Breaking News

Laxminews 24x7

ಆರೋಗ್ಯ ಇಲಾಖೆ ಕಾರ್ಯಕ್ರಮದಲ್ಲಿ ಉರ್ದು ಬಳಕೆ ಮಾಡಿದ್ರೆ ಖಂಡಿಸುತ್ತೇನೆ: ಪ್ರದೀಪ್ ಈಶ್ವರ್

ಬೆಂಗಳೂರು: ಆರೋಗ್ಯ ಇಲಾಖೆ  ಕಾರ್ಯಕ್ರಮದಲ್ಲಿ ಉರ್ದು ಬಳಕೆ ಮಾಡಿರೋ ವಿಚಾರ ಗೊತ್ತಿಲ್ಲ ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್  ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಆರೋಗ್ಯ ಇಲಾಖೆ ಕಾರ್ಯಕ್ರಮದಲ್ಲಿ ಉರ್ದು ಭಾಷೆ ಬಳಕೆ ಮಾಡಿರೋ ಬಗ್ಗೆ ನನಗೆ ಗೊತ್ತಿಲ್ಲ. ನನ್ನ ಗಮನಕ್ಕೆ ಬಂದಿಲ್ಲ. ತಿಳಿದುಕೊಂಡು ಹೇಳುತ್ತೇನೆ ಎಂದರು. ನಮ್ಮಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ. ನಮ್ಮ ಮಣ್ಣಿನ ಭಾಷೆ, ನಮ್ಮ ತಾಯಿ ಭಾಷೆ ಕನ್ನಡನೇ. ಬೇರೆ ಭಾಷೆಗಳು ಹೊಟ್ಟೆ ತುಂಬಿಸಿಕೊಳ್ಳೋಕೆ, …

Read More »

ಮಾಜಿ ಪ್ರಧಾನಿ ದೇವೇಗೌಡರನ್ನ ಭೇಟಿಯಾಗಿ ಹೋರಾಟಕ್ಕೆ ಬೆಂಬಲ ಕೋರಿದ ಉದ್ಯೋಗಾಂಕ್ಷಿಗಳು

ಬೆಂಗಳೂರು: ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳಿಂದ ಮಂಗಳವಾರ (ಫೆ.24) ಪ್ರತಿಭಟನೆ ಮಾಡಿದ ಬೆನ್ನಲ್ಲೇ ಬುಧವಾರ (ಫೆ.25) ಮಾಜಿ ಪ್ರಧಾನಿ ದೇವೇಗೌಡರಿಗೆ  ಮನವಿ ಸಲ್ಲಿಕೆ ಮಾಡಿ, ಉದ್ಯೋಗಾಕಾಂಕ್ಷಿಗಳು ಬೆಂಬಲ ಕೇಳಿದರು. ಜೆಪಿ ಭವನದಲ್ಲಿ ದೇವೇಗೌಡರನ್ನ ಭೇಟಿಯಾದ ಉದ್ಯೋಗಾಕಾಂಕ್ಷಿಗಳು ಯುವಕರ ಹೋರಾಟಕ್ಕೆ ಬೆಂಬಲ ಕೊಡುವಂತೆ ಕೋರಿದರು. ದೇವೇಗೌಡ ಭೇಟಿ ಬಳಿಕ ಮಾತಾಡಿದ ಉದ್ಯೋಗಾಕಾಂಕ್ಷಿ ಲಕ್ಷ್ಮಿಕಾಂತ್, ಸರ್ಕಾರ ಪ್ರತಿ ವರ್ಷ 1ಲಕ್ಷ ಹುದ್ದೆ ಸೃಷ್ಟಿ ಮಾಡ್ತೇವೆ ಎಂದು ಹೇಳಿದ್ರು. ಆದ್ರೆ ಹುದ್ದೆಗಳ ಸೃಷ್ಟಿಸುವ ಕೆಲಸ ಮಾಡ್ತಿಲ್ಲ. ಸುಳ್ಳು …

Read More »

ಯುವ ವಿದ್ಯಾವಂತರ ಆಕ್ರೋಶಕ್ಕೆ ಗುರಿಯಾದರೆ ‘ಗ್ಯಾರಂಟಿ’ಗಳ ಸರ್ಕಾರ ಪತನವಾಗುವುದು ಗ್ಯಾರಂಟಿ: ಸಂಸದ ಈರಣ್ಣ ಕಡಾಡಿ ಎಚ್ಚರಿಕೆ

