರಕರಣ – ನಾಲ್ವರು ಆರೋಪಿಗಳು ಅರೆಸ್ಟ್

ಬೆಳಗಾವಿ: ರಣಕುಂಡೆಯೆ ಗ್ರಾಮದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಹಂತಕರನ್ನು ಪೊಲೀಸರ ಬಂಧಿಸಿದ್ದಾರೆ. ಬೆಳಗಾವಿ ತಾಲೂಕಿನ ರಣಕುಂಡೆಯೆ ಗ್ರಾಮದ ನಿವಾಸಿ ನಾಗೇಶ್ ಪಾಟೀಲ್(31)ನನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಪರಿಣಾಮ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ತನಿಖೆ ಪ್ರಾರಂಭಿಸಲಾಗಿತ್ತು. ಈ ಹಿನ್ನೆಲೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಇಬ್ಬರು ಆರೋಪಿಗಳು ತಪ್ಪಿಸಿಕೊಂಡಿದ್ದಾರೆ. ಅವರನ್ನು ಆದಷ್ಟು ಬೇಗ ಬಂಧನ ಮಾಡಲಾಗುತ್ತದೆ ಎಂದು ಕಮಿಷನರ್ …

Read More »

ಕಾಶ್ಮೀರಿ ಮುಸ್ಲಿಂ ಹುಡುಗಿ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ

ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮಂಗಳವಾರ(ಇಂದು) 26 ಹರೆಯಕ್ಕೆ ಕಾಲಿಟ್ಟಿದ್ದಾರೆ. ಈ ನಟಿಯ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸೋಶಿಯಲ್ ಮೀಡಿಯಾ ಸೇರಿದಂತೆ ಸಿನಿರಂಗದಿಂದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ರಶ್ಮಿಕಾ ಈ ಹುಟ್ಟು ಹಬ್ಬಕ್ಕೆ ವಿಶೇಷ ಎನ್ನುವಂತೆ ಇನ್ನೂ ಹೆಸರಿಡದ ಅವರ ಹೊಸ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದೆ. ಈ ವೀಡಿಯೋದಲ್ಲಿ ರಶ್ಮಿಕಾ ಅಪರೂಪದ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ. ಟಾಲಿವುಡ್ ಹೊಸ ಸಿನಿಮಾದಲ್ಲಿ ರಶ್ಮಿಕಾ ನಟಿಸುತ್ತಿದ್ದು, …

Read More »

ಸುಮಾರು ಒಂದು ಡಜನ್‍ಗೂ ಅಧಿಕ ಶಾಸಕರು ನಿನ್ನೆಯಿಂದಲೇ ದೆಹಲಿಗೆ ದೌಡ

ಬೆಂಗಳೂರು,ಏ.5- ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಶತಾಯಗತಾಯ ಸಂಪುಟಕ್ಕೆ ಸೇರ್ಪಡೆಯಾಗಲೇಬೇಕೆಂದು ಪಟ್ಟು ಹಿಡಿದಿರುವ ಆಕಾಂಕ್ಷಿಗಳ ದಂಡು ದೆಹಲಿಯಲ್ಲಿ ಲಾಬಿ ಆರಂಭಿಸಿದೆ. ಸುಮಾರು ಒಂದು ಡಜನ್‍ಗೂ ಅಧಿಕ ಶಾಸಕರು ನಿನ್ನೆಯಿಂದಲೇ ದೆಹಲಿಗೆ ದೌಡಾಯಿಸಿದ್ದು ತಮ್ಮ ತಮ್ಮ ಗಾಡ್‍ಫಾದರ್‍ಗಳ ಮೂಲಕ ಸಂಪುಟಕ್ಕೆ ತಮ್ಮನ್ನು ಪರಿಗಣಿಸುವಂತೆ ಒತ್ತಡದ ತಂತ್ರ ಅನುಸರಿಸುತ್ತಿದ್ದಾರೆ. ಇದರ ನಡುವೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಏಕಾಏಕಿ …

