Breaking News

Laxminews 24x7

ಆಟೋ ಚಾಲಕನ ವಿವಸ್ತ್ರಗೊಳಿಸಿ ಆತನ ಮೇಲೆ ಮೂತ್ರ ವಿಸರ್ಜಿಸಿದ ವೈದ್ಯರು: ಮೃಗೀಯ ವೈದ್ಯನ ಅರೆಸ್ಟ್!

ಕುಡಿದ‌ ಸೋಗಿನಲ್ಲಿ ಆಟೊ ಚಾಲಕನನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದೂ ಅಲ್ಲದೇ ಚಾಲಕನ ಮೇಲೆ ಮೂತ್ರ ವಿಸರ್ಜಿಸಿ ವೈದ್ಯರ ತಂಡವೊಂದು ಅಮಾನವೀಯವಾಗಿ ನಡೆದುಕೊಂಡ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದ್ದು, ಖಾಸಗಿ ಆಸ್ಪತ್ರೆಯ ವೈದ್ಯನನ್ನು ಬಂಧಿಸಲಾಗಿದೆ.   ಯಲಹಂಕ ನಿವಾಸಿ 26 ವರ್ಷದ ಆಟೊ ಚಾಲಕ ಮುರಳಿ ಹಲ್ಲೆಗೊಳಗಾಗಿದ್ದು, ಖಾಸಗಿ ಆಸ್ಪತ್ರೆ ವೈದ್ಯ ರಾಕೇಶ್ ಶೆಟ್ಟಿಯನ್ನು ಬಂಧಿಸಲಾಗಿದೆ. ನವೆಂಬರ್ 4ರಂದು ರಾತ್ರಿ ಈ ಘಟನೆ ನಡೆದಿದ್ದು, ಆಸ್ಪತ್ರೆಯಲ್ಲಿ ರೋಗಿಗಳ ಮುಂದೆ ಕೂಗಾಟ …

Read More »

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗಲೇ ಬಿಟ್ ಕಾಯಿನ್ ದಂಧೆ ನಡೆದಿದೆ: ರಾಜ್ಯ ಬಿಜೆಪಿ ಘಟಕ

ಬೆಂಗಳೂರು: ಬಿಟ್ ಕಾಯಿನ್ ವಿಚಾರವಾಗಿ ರಾಜಕೀಯ ನಾಯಕರ ಬಡಿದಾಟ ಮುಂದುವರೆದಿದ್ದು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗಲೇ ಬಿಟ್ ಕಾಯಿನ್ ದಂಧೆ ನಡೆದಿದೆ ಎಂದು ರಾಜ್ಯ ಬಿಜೆಪಿ ಘಟಕ ಆರೋಪಿಸಿದೆ. ಬಿಟ್ ಕಾಯಿನ್ ದಂಧೆಯ ಆರೋಪಿ ಯುವ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ಮಹಮ್ಮದ್ ನಲಪಾಡ್ ಹಾಗೂ ಮಾಜಿ ಸಚಿವ ಲಮಾಣಿ ಪುತ್ರ ದರ್ಶನ್ ನಡುವೆ ಅವ್ಯವಹಾರ ನಡೆಸಿರುವ ಬಗ್ಗೆ ನ್ಯಾಯಾಲಯಕ್ಕೆ ಸಲ್ಲಿಸಲಾದ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ ಎಂದು ಬಿಜೆಪಿ ತಿಳಿಸಿದೆ. ಸರಣಿ ಟ್ವೀಟ್ ಮೂಲಕ …

Read More »

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ದವಾಗಿದೆ.

ಬೆಳಗಾವಿ – ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ದವಾಗಿದೆ. ಮಾಹಿತಿಯ ಪ್ರಕಾರ ನವದೆಹಲಿಯಲ್ಲಿ ಪಟ್ಟಿ ಅಂತಿಮವಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. ಪಟ್ಟಿ ಹೀಗಿದೆ: ದಕ್ಷಿಣ ಕನ್ನಡ: ಕೋಟಾ ಶ್ರೀನಿವಾಸ ಪೂಜಾರಿ, ಕಲಬುರಗಿ: ಬಿ.ಜಿ. ಪಾಟೀಲ್ , ಧಾರವಾಡ – ಪ್ರದೀಪ್ ಶೆಟ್ಟರ್, ಚಿಕ್ಕಮಗಳೂರು- ಎಂ.ಕೆ. ಪ್ರಾಣೇಶ್, ಕೊಡಗು- ಸುನೀಲ್ ಸುಬ್ರಹ್ಮಣಿ ಮಂಡೇಪಂಡ, ಬೆಳಗಾವಿ – ಮಹಂತೇಶ್ ಕವಟಗಿಮಠ ಸ್ಪರ್ಧೆ …

