Breaking News

Laxminews 24x7

ಸಿಂದಗಿ: ತಹಶೀಲ್ದಾರ್ ಕಚೇರಿ ಎದುರು ಶವವಿಟ್ಟು ಪ್ರತಿಭಟನೆ

ಸಿಂದಗಿ: ವ್ಯಕ್ತಿಯನ್ನು ಪೆಟ್ರೋಲ್ ಹಾಕಿ ಕೊಲೆ ಮಾಡಲು ಯತ್ನಿಸಿದ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಮೃತನ ಕುಟುಂಬ ಸದಸ್ಯರು ಶವವನ್ನು ತಹಶೀಲ್ದಾರ್ ಕಚೇರಿ ಎದುರು ಇಟ್ಟು ಪ್ರತಿಭಟನೆ ನಡೆಸಿದ ಘಟನೆ ಪಟ್ಟಣದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ರೇವಣಸಿದ್ದಪ್ಪ ಸಿದ್ರಾಮಪ್ಪ ಮಲಕಾಪುರ (45) ಮೃತ ಪಟ್ಟ ದುರ್ದೈವಿ. ರೇವಣಸಿದ್ದಪ್ಪ ಮೂಲತಃ ಯಾದಗಿರಿ ಜಿಲ್ಲೆಯ ಸುರಪೂರ ತಾಲೂಕಿನ ಮುನಿರಬಮ್ಮನಹಳ್ಳಿ ಗ್ರಾಮದ ವ್ಯಕ್ತಿ. ತಾಲೂಕಿನ ಕಲಕೇರಿ ಗ್ರಾಮದಲ್ಲಿ ಕಳೆದ 6-7 ವರ್ಷಗಳಿಂದ ಹಾಲಿನ ವ್ಯಾಪಾರ …

Read More »

ರಾಜಕಾರಣಿಗಳಷ್ಟು ನಿರ್ಲಜ್ಜ, ನೀಚರು ಯಾರೂ ಇಲ್ಲ : ಮುತಾಲಿಕ್

ಶಿವಮೊಗ್ಗ: ‘ರಾಜಕಾರಣಿಗಳಷ್ಟು ನಿರ್ಲಜ್ಜ, ನೀಚರು ಯಾರೂ ಇಲ್ಲ. ರಾಜಕಾರಣಿಗಳ ಬದಲಾಗಿ ಹಿಂದೂ ಸಂಘಟನೆಗಳಿಗೆ ಬಲ ತುಂಬಿ’ ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಬುಧವಾರ ಹೇಳಿಕೆ ನೀಡಿದ್ದಾರೆ. ಕುವೆಂಪು ರಂಗಮಂದಿರದಲ್ಲಿ ನಡೆದ ‘ವಿಧ್ವತ್ ಭಾರತ’ ಎಂಬ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಮುತಾಲಿಕ್,’ನಮಗೆ ಬಲ ತುಂಬಿ, ನಿಮ್ಮ ದೇವಸ್ಥಾನ ಉಳಿಸುತ್ತೆವೆ.ನಮಗೆ ಬಲ ತುಂಬಿದರೆ, ನಿಮ್ಮ ಅಕ್ಕ-ತಂಗಿಯರನ್ನು ಉಳಿಸುತ್ತೆವೆ. ನಮಗೆ ಬಲ ತುಂಬಿ, ನಿಮ್ಮ ಹಸುವಿನ ಒಂದೇ ಒಂದು ಹನಿ ರಕ್ತ …

Read More »

