Breaking News

Laxminews 24x7

ಸಿಲಿಕಾನ್ ಸಿಟಿ ಫ್ಲೈಓವರ್‌ನಲ್ಲಿ ಭೀಕರ ಅಪಘಾತ – ಸವಾರ ಸಾವು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಫ್ಲೈಓವರ್‌ನಲ್ಲಿ ಇಂದು ಮುಂಜಾನೆಯೇ ಬೈಕ್‌ ಸವಾರ ಮೃತಪಟ್ಟಿದ್ದಾನೆ. ಬೆಂಗಳೂರಿನ ಜಕ್ಕೂರು ಏರೊಡ್ರಮ್ ಬಳಿ ಘಟನೆ ನಡೆದಿದ್ದು, ಏರ್‌ಪೋರ್ಟ್ ಫ್ಲೈಓವರ್ ಮೇಲೆ ಬೈಕ್‍ನಲ್ಲಿ 45 ವರ್ಷದ ಸವಾರ ಮತ್ತು ಹಿಂಬದಿಯಲ್ಲಿ 12 ವರ್ಷದ ಬಾಲಕ ಕುಳಿತುಕೊಂಡಿದ್ದ. ಬೈಕ್ ಎಡಬದಿಯಲ್ಲಿ ಹೋಗುತ್ತಿದ್ದರೂ ಕಾರೊಂದು ರಭಸವಾಗಿ ಬಂದು ಗುದ್ದಿದೆ. ಪರಿಣಾಮ ವಾಹನ ಸವಾರ ಫ್ಲೈ ಓವರ್ ಮೇಲಿಂದ ಕೆಳಗೆ ಬಿದ್ದು ಕೊನೆಯುಸಿರೆಳೆದಿದ್ದಾನೆ. ಬಾಲಕನಿಗೆ ಗಂಭೀರ ಗಾಯವಾಗಿದೆ. ಆಕ್ಸಿಡೆಂಟ್ ಆದ ಸ್ಥಳದಿಂದ …

Read More »

ತುಂಗಭದ್ರಾ ಜಲಾಶಯಕ್ಕೆ ವಾಡಿಕೆಗೂ ಮೊದಲೇ ಭಾರೀ ಒಳ ಹರಿವು ಹೆಚ್ಚಾಳವಾಗಿದ್ದು, ಡ್ಯಾಂ ಹಿನ್ನೀರಿನ ಬೆಳೆ ಜಲಾವೃತ

ಕೊಪ್ಪಳ: ತುಂಗಭದ್ರಾ ಜಲಾಶಯಕ್ಕೆ ವಾಡಿಕೆಗೂ ಮೊದಲೇ ಭಾರೀ ಒಳ ಹರಿವು ಹೆಚ್ಚಾಳವಾಗಿದ್ದು, ಡ್ಯಾಂ ಹಿನ್ನೀರಿನ ಬೆಳೆ ಜಲಾವೃತವಾಗಿವೆ. ಕೊಪ್ಪಳ ತಾಲೂಕಿನ ತಿಗರಿ ಗ್ರಾಮದಲ್ಲಿನ ಹಿನ್ನೀರಿನಲ್ಲಿ ಮೆಕ್ಕೆಜೋಳ ಬೆಳೆ ನೀರು ಪಾಲಾಗಿದೆ. ಇದರಿಂದ ರೈತ ಮಂಜುನಾಥ್ ಕಂಗಲಾಗಿದ್ದಾರೆ. ಸಾಮಾನ್ಯವಾಗಿ ಜುಲೈ ಕೊನೆಯ ವಾರ ಟಿಬಿ ಡ್ಯಾಂನಲ್ಲಿ ಹೆಚ್ಚಿನ ಒಳ ಹರಿವು ಹೆಚ್ಚಾಗುತ್ತದೆ. ಆದರೆ ಈ ಬಾರಿ ತುಂಗಭದ್ರಾ ಜಲಾಶಯಕ್ಕೆ ನಿರೀಕ್ಷೆಗೂ ಮೊದಲೇ 85 ಸಾವಿರ ಕ್ಯೂಸೆಕ್ ಒಳ ಹರಿವು ಹೆಚ್ಚಾಗಿದ್ದು, ಸದ್ಯ ಜಲಾಶಯದಲ್ಲಿ …

Read More »