Read More »

ವಿಧಾನ ಪರಿಷತ್‌ ಚುನಾವಣೆ: 33 ವರ್ಷದಿಂದ ಒಂದೇ ಕುಟುಂಬಕ್ಕೆ ಕಾಂಗ್ರೆಸ್‌ ಟಿಕೆಟ್‌

ಮೈಸೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುವ ಮೈಸೂರು-ಚಾಮರಾಜನಗರ ದ್ವಿಸದಸ್ಯ ಕ್ಷೇತ್ರದ ಚುನಾವಣೆಯಲ್ಲಿ 33 ವರ್ಷಗಳಿಂದ ಕಾಂಗ್ರೆಸ್‌ನಲ್ಲಿ ಒಂದೇ ಕುಟುಂಬಕ್ಕೆ ಟಿಕೆಟ್‌ ನೀಡಲಾಗುತ್ತಿದೆ. 1988ರಿಂದ ಒಂದು ಉಪಚುನಾವಣೆ ಸೇರಿ ಈ ಕ್ಷೇತ್ರಕ್ಕೆ ಆರು ಬಾರಿ ಚುನಾವಣೆಗಳು ನಡೆದಿವೆ. ತಿ.ನರಸೀಪುರದ ಎನ್‌.ರಾಚಯ್ಯ ಕುಟುಂಬ ಅಷ್ಟೂ ಚುನಾವಣೆಗಳಲ್ಲಿ ಕಾಂಗ್ರೆಸ್‌ ಟಿಕೆಟ್‌ ಗಿಟ್ಟಿಸಿಕೊಂಡು, ಐದು ಬಾರಿ ಗೆಲುವು ದಾಖಲಿಸಿದೆ. ದಲಿತರಲ್ಲಿ ‘ಎಡಗೈ’ ಸಮುದಾಯಕ್ಕೆ ಸೇರಿದ ಈ ಕುಟುಂಬದ ಅಭ್ಯರ್ಥಿಗೆ 2009ರಲ್ಲಿ ಮಾತ್ರ ಸೋಲು ಎದುರಾಗಿತ್ತು. ಟಿ.ಎನ್‌.ನರಸಿಂಹಮೂರ್ತಿ, …

Read More »

ತಾಯಿಯನ್ನು ಚಿಕಿತ್ಸೆಗೆ ಕರೆತಂದ ಮಗಳು; ನಿರ್ಜನ ಪ್ರದೇಶದಲ್ಲಿ ಬಿಟ್ಟು ಪರಾರಿ

ಎಚ್.ಡಿ.ಕೋಟೆ: ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವುದಾಗಿ ಮನೆಯಿಂದ ತನ್ನ ಶತಾಯುಷಿ ತಾಯಿಯನ್ನು ಕರೆ ತಂದ ಮಗಳೊಬ್ಬಳು; ಇಲ್ಲಿಗೆ ಸಮೀಪದ ಅಂತರಸಂತೆ ಬಳಿಯ ನಿರ್ಜನ ಪ್ರದೇಶದ ರಸ್ತೆ ಬದಿಯೇ ಬಿಟ್ಟು ಹೋದ ಅಮಾನವೀಯ ಘಟನೆ ಬುಧವಾರ ನಡೆದಿದೆ.   ವೃದ್ಧೆಗೆ ಮನೆಯ ವಿಳಾಸ ನೆನಪಿಲ್ಲ. ನನ್ನೂರು ಮೈಸೂರು. ಅಳಿಯ-ಮಗಳು ಚಿಕಿತ್ಸೆಗಾಗಿ ಕರೆದುಕೊಂಡು ಬಂದಿದ್ದರು. ನನ್ನನ್ನು ಕರೆದೊಯ್ಯಲು ಬರುತ್ತಾರೆ ಎಂದೇ ಹೇಳುತ್ತಿದ್ದಾರೆ. ಬುಧವಾರ ಮಧ್ಯಾಹ್ನದಿಂದಲೂ ಅಳಿಯ-ಮಗನ ಬರುವಿಕೆಯಲ್ಲೇ ಕಾದಿದ್ದ ವೃದ್ಧೆಗೆ ಸ್ಥಳೀಯರು ನೆರವಾಗಿದ್ದಾರೆ. ಅಂತರಸಂತೆಯ ಪೊಲೀಸ್‌ …

Read More »

ಡಿಕೆಶಿಗೆ ಕಾದು ಶಾಸಕರಾಗಿ ಪ್ರಮಾಣ ಸ್ವೀಕರಿಸುವುದನ್ನು ತಪ್ಪಿಸಿಕೊಂಡ ಮಾನೆ!