ಮೈತ್ರಿ ಸರ್ಕಾರವನ್ನು ಅಪವಿತ್ರ ಮಾಡಿದ್ದು ಕಾಂಗ್ರೆಸ್: ಸಿಎಂ ಬಸವರಾಜ ಬೊಮ್ಮಾಯಿ

ಬೆಳಗಾವಿ: ಮೈತ್ರಿ ಸರ್ಕಾರವನ್ನು ಅಪವಿತ್ರ ಮಾಡಿದ್ದು ಕಾಂಗ್ರೆಸ್ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು. ಸಿಂದಗಿ ಉಪಚುನಾವಣೆ ಆಲಮೇಲ ಗ್ರಾಮದ ಸಮಾವೇಶದಲ್ಲಿ ಭಾಷಣ ಮಾಡಿದ ಸಿಎಂ, ಕಾಂಗ್ರೆಸ್ ಸರ್ಕಾರದ ಭಾಗ್ಯ ಯಾರ ಮನೆಗೂ ಸಹ ಬರಲಿಲ್ಲ. ಕಾಂಗ್ರೆಸ್ ಅವರು ಬಂದಿದ್ದೇ ನಮಗೆ ದೌರ್ಭಾಗ್ಯ. ಕಾಂಗ್ರೆಸ್ ಅಧಿಕಾರ ಬಿಟ್ಟು ಇರಲ್ಲ. ಅಧಿಕಾರ ಇದ್ದಾಗ ಕಾಂಗ್ರೆಸ್ ಕಬ್ಬಿನಂತೆ ಇರ್ತಾರೆ, ಅಧಿಕಾರ ಇಲ್ಲದಿದ್ದಾಗ ಹತ್ತಿಯಂತೆ ಇರ್ತಾರೆ. ಮೈತ್ರಿ ಸರ್ಕಾರವನ್ನು ಅಪವಿತ್ರ ಮಾಡಿದವರು ಕಾಂಗ್ರೆಸ್ …

Read More »

ವಿಷ ಪ್ರಾಶನವಾಗಿ ಹತ್ತು ತಿಂಗಳ ಮಗು ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಗೊಂಗಡಿಕೊಪ್ಪ ಗ್ರಾಮದಲ್ಲಿ ನಡೆದಿದೆ.

ಧಾರವಾಡ: ವಿಷ ಪ್ರಾಶನವಾಗಿ ಹತ್ತು ತಿಂಗಳ ಮಗು ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಗೊಂಗಡಿಕೊಪ್ಪ ಗ್ರಾಮದಲ್ಲಿ ನಡೆದಿದೆ. ತನ್ವೀರ ಮೃತಪಟ್ಟ ಹತ್ತು ತಿಂಗಳ ಮಗು. ನಿನ್ನೆ ಏಕಾಏಕಿ ಅಸ್ವಸ್ಥಗೊಂಡಿದ್ದ ಮಗುವನ್ನು ಪೋಷಕರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಮಗು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿತ್ತು. ಆದರೆ ಮಗುವಿನ ಮೃತದೇಹದಿಂದ ದುರ್ವಾಸನೆ ಬರಲು ಆರಂಭಿಸಿದ ಬಳಿಕ ವಿಷ ಹಾಕಿರೋ ಶಂಕೆ ವ್ಯಕ್ತವಾಗಿತ್ತು.     ವಿಷ ಹಾಕಿರೋ ಶಂಕೆ ವ್ಯಕ್ತವಾಗುತ್ತಿದಂತೆ ತಂದೆ ಮಹಮ್ಮದ‌ …

Read More »

ಹತ್ತಿ ನೆಪದಲ್ಲಿ ಗಾಂಜಾ ಬೆಳೆಯುತ್ತಿದ್ದ ಭೂಪ; ಅಬಕಾರಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು ಹೇಗೆ?

ರಾಯಚೂರು: ಅಬಕಾರಿ ಡಿಸಿ ಲಕ್ಷ್ಮಿ .ಎಂ. ನಾಯಕ ನೇತೃತ್ವದ ತಂಡ ಭರ್ಜರಿ ಕಾರ್ಯಾಚರಣೆ ನಡೆಸಿ ಹತ್ತಿ, ಮೆಣಸಿನಕಾಯಿ ಬೆಳೆಗಳ ನಡುವೆ ಬೆಳೆದಿದ್ದ ಗಾಂಜಾವನ್ನು ಪತ್ತೆ ಕಚ್ಚಿದ್ದಾರೆ. ಗ್ರಾಮದ ಸಿದ್ದನಗೌಡ ಎಂಬಾತನಿಗೆ ಸೇರಿದ ಜಮೀನಿನಲ್ಲಿ ಗಾಂಜಾ ಬೆಳೆಯಲಾಗಿತ್ತು. ಇದನ್ನು ಅರಿತು ದಾಳಿ ನಡೆಸಿದ ಲಕ್ಷ್ಮಿ .ಎಂ. ನಾಯಕ ನೇತೃತ್ವದ ತಂಡ 300ಕ್ಕೂ ಅಧಿಕ ಗಾಂಜಾ ಗಿಡಗಳನ್ನು ಜಪ್ತಿ ಮಾಡಿದ್ದಾರೆ. ಇದಕ್ಕು ಮುಂಚೆ ಗಾಂಜಾ ಗಿಡಗಳನ್ನು ಕಿತ್ತು ಹಾಕಿ ತೂಕ ಮಾಡಲು ತಯಾರಿ …

Read More »

ಕಾಂಗ್ರೆಸ್‌ಗೆ ಅಭ್ಯರ್ಥಿ ಸಿಗದೆ ಮನಗೂಳಿ ಪುತ್ರನನ್ನು ಹೈಜಾಕ್ ಮಾಡಿದೆ; ಎಚ್‌ಡಿಕೆ

ವಿಜಯಪುರ, ಅಕ್ಟೋಬರ್ 20: ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡರ ಕುಟುಂಬಕ್ಕೆ, ಜಾತ್ಯತೀತ ಜನತಾದಳ ಮತ್ತು ಸಿಂದಗಿ ಕ್ಷೇತ್ರದ ನಡುವೆ ವಾತ್ಸಲ್ಯಪೂರ್ಣವಾದ ಕರುಳುಬಳ್ಳಿಯ ಸಂಬಂಧ ಇದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಬಣ್ಣಿಸಿದರು. ಸಿಂದಗಿ ಕ್ಷೇತ್ರದ ಹೊಲಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಂಗಳವಾರ ಚುನಾವಣಾ ಪ್ರಚಾರ ಮಾಡುವ ವೇಳೆ ಅವರು ಮಾತನಾಡಿದರು. ಸುಮಾರು ಮೂವತ್ತು ವರ್ಷಗಳ ಕಾಲ ದಿವಂಗತ ಎಂ.ಸಿ. ಮನಗೂಳಿ ಕಾಕಾ ದೇವೇಗೌಡರ ಕುಟುಂಬದ ಸದಸ್ಯರಂತೆ ಇದ್ದರು. ಅವರನ್ನು …

Read More »

ಬೆಳಗಾವಿಗೆ ಆಗಮಿಸಿದ ಕಿತ್ತೂರು ಉತ್ಸವದ ವೀರಜ್ಯೋತಿಗೆ ಸ್ವಾಗತ ಕೋರಿ, ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಲಾಯಿತು.

ಬೆಳಗಾವಿಗೆ ಆಗಮಿಸಿದ ಕಿತ್ತೂರು ಉತ್ಸವದ ವೀರಜ್ಯೋತಿಗೆ ಸ್ವಾಗತ ಕೋರಿ, ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಲಾಯಿತು. ಅಕ್ಟೋಬರ್ 23 ಮತ್ತು 24ರಂದು ಎರಡು ದಿನಗಳ ಕಿತ್ತೂರು ಉತ್ಸವ ನಡೆಯುವ ಹಿನ್ನೆಲೆಯಲ್ಲಿ ಖಾನಾಪುರದಿಂದ ಆಗಮಿಸಿದ ವೀರಜ್ಯೋತಿಯನ್ನು ಬೆಳಗಾವಿಯಲ್ಲಿ ಅತ್ಯಂತ ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು. ವೀರಜ್ಯೋತಿಯನ್ನು ಬೆಳಗಾವಿಯ ಕಿತ್ತೂರು ರಾಣಿ ಚನ್ನಮ್ಮಾಜಿ ವೃತ್ತದಲ್ಲಿ ಸಕಲ ವಾಧ್ಯ ಮೇಳಗಳೊಂದಿಗೆ ಜಿಲ್ಲಾಡಳಿತ ವತಿಯಿಂದ ಬರಮಾಡಿಕೊಳ್ಳಲಾಯಿತು. 25ನೇ ವರ್ಷದ ಉತ್ಸವ ಬೆಳ್ಳಿಹಬ್ಬವನ್ನು ನಾವು ಆಚರಿಸುತ್ತಿದ್ದೇವೆ. ಮುಖ್ಯಮಂತ್ರಿಗಳು ಕೂಡ ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ. …

Read More »

ಬೆಳಗಾವಿಯಲ್ಲಿ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ C.M. ನೀಡಿದ ಪ್ರತಿಕ್ರಿಯೆ

