Breaking News

Laxminews 24x7

ಕಾರ್ ಹಾಗೂಬೈಕ್ ನಡುವೆ ಮುಖಾಮುಖಿ ಡಿಕ್ಕಿ:ಗಂಭೀರ ಗಾಯ

ಬೈಕ್ ಹಾಗೂ ಕಾರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಮೀಸಾಳೆ ಕ್ರಾಸ್ ಬಳಿ ನಡೆದಿದೆ. ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತಕ್ಕೆ ಎರಡು ವಾಹನಗಳ ಅತೀ ವೇಗವೇ ಕಾರಣ ಎನ್ನಲಾಗಿದೆ ಘಟನೆಯಲ್ಲಿ ಗಾಯಗೊಂಡಿವರಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಝಳಕಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

Read More »

ಬೆಳಗಾವಿಯ ಕಣಬರ್ಗಿಯಲ್ಲಿರುವ ಮಹೇಶ ಫೌಂಢೇಶನ್‍ನಲ್ಲಿ ವಿದ್ಯಾರ್ಥಿನಿಯರ ವಿನೂತನ ಮೂರು ಅಂತಸ್ತಿನ ಪ್ರತ್ಯೇಕ ವಿದ್ಯಾರ್ಥಿನಿಲಯದ ಉದ್ಘಾಟನಾ ಸಮಾರಂಭ

ಕುಂದಾನಗರಿ ಬೆಳಗಾವಿಯ ಕಣಬರ್ಗಿಯಲ್ಲಿರುವ ಮಹೇಶ ಫೌಂಢೇಶನ್‍ನಲ್ಲಿ ವಿದ್ಯಾರ್ಥಿನಿಯರ ವಿನೂತನ ಮೂರು ಅಂತಸ್ತಿನ ಪ್ರತ್ಯೇಕ ವಿದ್ಯಾರ್ಥಿನಿಲಯದ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಹೌದು, ಇಂದು ರವಿವಾರ ಬೆಳಗಾವಿಯ ಕಣಬರಗಿಯಲ್ಲಿ ಮೆಡಿಕಲ್ಲಿ ಚಾಂಲೇಂಜ್ಡ್ ಹಾಗೂ ಎಚ್‍ಐವಿ ಪೀಡಿತ ಮಕ್ಕಳ ಶಿಕ್ಷಣ, ಸಮತೋಲನ ಆಹಾರ ಹಾಗೂ ಉತ್ತಮ ಆರೋಗ್ಯ ಸೌಲಭ್ಯವನ್ನು ನೀಡುತ್ತಿರುವ ರಾಜ್ಯದ ಹೆಮ್ಮೆಯ ಸಾಮಾಜಿಕ ಸೇವಾ ಸಂಸ್ಥೆ ಮಹೇಶ ಫೌಂಢೇಶನ್ ನಲ್ಲಿ ವಿದ್ಯಾರ್ಥಿನಿಯರ ವಸತಿನಿಲಯದ ಮೂರು ಮಹಡಿಯ ಪ್ರತ್ಯೇಕ ವಿದ್ಯಾರ್ಥಿನಿಲಯದ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. …

Read More »

ಪೊಲೀಸ್ ಇನ್ಸ್ ಪೆಕ್ಟರ್ ಗೆ ಮ್ಮಂತವರನ್ನ ಬಹಳ ಜನ ನೋಡಿದ್ದೇನೆ.ಬಟ್ಟೆ ಬಿಚ್ಚಿಟ್ಟು ಮನೆಗೆ ಹೋಗಿ ಎಂದ ಹಿಂದೂ ಕಾರ್ಯಕರ್ತ