ಬೆಂಗಳೂರು: ಹಾನಗಲ್‌ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆದ್ದಿರುವ ಶ್ರೀನಿವಾಸ ಮಾನೆ ಅವರು ತಮ್ಮ ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗಾಗಿ ಕಾದು, ಶಾಸಕರಾಗಿ ಪ್ರಮಾಣ ಸ್ವೀಕರಿಸುವುದನ್ನು ತಪ್ಪಿಸಿಕೊಂಡು ನಿರಾಸೆಗೆ ಒಳಗಾದರು.   ಗುರುವಾರ ಬೆಳಿಗ್ಗೆ 11 ಕ್ಕೆ ಪ್ರಮಾಣ ಸ್ವೀಕರಿಸಲು ಮಾನೆ ಬಂದು ಕುಳಿತಿದ್ದರು. ಆದರೆ, ಅವರ ಪಕ್ಷದ ಅಧ್ಯಕ್ಷರು ಮಾತ್ರ ಸರಿಯಾದ ಸಮಯಕ್ಕೆ ವಿಧಾನಸೌಧಕ್ಕೆ ಬರಲೇ ಇಲ್ಲ. ಇದರಿಂದ ವಿಚಲಿತರಾದ ಮಾನೆ ಕಾರ್ಯಕ್ರಮ ಆರಂಭ ಆಗುತ್ತಿದ್ದಂತೆ ಹೊರಹೋದರು. ಬಹಳ ಹೊತ್ತು ಬರಲಿಲ್ಲ. …

Read More »

ರಾಜ್ಯದಲ್ಲಿ ನಾನೂ ಸೇರಿ ನಾಲ್ವರು ಸಿಎಂ ಆಗಬಹುದು ಎಂದ HDK

ಬೆಂಗಳೂರು: ರಾಜ್ಯದಲ್ಲಿ ಬಿಟ್ ಕಾಯಿನ್ ಹಗರಣದ ಚರ್ಚೆ ಬೆನ್ನಲ್ಲೇ ಸಿಎಂ ಬಸವರಾಜ್ ಬೊಮ್ಮಾಯಿ ಬದಲಾವಣೆ ವಿಚಾರ ಕೂಡ ಮುನ್ನಲೆಗೆ ಬಂದಿದ್ದು, ಇದೀಗ ಹೊಸ ಬಾಂಬ್ ಸಿಡಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ನಾನು ಸೇರಿದಂತೆ ರಾಜ್ಯದಲ್ಲಿ ನಾಲ್ವರು ಸಿಎಂ ಆಗಬಹುದು ಎಂದಿದ್ದಾರೆ.   ಬೆಂಗಳೂರಿನಲ್ಲಿ ಮಾತನಾಡಿದ ಕುಮಾರಸ್ವಾಮಿ, ಜನರಿಗೆ ರಾಜಕಾರಣಿಗಳ ಮೇಲಿನ ವಿಶ್ವಾಸ ಕಡಿಮೆಯಾಗುತ್ತಿದೆ. ಜಾಗತಿಕ ಮಟ್ಟದಲ್ಲೂ ಭಾರತದ ಮೇಲೆ ಕೂಡ ವಿಶ್ವಾಸ ಕಡಿಮೆಯಾಗಿದೆ ಎಂದರು. ಸಿಎಂ ಬದಲಾವಣೆ ವಿಚಾರದ ಚರ್ಚೆಗೆ ಸಂಬಂಧಿಸಿದಂತೆ …

Read More »

