ಬೆಂಗಳೂರು: ವಿಧಾನ ಪರಿಷತ್ ಟಿಕೆಟ್ ತಪ್ಪಿರುವ ಬಗ್ಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯ ವಿಲ್ಲ, ವಿಜಯೇಂದ್ರನಿಗೆ ಭವಿಷ್ಯದಲ್ಲಿ ದೊಡ್ಡ ಅವಕಾಶ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್ .ಯಡಿಯೂರಪ್ಪ ಬುಧವಾರ ಹೇಳಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ವಿಜಯೇಂದ್ರಗೆ ಮುಂದೆ ಬೇರೆ ಬೇರೆ ಅವಕಾಶ ಗಳು ಇದ್ದಾವೆ ಇವಾಗ ಬಿಜೆಪಿ ಉಪಾಧ್ಯಕ್ಷ ರಾಗಿದ್ದಾರೆ. ಮುಂದೆ ಅವಕಾಶ ಗಳನ್ನು ಹೈಕಮಾಂಡ್ ಮಾಡಿಕೊಡುತ್ತದೆ ಎಂದರು. ಮುಂದಿನ ಚುನಾವಣೆ ವಿಜಯೇಂದ್ರ ಸ್ಪರ್ಧೆ …
Read More »ಕ್ರಿಕೆಟ್ ಬೆಟ್ಟಿಂಗ್ಗಾಗಿ ದ್ವಿಚಕ್ರ ವಾಹನಗಳನ್ನುಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೋಜಿನ ಜೀವನ ಹಾಗೂ ಕ್ರಿಕೆಟ್ ಬೆಟ್ಟಿಂಗ್ಗಾಗಿ ದ್ವಿಚಕ್ರ ವಾಹನಗಳನ್ನುಕಳವು ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಲಕ್ಷಾಂತರ ರೂ. ಕಳೆದುಕೊಂಡು ಸಾಲ ತೀರಿಸಲು ಮನೆಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಯುವಕನೊಬ್ಬನನ್ನು ಭಾರತೀ ನಗರ ಪೊಲೀಸರು ಬಂಧಿಸಿದ್ದಾರೆ. ಆಂಧ್ರ ಪ್ರದೇಶದ ಕುಪ್ಪಂ ಜಿಲ್ಲೆಯ ಲಕ್ಷ್ಮೀಪತಿ (24) ಬಂಧಿತ. ಆರೋಪಿಯಿಂದ 4 ಲಕ್ಷ ರೂ.ಮೌಲ್ಯದ 10 ದ್ವಿಚಕ್ರ ವಾಹನಗಳನ್ನು …
Read More »ಮಸೀದಿ ಕುರಿತು ತಾಂಬೂಲ ಪ್ರಶ್ನೆ; ಬಿಜೆಪಿ ಈ ರಾಜ್ಯವನ್ನು ಕೊಲ್ಲುತ್ತಿದೆ :ಡಿಕೆಶಿ
ಬೆಂಗಳೂರು: ಬಿಜೆಪಿ ಹಾಗೂ ಕೆಲವು ಸಂಘಟನೆಗಳ ವೈಯಕ್ತಿಕ ನಂಬಿಕೆಗಳನ್ನು ನಾವು ಪ್ರಶ್ನೆ ಮಾಡಲು ಸಾಧ್ಯವಿಲ್ಲ. ಆದರೆ ಅವು ಅದನ್ನು ಬೇರೆಯವರ ಮೇಲೆ ಹೇರಬಾರದು. ಸಾರ್ವಜನಿಕ ಭಾವನೆಗಳನ್ನು ಕೆರಳಿಸುವ ಪ್ರಯತ್ನ ಮಾಡಬಾರದು. ಅದು ತಪ್ಪು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿ, ಮಂಗಳೂರಿನ ಮಳಲಿ ಮಸೀದಿ ವಿಚಾರವಾಗಿ ವಿಶ್ವ ಹಿಂದೂ ಪರಿಷತ್ ನಾಯಕರು ಹಾಗೂ ಬಿಜೆಪಿ ಶಾಸಕರು ತಾಂಬೂಲ …
Read More »ಬೆಂಗಳೂರಿನಲ್ಲಿ ಐಕಿಯ ಸ್ಟೋರ್:ಸಿಇಓ ಜೆಸ್ಪರ್ ಬ್ರಾಡಿನ್ ಜತೆ ಸಿಎಂ ಚರ್ಚೆ
