ಬೆಳಗಾವಿ: ಅಡ ಇಟ್ಟ ಚಿನ್ನವನ್ನು ಬಿಡಿಸಿಕೊಂಡು ಹೋಗುವಾಗ ಬೈಕ್ ಮುಂದಿನ ಕವರ್ನಲ್ಲಿಟ್ಟಿದ್ದ ಚಿನ್ನ ಮಿಸ್ ಆಗಿದ್ದ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಓರ್ವ ಕಳ್ಳನನ್ನು ಬಂಧಿಸಿ ಒಟ್ಟು 1.20 ಸಾವಿರ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ರಾಯಬಾಗ ತಾಲೂಕಿನ ಮಂಟೂರ ಗ್ರಾಮದ ರೇವಪ್ಪ ಹಳ್ಳುರ, ಜ.24ರಂದು ಗೋಕಾಕನ ಭಗವಾನ ಶೆಡಜಿ ಅಂಗಡಿಯಲ್ಲಿ ಅಡ ಇಟ್ಟಿದ್ದ 70 ಸಾವಿರ ರೂ. ಮೌಲ್ಯದ 14.5 ಗ್ರಾಂ. ನಕ್ಲೆಸ್ ಹಾಗೂ 50 ಸಾವಿರ ರೂ. ಮೌಲ್ಯದ …
Read More »ಗ್ರಾಮಗಳಿಗೆ ಕುಡಿಯುವ ನೀರಿನ ಸಮರ್ಪಕ ಪೂರೈಕೆಗೆ ಆದ್ಯತೆ : ರಾಹುಲ್ ಶಿಂಧೆ
ಬೆಳಗಾವಿ: ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಹಾಗೂ ಎಲ್ಲ ಗ್ರಾಮಗಳಿಗೂ ಸಮರ್ಪಕವಾಗಿ ಕುಡಿಯುವ ನೀರಿನ ಪೂರೈಕೆ ಮಾಡಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಸೂಚನೆ ನೀಡಿದರು. ಇಲ್ಲಿನ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಲ್ಲ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ಕುಂದುಕೊರತೆಗಳ …
Read More »ಗೋಲ್ಗಪ್ಪಲ್ಲಿ ವಿಷ ಬೆರೆಸಿ ಗರ್ಭಿಣಿ ಗೆಳತಿಯ ಕೊಲೆಗೆ ಯತ್ನ, ಆಸ್ಪತ್ರೆಗೆಂದು ಕರೆದು ಕಾಡಿನಲ್ಲಿ ಬಿಟ್ಟು ಬಂದ ವ್ಯಕ್ತಿ
ಜಾರ್ಖಂಡ್: ಆತನೇ ಎಲ್ಲಾ ಎಂದು ಪೋಷಕರನ್ನು ಬಿಟ್ಟು ಬಂದಿದ್ದ ಮಹಿಳೆಯನ್ನು ಆಕೆಯ ಪ್ರಿಯಕರನೇ ಹತ್ಯೆಗೆ ಯತ್ನಿಸಿರುವ ಅಮಾನವೀಯ ಘಟನೆ ಜಾರ್ಖಂಡ್ನಲ್ಲಿ ನಡೆದಿದೆ. ಗೋಲ್ಗಪ್ಪದಲ್ಲಿ ವಿಷ ಬೆರೆಸಿ ಗರ್ಭಿಣಿ ಪ್ರೇಯಸಿಯನ್ನು ಕೊಲೆ ಮಾಡಲು ವ್ಯಕ್ತಿ ಯತ್ನಿಸಿರುವ ಘಟನೆ ಜಾರ್ಖಂಡ್ನಲ್ಲಿ ನಡೆದಿದೆ. ಮಹಿಳೆಗೆ ಆರೋಗ್ಯ ತೋರಾ ಹದಗೆಟ್ಟಿದ್ದು, ರಕ್ತವಾಂತಿ ಮಾಡಿಕೊಂಡಿದ್ದಾಳೆ. ತನ್ನ ಮನೆಗೆ ತಲುಪುವ ಮೊದಲು ರಾತ್ರಿಯಿಡೀ ಕಾಡಿನಲ್ಲಿ ಅಡಗಿಕೊಂಡಿದ್ದಳು. ಈ ಘಟನೆಯ ಬಗ್ಗೆ ತನ್ನ ಕುಟುಂಬಕ್ಕೆ ತಿಳಿಸುವಲ್ಲಿ ಆಕೆ ಕೊನೆಗೂ ಯಶಸ್ವಿಯಾಗಿದ್ದಾಳೆ. …
