Breaking News
Home / Laxminews 24x7 (page 2889)

Laxminews 24x7

ಯತ್ನಾಳ್‍ಗೆ ನಾರಾಯಣಗೌಡರ 2 ಸಾವಲು

ಬೆಂಗಳೂರು: ಮರಾಠ ಪ್ರಾಧಿಕಾರ ರಚನೆ ವಿರೋಧಿಸಿ ಡಿ.5ಕ್ಕೆ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‍ಗೆ ಸಂಬಂಧಿಸಿದಂತೆ ‘ರೋಲ್‍ಕಾಲ್ ಹೋರಾಟಗಾರರು ಕರೆ ನೀಡಿರುವ ಕರ್ನಾಟಕ ಬಂದ್‍ಗೆ ಮುಖ್ಯಮಂತ್ರಿಗಳು ಹೆದರಬೇಕಿಲ್ಲ. ವಿಜಯಪುರವನ್ನು ಯಾರು ಬಂದ್ ಮಾಡುತ್ತಾರೋ ನೋಡೋಣ’ ಎಂಬ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆಗೆ ಆಕ್ರೋಶಗೊಂಡಿರುವ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ ನಾರಾಯಣಗೌಡ, ಯತ್ನಾಳಗೆ ಎರಡು ಸವಾಲುಗಳನ್ನು ಹಾಕಿದ್ದಾರೆ. ಈ ಕುರಿತು ಫೇಸ್‍ಬುಕ್‍ನಲ್ಲಿ ಬರೆದುಕೊಂಡಿರುವ ಅವರು, ‘ಶಾಸಕ ಬಸವನಗೌಡ …

Read More »

ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಅಂತಾ, ಸಚಿವ ಶ್ರೀರಾಮಲು, ಮತ್ತೊಂದು ಕಡೆ ರಮೇಶ್ ಜಾರಕಿಹೊಳಿ ಇಬ್ಬರು ನಾಯಕರಲ್ಲಿ ತೀವ್ರ ಪೈಪೋಟಿ

ಬೆಂಗಳೂರು : ಸಚಿವ ರಮೇಶ ಜಾರಕಿಹೊಳಿ ಈಗಿರುವ ಜಲಸಂಪನ್ಮೂಲ ಖಾತೆಯ ಜೊತೆಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಅಂತಾ, ದೆಹಲಿ ಭೇಟಿ ವೇಳೆ ಹೈಕಮಾಂಡ್ ಬಳಿ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗುತ್ತಿದೆ. ಆಪರೇಷನ್ ಕಮಲ ವೇಳೆಯಲ್ಲಿ ಬಿಜೆಪಿ ನಾಯಕರು ಡಿಸಿಎಂ ಮಾಡುವ ಭರವಸೆ ನೀಡಿದ್ದರು ಎನ್ನಲಾಗಿದೆ. ವಾಲ್ಮೀಕಿ ಕೋಟಾದಲ್ಲಾದ್ರೂ ಸರಿ, ಈ ಹಿಂದೆ ಮಾತು ಕೊಟ್ಟ ಮಾತಿನಂತೆ ಡಿಸಿಎಂ ಸ್ಥಾನ ಕೋಡಬೇಕು ಎಂದು ಮನವಿ ಮಾಡಿದ್ದಾರಂತೆ. ಎರಡ್ಮೂರು ದಿನಗಳಲ್ಲಿ ಸಚಿವ ಸಂಪುಟ ಪುನಾರಚನೆಗೊಳ್ಳಲಿದ್ದು, …

Read More »

ಕೋವಿಡ್‍ಗೆ ಲಸಿಕೆ ಸಿಕ್ಕರೆ ಜನರ ಗಮನವನ್ನು ಬೇರೆಡೆ ಸೆಳೆದು ಅದೇ ವೇಳೆ ಯಡಿಯೂರಪ್ಪ ನಾಯಕತ್ವ ಬದಲಾವಣೆಗೆ ವರಿಷ್ಠರು ವೇದಿಕೆಯನ್ನು ಸಿದ್ದಪಡಿಸುತ್ತಿದ್ದಾರೆ………..?