ಬೆಳಗಾವಿ – ಬೆಳಗಾವಿಯಲ್ಲಿ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲು ಅನುಮತಿ ನೀಡುವ ಸಂಬಂಧ ತಜ್ಞರ ಜೊತೆ ಚರ್ಚಿಸಿ ತೀರ್ಮಾನಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇಂದು ಬೆಳಗ್ಗೆ ಬೆಳಗಾವಿಯಲ್ಲಿ ಮಾತನಾಡಿದ ಅವರು, ಕೋವಿಡ್ ಹಿನ್ನೆಲೆಯಲ್ಲಿ ಮೆರವಣಿಗೆಗಳಿಗೆ ಅನುಮತಿ ನೀಡಲಾಗುತ್ತಿಲ್ಲ. ಆದರೆ ಬೆಳಗಾವಿ ಕನ್ನಡ ರಾಜ್ಯೋತ್ಸವದಲ್ಲಿ ಮೆರವಣಿಗೆಗೆ ಅನುಮತಿ ನೀಡಬೇಕೆನ್ನುವ ಬೇಡಿಕೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ತಜ್ಞರ ಜೊತೆ ಚರ್ಚಿಸುತ್ತೇನೆ ಎಂದರು. ಸಿಂದಗಿ ಚುನಾವಣೆ ಪ್ರಚಾರ ಮುಗಿಸಿ ಈಗ ಬೆಂಗಳೂರಿಗೆ …

Read More »

ರೈತರನ್ನು ಕಡೆಗಣಿಸಿದ ಬಿಜೆಪಿ ಸರ್ಕಾರ’

ಹಾವೇರಿ: ಹೋರಾಟ ನಿರತ ರೈತರ ಮೇಲೆ ಕೇಂದ್ರ ಸಚಿವರ ಪುತ್ರ ಜೀಪ್‌ ಹರಿಸುತ್ತಾನೆ ಎಂದರೆ ದೇಶ ಯಾವ ಕಡೆ ಹೊರಟಿದೆ ಎಂಬುದನ್ನು ಅರ್ಥಮಾಡಿಕೊಳ್ಳಬಹುದು. ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡಿದವರನ್ನು ರೈತರೇ ಅಲ್ಲ ಎಂದು ಬಿಜೆಪಿಯವರು ಪಟ್ಟ ಕಟ್ಟುತ್ತಾರೆ ಎಂದು ಜೆಡಿಎಸ್‌ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಂ.ಸುಂಕದ ಆಕ್ರೋಶ ವ್ಯಕ್ತಪಡಿಸಿದರು. ಹಾವೇರಿ ನಗರದ ವಿದ್ಯಾನಗರ (ಪಶ್ಚಿಮ) ಭಾಗದಲ್ಲಿರುವ ಪಕ್ಷದ ಕಚೇರಿಯಲ್ಲಿ ಮಂಗಳವಾರ ಹಾವೇರಿ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಪದಾಧಿಕಾರಿಗಳ ಸಭೆಯಲ್ಲಿ ಅವರು …

Read More »

ಜೈಲುಗಳಲ್ಲಿ ಇನ್ನು ಸಿಬಂದಿಗೂ ಮೊಬೈಲ್‌ ನಿಷೇಧ!

ಬೆಂಗಳೂರು: ಜೈಲುಗಳಲ್ಲಿ ನಡೆಯುವ ಎಲ್ಲ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕಾರಾಗೃಹ ಮತ್ತು ಸುಧಾರಣ ಸೇವೆಗಳ ಇಲಾಖೆ ಮುಂದಾಗಿದೆ. ಬೆಂಗಳೂರಿನ ಕೇಂದ್ರ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಪ್ರಾಯೋಗಿಕವಾಗಿ ಈ ಪ್ರಕ್ರಿಯೆ ಆರಂಭವಾಗಿದ್ದು, ಜೈಲಿನ ಮುಖ್ಯ ಅಧೀಕ್ಷಕರು, ಅಧೀಕ್ಷಕರಿಗೆ ಮಾತ್ರ ಮೊಬೈಲ್‌ ಬಳಕೆಗೆ ಅವಕಾಶವಿರಲಿದೆ. ಕಾರಾಗೃಹದ ಮುಂಭಾಗದಲ್ಲೇ “ಮೊಬೈಲ್‌, ಲ್ಯಾಪ್‌ಟಾಪ್‌ ಮತ್ತು ಇತರ ಎಲೆಕ್ಟ್ರಾನಿಕ್‌ ವಸ್ತುಗಳ ಸಹಿತ ನಿಷೇಧಿತ ವಸ್ತುಗಳನ್ನು ಜೈಲಿನ ಒಳಗೆ ಕೊಂಡೊಯ್ಯುವಂತಿಲ್ಲ’ ಎಂಬ ಸೂಚನೆ ಫ‌ಲಕ ಹಾಕಲಾಗಿದೆ. ಇದೇ …

Read More »