ಹುಬ್ಬಳ್ಳಿ: ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಕ್ವಾರ್ಟರ್ಸ್ ನಲ್ಲಿ ನಡೆದ ಕಳ್ಳತನ ಪ್ರಕರಣ ಸಂಬಂಧ ಪೊಲೀಸರಿಗೆ ಹಿಂದು ಸಂಘಟನೆಯ ಕಾರ್ಯಕರ್ತನೊಬ್ಬ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡು ಆವಾಜ್‌ ಹಾಕಿದ್ದಾನೆ. ಸದ್ಯ ಮಲ್ಲಿಕಾರ್ಜುನ್ ಸತ್ತಿಗೇರಿ ಎಂಬ ಹಿಂದು ಸಂಘಟನೆಯ ಕಾರ್ಯಕರ್ತ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಇನ್ಸ್‌ ಪೆಕ್ಟರ್‌ ಮಹಾಂತೇಶ ಹೊಳಿಗೆಗೆ ಆವಾಜ್‌ ಹಾಕಿದ್ದಾನೆ.   ಅಂದ ಹಾಗೇ ಹುಬ್ಬಳ್ಳಿ ವಿದ್ಯಾನಗರದ ಕಿಮ್ಸ್ ಆಸ್ಪತ್ರೆಯ ವಸತಿ ಗೃಹದಲ್ಲಿ ಸರಣಿ ಕಳ್ಳತನ ನಡೆದಿತ್ತು.ಈ ಸಂಬಂಧ ಇನ್ಸ್‌ ಪೆಕ್ಟರ್‌ …

Read More »

ಮಾಜಿ ಶಾಸಕ, ಕರಾವಳಿಯ ಭೀಷ್ಮ ಎ.ಜಿ. ಕೊಡ್ಗಿ ಇನ್ನಿಲ್ಲ

ಕುಂದಾಪುರ : ಕರಾವಳಿ ಜಿಲ್ಲೆಯ ರಾಜಕಾರಣದಲ್ಲಿ ಅಪರೂಪದ ರಾಜಕೀಯ ಚಾಣಾಕ್ಷ ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ (ಎ.ಜಿ. ಕೊಡ್ಗಿ) ಅವರು ಅಸೌಖ್ಯದಿಂದ ಸೋಮವಾರ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕರಾವಳಿ ಜಿಲ್ಲೆಯ ರಾಜಕಾರಣದಲ್ಲಿ ಅಪರೂಪದ, ರಾಜಕೀಯ ಚಾಣಾಕ್ಷನಾಗಿ ಸುದೀರ್ಘ‌ 56 ವರ್ಷಗಳ ಕಾಲ ತೊಡಗಿಸಿಕೊಂಡು, ತಾನು ಗುರುತಿಸಿಕೊಂಡ ಪಕ್ಷದಲ್ಲಿ ನಿಷ್ಠೆ ಹಾಗೂ ಬದ್ಧತೆಯನ್ನು ತೋರಿಸಿ, ಪಕ್ಷಕ್ಕೆ ತನ್ನ ಆವಶ್ಯಕತೆಯಿಲ್ಲ ಎಂದೆನಿಸಿದಾಗ ರಾಜಕೀಯದ ಪಡಸಾಲೆಯಿಂದ ನಿರ್ಗಮಿಸಿದವರು ಅಮಾಸೆಬೈಲು ಗೋಪಾಲಕೃಷ್ಣ ಕೊಡ್ಗಿ ಅವರು. ಕುಂದಾಪುರ …

Read More »

ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಯೂಥ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಎಸ್ಕೇಪ್

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಕೇಸ್ ಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಇಡಿ ಸಮನ್ಸ್ ಜಾರಿ ಖಂಡಿಸಿ ನವದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದು, ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆಯಲು ಮುಂದಾಗುತ್ತಿದ್ದಂತೆ ಯೂಥ್ ಕಾಂಗ್ರೆಸ್ ಅಧ್ಯಕ್ಷರು ಓಡಿ ಹೋಗಿ ತಪ್ಪಿಸಿಕೊಂಡ ಘಟನೆ ನಡೆದಿದೆ.   ಇಡಿ ಕಚೇರಿ ಬಳಿ ಯೂಥ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ನೇತೃತ್ವದಲ್ಲಿ ಯೂಥ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಪೊಲೀಸರು …

Read More »

ಮದ್ಯದಂಗಡಿಗೆ ಮಂಥ್ಲಿ ಫಿಕ್ಸ್: ಅಬಕಾರಿ ಇಲಾಖೆಯಲ್ಲಿ ಲಂಚಾವತಾರ; ಎಲ್ಲರಿಗೂ ಪಾಲು..