Read More »

ಧಾರ್ಮಿಕ ವಿಚಾರಗಳು ತಾರಕಕ್ಕೆ: ಕುತೂಹಲಕ್ಕೆ ಎಡೆಮಾಡಿದ ಸ್ವಾಮೀಜಿಗಳ ಹೆಚ್‌ಡಿಕೆ ಭೇಟಿ

ರಾಮನಗರ: ತಾಲೂಕಿನ ಬಿಡದಿ ಒಳಿ ಇರುವ ಕೇತಗಾನಹಳ್ಳಿಯ ಎಚ್.ಡಿ.ಕುಮಾರಸ್ವಾಮಿ ಅವರ ತೋಟಕ್ಕೆ ವಿವಿಧ ಮಠಾಧೀಶರು ಆಗಮಿಸಿದ್ದಾರೆ. ಸ್ವಾಮಿಜೀಗಳ ಭೇಟಿ ಕುತೂಹಲಕ್ಕೆ ಎಡೆಮಾಡಿದ. ರಾಜ್ಯದಲ್ಲಿ ಧಾರ್ಮಿಕ ವಿಚಾರಗಳು ತಾರಕಕ್ಕೇರುತ್ತಿರುವ ಬೆನ್ನಲ್ಲೆ ಮಾಜಿ ಸಿಎಂ ಹೆಚ್‌ಡಿಕೆ ಭೇಟಿಗೆ ಸ್ವಾಮೀಜಿಗಳ ಭೇಟಿ ಮಹತ್ವ ಪಡೆದುಕೊಂಡಿದೆ. ವಾಲ್ಮೀಕಿ ಗುರುಪೀಠದ ಬ್ರಹ್ಮಾನಂದ ಗುರೂಜಿ, ಈಡಿಗ ಮಠದ ಪ್ರಣವಾನಂದ ಸ್ವಾಮಿಜೀ ಬಂಜಾರ ಮಠದ ಸರ್ದಾರ್ ಸೇವಲಾಲ್ ಸ್ವಾಮಿಜೀ, ಬೋವಿ ಮಠದ ಗಂಗಾಧರೇಶ್ವರ ಸ್ವಾಮಿ ಸೇರಿದಂತೆ ವಿವಿಧ ಮಠಾಧೀಶರು ಕೇತಗಾನಹಳ್ಳಿಯ ತೋಟಕ್ಕೆ …

Read More »

ಎಲ್ಲ ಎಸ್ಸಿ-ಎಸ್ಟಿ ಸಮುದಾಯಗಳಿಗೆ ಮೊದಲ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ಪೂರೈಕೆ: ಸಿಎಂ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡದ ಎಲ್ಲ ಸಮುದಾಯಗಳಿಗೆ ಮೊದಲ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ಪೂರೈಸಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ವಿಧಾನಸೌಧದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಬಾಬು ಜಗಜೀವನರಾಂ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.   ಪ್ರಸ್ತುತ ಕೆಲವು ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಕುಟೀರ ಜ್ಯೋತಿ ಯೋಜನೆ ಅಡಿ 40 ಯೂನಿಟ್ ಉಚಿತವಾಗಿ ನೀಡಲಾಗುತ್ತಿದ್ದು, ಇದನ್ನು 75 ಯೂನಿಟ್ ಗೆ ಹೆಚ್ಚಿಸುವುದರ ಜತೆಗೆ …

Read More »