ಅಪಘಾತದಲ್ಲಿ ಮೃತಪಟ್ಟ 9 ಮಂದಿಯ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ

ಧಾರವಾಡ: ಬಾಡಾ ಗ್ರಾಮದ ಬಳಿ ಶನಿವಾರ ಮದುವೆ ನಿಶ್ಚಿತಾರ್ಥ ಮುಗಿಸಿಕೊಂಡು ಬರುವಾಗ ನಿಗದಿ ಗ್ರಾಮದ 9 ಜನ ಮದುಮಗನ ಕಡೆಯವರು ಸಾವನ್ನಪ್ಪಿದ್ದರು. ಈ ಹಿನ್ನೆಲೆ 5 ಲಕ್ಷ ರೂ. ಪರಿಹಾರವನ್ನು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಇಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಮೃತ ಕುಟುಂಬಕ್ಕೆ ಪರಿಹಾರ ಕೊಡಿಸುವುದಾಗಿ ಭರವಸೆ ಕೊಟ್ಟಿದ್ದರು. ಈ ಹಿನ್ನೆಲೆ ಬೊಮ್ಮಾಯಿ ಅವರು ಟ್ವೀಟ್ ಮಾಡುವ ಮೂಲಕ ಪರಿಹಾರವನ್ನು ಘೋಷಿಸಿದ್ದಾರೆ. ಈ ಬಗ್ಗೆ ಟ್ವಿಟ್ಟರ್‍ನಲ್ಲಿ ಬರೆದುಕೊಂಡಿರುವ …

Read More »

ಇಂಟರ್‌ವ್ಯೂಗೆಂದು ಹೋದ ಯುವತಿ, ಟ್ಯಾಲಿಕ್ಲಾಸ್‌ಗೆ ಹೋಗ್ತೀನೆಂದಿದ್ದ ಯುವಕ – ಆತ್ಮಹತ್ಯೆ!

ಉಡುಪಿ: ಬೆಂಗಳೂರಿನ ಪ್ರೇಮಿಗಳಿಬ್ಬರು ಕಾರಿನಲ್ಲೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಆತ್ಮಹತ್ಯೆಗೂ ಮುನ್ನ ನಡೆದಿದ್ದೇನು ಎನ್ನುವ ಇಂಟರೆಸ್ಟಿಂಗ್ ಸ್ಟೋರಿ ಇಲ್ಲಿದೆ. ಕಳೆದ ಮೂರು ದಿನಗಳ ಹಿಂದೆಯೇ ಮಿಸ್ಸಿಂಗ್ ಕಂಪ್ಲೈಂಟ್‌ ದಾಖಲಾಗಿತ್ತು. ಯುವತಿ ತಾಯಿ ರತ್ನಮ್ಮ ಹಾಗೂ ಮೃತ ಯುವಕನ ತಂದೆ ವೆಂಕಟರಮನ್ ರಾವ್ ಅವರಿಂದ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆಗೂ ಮುನ್ನ ನಡೆದಿದ್ದೇನು?: ಮೇ 19ರಂದು ಇಂಟರ್‌ವ್ಯೂಗೆ …

Read More »

ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಕಲ್ಲೆಸೆದ ಕಿಡಿಗೇಡಿಗಳು

ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಕಿಡಿಗೇಡಿಗಳು ಕಲ್ಲು ತೂರಿರುವ ಘಟನೆ ಬೆಳಗಾವಿ ತಾಲೂಕಿನ ಬೆಂಡಿಗೇರಿ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಬೆಂಡಿಗೇರಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರಾಯಣ್ಣನ ಮೂರ್ತಿಗೆ ಕಲ್ಲು ತೂರಿ, ಸ್ಥಳದಿಂದ ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಘಟನೆಯಲ್ಲಿ ರಾಯಣ್ಣನ ಮೂರ್ತಿಯ ಕಾಲಿನ ಭಾಗದಲ್ಲಿ ಹಾನಿಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಜಮಾಯಿಸಿದ ರಾಯಣ್ಣ ಅಭಿಮಾನಿಗಳು ತೀವ್ರ ಆಕ್ರೋಶವನ್ನು ಹೊರ ಹಾಕಿದ್ದಾರೆ.  ಬೆಂಡಿಗೇರಿ ಗ್ರಾಮಕ್ಕೆ ಹಿರೇಬಾಗೇವಾಡಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ …

Read More »

ಗೋಕಾಕ ನಗರದಲ್ಲಿ ಹೆರಾಯಿನ್,ಗಾಂಜಾ ವಶ:ನಾಲ್ವರ ಬಂಧನ

ಗೋಕಾಕ ನಗರದಲ್ಲಿ ಹೆರಾಯಿನ್,ಗಾಂಜಾ ವಶ:ನಾಲ್ವರ ಬಂಧನನಿಷೇಧಿತ ಹೆರಾಯಿನ್ ಮಾರಾಟ ಮಾಡುತ್ತಿದ್ದ ಬೆಳಗಾವಿಯ ಮೂವರು ಮತ್ತು ಖರೀದಿಗೆ ಮುಂದಾಗಿದ್ದ ಗೋಕಾಕದ ಒಬ್ಬನನ್ನು ಗೋಕಾಕ್ ನಗರದಲ್ಲಿ ಬಂಧಿಸಿರುವ ಪೊಲೀಸರು ಭಾರಿ ಪ್ರಮಾಣದಲ್ಲಿ ಪೆನ್ನಿಯನ್ನು ವಶಪಡಿಸಿಕೊಂಡಿದ್ದಾರೆ. ಗೋಕಾಕ ಪಿಡಬ್ಲೂಡಿ ಐಬಿಯ ಹತ್ತಿರ ಬೆಳಗಾವಿಯ ಅಬ್ದುಲ್‌ಖಾದಿರ @ಜಿಯಾ ನಾಯಿಕ, ಮೋಸಿನ್ ಜಮಾದಾರ ಮತ್ತು ಸಲ್ಮಾನ ಮುಲ್ಲಾ ಇವರು ತಮ್ಮ ಕಾರ್ (ನಂಬರ ಕೆಎ-5l-ಎಮ್ ಸಿ0787 ನೇದ್ದರಲ್ಲಿ) ನಲ್ಲಿ ನಿಷೇಧಿತ ಹೇರಾಯಿನ್ (ಪೆನ್ನಿ) ಮಾದಕ ವಸ್ತು ಮತ್ತು …

Read More »

ಪಾಕ್ ಮಹಿಳಾ​ ಏಜೆಂಟ್ ಜೊತೆ ಹನಿಟ್ರ್ಯಾಪ್​.. ಸಿಕ್ಕಬಿದ್ದ ಭಾರತೀಯ ಯೋಧ

ಜೈಪುರ್​(ರಾಜಸ್ಥಾನ): ಪಾಕಿಸ್ತಾನದ ಮಹಿಳಾ ಏಜೆಂಟ್​ ಜೊತೆ ಹನಿಟ್ರ್ಯಾಪ್​​ನಲ್ಲಿ ಸಿಲುಕಿಕೊಂಡು ಭಾರತೀಯ ಸೇನೆಯ ಗೌಪ್ಯ ಮಾಹಿತಿ ಮತ್ತು ಕಾರ್ಯತಂತ್ರದ ಮಾಹಿತಿ ಹಂಚಿಕೊಂಡಿದ್ದಕ್ಕಾಗಿ ಯೋಧನೋರ್ವನ ಬಂಧನ ಮಾಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಗುಪ್ತಚರ ವಿಭಾಗದ ಡಿಜಿ ಉಮೇಶ್ ಮಿಶ್ರಾ ಮಾಹಿತಿ ಹಂಚಿಕೊಂಡಿದ್ದಾರೆ. ಭಾರತೀಯ ಯೋಧ ಪ್ರದೀಪ್ ಕುಮಾರ್​ ಪಾಕಿಸ್ತಾನ ಗುಪ್ತಚರ ಇಲಾಖೆಯ ಮಹಿಳಾ ಏಜೆಂಟ್​ ಜೊತೆ ಸಂಪರ್ಕದಲ್ಲಿದ್ದರು. ಕಳೆದ ಕೆಲ ದಿನಗಳಿಂದ ಅವರ ಮೇಲೆ ತೀವ್ರ ನಿಗಾ ವಹಿಸಿ, ಇದೀಗ ಬಂಧನಕ್ಕೊಳಪಡಿಸಲಾಗಿದೆ. ಮಹಿಳಾ ಏಜೆಂಟ್ ಜೊತೆ …

Read More »