ಬೆಂಗಳೂರು : ಆಡಳಿತಾರೂಢ ಬಿಜೆಪಿಯಲ್ಲಿ ನಾಯಕತ್ವ ಗೊಂದಲ ಇತ್ಯರ್ಥವಾಗುವವರೆಗೂ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಗಗನಕುಸುಮವಾಗೇ ಉಳಿಯಲಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಯಕತ್ವವನ್ನು ಬದಲಾವಣೆ ಮಾಡಬೇಕೆ ಇಲ್ಲವೇ 2023ರ ವಿಧಾನಸಭೆ ಚುನಾವಣೆವರೆಗೂ ಅವರನ್ನೇ ಮುಂದುವರೆಸಬೇಕೆ ಎಂಬುದರ ಕುರಿತು ಈ ಬಾರಿ ವರಿಷ್ಠರು ಸ್ಪಷ್ಟ ನಿರ್ಧಾರ ಕೈಗೊಳ್ಳುವುದು ಖಚಿತವಾಗಿದೆ. ಹೆಚ್ಚೆಂದರೆ ಈ ಬಾರಿ ಪುನರಚನೆಗೆ ಅವಕಾಶ ಕೊಡದೆ ಕೇವಲ ವಿಸ್ತರಣೆಗೆ ಮಾತ್ರ ಅವಕಾಶ ನೀಡಲಿದ್ದು, ಆಪರೇಷನ್ ಕಮಲಕ್ಕೆ ಒಳಗಾಗಿದ್ದ ವಿಧಾನಪರಿಷತ್ ಸದಸ್ಯರಾಗಿರುವ …

Read More »

ಡ್ರಗ್ಸ್ ಪ್ರಕರಣದಲ್ಲಿ ಹೆಡ್‍ಕಾನ್‍ಸ್ಟೆಬಲ್ ಬಂಧನ..!

ಬೆಂಗಳೂರು,ನ.- ಕೆಂಪೇಗೌಡನಗರ ಪೊಲೀಸ್ ಠಾಣೆಯ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಸಹಾಯ ಮಾಡಿದ ಆರೋಪದಡಿ ಸದಾಶಿವನಗರ ಠಾಣೆಯ ಹೆಡ್‍ಕಾನ್‍ಸ್ಟೆಬಲ್ ಪ್ರಭಾಕರ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಸುನೀಶ್ ಮತ್ತು ಹೇಮಂತ್ ಸೇರಿದಂತೆ 8 ಮಂದಿಯನ್ನು ಬಂಧಿಸಲಾಗಿದೆ. ತನಿಖೆ ಸಂದರ್ಭದಲ್ಲಿ ಆರೋಪಿಗಳಿಗೆ ಮೊಬೈಲ್ ನಂಬರ್‍ಗಳ ಲೊಕೇಶನ್ ಮತ್ತು ಸಿಮ್ ವಿಳಾಸಗಳನ್ನು ವಾಟ್ಸಪ್ ಮೂಲಕ ಹಣಕ್ಕಾಗಿ ವಿನಿಮಯ ಮಾಡಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಹೆಡ್‍ಕಾನ್‍ಸ್ಟೆಬಲ್ ಪ್ರಭಾಕರ್ ಅವರನ್ನು ಅಮಾನತು …

Read More »

ಸ್ಮಾರ್ಟ್ ಸಿಟಿ ಕಾಮಗಾರಿ ಶೀಘ್ರ ಪೂರ್ಣಗೊಳಿಸದಿದ್ದರೆ ಗುತ್ತಿಗೆದಾರರ ವಿರುದ್ದ ಕ್ರಿಮಿನಲ್ ಕೇಸ್..!

ಬೆಂಗಳೂರು,ನ.- ಸ್ಮಾರ್ಟ್ ಯೋಜನೆಯಡಿ ಬೆಂಗಳೂರಿನಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸದಿದ್ದರೆ ಅಂತಹ ಗುತ್ತಿಗೆದಾರರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ನಗರಾಭಿವೃದ್ದಿ ಸಚಿವ ಭೈರತಿ ಬಸವರಾಜ್ ಎಚ್ಚರಿಕೆ ನೀಡಿದ್ದಾರೆ. ನಗರದ ಬೇರೆ ಬೇರೆ ಇಂದು ಕಾಮಗಾರಿ ನಡೆಯುತ್ತಿರುವ ಪ್ರದೇಶಗಳಲ್ಲಿ ಭೇಟಿ ಕೊಟ್ಟು ನಂತರ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಡಿಫೆನ್ಸ್‍ರಸ್ತೆಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಹಲವು ಬಾರಿ ಎಚ್ಚರಿಕೆ ನೀಡಲಾಗಿತ್ತು. ಆದರೆ ಅವರು ಈವರೆಗೂ ಕಾಮಗಾರಿಯನ್ನು ಪೂರ್ಣಗೊಳಿಸಿಲ್ಲ.ಹೀಗಾಗಿ ಅವರ ವಿರುದ್ಧ ಕ್ರಿಮಿನಲ್ …

Read More »

ಸಚಿವ ಸ್ಥಾನಕ್ಕೆ ಫುಲ್ ಫೈಟಿಂಗ್.ಯಾರು ಇನ್ ಯಾರು ಔಟ್….?

ಬೆಂಗಳೂರು :-ಸಚಿವ ಸಂಪುಟ ವಿಸ್ತರಣೆಯಾಗುವುದು ಖಚಿತವಾಗುತ್ತಿದ್ದಂತೆ ಆಕಾಂಕ್ಷಿಗಳು ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿಯಾಗಿ ತಮ್ಮನ್ನು ಪರಿಗಣಿಸಬೇಕೆಂದು ಮನವಿ ಮಾಡಿದ್ದಾರೆ. ನಿನ್ನೆಯಷ್ಟೇ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿದ್ದ ಶಾಸಕರ ನಿಯೋಗ ಇಂದು ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸಂಪುಟಕ್ಕೆ ನಮ್ಮನ್ನು ಪರಿಗಣಿಸಬೇಕೆಂದು ಪ್ರಸ್ತಾವನೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ಶಾಸಕರಾದ ಶಂಕರ್ ಪಟೇಲ್ ಮುನೇನಕೊಪ್ಪ, ಲಿಂಗಣ್ಣ ಸೇರಿದಂತೆ ಮತ್ತಿತರರ ನಿಯೋಗ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿಎಂ ಅವರನ್ನು …

Read More »

ಹೊಸ ಟ್ವಿಸ್ಟ್ ಪಡೆದುಕೊಂಡಿದೆ ಸಂತೋಷ್ – ಜಾರಕಿಹೊಳಿ ಭೇಟಿ. ಕೊಟ್ಟ ಮಾತಿನಂತೆ ಹಲವರಿಗೆ ಸಚಿವ ಸ್ಥಾನ ನೀಡಿ.!

ಬೆಂಗಳೂರು,ನ.21- ಸಚಿವ ಸಂಪುಟ ವಿಸ್ತರಣೆ ಆಗಲಿದೆಯೋ ಎಂಬ ಇಲ್ಲವೋ ಎಂಬ ವದಂತಿ ಹಬ್ಬಿರುವ ಬೆನ್ನಲ್ಲೇ ಸಚಿವ ರಮೇಶ್ ಜಾರಕಿಹೊಳಿ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿಯಾಗಿರುವುದು ಭಾರೀ ಮಹತ್ವ ಪಡೆದುಕೊಂಡಿದೆ. ಕೋಲ್ಕತ್ತಾ ಪ್ರವಾಸದಲ್ಲಿದ್ದ ಸಂತೋಷ್ ಅವರು ಇಂದು ನವದೆಹಲಿಗೆ ಬರುತ್ತಿದ್ದಂತೆ ಅವರನ್ನು ಭೇಟಿ ಮಾಡಿದ ರಮೇಶ್ ಜಾರಕಿಹೊಳಿ, ಸುಮಾರು 20 ನಿಮಿಷಕ್ಕೂ ಹೆಚ್ಚುಕಾಲ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತಂತೆ ರಹಸ್ಯವಾಗಿ ಮಾತುಕತೆ ನಡೆಸಿದ್ದಾರೆ. ಕಳೆದ ನಾಲ್ಕು ದಿನಗಳಿಂದ …

Read More »

ಫಿಜಿಯೋಥೆರಪಿಸ್ಟ್ ಒಬ್ಬರನ್ನು ಸೀಕ್ರೆಟ್ ಆಗಿ ಮದುವೆಯಾಗಿದ್ದಾರಂತೆ ಪ್ರಭುದೇವ್..?

