Breaking News

Laxminews 24x7

ಕಬ್ಬಿನ ಹೊಸ ತಳಿಗಳ ಪ್ರದರ್ಶನ

ಕೃಷಿ ತೋ ನಾಸ್ತಿ ದುರ್ಭಿಕ್ಷಂ’ನಿಪ್ಪಾಣಿಯ ಶ್ರೀ ಹಾಲಸಿದ್ಧನಾಥ ಕೋ ಆಫ್ ಶುಗರ ಫ್ಯಾಕ್ಟರಿ ಲಿ.,(ಮಲ್ಟಿ – ಸ್ಟೇಟ್) ವಾರ್ಷಿಕ ಸರ್ವಸಾಧಾರಣ ಸಭೆಯ ಅಂಗವಾಗಿ ವಿಶೇಷವಾಗಿ ರೈತರಿಗೆ ಹೊಸ ತಂತ್ರಜ್ಞಾನದ ಬಗ್ಗೆ ಪರಿಚಯ ಮಾಡಿಸುವ ನಿಟ್ಟಿನಲ್ಲಿ ಆಯೋಜಿಸಿದ್ದ ‘ಕೃಷಿ ಪ್ರದರ್ಶನ’ ಕಾರ್ಯಕ್ರಮದಲ್ಲಿ ಭಾಗವಹಿಸಿ,ಕೃಷಿ ಮಳಿಗೆಯನ್ನು ವೀಕ್ಷಿಸಲಾಯಿತು. ಅನ್ನದಾತರಿಗೆ ಅನುಕೂಲವಾಗುವ ಉದ್ದೇಶದಿಂದ ಹಲವಾರು ಕೃಷಿ ಔಷಧ,ಹೊಸ ಯಂತ್ರೋಪಕರಣ, ಸಲಕರಣೆಗಳು ಕಾರ್ಖಾನೆ ವತಿಯಿಂದ ರೈತರಿಗೆ ಪರಿಚಯಿಸಿದರು.ಕೃಷಿಯಲ್ಲಿ ಸಾಧನೆ ಮಾಡಿದ ರೈತರು ಬೆಳೆದ ಕಬ್ಬಿನ ಹೊಸ …

Read More »

ಗೋಕಾಕ‌ ತಾಲೂಕಿನ ರಡ್ಡೇರಹಟ್ಟಿ ಗ್ರಾಮದಲ್ಲಿ ನೂತನವಾಗಿ ಪ್ರತಿಷ್ಠಾಪಿಸಿದ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ನೂತನ ಪುತ್ಥಳಿ

ಗೋಕಾಕ‌ ತಾಲೂಕಿನ ರಡ್ಡೇರಹಟ್ಟಿ ಗ್ರಾಮದಲ್ಲಿ ನೂತನವಾಗಿ ಪ್ರತಿಷ್ಠಾಪಿಸಿದ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ನೂತನ ಪುತ್ಥಳಿ ಯನ್ನು ಇಂದು ಅನಾವರಣಗೊಳಿಸಲಾಯಿ. ಈ ಸಂದರ್ಭದಲ್ಲಿ ಸಂಘಟಕರಿಂದ ಆಯೋಜಿಸಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಯುವ ನಾಯಕ ರಾಹುಲ ಜಾರಕಿಹೊಳಿ.. ಈ ವೇಳೆ ಸಹೋದರ ಹಾಗೂ ಮುಖಂಡರಾದ ಶ್ರೀ ಸರ್ವೊತ್ತಮ‌ ಜಾರಕಿಹೊಳಿ, ಶ್ರೀ ವಿಶ್ವನಾಥ ಹಿರೇಮಠ ಸ್ವಾಮಿಗಳು, ಮುಖಂಡರಾದ ಡಾ. ರಾಜೇಂದ್ರ ಸಣ್ಣಕ್ಕಿ, ಶ್ರೀ‌ ಶಿವು ಪಾಟೀಲ, ಭೀಮ‌ ಆರ್ಮಿ …

Read More »

ಹುದಲಿ ಗ್ರಾಮಕ್ಕೆ ಆಗಮಿಸಿ ಗಾಂಧೀಜಿ 7 ದಿನಗಳ ಕಾಲ ವಾಸ್ತವ್ಯ ಹೂಡಿದ ನೆನಪುಗಳನ್ನು ಸ್ಮರಿಸಿದ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ..

ನಮ್ಮ ಕ್ಷೇತ್ರದ ಹೆಮ್ಮೆ ಮಹಾತ್ಮಾ ಗಾಂಧೀ – ಗಂಗಾಧರರಾವ್ ಸ್ಮಾರಕ ಭವನಕ್ಕೆ ಇಂದು ಭೇಟಿ ನೀಡಿ, 1937ರಲ್ಲಿ ಹುದಲಿ ಗ್ರಾಮಕ್ಕೆ ಆಗಮಿಸಿ ಗಾಂಧೀಜಿ 7 ದಿನಗಳ ಕಾಲ ವಾಸ್ತವ್ಯ ಹೂಡಿದ ನೆನಪುಗಳನ್ನು ಸ್ಮರಿಸಿದ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ.. ಅದೇ ಸಂದರ್ಭದಲ್ಲಿ ಗಾಂಧೀಜಿ ಭಾಗವಹಿಸಿದ್ದ ಗಾಂಧೀ ಸೇವಾ ಸಮ್ಮೇಳನವನ್ನು ನೆನೆಸಿಕೊಳ್ಳಲಾಯಿತು. ