Breaking News

Laxminews 24x7

ರೈತರ ಪ್ರತಿಭಟನೆ ಪರ ಧ್ವನಿಯೆತ್ತಿ ವಿವಾದಕ್ಕೀಡಾದ ಗಾಯಕಿ ರಿಹಾನ್ನಾ ಮೇಲೆ ಮತ್ತೊಂದು ವಿವಾದ

ನ್ಯೂಯಾರ್ಕ್‌: ಭಾರತದಲ್ಲಿನ ರೈತರ ಪ್ರತಿಭಟನೆ ಪರ ಧ್ವನಿಯೆತ್ತಿ, ವಿವಾದಕ್ಕೀಡಾಗಿದ್ದ ಖ್ಯಾತ ಪಾಪ್‌ ಗಾಯಕಿ ರಿಹಾನ್ನಾ ಮತ್ತೂಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಗಣೇಶನ ಪದಕವುಳ್ಳ ನೆಕ್ಲೇಸ್‌ ಧರಿಸಿ, ಟಾಪ್‌ಲೆಸ್‌ನಲ್ಲಿ ಪೋಸು ಕೊಟ್ಟ ಫೋಟೋವೊಂದನ್ನು ರಿಹಾನ್ನಾ ಟ್ವಿಟರಿನಲ್ಲಿ ಪೋಸ್ಟ್‌ ಮಾಡಿದ್ದಾರೆ. “ಅರೆಬೆತ್ತಲೆ ರೂಪದ ರಿಹಾನ್ನಾ, ತನ್ನ ಮೈಮಾಟದ ಪ್ರದರ್ಶನಕ್ಕಾಗಿ ಹಿಂದೂ ದೇವರನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಮುಗಿಲು ಮುಟ್ಟಿದೆ. “ಭಾರತವನ್ನು, ಹಿಂದೂ ಧರ್ಮವನ್ನು ಅವಹೇಳನ ಮಾಡುವುದನ್ನು ನಿಲ್ಲಿಸಿ’ ಎಂದು …

Read More »

ಹಳ್ಳಿಗೆ ಹೋದವರಿಗೆ ಕೆಲಸ ಕೊಡುವಲ್ಲಿ ಯಶಸ್ವಿ

ಮಾರ್ಚ್‌ ಮೊದಲ ವಾರದಲ್ಲಿ ರಾಜ್ಯ ಬಜೆಟ್‌ ಮಂಡನೆಯಾಗಲಿದೆ. ಒಂದು ರೀತಿಯಲ್ಲಿ ಇದು ಮರುನಿರ್ಮಾಣದ ಬಜೆಟ್‌. ಜನಪ್ರಿಯ ಯೋಜನೆಗಳಿಗಿಂತ ಕೃಷಿ, ಆರೋಗ್ಯ, ಉದ್ಯೋಗ ಸೃಷ್ಟಿ, ಸಂಚಾರ- ಸಾರಿಗೆ ಸುಧಾರಣೆ, ಕೈಗಾರಿಕೆಗಳಿಗೆ ಪ್ರೋತ್ಸಾಹ, ವ್ಯಾಪಾರ- ವಾಣಿಜ್ಯ ಚಟುವಟಿಕೆಗೆ ಉತ್ತೇಜನ ಮತ್ತು ಅನಗತ್ಯ ವೆಚ್ಚ, ಸಂಪನ್ಮೂಲ ಸೋರಿಕೆ ತಡೆಯುವುದು ಬಜೆಟ್‌ನ ಆದ್ಯತೆಗಳಾಗಬೇಕಾಗಿದೆ. ಇದು ಉದಯವಾಣಿ ಆಶಯವೂ ಹೌದು. ಗ್ರಾಮಾಭಿವೃದ್ಧಿ ಇಲಾಖೆಯ ಒಟ್ಟಾರೆ ವರದಿ ಇಲ್ಲಿದೆ. ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಪ್ರಸಕ್ತ …

Read More »

ಸಿದ್ದರಾಮಯ್ಯ ಹೈಕಮಾಂಡ್‌ ಭೇಟಿ : ಅಹಿಂದ ಸಮಾವೇಶಕ್ಕೆ ರಾಹುಲ್‌ ಒಪ್ಪಿಗೆ?