ಮೂಡಲಗಿ: ರಾಜ್ಯ ಸರ್ಕಾರದಿಂದ ಯಾವುದೇ ಹೊಸ ನೇಮಕಾತಿ ನಡೆಯದ ಕಾರಣ ಯುವಜನತೆಯ ವಯೋಮಿತಿ ಮೀರುತ್ತಿರುವ ಹಿನ್ನೆಲೆಯಲ್ಲಿ ದಂಗೆ ಎದ್ದಿದ್ದಾರೆ. ರಾಜ್ಯದಲ್ಲಿ ಸುಮಾರು 2.85 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದರೂ ಕೂಡ ಸರ್ಕಾರ ನೇಮಕಾತಿ ಮಾಡುವಲ್ಲಿ ನಿರಾಸಕ್ತಿ ವಹಿಸಿದೆ. ಕೇವಲ ಮುಖ್ಯಮಂತ್ರಿ ಕುರ್ಚಿ ಕಾಳಗ ನಡೆದಿದೆ ಹೊರತು ಬೇರೆ ಯಾವುದರ ಬಗ್ಗೆಯೂ ತಲೆ ಕೆಡಿಸಿಕೊಳ್ಳುತ್ತಿಲ್ಲ. ಹೀಗಾಗಿ ರಾಜ್ಯದ ಯುವಜನತೆ ಆಕ್ರೋಶಗೊಂಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಕಿಡಿಕಾರಿದರು. ಬುಧವಾರ …

Read More »

ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಬಗ್ಗೆ ಬಿಜೆಪಿ ತೀರ್ಮಾನ ಮಾಡಲಿ: ದೇವೇಗೌಡ

ಬೆಂಗಳೂರು: ಜಿಬಿಎ , ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಮಾಡುಕೊಳ್ಳುವ ಆಕಾಂಕ್ಷೆ ನಮಗೆ ಇದೆ. ಬಿಜೆಪಿ ಯಾವ ನಿಲುವು ತೆಗೆದುಕೊಳ್ಳುತ್ತೋ ಅದರ ಮೇಲೆ ನಾವು ತೀರ್ಮಾನ ಮಾಡ್ತೀವಿ ಅಂತ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ದೇವೇಗೌಡ ತಿಳಿಸಿದ್ದಾರೆ. ಮೈತ್ರಿ ಬಗ್ಗೆ ಜೆಪಿ ಭವನದಲ್ಲಿ ಮಾತಾಡಿದ ಅವರು, ನಾವು ಎನ್‌ಡಿಎ ಭಾಗವಾಗಿದ್ದೇವೆ. ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಬಿಜೆಪಿ-ಜೆಡಿಎಸ್ ಒಟ್ಟಾಗಿ ಹೋಗಬೇಕು ಅನ್ನೋದು ನಮ್ಮ ಆಕಾಂಕ್ಷೆ. ಇದರಲ್ಲಿ ಯಾವುದೇ ವ್ಯತ್ಯಾಸ ಇಲ್ಲ. …

Read More »