ಮಲ್ಲಿಕಾ ಶೆರಾವತ್​ ಸೊಂಟದ ಮೇಲೆ ಚಪಾತಿ ಬೇಯಿಸುತ್ತೇನೆ ಎಂದಿದ್ದರಂತೆ ಈ ನಿರ್ಮಾಪಕ

ಬಾಲಿವುಡ್​​ನ ಹಾಟ್​ ನಟಿ ಮಲ್ಲಿಕಾ ಶೆರವಾತ್​ ತಮ್ಮ ಮೈಮಾಟ ಪ್ರದರ್ಶನದ ಮೂಲಕ ಪಡ್ಡೆ ಹುಡುಗರ ನಿದ್ದೆ ಕದ್ದಂತವರು. ಒಂದು ಕಾಲದಲ್ಲಿ ಬಾಲಿವುಡ್​ನ ಎಲ್ಲಾ ಹಾಟ್​​ ಹಾಡುಗಳಲ್ಲಿ ಕಾಣಿಸಿಕೊಳ್ತಿದ್ದ ನಟಿ ಸದ್ಯ ವೆಬ್​ ಶೋ ಒಂದಕ್ಕೆ ಕಾಲಿಟ್ಟಿದ್ದಾರೆ.‌ ನಾಗಮತಿ ಎಂಬ ಹೆಸರಿನ ಹಾರರ್​ ಸಿನಿಮಾದ ಶೂಟಿಂಗ್​​ಗೂ ಸಜ್ಜಾಗುತ್ತಿರುವ ಮಲ್ಲಿಕಾ ಶೂಟಿಂಗ್​ ವೇಳೆ ತಮ್ಮ ಹಾಗೂ ನಿರ್ಮಾಪಕರೊಬ್ಬರ ಜೊತೆ ನಡೆದ ಸಂಭಾಷಣೆಯೊಂದನ್ನು ಲವ್​​ ಲಾಫ್​​ ಲಿವ್​ ಶೋನಲ್ಲಿ ಹಂಚಿಕೊಂಡಿದ್ದಾರೆ.   ನಿರ್ಮಾಪಕರೊಬ್ಬರು ಹಾಡೊಂದರ …

Read More »

ಜಿಲ್ಲಾಸ್ಪತ್ರೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಯನ್ನು ಪರಿಶೀಲನೆ ಮಾಡಿದ ಸತೀಶ ಜಾರಕಿಹೊಳಿ

ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕರಾದ ಸತೀಶ ಜಾರಕಿಹೊಳಿ ಅವರು ಇಂದು ಜಿಲ್ಲಾಸ್ಪತ್ರೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಯನ್ನು ಪರಿಶೀಲನೆ ಮಾಡಿದರು. ಆಸ್ಪತ್ರೆಯ ಸಿಬ್ಬಂದಿ ಹಾಗೂ ರೋಗಿಗಳಿಂದ ಅಲ್ಲಿನ ವ್ಯವಸ್ಥೆಯ ಕುರಿತು ಸತೀಶ ಜಾರಕಿಹೊಳಿ ಮಾಹಿತಿ ಪಡೆದರು. ಆಸ್ಪತ್ರೆಯಲ್ಲಿ ವಿವಿಧ ಸೌಕರ್ಯಗಳ ಕುರಿತು ವಿಚಾರಿಸಿದರು. ಆಸ್ಪತ್ರೆಯಲ್ಲಿ ಸ್ವಚ್ಚತೆಗೆ ಆದ್ಯತೆ ನೀಡುವಂತೆ ಸ್ಥಳದಲ್ಲಿದ್ದ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು. ರೋಗಿಗಳಿಗೆ ಸೂಕ್ತ ಸಮಯಕ್ಕೆ ಸಮರ್ಪಕ ಚಿಕಿತ್ಸೆ ಒದಗಿಸಿ ಎಂದು ತಿಳಿಸಿದರು. ಈ ಸಂದರ್ಭದಲ್ಲಿ …

Read More »

ಬೆಳಗಾವಿಯಲ್ಲಿ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ

ಬೆಳಗಾವಿಯಲ್ಲಿ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು 8 ದಿನಗಳ ಹಿಂದೆ ನಡೆದ ಅಪಘಾತದಲ್ಲಿ ಬೆಳಗಾವಿಯ ಭವಾನಿ ನಗರದ ಪರಶುರಾಮ್(ವೈಭವ) ಬಾಚೂಲ್ಕರ್(21) ತೀವ್ರವಾಗಿ ಗಾಯಗೊಂಡಿದ್ದ. ಬಳಿಕ ಆತನನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿತ್ತು. ಆರದೆ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಆ ಯುವಕ ಕೊನೆಯುಸಿರೆಳೆದಿದ್ದಾನೆ. ಮೃತ ಯುವಕ ತಂದೆ-ತಾಯಿ, ಸಹೋದರಿ ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. …

Read More »