ಚೆನ್ನೈ,ನ.20- ಭಾರತದ ಮೈಕಲ್ ಜಾಕ್ಸನ್ ಎಂದೇ ಖ್ಯಾತಿಯಾಗಿರುವ ನಟ ಪ್ರಭುದೇವ್ ಅವರು ಬಿಹಾರ ಮೂಲದ ಫಿಜಿಯೋಥೆರಪಿಸ್ಟ್ ಒಬ್ಬರನ್ನು ರಹಸ್ಯವಾಗಿ ವಿವಾಹವಾಗಿದ್ದಾರೆ ಎಂಬ ಮಾಹಿತಿಯನ್ನು ನೃತ್ಯ ಸಂಯೋಜಕ ನಿರ್ದೇಶಕರೊಬ್ಬರು ಬಹಿರಂಗಪಡಿಸಿದ್ದಾರೆ. ಪ್ರಭುದೇವ ಕಳೆದ ಸೆಪ್ಟೆಂಬರ್‍ನಲ್ಲೇ ಬಿಹಾರ ಮೂಲದ ಫಿಜಿಯೋಥೆಪಿಸ್ಟ್‍ನ್ನು ರಹಸ್ಯವಾಗಿ ವಿವಾಹವಾಗಿದ್ದು, ಅವರ ವಿವಾಹ ಮಹೋತ್ಸವು ಮುಂಬೈ ನಿವಾಸ ಗ್ರೀನ್ ಎಕರೆಸ್‍ನಲ್ಲಿ ನಡೆಯಿತು ಎಂದು ಹೇಳಿದ್ದಾರೆ. ತಮ್ಮ ಬೆನ್ನಿನ ಸಮಸ್ಯೆಗೆ ಈ ವೈದ್ಯೆ ಬಳಿ ಚಿಕಿತ್ಸೆ ಪಡೆಯುತ್ತಿದ್ದ ಪ್ರಭುದೇವ್, ಪರಸ್ಪರ ಇಷ್ಟಪಟ್ಟು …

Read More »

ಆಸ್ಪತ್ರೆ ಸಿಬ್ಬಂದಿ ಎಡವಟ್ಟಿನಿಂದಾಗಿ ಮಗು ಅಪಹರಣ,ನವಜಾತ ಶಿಶು ಅಪಹರಿಸಿದವರು ಅರೆಸ್ಟ್

ಬೆಂಗಳೂರು, ನ.20-ವಾಣಿ ವಿಲಾಸ ಆಸ್ಪತ್ರೆಯಿಂದ ಎರಡು ದಿನದ ನವಜಾತ ಶಿಶು ಅಪಹರಿಸಿದ್ದ ಮಹಿಳೆ ಸೇರಿದಂತೆ ನಾಲ್ವರನ್ನು ವಿವಿ ಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಗು ಅಪಹರಿಸಿದ್ದ ಮಹಿಳೆ, ಇದಕ್ಕೆ ಸಹಕರಿಸಿದ ವ್ಯಕ್ತಿ ಮತ್ತು ಮಗುವನ್ನು ಪಡೆದಿದ್ದ ದಂಪತಿಯನ್ನು ಬಂಧಿಸಲಾಗಿದೆ. ಅಬ್ದುಲ್ ರಶೀದ್ ಮತ್ತು ಆರ್ಷಿಯಾ ದಂಪತಿ ಮಗುವಿಗೆ ಅನಾರೋಗ್ಯವಾದ್ದರಿಂದ ನ.9ರಂದು ವಾಣಿ ವಿಲಾಸ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.ನ.11ರಂದು ಮಗುವಿನ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದರಿಂದ ಮಗುವನ್ನು ಕರೆದೊಯ್ಯುವಂತೆ ಅನೌನ್ಸ್ ಮಾಡಿದ್ದಾರೆ. …

Read More »

ಸಂಪುಟ ವಿಸ್ತರಣೆ ಯಾವಾಗ..? ಸಿಎಂ ಬಿಎಸ್‍ವೈ ಹೇಳಿದ್ದೇನು?

ಬೆಂಗಳೂರು,ನ.21- ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಇನ್ನು ಎರಡು ಮೂರು ದಿನಗಳಲ್ಲಿ ನಡೆಯಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ವಿಧಾನಸೌಧದ ಬಾಂಕ್ವೆಟ್ ಹಾಲ್‍ನಲ್ಲಿ ಪೊಲೀಸ್ ಪದಕ ಪ್ರಶಸ್ತಿ ಪ್ರದಾನ ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೆರಡು ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆಯೋ ಇಲ್ಲವೇ ಪುನಾರಚನೆಯೋ ಎಂಬುದು ತಿಳಿಯಲಿದೆ ಎಂದು ಹೇಳಿದರು. ಈ ಬಾರಿ ಸಂಪುಟ ಪುನಾರಚನೆಯೋ ಅಥವಾ ವಿಸ್ತರಣೆಯೋ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಎರಡರಲ್ಲಿ ಒಂದಂತೂ …

Read More »