ದಾವೋಸ್ : ಇಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಇಂಗ್ಕಾ ಗ್ರೂಪ್ (ಐಕಿಯ) ಸಿಇಓ ಜೆಸ್ಪರ್ ಬ್ರಾಡಿನ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ರಾಜ್ಯದಲ್ಲಿ ಐಕಿಯ ಸ್ಟೋರ್ ತೆರೆಯುತ್ತಿರುವ ಹಿನ್ನೆಲೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಜೂನ್ ನಲ್ಲಿ ನಾಗಸಂದ್ರದಲ್ಲಿ ಐಕಿಯ ಸ್ಟೋರ್ ತೆರೆಯಲಿದ್ದು, ಜೆಸ್ಪರ್ ಬ್ರಾಡಿನ್ ಅವರು ಉದ್ಘಾಟನೆಗೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದರು. ಐಕಿಯದ ಭಾರತೀಯ ಕೇಂದ್ರ ಕಚೇರಿಯೂ ಬೆಂಗಳೂರಿನಲ್ಲಿದ್ದು ಪೀಠೋಪಕರಣಗಳ ತಯಾರಿಕೆಯ ಸಂದರ್ಭದಲ್ಲಿ ಬಿದಿರು …
Read More »ಮೇ ಅಂತ್ಯಕ್ಕೆ ರಾಜ್ಯದ ಜನತೆಗೆ ಗುಡ್ ನ್ಯೂಸ್?
ಬೆಂಗಳೂರು: ದಾವೋಸ್ನಿಂದ ನಾಳೆ ಬೆಳಗ್ಗೆ ಸಿಎಂ ರಾಜ್ಯಕ್ಕೆ ವಾಪಸ್ ಆಗಲಿದ್ದು, ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಇಳಿಕೆ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಭೆ ನಡೆಸುವ ಸಾಧ್ಯತೆ ಇದೆ. ದಾವೋಸ್ನಿಂದ ಬಂದ ಬಳಿಕ ಆರ್ಥಿಕ ಇಲಾಖೆ, ವಾಣಿಜ್ಯ ಇಲಾಖೆಗಳ ಹಿರಿಯ ಅಧಿಕಾರಿಗಳ ಜೊತೆ ಸಿಎಂ ಸಭೆ ನಡೆಸುವ ಸಾಧ್ಯತೆ ಇದ್ದು, ಸಭೆಯಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಇಳಿಕೆಯ ಕುರಿತು ನಿರ್ಧಾರವಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮೇ ಅಂತ್ಯಕ್ಕೆ ರಾಜ್ಯದ …
Read More »ಆಂಬ್ಯುಲೆನ್ಸ್ನಲ್ಲೇ ಹೆರಿಗೆ ಮಾಡಿಸಿದ 108 ಸಿಬ್ಬಂದಿ
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಬೆಳಗುರ್ಕಿ ಗ್ರಾಮದ ಗರ್ಭಿಣಿಗೆ ಆಸ್ಪತ್ರೆ ಮಾರ್ಗ ಮಧ್ಯೆಯೇ ಆಂಬ್ಯುಲೆನ್ಸ್ನಲ್ಲಿ ಹೆರಿಗೆಯಾಗಿದೆ. ಹೆರಿಗೆ ನೋವು ತೀವ್ರವಾಗಿ ಕಾಣಿಸಿಕೊಂಡಿದ್ದರಿಂದ 108 ಸಿಬ್ಬಂದಿ ಹೆರಿಗೆ ಮಾಡಿಸಿದ್ದಾರೆ. ಪ್ರಸ್ತುತ ತಾಯಿ ಪಾರ್ವತಿ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ತಾಯಿ-ಮಗಳು ಆರೋಗ್ಯವಾಗಿ ಇದ್ದಾರೆ. ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆ ಬಾದರ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲು ಆಂಬ್ಯುಲೆನ್ಸ್ಗೆ ಕರೆ ಮಾಡಲಾಗಿತ್ತು. ಆದರೆ ಆಸ್ಪತ್ರೆ ಮಾರ್ಗ ಮಧ್ಯೆದಲ್ಲೇ ನೋವು ತೀವ್ರಗೊಂಡಿದ್ದರಿಂದ ಶುಶ್ರೂಷಕ ಬಸವರಾಜ್ …
Read More »ಎಸ್ಸೆಸ್ಸೆಲ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಮಾಗಡಿಯ ಖಾಸಗಿ ಶಾಲೆಯ ಕ್ಲರ್ಕ್ನನ್ನು ಬಂಧಿಸಿದ್ದಾರೆ.