ಬೆಂಗಳೂರು :ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ 40 ಪರ್ಸೆಂಟ್ ಕಮೀಷನ್ ಆರೋಪಗಳ ಬೆನ್ನಲ್ಲೇ, ಸರ್ಕಾರದ ಖಜಾನೆಯ ಪ್ರಮುಖ ಸಂಪನ್ಮೂಲವಾಗಿರುವ ಅಬಕಾರಿ ಇಲಾಖೆಯಲ್ಲಿ ‘ಮಂಥ್ಲಿ ಮನಿ’ ಅಲಿಖಿತ ನಿಯಮವಾಗಿ ಮಾರ್ಪಟ್ಟಿದೆಯೆಂಬ ಮಾತು ಜೋರಾಗಿ ಕೇಳಿಬರುತ್ತಿದೆ. ರಾಜ್ಯದಲ್ಲಿರುವ ಪ್ರತಿಯೊಂದು ಮದ್ಯದಂಗಡಿಗೂ ‘ತಿಂಗಳ ವಂತಿಕೆ’ ಕಡ್ಡಾಯವಾಗಿದೆ. ಇದು ಇಲಾಖೆಯ ಇತರ ಲಂಚ-ರುಷುವತ್ತುಗಳಿಗೆ ಹೊರತಾದ ಮೊತ್ತ..! ಕೆಳಹಂತದ ಸಿಬ್ಬಂದಿಯಿಂದ ಹಿಡಿದು ಮೇಲಿನ ಅಧಿಕಾರಿಗಳವರೆಗೂ ಇದರಲ್ಲಿ ಪಾಲಿದೆ. ಒಂದೊಂದು ಜಿಲ್ಲೆಗೆ ಒಂದೊಂದು ರೀತಿ ಮಂಥ್ಲಿ ಮನಿ ಫಿಕ್ಸ್ ಮಾಡಲಾಗಿದೆ. …

Read More »

ರಾತ್ರಿಯಿಂದ ಜಿಲ್ಲೆಯಲ್ಲಿ 144ಸೆಕ್ಷನ್ ಜಾರಿ

ಬೆಳಗಾವಿ: ವಿಧಾನ ಪರಿಷತ್ತಿನ ಪದವೀಧರರ ಹಾಗೂ ಶಿಕ್ಷಕಕರ ಮತಕ್ಷೇತ್ರಗಳ ಮತದಾನ ಪ್ರಕ್ರಿಯೆ ಮುಗಿದಿರುವ ಹಿನ್ನೆಲೆ ಜೂನ್ 15 ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಹೀಗಾಗಿ ಶಾಂತಿಯುತ, ಸುವ್ಯವಸ್ಥಿತ ಮತ ಎಣಿಕೆ ಪ್ರಕ್ರಿಯೆ ಕಾರಣಕ್ಕಾಗಿ ಜೂನ್ 14ರ ಮಧ್ಯರಾತ್ರಿ 12 ಗಂಟೆಯಿಂದ ಜೂನ್ 15ರ ಮಧ್ಯರಾತ್ರಿ 12 ಗಂಟೆಯವರೆಗೆ ಮತ ಎಣಿಕಾ ಕೇಂದ್ರ ಜ್ಯೋತಿ ಪದವಿ ಪೂರ್ವ ಕಾಲೇಜಿನ 200 ಮೀಟರ್ ವ್ಯಾಪ್ತಿಯಲ್ಲಿ ಕಲಂ 144 ಜಾರಿಗೊಳಿಸಲಾಗಿದೆ. ನಿಷೇಧಾಜ್ಞೆ ಜಾರಿ …

Read More »

ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಯುವಕ

ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಓರ್ವ ಅಪರಿಚಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ದೇಸೂರ ರೈಲು ನಿಲ್ದಾಣದ ಬಳಿ ನಡೆದಿದೆ. ದೇಸೂರ ರೈಲು ನಿಲ್ದಾಣ ಹಾಗೂ ಕೆಎಲ್‍ಇ ಇಂಜಿನಿಯರಿಂಗ್ ಕಾಲೇಜ್ ರೈಲ್ವೇ ಗೇಟ್ ಹತ್ತಿರ ಈ ಘಟನೆ ಸಂಭವಿಸಿದೆ. ಅಂದಾಜು 25 ವಯಸ್ಸಿನ ಯುವಕನಾಗಿದ್ದು. 5.7 ಅಡಿ ಎತ್ತರ, ಸಾದ ಗೆಂಪು ಬಣ್ಣ, ಮೈಯಿಂದ ತೆಳ್ಳಗೆ, ಉದ್ದು ಮುಖ, ನೀಟಾದ ಮೂಗು, ತಲೆಯಲ್ಲಿ 2 ಇಂಚ ಕಪ್ಪು ಕೂದಲು …

Read More »

ದುಫದಾಳದಲ್ಲಿ ಕುಡುಕರ ಹಾವಳಿಯಿಂದ ಸಾರ್ವಜನಿಕರಿಗೆ ತೊಂದರೆ

ದುಫದಾಳದ ಚರ್ಚ್ ಪಕ್ಕದಲ್ಲಿರುವ ಮೈದಾನದಲ್ಲಿ ರಾತ್ರಿಯ ವೇಳೆ ಕಿಡಿಗೇಡಿಗಳು ಮದ್ಯಪಾನ ಮಾಡಿ ಬಾಟಲಿಗಳನ್ನು ಒಡೆದು ಹೋಗುತ್ತಿದ್ದಾರೆ. ಇದರಿಂದ ಇಲ್ಲಿ ಓಡಾಡುವಂತಹ ಜನರಿಗೆ ತೊಂದರೆಯಾಗುತ್ತಿದೆ ಹಾಗಾಗಿ ಇಂದು ಕರ್ನಾಟಕ ವಿಶ್ವನಿರ್ಮಾಣ ಸೇನೆ ದುಫದಾಳ ಗ್ರಾಮ ಘಟಕ ವತಿಯಿಂದ ಮೈದಾನದಲ್ಲಿ ಸ್ವಚ್ಚತಾ ಕಾರ್ಯ ಹಮ್ಮಿಕೊಳ್ಳಲಾಗಿತ್ತು. ದುಫದಾಳದ ಚರ್ಚ್ ಪಕ್ಕದಲ್ಲಿರುವ ಮೈದಾನದಲ್ಲಿ ರಾತ್ರಿಯ ವೇಳೆ ಕಿಡಿಗೇಡಿಗಳು ಮದ್ಯಪಾನ ಮಾಡಿ ಬಾಟಲಿಗಳನ್ನು ಒಡೆದು ಎಲ್ಲಂದರಲ್ಲಿ ಬಿಸಾಡಿ ಹೋಗುತ್ತಿದ್ದಾರೆ. ಇದರಿಂದ ಸಾರ್ವಜನಿಕರಿಗೆ ಹಾಗೂ ಅಲ್ಲಿ ಆಟವಾಡಲು ಹೋಗುವ …

Read More »

ಬೆಂಗಳೂರಿನ ಇಡಿ ಕಚೇರಿ ಎದುರು ಪ್ರತಿಭಟಿಸುತ್ತಿದ್ದ ಕಾಂಗ್ರೆಸ್​ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು: ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿಗೆ ಜಾರಿ ನಿರ್ದೇಶನಾಲಯವು ನೋಟಿಸ್ ನೀಡಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ನಾಯಕರು ಬೆಂಗಳೂರಿನ ಇಡಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ನಗರದ ಲಾಲ್ ಬಾಗ್ ಗೇಟ್ ಮುಂಭಾಗದಲ್ಲಿ ಪ್ರತಿಭಟನೆ ಆರಂಭಿಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಇಡಿ ಕಚೇರಿಗೆ ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದರು. ಲಾಲ್ ಬಾಗ್ ಗೇಟ್​​ನಿಂದ ಶಾಂತಿನಗರದ ಟಿಡಿಎಂಸಿ ಬಳಿಯ ಇಡಿ ಕಚೇರಿಗೆ ಕಾಲ್ನಡಿಗೆ ಮೂಲಕ ಮೆರವಣಿಗೆ ನಡೆಸಿ, ಕೇಂದ್ರ ಸರ್ಕಾರ, …

Read More »