Read More »ಸರ್ಕಾರಕ್ಕೆ ಹೊರೆಯಾದ್ರೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ: ಡಿಕೆಶಿ
ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಹೊರೆಯಾಗುತ್ತಿದೆ. ಆದರೂ ನಾವು ಯಾವುದೇ ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದ್ದೇವೆ. ಯಾವುದೇ ರೀತಿಯ ಪರಿಷ್ಕರಣೆಯನ್ನೂ ಮಾಡುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಸಂಜೆ ಪ್ರತಿಕ್ರಿಯೆ ನೀಡಿದರು. ಗ್ಯಾರಂಟಿ ಯೋಜನೆ ನಿಲ್ಲಿಸುವ ಬಗೆಗಿನ ಊಹಾಪೋಹಗಳ ಬಗ್ಗೆ ಕೇಳಿದಾಗ, “ಉದಾಹರಣೆಗೆ ಮೃತಪಟ್ಟಿರುವ ಕೆಲವರಿಗೆ ಗ್ಯಾರಂಟಿ ಯೋಜನೆಯ ಹಣ ಸಂದಾಯವಾಗಿದೆ. ಪಡಿತರ ಅಕ್ಕಿಯನ್ನೂ ಸಹ …
Read More »ನಿರುದ್ಯೋಗಿಗಳ ಉಗ್ರ ಹೋರಾಟಕ್ಕೆ ಮಣಿದ ಸರ್ಕಾರ – 56 ಸಾವಿರ ನೇಮಕಾತಿಗೆ ಗ್ರೀನ್ ಸಿಗ್ನಲ್
ಬೆಂಗಳೂರು: ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಶಕ್ತಿ ನಡೆಸಿದ ಉಗ್ರ ಹೋರಾಟಕ್ಕೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಮೊದಲ ಹಂತದಲ್ಲಿ 56,432 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲು ಕ್ಯಾಬಿನೆಟ್ ತೀರ್ಮಾನಿಸಿದೆ. ಅಲ್ಲದೆ, ಸರ್ಕಾರಿ ಹೊಸ ನೇಮಕಾತಿಗಳಲ್ಲಿ ಸದ್ಯಕ್ಕೆ ಒಳಮೀಸಲಾತಿ ಜಾರಿ ಅಸಾಧ್ಯ ಎಂದು ಕ್ಯಾಬಿನೆಟ್ ತೀರ್ಮಾನಿಸಿದೆ. ಒಳಮೀಸಲಾತಿ ಸಂಬಂಧ ಕೋರ್ಟ್ನಲ್ಲಿ ಪ್ರಕರಣ ಇರುವುದರಿಂದ ಸದ್ಯ 50% ಮೀಸಲಾತಿ ಪ್ರಮಾಣದಲ್ಲೇ ಹೊಸ ನೇಮಕಾತಿಗೆ ಆದೇಶ ಹೊರಡಿಸಲು ಸರ್ಕಾರ ನಿರ್ಧರಿಸಿದೆ. ಇದರಿಂದಾಗಿ ಒಳಮೀಸಲಾತಿ ಜಾರಿ ಕಷ್ಟ ಸಾಧ್ಯವಾಗಿದೆ. …