ರಾಮನಗರ: ಎಸ್ಸೆಸ್ಸೆಲ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಮಾಗಡಿಯ ಖಾಸಗಿ ಶಾಲೆಯ ಕ್ಲರ್ಕ್ನನ್ನು ಬಂಧಿಸಿದ್ದಾರೆ. ಮಾಗಡಿಯ ಕೆಂಪೇಗೌಡ ಪ್ರೌಢಶಾಲೆಯ ಕ್ಲರ್ಕ್ ರಂಗೇಗೌಡ ಬಂಧಿತ ಆರೋಪಿ. ಇತ್ತೀಚೆಗೆ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ವಿಜ್ಞಾನ ಪತ್ರಿಕೆಯು ವಾಟ್ಸಪ್ ಮೂಲಕ ಸೋರಿಕೆ ಆಗಿತ್ತು. ಬೆಳಗ್ಗೆ 10.30ಕ್ಕೆ ಪರೀಕ್ಷೆ ಆರಂಭವಾಗಿತ್ತು. ಅದೇ ಸಮಯದಲ್ಲಿ ಪ್ರಶ್ನೆ ಪತ್ರಿಕೆಯನ್ನು ಹೆಡ್ ಮಾಸ್ಟರ್ ಹಾಗೂ ಶಿಕ್ಷಕರಿರುವ ಗ್ರೂಪ್ನಲ್ಲೇ ಶೇರ್ ಮಾಡಲಾಗಿತ್ತು. ಇದಲ್ಲದೇ ಕೆಂಪೇಗೌಡ ಶಾಲೆ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಉತ್ತಮ …
Read More »ಬಡವರಿಗಲ್ಲ, ರೈಸ್ ಮಿಲ್ಗಳಿಗೆ ಸೇರುತ್ತಿದೆ ‘ಅನ್ನಭಾಗ್ಯ’ ಅಕ್ಕಿ
ಕೋಲಾರ: ಬಡವರ ಹಸಿವು ನೀಗಿಸಲು ಸರ್ಕಾರ ಕೊಡುತ್ತಿರುವ ಅನ್ನಭಾಗ್ಯ ಯೋಜನೆಯ ಅಕ್ಕಿ ಜಿಲ್ಲೆಯ ಬಂಗಾರಪೇಟೆಯ ಕಾಳಸಂತೆಯಲ್ಲಿ ರಾಜಾರೋಷವಾಗಿ ಮಾರಾಟವಾಗುತ್ತಿದೆ. ಮಾರಾಟವಾದ ಅಕ್ಕಿಯು ಅಕ್ರಮವಾಗಿ 15ಕ್ಕೂ ಹೆಚ್ಚು ರೈಸ್ ಮಿಲ್ಗಳನ್ನು ಸೇರುತ್ತಿವೆ. ಹಲವು ಬಾರಿ ದಾಳಿ ನಡೆದರೂ ದಂಧೆ ಮಾತ್ರ ನಿಂತಿಲ್ಲ. ಈ ಹಿಂದೆ ಬಂಗಾರಪೇಟೆ ರೈಲ್ವೆ ನಿಲ್ದಾಣದಲ್ಲಿ 2017ರಲ್ಲಿ ಟನ್ಗಟ್ಟಲೆ ಪಡಿತರ ಅಕ್ಕಿಯನ್ನು ಆಹಾರ ಇಲಾಖೆ ಅಧಿಕಾರಿಗಳು ಸೀಜ್ ಮಾಡಿದ್ದರು. ಕಳೆದ ವರ್ಷ ಪಿಆರ್ಎಸ್ ಆಗ್ರೋಟೆಕ್ ರೈಸ್ ಮಿಲ್ ಮೇಲೆ ದಾಳಿ …
Read More »ಬೆಳಗಾವಿಯಲ್ಲಿ ಮಾವು ಮೇಳ ಮೇ 26ರಿಂದ