LPG ಗ್ರಾಹಕರಿಗೆ ಕೇಂದ್ರದಿಂದ ಗುಡ್ ನ್ಯೂಸ್; ಪ್ರತಿ ಸಿಲಿಂಡರ್ ಗೆ 200 ರೂ. ಸಹಾಯಧನ

ನವದೆಹಲಿ: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ನಡುವ ಕೇಂದ್ರ ಸರ್ಕಾರ ಬಡವರಿಗೆ ಸಿಹಿ ಸುದ್ದಿ ನೀಡಿದೆ. ಪ್ರತಿ ಸಿಲಿಂಡರ್ ಖರೀದಿಗೆ 200 ರೂ. ಸಹಾಯಧನ ನೀಡಲಾಗುವುದು. ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಪ್ರತಿ ಗ್ಯಾಸ್ ಸಿಲಿಂಡರ್‌ ಗೆ (12 ಸಿಲಿಂಡರ್‌ ಗಳವರೆಗೆ) 200 ರೂ. ಸಬ್ಸಿಡಿ ನೀಡುತ್ತೇವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಟ್ವೀಟ್ ಮಾಡಿದ್ದಾರೆ. ಮಹತ್ವದ ಬೆಳವಣಿಗೆಯಲ್ಲಿ ಪೆಟ್ರೋಲ್ ಮೇಲಿನ ಅಬಕಾರಿ …

Read More »

ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿ ಮೇಲೆ ಎಸಿಬಿ ದಾಳಿ, ಡಿಸಿ ಮಂಜುನಾಥ್​ ವಿರುದ್ದವೂ ದೂರುದಾರ ಅರೋಪ

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿ ಹಬ್ಬಿದೆ ಎಂಬ ಪ್ರತತಿಪಕ್ಷಗಳ ಕೂಗಿನ ಮಧ್ಯೆ ರಾಜಧಾನಿ ಬೆಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ಇಂದು ಶನಿವಾರ ದಾಳಿ ನಡೆಸಿದ್ದಾರೆ. ಜಿಲ್ಲಾಧಿಕಾರಿ ಜೆ. ಮಂಜುನಾಥ್ ಕಚೇರಿಯಲ್ಲಿ ಕಳೆದ ಅರ್ಧ ಗಂಟೆಯಿಂದ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) 6 ಮಂದಿ ಅಧಿಕಾರಿಗಳ ತಂಡದಿಂದ ಡಿಸಿ ಕಚೇರಿ ಮೇಲೆ ದಾಳಿ ನಡೆದಿದೆ. ಡಿಸಿ ಕಚೇರಿಗೆ ಹಲವು ಹಿರಿಯ ಅಧಿಕಾರಿಗಳನ್ನ ಕರೆಸಿಕೊಂಡ ಎಸಿಬಿ ಅಧಿಕಾರಿಗಳು …

Read More »

ಸಂಭಾವ್ಯ ಪ್ರವಾಹ ಮತ್ತು ಅತೀವೃಷ್ಟಿ ನಿಯಂತ್ರಣ ಸಲುವಾಗಿ ಪೂರ್ವಭಾವಿ ಸಭೆ

ಗೋಕಾಕ: ನಿರಂತರ ಮಳೆ ಹಾಗೂ ಮುಂದೆ ಬರಬಹುದಾದ ಪ್ರವಾಹ ಭೀತಿಯನ್ನು ಎದುರಿಸುವ ಸಲುವಾಗಿ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ತಾಲೂಕಾ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ಪರಿಶಿಷ್ಟ ಪಂಗಡ ಕಲ್ಯಾಣಾಧಿಕಾರಿಗಳಾದ ಶ್ರೀ ಬಸವರಾಜ ಕುರಿಹುಲಿ ಅವರು ತಾಲೂಕಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ತಹಶೀಲ್ದಾರ ಕಛೇರಿಯಲ್ಲಿ ಅತಿವೃಷ್ಟಿ ಮತ್ತು ಪ್ರವಾಹ ನಿಯಂತ್ರಣದ ಬಗ್ಗೆ ಕರೆಯಲಾದ ಪೂರ್ವಭಾವಿ ಸಭೆಯಲ್ಲಿ ಪಂಚಾಯತ ಮಟ್ಟದ ನೋಡಲ್ ಅಧಿಕಾರಿಗಳು ಮತ್ತು ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳನ್ನು …

Read More »