Read More »ನೇಮಕಾತಿ ಪ್ರಕ್ರಿಯೆಗೆ ತೊಡಕಾಗಿದ್ದ ಒಳ ಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ
ಬೆಂಗಳೂರು: ನೇಮಕಾತಿ ಪ್ರಕ್ರಿಯೆಗೆ ತೊಡಕಾಗಿದ್ದ ಒಳ ಮೀಸಲಾತಿ ವಿಧೇಯಕ ‘ಕರ್ನಾಟಕ ಪರಿಶಿಷ್ಟ ಜಾತಿಗಳ ಉಪ ವರ್ಗೀಕರಣ ವಿಧೇಯಕ 2025’ಕ್ಕೆ ಕೊನೆಗೂ ರಾಜ್ಯಪಾಲರು ಸಹಿ ಹಾಕಿದ್ದಾರೆ. ಸಚಿವರ ನಿಯೋಗ ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ರನ್ನು ಭೇಟಿಯಾಗಿ ವಿಧೇಯಕಕ್ಕೆ ಸಹಿ ಹಾಕುವಂತೆ ಮನವಿ ಮಾಡಿದ್ದರು. ಸರ್ಕಾರದ ಮನವಿ ಮೇರೆಗೆ ರಾಜ್ಯಪಾಲರು ಸಹಿ ಹಾಕಿದ್ದಾರೆ. ಧಾರವಾಡದಲ್ಲಿ ಉದ್ಯೋಗಾಂಕ್ಷಿಗಳು ನೇಮಕಾತಿ ಆಗುತ್ತಿಲ್ಲ ಅಂತ ದೊಡ್ಡ ಮಟ್ಟದ ಹೋರಾಟ ನಡೆಸಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರ ನೇಮಕಾತಿ …
Read More »ಖಾಸಗಿ ಹೋಟೆಲ್ನಲ್ಲಿ ಡಿಕೆಶಿ ಬೆಂಬಲಿಗ ಶಾಸಕರ ಸಭೆ
ಬೆಂಗಳೂರು: ಖಾಸಗಿ ಹೋಟೆಲ್ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಬಲಿಗ ಶಾಸಕರು ಸಭೆ ನಡೆಸಿರುವುದು ಕುತೂಹಲ ಮೂಡಿಸಿದೆ. ಮೇಖ್ರಿ ಸರ್ಕಲ್ ಬಳಿ ಖಾಸಗಿ ಹೋಟೆಲ್ನಲ್ಲಿ ಸಭೆ ನಡೆಸಲಾಗಿದೆ. ಒತ್ತಡ ಹೆಚ್ಚಿಸಲು ಡಿಕೆಶಿ ಬೆಂಬಲಿಗರ ಸಭೆ ನಡೆಸಿದ್ದಾರೆನ್ನಲಾಗಿದೆ. ಶಾಸಕ ಹೆಚ್.ಸಿ.ಬಾಲಕೃಷ್ಣ ಬರ್ತ್ ಡೇ ಪಾರ್ಟಿ ನೆಪದಲ್ಲಿ ಶಾಸಕರು ಸಭೆ ಸೇರಿದ್ದರು. ಸಿ.ಪಿ.ಯೋಗೇಶ್ವರ್, ಕುಣಿಗಲ್ ರಂಗನಾಥ್, ಆನೇಕಲ್ ಶಿವಣ್ಣ, ಪಾವಗಡ ವೆಂಕಟೇಶ್, ಮದ್ದೂರು ಉದಯ್ ಗೌಡ, ಮಂಥರ್ ಗೌಡ, ಬಸವರಾಜ ಶಿವಗಂಗಾ, ಶರತ್ ಬಚ್ಚೇಗೌಡ, ಗಣಿಗ …
Read More »ಎಪಿಎಂಸಿ, ಜೈ ಕಿಸಾನ್ ಮಾರುಕಟ್ಟೆ ವರ್ತಕರ ಸಮಸ್ಯೆ ನಿವಾರಣೆಗೆ ಶೀಘ್ರದಲ್ಲೇ ಬೆಂಗಳೂರಿನಲ್ಲಿ ಸಭೆ ಆಯೋಜನೆ: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ಬೆಳಗಾವಿ ಎಪಿಎಂಸಿ ಸಗಟು ತರಕಾರಿ ಮಾರುಕಟ್ಟೆಗೆ ದೇಶದಲ್ಲಿಯೇ ಒಳ್ಳೆಯ ಹೆಸರು