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಸಮುದಾಯವಾರು ಸಮಾವೇಶಗಳನ್ನು ಆಯೋಜಿಸುವ ಸಿದ್ದರಾಮಯ್ಯ ಪ್ರಸ್ತಾವಕ್ಕೆ ರಾಹುಲ್‌ ಗಾಂಧಿ ಹಸುರು ನಿಶಾನೆ ತೋರಿದ್ದಾರೆ. ಆದರೆ ಕೆಪಿಸಿಸಿ ಅಧ್ಯಕ್ಷರ ಸಹಿತ ರಾಜ್ಯದ ಎಲ್ಲ ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಸಮಾವೇಶಗಳು ಪಕ್ಷಕ್ಕೆ ಪರ್ಯಾಯ ಎಂಬ ಸಂದೇಶ ರವಾನೆಯಾಗಬಾರದು ಎಂದು ರಾಹುಲ್‌ ಗಾಂಧಿ ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಮುದಾಯಗಳ ನೋವಿಗೆ, ಸಮಸ್ಯೆಗಳಿಗೆ ಧ್ವನಿಯಾಗಿ ಸಮಾವೇಶ ಆಯೋಜಿಸಲು ಅಥವಾ ಆಯೋಜನೆಯಾಗುವ ಸಮಾವೇಶಗಳಲ್ಲಿ …

Read More »

ಜಗತ್ತಿನ ಎಲ್ಲೆಡೆ ಭಾರತದ ಅಲೆ : ಅತ್ಯುನ್ನತ ಹುದ್ದೆಗಳಲ್ಲಿ ಭಾರತೀಯರ ಮಿಂಚು

ಹೊಸದಿಲ್ಲಿ: ಜಗದೆಲ್ಲೆಡೆ ಚದುರಿ, ನೆಲೆ ಕಂಡಿರುವ ಭಾರತೀಯರು ಆಯಾ ರಾಷ್ಟ್ರಗಳಲ್ಲಿ ನಾಯಕತ್ವದ ಮೂಲಕ ಗಮನ ಸೆಳೆಯುತ್ತಿದ್ದಾರೆ. ಅಮೆರಿಕದ “ಇಂಡಿಯಾನ್ಪೊರಾ’ ಪ್ರಕಟಿಸಿರುವ “ಗವರ್ನ್ಮೆಂಟ್‌ ಲೀಡರ್ಸ್‌- 2021’ರ ಪಟ್ಟಿಯ ಪ್ರಕಾರ ಬರೋಬ್ಬರಿ 15 ರಾಷ್ಟ್ರಗಳಲ್ಲಿ ಭಾರತೀಯರೇ ಚಾಲಕ ಸ್ಥಾನಗಳಲ್ಲಿ ಇದ್ದಾರೆ. 15 ದೇಶಗಳಲ್ಲಿ ನಿರ್ಣಾಯಕರು 15 ರಾಷ್ಟ್ರಗಳಲ್ಲಿ ಸಾರ್ವಜನಿಕ ಸೇವೆ, ಅತ್ಯುನ್ನತ ಹುದ್ದೆಗಳಲ್ಲಿ ಭಾರತೀಯ ಮೂಲದವರೇ ಇದ್ದಾರೆ. ಈ ಪೈಕಿ 60 ನಾಯಕರು ಕ್ಯಾಬಿನೆಟ್‌ ದರ್ಜೆಯ ಸ್ಥಾನಮಾನ ಹೊಂದಿರುವುದು ವಿಶೇಷ. ಎಲ್ಲೆಲ್ಲೂ ಭಾರತೀಯರು …

Read More »