ಗೋಹತ್ಯೆ ತಡೆಗೆ ಬೆಳಗಾವಿಯಲ್ಲಿ ಸಂಕಲ್ಪ: ಗಣಪತಿ ಪಾದಕ್ಕೆ ಪತ್ರವನ್ನಿಟ್ಟು ವಿಶೇಷ ಪೂಜೆ

ಭಾರತದಲ್ಲಿ ಗೋಹತ್ಯೆ ಸಂಪೂರ್ಣ ನಿಷೇಧವಾಗಬೇಕು ಮತ್ತು ಗೋಮಾತೆಯನ್ನು ‘ರಾಷ್ಟ್ರಮಾತೆ’ ಎಂದು ಘೋಷಿಸಬೇಕು ಎಂಬ ರಾಷ್ಟ್ರವ್ಯಾಪಿ ಅಭಿಯಾನಕ್ಕೆ ಬೆಳಗಾವಿಯಲ್ಲಿ ಚಾಲನೆ ಸಿಕ್ಕಿದೆ. ಗಣಪತ್ ಗಲ್ಲಿಯ ಶ್ರೀ ಗಣೇಶನ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಗೋಭಕ್ತರು ಅಭಿಯಾನಕ್ಕೆ ನಾಂದಿ ಹಾಡಿದ್ದಾರೆ. ಭಾರತ ಭೂಮಿಯಿಂದ ಗೋಹತ್ಯೆಯನ್ನು ಸಂಪೂರ್ಣವಾಗಿ ತೊಡೆದುಹಾಕಲು ಮತ್ತು ಗೋಮಾಳ ಭೂಮಿಯನ್ನು ಸಂರಕ್ಷಿಸಲು ಆಗ್ರಹಿಸಿ ದೇಶಾದ್ಯಂತ ಬೃಹತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಇದರ ಭಾಗವಾಗಿ ಇಂದು ಬೆಳಗಾವಿಯ ಪ್ರಸಿದ್ಧ ಗಣಪತ್ ಗಲ್ಲಿಯ ಶ್ರೀ ಗಣೇಶನ …

Read More »

ಬಾಗಲಕೋಟೆ ಕಲ್ಲು ತೂರಾಟದ ಕಿಚ್ಚು: ಮುಧೋಳದಲ್ಲಿ ಬೃಹತ್ ಪ್ರತಿಭಟನೆ, ಮಾನವ ಸರಪಳಿ ನಿರ್ಮಿಸಿ ಆಕ್ರೋಶ

ಬಾಗಲಕೋಟೆಯಲ್ಲಿ ಶಿವಜಯಂತಿ ಮೆರವಣಿಗೆಯ ಮೇಲೆ ನಡೆದ ಕಲ್ಲು ತೂರಾಟದ ಘಟನೆ ಈಗ ಜಿಲ್ಲೆಯಾದ್ಯಂತ ಕಿಚ್ಚು ಹಚ್ಚಿದೆ. ಈ ಕೃತ್ಯವನ್ನು ಖಂಡಿಸಿ ಮುಧೋಳ ನಗರದಲ್ಲಿ ಇಂದು ವಿವಿಧ ಹಿಂದೂಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದ್ದು, ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿವೆ. ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆಯ ಸಂದರ್ಭದಲ್ಲಿ ನಡೆದ ಕಲ್ಲು ತೂರಾಟದ ಘಟನೆಯನ್ನು ಖಂಡಿಸಿ ಮುಧೋಳ ನಗರದಲ್ಲಿಂದು ಪ್ರತಿಭಟನೆಯ ಬಿಸಿ ಏರಿತ್ತು. ನಗರದ ಪ್ರಮುಖ ವೃತ್ತವಾದ …

Read More »

ಪ್ರಚೋದನಕಾರಿ ಭಾಷಣ; ಶಾಸಕ ಯತ್ನಾಳ್ ವಿರುದ್ಧ ಪ್ರಕರಣ ದಾಖಲು

  ಯಾದಗಿರಿಯ ಗುರುಮಠಕಲ್‌ನಲ್ಲಿ ನಡೆದ ಶಿವಾಜಿ ಜಯಂತಿ ಸಭೆಯಲ್ಲಿ ವಿವಾದಾತ್ಮಕ ಹಾಗೂ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ವಿರುದ್ಧ ಪೊಲೀಸರು ಮಂಗಳವಾರ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಒಂದು ಕೋಮಿನ ವಿರುದ್ಧ ಟೀಕೆ, “ಗಾಂಧೀಜಿ ಪಾಕಿಸ್ತಾನದ ಪಿತಾಮಹ’ ಎಂಬ ವಿವಾದಿತ ಹೇಳಿಕೆ ಹಾಗೂ ಪ್ರಚೋದನಾತ್ಮಕ ಮಾತುಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಗುರುಮಠಕಲ್ ಪೊಲೀಸ್‌ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 196, …

Read More »

ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿದ ದರ್ಶನ

ಬೆಂಗಳೂರು: ತಲೆ ದಿಂಬು, ಟಿವಿ ಆಯ್ತು ಈಗ ವಿಚಾರಣೆ ವೇಳೆ ನೇರ ಕೋರ್ಟ್ ಹಾಜರಾತಿಗೆ ನಟ ದರ್ಶನ್ ಮನವಿ ಮಾಡಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣವನ್ನು ತ್ವರಿತಗತಿಯಲ್ಲಿ ನಡೆಸುವಂತೆ, ಪ್ರತಿನಿತ್ಯ ವಿಚಾರಣೆ ನಡೆಸುವಂತೆ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ನಡೆಯಿತು. ಈ ವೇಳೆ, ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ನ್ಯಾಯಾಧೀಶರಿಗೆ ದರ್ಶನ್ ಧನ್ಯವಾದ ಹೇಳಿದರು. ಥ್ಯಾಂಕ್ಸ್ ಹೇಳಬಾರದು ನಮ್ಮ ಕೆಲಸ ಮಾತ್ರ ಮಾಡಿದ್ದೇವೆ, ಥ್ಯಾಂಕ್ಸ್ ಹೇಳುವ ಅಗತ್ಯವಿಲ್ಲ ಅಂತಾ ನ್ಯಾಯಾಧೀಶರು ತಿಳಿಸಿದರು. …

Read More »

ಆಸ್ತಿಗಾಗಿ ಮಗುವಿನ ಹಂತಕ ದೊಡ್ಡಪ್ಪನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಬೆಳಗಾವಿ ಕೋರ್ಟ್

ಆಸ್ತಿಗಾಗಿ ಕಂದಮ್ಮನನ್ನೇ ಬಲಿಪಡೆದ ಕ್ರೂರದೊಡ್ಡಪ್ಪನಿಗೆ ಬೆಳಗಾವಿ ನ್ಯಾಯಾಲಯ ತಕ್ಕ ಶಾಸ್ತಿ ಮಾಡಿದೆ. ಪುಟ್ಟ ಮಕ್ಕಳ ಸಾಕ್ಷ್ಯವನ್ನೇ ಪ್ರಮುಖವಾಗಿ ಪರಿಗಣಿಸಿದ ನ್ಯಾಯಾಧೀಶರು, ಹಂತಕನಿಗೆ ಸಾಯುವವರೆಗೂ ಕಂಬಿ ಎಣಿಸುವಂತೆ ಆದೇಶ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಾರುಗೋಪ್ಪ ಗ್ರಾಮದಲ್ಲಿ 2021ರಲ್ಲಿ ನಡೆದಿದ್ದ ಸಿದ್ಧಾರ್ಥ್ ಸಂಕನ್ನವರ ಎಂಬ ಆರು ವರ್ಷದ ಮಗುವಿನ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಐತಿಹಾಸಿಕ ತೀರ್ಪು ನೀಡಿದೆ. ತನ್ನ ತಮ್ಮ …

Read More »

ಶಾಲೆಗಳ ಮೂಲಸೌಕರ್ಯಕ್ಕೆ ಶಾಸಕ ಆಸೀಫ್ ಸೇಠ್ ಕಾಯಕಲ್ಪ: ಮಾಲಿ ಗಲ್ಲಿಯ ಸರ್ಕಾರಿ ಶಾಲೆಗಳಿಗೆ ಭೇಟಿ

ಬೆಳಗಾವಿಯ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶಾಸಕ ಆಸೀಫ್ ಸೇಠ್ ಅವರು ವಿಶೇಷ ಆದ್ಯತೆ ನೀಡುತ್ತಿದ್ದಾರೆ. ಇಂದು ಮಾಲಿ ಗಲ್ಲಿಯ ವಿವಿಧ ಶಾಲೆಗಳಿಗೆ ಭೇಟಿ ನೀಡಿದ ಅವರು, ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸುವ ಮೂಲಕ ಶಿಕ್ಷಣದ ಗುಣಮಟ್ಟಕ್ಕೆ ಪೂರಕವಾದ ಪರಿಸರ ನಿರ್ಮಿಸುವ ಭರವಸೆ ನೀಡಿದರು. ಬೆಳಗಾವಿಯ ಮಾಳಿ ಗಲ್ಲಿಯಲ್ಲಿರುವ ಸರ್ಕಾರಿ ಮರಾಠಿ ಹಿರಿಯ ಪ್ರಾಥಮಿಕ ಶಾಲೆ ನಂ. 4, ಉರ್ದು ಹಿರಿಯ ಪ್ರಾಥಮಿಕ ಶಾಲೆ ನಂ. 2 ಮತ್ತು ಸರ್ಕಾರಿ ಕನ್ನಡ …

Read More »