ಮೈಸೂರು: ನ್ಯಾಯಾಧೀಶರ ಮುಂದೆ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

ಮೈಸೂರು: ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಬೇಸತ್ತು ವ್ಯಕ್ತಿಯೋರ್ವರು ಮೈಸೂರು ನ್ಯಾಯಾಲಯದ ಹಿರಿಯ ಶ್ರೇಣಿ ನ್ಯಾಯಾಧೀಶರ ಮುಂದೆ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆಯಿತು. ನಗರದ ವಿದ್ಯಾರಣ್ಯಪುರಂ ನಿವಾಸಿ ಪ್ರಕಾಶ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಎಂದು ತಿಳಿದುಬಂದಿದೆ. ಪ್ರಕಾಶ್ ತನ್ನ ಪತ್ನಿ ಹಾಗೂ ಮಕ್ಕಳ ಜೊತೆ ವಾಸವಿದ್ದಾರೆ.‌ ಇವರ ತಾಯಿ ಹಾಗೂ ಸಹೋದರಿಯರು ಆಗಾಗ ಆಸ್ತಿ ವಿಚಾರಕ್ಕೆ ಜಗಳವಾಡುತ್ತಿದ್ದಾರಂತೆ. ಇದರಿಂದ ಬೇಸತ್ತ ಪ್ರಕಾಶ್ ಕುಟುಂಬ ಪಿತ್ರಾರ್ಜಿತ ಆಸ್ತಿ ಇರುವ ವಿದ್ಯಾರಣ್ಯಪುರಂನಲ್ಲಿ ವಾಸಿಸುತ್ತಿದ್ದಾರೆ. …

Read More »

ಪ್ರೀತಿಸಿ ಮದ್ವೆಯಾದ 7 ದಿನಕ್ಕೇ ಯುವತಿ ಬೀದಿಪಾಲು! 3 ದಿನದಲ್ಲಿ 2 ಬಾರಿ ಮದ್ವೆ

ತುಮಕೂರು: ಮನೆಯವರ ವಿರೋಧದ ನಡುವೆಯೂ ದೇವಸ್ಥಾನದಲ್ಲಿ ಪ್ರೇಯಸಿಯ ಕುತ್ತಿಗೆಗೆ ತಾಳಿ ಕಟ್ಟಿದ ಯುವಕ, ಜೀವನಪೂರ್ತಿ ನಿನ್ನೊಂದಿಗೇ ಇರುವೆ ಎಂದೂ ಮಾತೂ ಕೊಟ್ಟಿದ್ದ. ಇದಾದ ಮೂರು ದಿನಕ್ಕೆ ಸಬ್​ ರಿಜಿಸ್ಟ್ರಾರ್​ ಕಚೇರಿಯಲ್ಲಿ ಖುಷಿಯಾಗೇ ಮದುವೆ ನೋಂದಣಿ ಕೂಡ ಮಾಡಿಸಿಕೊಂಡ ಈ ಜೋಡಿ 6 ದಿನ ಸಂಸಾರವನ್ನೂ ನಡೆಸಿತ್ತು. ಎಲ್ಲವೂ ಸುಸೂತ್ರವಾಗಿ ನೆರವೇರಿತು, ಪ್ರೀತಿಸಿದ ಹುಡುಗ ಜೀವನ ಪೂರ್ತಿ ಸಂಗಾತಿಯಾಗಿ ಇರ್ತಾನೆ… ಇನ್ನು ತಮ್ಮದೇ ಆದ ಬದುಕು ಕಟ್ಟಿಕೊಂಡು ನೆಲೆಯೂರಬೇಕು ಅಂದುಕೊಳ್ಳುವಷ್ಟರಲ್ಲಿ ಯುವತಿ ಬಾಳಲ್ಲಿ …

Read More »