ವಿವಾದಿತ ಸ್ಥಳದಿಂದ ಚೀನ ಅಕ್ರಮ ಟೆಂಟು ತೆರವು : ವಿಡಿಯೋ ಬಿಡುಗಡೆ ಮಾಡಿದ ಭಾರತೀಯ ಸೇನೆ

ಹೊಸದಿಲ್ಲಿ: ಲಡಾಖ್‌ನ ಎಲ್‌ಎಸಿಯ ವಿವಾದಿತ ಸ್ಥಳದಿಂದ ಚೀನ ಸೇನೆ ವಾಪಸಾತಿ ಕೈಗೊಳ್ಳುತ್ತಿರುವ ವೀಡಿಯೊವೊಂದನ್ನು ಭಾರತೀಯ ಸೇನೆ ಮಂಗಳವಾರ ಬಿಡುಗಡೆ ಮಾಡಿದೆ. ಹಿಮಬೆಟ್ಟದ ನೆತ್ತಿ ಮೇಲೆ ಹೂಡಿದ್ದ ಅಕ್ರಮ ಟೆಂಟ್‌ಗಳನ್ನು ಪಿಎಲ್‌ಎ ಸೈನಿಕರು ಕೀಳುತ್ತಿರುವ ದೃಶ್ಯಗಳು ವೀಡಿಯೋದಲ್ಲಿವೆ. ಯುದ್ದೋಪಕರಣಗಳನ್ನು ಹೊತ್ತು ಪರ್ವತದಿಂದ ಇಳಿಯುತ್ತಾ, ತಮಗಾಗಿ ಕಾಯುತ್ತಿರುವ ಟ್ರಕ್‌ನತ್ತ ಚೀನೀ ಸೈನಿಕರು ಧಾವಿಸುತ್ತಿರುವ ದೃಶ್ಯಗಳನ್ನು ಝೂಮ್‌ ನೋಟದಲ್ಲಿ ವೀಡಿಯೋ ತೋರಿಸಿದೆ. ನಿರ್ಮಾಣಗಳು ಉಡೀಸ್‌: ಅಲ್ಲದೆ ಈ 10 ತಿಂಗಳಲ್ಲಿ ಸೈನಿಕರು ತಂಗಲು, ಯುದ್ದೋಪಕರಣಗಳನ್ನು …

Read More »

BREAKING: ದೇಶದ ಜನತೆಗೆ ಮತ್ತೊಂದು ಶಾಕಿಂಗ್ ನ್ಯೂಸ್ – 9 ನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ನವದೆಹಲಿ: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ 9ನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ. ತೈಲ ಬೆಲೆ ಏರಿಕೆ ವಿರುದ್ಧ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಇದರ ನಡುವೆಯೇ ತೈಲದ ಬೆಲೆ ಏರಿಕೆ ಪೈಸೆಗಳ ಲೆಕ್ಕದಲ್ಲಿ ಏರಿಕೆಯಾಗಿ 100 ರೂ. ಸನಿಹಕ್ಕೆ ಬಂದಿದೆ. ಇವತ್ತು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ತಲಾ 25 ಪೈಸೆಯಷ್ಟು ಹೆಚ್ಚಳವಾಗಿದೆ. ದೆಹಲಿಯಲ್ಲಿ ಒಂದು ಲೀಟರ್ …

Read More »

ಕನಸಿನಲ್ಲೂ ಬಿಜೆಪಿ ಹೆಸರು ಕೇಳಿದರೆ ಜನರು ಬೆವರುವಂತಾಗಿದೆ: ಚನ್ನರಾಜ ಹಟ್ಟಿಹೊಳಿ

ಬೆಳಗಾವಿ – ಪೆಟ್ರೋಲ್, ಡಿಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೇಲೆ ದಿನದಿಂದ ದಿನಕ್ಕೆ ಗಗನಮುಖಿಯಾಗಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ, ಎಲ್ಲಿದೆ ಬಿಜೆಪಿಯ ಅಚ್ಛೇ ದಿನ್ ಎಂದು ಪ್ರಶ್ನಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಕೊರೋನಾದಿಂದ ತತ್ತರಿಸಿದ್ದ ಜನರಿಗೆ ಈಗ ಬೆಲೆ ಏರಿಕೆಯ ಬರೆ ಬಿದ್ದಿದೆ. ಜನಸಾಮಾನ್ಯರ ಗೋಳನ್ನು ಕೇಳುವವರಿಲ್ಲ ಎಂದು ಕಿಡಿಕಾರಿದ್ದಾರೆ. ಜನರು ಕೊರೋನಾದಿಂದಾಗಿ ಇನ್ನೂ ಚೇತರಿಸಿಕೊಂಡಿಲ್ಲ. ಆದಾಯವಿಲ್ಲದೆ ಹೊತ್ತಿನ ಕೂಳಿಗೆ ಪರದಾಡುತ್ತಿದ್ದಾರೆ. …

Read More »