ಬೆಳಗಾವಿ: ತೋಟಗಾರಿಕೆ ಇಲಾಖೆಯಿಂದ ರೈತರಿಂದ ನೇರವಾಗಿ ಗ್ರಾಹಕರಿಗೆ ಗುಣಮಟ್ಟದ ಮಾವಿನ ಹಣ್ಣುಗಳನ್ನು ಯೋಗ್ಯ ದರದಲ್ಲಿ ತಲುಪಿಸುವ ಉದ್ದೇಶದಿಂದ ನಗರದ ಕ್ಲಬ್ ರಸ್ತೆಯಲ್ಲಿರುವ ಹ್ಯೂಮ್ ಪಾರ್ಕ್ನಲ್ಲಿ ಮೇ 26ರಿಂದ ಮೇ 29ರವರೆಗೆ ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಲಾಗಿದೆ. ‘ಜಿಲ್ಲೆಯ ಮಾವು ಬೆಳೆಗಾರರು ಈ ಅವಕಾಶ ಸದ್ಬಳಕೆ ಮಾಡಿಕೊಳ್ಳಬೇಕು. ತಮ್ಮ ಉತ್ಪನ್ನವನ್ನು ಮಧ್ಯವರ್ತಿಗಳ ಹಾವಳಿ ಇಲ್ಲದೆ ಯೋಗ್ಯ ಬೆಲೆಗೆ ಮಾರಬಹುದು. ವಿಷೇಶವಾಗಿ ಈ ಬಾರಿ ಬೆಳಗಾವಿ, ಧಾರವಾಡ ಹಾಗೂ ರತ್ನಗಿರಿ ರೈತರಿಂದ …
Read More »ಇಂಡೊ-ಅಮೆರಿಕನ್ ಪ್ರೆಸ್ ಕ್ಲಬ್ನಿಂದ ಕೆಎಲ್ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಅವರಿಗೆ ‘ಜೀವಮಾನ ಸಾಧನೆ’ ಪ್ರಶಸ್ತಿ ನೀಡಿ ಗೌರವಿ
ಬೆಳಗಾವಿ: ನ್ಯೂಯಾರ್ಕ್ನ ಭಾರತೀಯ ರಾಯಭಾರಿ ಕಚೇರಿಯಲ್ಲಿ ಮೇ 21ರಂದು ನಡೆದ ಸಮಾರಂಭದಲ್ಲಿ ಅಮೆರಿಕದ ಇಂಡೊ-ಅಮೆರಿಕನ್ ಪ್ರೆಸ್ ಕ್ಲಬ್ನಿಂದ ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಅವರಿಗೆ ‘ಜೀವಮಾನ ಸಾಧನೆ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಉತ್ತರ ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಗ್ರಾಮೀಣ ಜನರಿಗೆ ಗುಣಮಟ್ಟದ ಶಿಕ್ಷಣ, ಆರೋಗ್ಯ ಸೇವೆ ಒದಗಿಸುತ್ತಿರುವುದನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ. ಭಾರತೀಯ ರಾಯಭಾರಿ ಕಚೇರಿಯ ಕನ್ಸೂಲ್ ಜನರಲ್ ರಣಧೀರ ಜೈಸ್ವಾಲ್ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಭಾರತೀಯ …
Read More »
Laxmi News 24×7