ಇದ್ದು, ಈ ಹೆಸರನ್ನು ಉಳಿಸುವ ಜವಾಬ್ದಾರಿ ಎಪಿಎಂಸಿ ಮತ್ತು ಜೈ ಕಿಸಾನ್ ಖಾಸಗಿ ಮಾರುಕಟ್ಟೆ ವರ್ತಕರ ಮೇಲಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬೆಳಗಾವಿ ಎಪಿಎಂಸಿ ಸಗಟು ತರಕಾರಿ ಮಾರುಕಟ್ಟೆ ಮತ್ತು ಜೈ ಕಿಸಾನ್ ಖಾಸಗಿ ಮಾರುಕಟ್ಟೆ ವರ್ತಕರ ವಿವಾದ ಬಗೆಹರಿಸಲು …
Read More »ಸಿಎಂ ಕುರ್ಚಿ ವಿಚಾರದಲ್ಲಿನ ಗೊಂದಲಗಳಿಗೆ ಹೈಕಮಾಂಡ್ ಉತ್ತರ ಕೊಡಬೇಕು: ಪರಮೇಶ್ವರ್
ಬೆಂಗಳೂರು: ಸಿಎಂ ಕುರ್ಚಿ ವಿಚಾರದಲ್ಲಿನ ಗೊಂದಲಗಳಿಗೆ ಹೈಕಮಾಂಡ್ ಉತ್ತರ ಕೊಡಬೇಕು ಅಂತ ಗೃಹ ಸಚಿವ ಪರಮೇಶ್ವರ್ ಪುನರುಚ್ಚಾರ ಮಾಡಿದ್ದಾರೆ. ಪರಮೇಶ್ವರ್ ಸಿಎಂ ಆಗಬೇಕು ಎಂಬ ಅಭಿಮಾನಿಗಳು ಕೂಗಿನ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಕುರ್ಚಿ ವಿಚಾರದಲ್ಲಿ ಸಾಕಷ್ಟು ಗೊಂದಲಗಳು ಆಗಿದೆ. ನಾನು ಅದಕ್ಕೆ ಹೆಚ್ಚು ಗೊಂದಲ ಮಾಡೋದಕ್ಕೆ ತಯಾರಿಲ್ಲ. ಅನೇಕರು ನನ್ನನ್ನ ಪ್ರಶ್ನೆ ಮಾಡ್ತಾರೆ, ಅಭಿಮಾನಿಗಳು ಅಲ್ಲಲ್ಲಿ ಸಿಎಂ ಅಗಬೇಕು ಅಂತ ಅವರ ಭಾವನೆ ವ್ಯಕ್ತಪಡಿಸುತ್ತಾರೆ. ಸಿಎಂ ಆಗಬೇಕು …
Read More »ನಾಳೆ ವಿಜಯಪುರದಲ್ಲಿ ಕಿತ್ತೂರು ಕರ್ನಾಟಕ ಭಾಗದ ʻಜೆಡಿಎಸ್ ಬೆಳ್ಳಿಹಬ್ಬʼ ಸಮಾವೇಶ
ವಿಜಯಪುರ: ಇಲ್ಲಿ ನಾಳೆ ಜೆಡಿಎಸ್ ಪಕ್ಷದಿಂದ ಜನತಾ ಸಮಾವೇಶ ನಡೆಯಲಿದೆ. ಕಿತ್ತೂರು ಕರ್ನಾಟಕ ಭಾಗದ ಜೆಡಿಎಸ್ ಬೆಳ್ಳಿಹಬ್ಬದ ) ಸಮಾವೇಶ ಆಯೋಜನೆ ಮಾಡಲಾಗಿದೆ. ಶುಕ್ರವಾರ ವಿಜಯಪುರಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಆಗಮಿಸಲಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಸೇರದಂತೆ ಹಲವಾರು ಜೆಡಿಎಸ್ ಮುಖಂಡರು ಭಾಗಿ ಆಗಲಿದ್ದಾರೆ. ವಿಜಯಪುರ ನಗರದ ಹೊರವಲಯದಲ್ಲಿರುವ ಸಿಂದಗಿ ಬೈಪಾಸ್ ನಲ್ಲಿ ಸಮಾವೇಶ ಆಯೋಜನೆ ಮಾಡಲಾಗಿದೆ. ಕಿತ್ತೂರು ಕರ್ನಾಟಕ ಭಾಗದ …
Read More »
Laxmi News 24×7