ಬೆಳಗಾವಿ ನಗರ ಸಿಸಿಐಬಿ ತಂಡದಿಂದ ಸುಮಾರು ೧೩ ಲಕ್ಷ ಮೌಲ್ಯದ ಮಿಲಿಟರಿ ಮತ್ತು ಅಂತರ್‌ರಾಜ್ಯ ಮದ್ಯ ಜಪ್ತಿ

ಬೆಳಗಾವಿ – ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯ ವಿಜಯ ನಗರದ ರಕ್ಷಕ ಕಾಲೋನಿಯಲ್ಲಿ ಗೋವಾ ರಾಜ್ಯದಲ್ಲಿ ಮಾರಾಟ ಮಾಡುವ & ಮಿಲಿಟರಿ ಕ್ಯಾಂಟೀನ್ ಮುಖಾಂತರ ಸೈನಿಕರಿಗೆ ಮಾರಾಟ ಮಾಡುವ ವಿವಿಧ ಕಂಪನಿಯ ಸರಾಯಿ ಬಾಟಲ & ಚೀಲಗಳನ್ನು ಸ್ಥಳಿಯರಿಗೆ ಎರಡುಪಟ್ಟು ದರದಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಸಂಗ್ರಹಿಸಿಡಲಾಗಿತ್ತು. ಆರೋಪಿತರಾದ ರಾಜೇಶ ಕೇಶವ ನಾಯಿಕ, (೩೭) ಸಾ: ಕುಮಾರಸ್ವಾಮಿ ಲೇಔಟ್, ಬೆಳಗಾವಿ, ಶಂಕರ ಬಸವಂತ ದೇಸನೂರ, (೩೮) ಸಾ|| ಸಿಸಿಬಿ ನಂ. …

Read More »

ಪಿಎಂ ಕೇರ್ಸ್​ ಲೆಕ್ಕವನ್ನೇ ಕೊಡದವರು ರಾಮ ಮಂದಿರ ಹಣದ ಲೆಕ್ಕಾ ಕೊಡ್ತಾರ?; ಸಿದ್ದರಾಮಯ್ಯ

ಬೆಂಗಳೂರು (ಫೆಬ್ರವರಿ 16); ಕೊರೋನಾ ಸಂದರ್ಭದಲ್ಲಿ ಜನರಿಂದ ಸಂಗ್ರಹಿಸಲಾದ ಪಿಎಂ ಕೇರ್ಸ್​ ಹಣದ ಲೆಕ್ಕವನ್ನೇ ಕೊಡದವರು, ಇದೀಗ ರಾಮ ಮಂದಿರ ನಿರ್ಮಾಣಕ್ಕಾಗಿ ಸಂಗ್ರಹಿಸಲು ಮುಂದಾಗಿರುವ ಹಣದ ಲೆಕ್ಕ ಕೊಡ್ತಾರಾ? ಎಂದು ಸಿದ್ದರಾಮಯ್ಯ ಬಿಜೆಪಿ ವಿರುದ್ಧ ನೇರಾ ನೇರ ವಾಗ್ದಾಳಿ ನಡೆಸಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್​ ಹಸಿರು ನಿಶಾನೆ ನೀಡುತ್ತಿದ್ದಂತೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಸಿದ್ದರು. ಅಲ್ಲದೆ, ದೇವಾಲಯ …

Read More »

ಐವರು ಹಿರಿಯ ಐಪಿಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ

ಬೆಂಗಳೂರು : ಇತ್ತೀಚೆಗಷ್ಟೇ ಐಎಎಸ್ ಅಧಿಕಾರಿಗಳ ಮಟ್ಟದಲ್ಲಿ ಭಾರೀ ಬದಲಾವಣೆ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಐಪಿಎಸ್ ಅಧಿಕಾರಿಗಳಿಗೂ ವರ್ಗಾವಣೆಯ ಬಿಸಿ ಮುಟ್ಟಿಸಿದೆ. ಇಂದು ಸಂಜೆ ಐವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ದಿಢೀರನೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಐಪಿಎಸ್ ಅಧಿಕಾರಿಗಳ ಪೈಕಿ ಐವರು ಎಡಿಜಿಪಿ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ‌‌. ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿದ್ದ ಭಾಸ್ಕರ್ ರಾವ್ ಅವರನ್ನು ರೈಲ್ವೆ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು …

Read More »