IPL 2022: RCB vs RR ಪಂದ್ಯದ ಡ್ರೀಮ್ ಟೀಂ, ಪ್ಲೇಯಿಂಗ್ 11, ಪಿಚ್ ರಿಪೋರ್ಟ್‌

ಮುಂಬೈನ ವಾಂಖೆಡೆ ಮೈದಾನದಲ್ಲಿಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹಾಗೂ ರಾಜಸ್ತಾನ್ ರಾಯಲ್ಸ್ (ಆರ್‌ಆರ್‌) ಮುಖಾಮುಖಿಯಾಗುತ್ತಿವೆ. ಐಪಿಎಲ್ 13ನೇ ಸೀಸನ್‌ನಲ್ಲಿ ಆರ್‌ಆರ್ ಮೊದಲೆರಡು ಪಂದ್ಯಗಳನ್ನ ಜಯಿಸಿ ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರಸ್ಥಾನದಲ್ಲಿದ್ದರೆ, ಆರ್‌ಸಿಬಿ ಒಂದು ಪಂದ್ಯ ಸೋಲು ಹಾಗೂ ಗೆಲುವನ್ನ ಕಂಡಿದೆ.   ಆರ್‌ಸಿಬಿ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೋಲನ್ನ ಕಂಡ ಬಳಿಕ, ಕೆಕೆಆರ್‌ ವಿರುದ್ಧ ಗೆದ್ದು ಕಂಬ್ಯಾಕ್ ಮಾಡಿದೆ. ಹೀಗಾಗಿ 2 ಪಾಯಿಂಟ್ಸ್‌ಗಳು ಆರ್‌ಸಿಬಿ ಖಾತೆಗೆ ಸೇರಿದೆ. …

Read More »

ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ! ಏನು ಗೊತ್ತಾ?

ಹಾಸನ : ಸುಂದರವಾದ ಹೆಣ್ಣು ಮಕ್ಕಳಿಗೆ ಅಂಗಾಂಗಳನ್ನ ಕಿತ್ತು ತಿನ್ನುತ್ತವೆ ಎಂದು ಕೋಡಿಮಠ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭಯಾನಕ ಭವಿಷ್ಯ ನುಡಿದಿದ್ದಾರೆ.   ಕೋಡಿಮಠದ ಶ್ರೀಗಳು ಈ ವರ್ಷದ ಭವಿಷ್ಯ ನುಡಿದಿದ್ದು, ಈ ವರ್ಷ ಮಳೆ ಕೆಂಡಮಂಡಲ, ಈ ಬಾರಿ ಮುಂಗಾರು ಮಳೆ ಚೆನ್ನಾಗಿ ಆಗಲಿದ್ದು, ಹಿಂಗಾರು ಮಳೆ ಕಡಿಮೆಯಾಗಲಿದೆ. ಅಶಾಂತಿ, ಮತೀಯ ಗಲಭೆಗಳಿಂದ ಹೆಚ್ಚು ಸಾವು, ಕೊಲೆಗಳಾಗಿವೆ ಎಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಭಾರತದಲ್ಲಿ ಈ …

Read More »

ಚಿಕನ್ ಖರೀದಿ ಮಾಡುವಾಗ ಗಲಾಟೆ – ಯುವಕ ಬರ್ಬರ ಹತ್ಯೆ

ಬೆಂಗಳೂರು: ಚಿಕನ್ ಖರೀದಿ ಮಾಡಲು ಹೋದ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಜೆಜೆ ನಗರದಲ್ಲಿ ನಡೆದಿದೆ. ಚಂದ್ರು ಕೊಲೆಯಾದ ಯುವಕ. ಜೆಜೆ ನಗರದ ಹಳೇ ಗುಡ್ಡದಹಳ್ಳಿಯಲ್ಲಿ ಘಟನೆ ನಡೆದಿದ್ದು, ಯುವಕ ಚಂದ್ರುನನ್ನು ಸೋಮವಾರ ರಾತ್ರಿ ದುಷ್ಕರ್ಮಿಗಳು ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ.  ನಡೆದಿದ್ದೇನು? ಅಂಜಪ್ಪ ಗಾರ್ಡನ್‍ನಲ್ಲಿ ಚಂದ್ರ ಬರ್ತ್‍ಡೇ ಪಾರ್ಟಿಗೆಂದು ಹೋಗಿದ್ದನು. ಈ ವೇಳೆ ಜೆಜೆ ನಗರದಲ್ಲಿ ಚಿಕನ್ ತರಲು …

Read More »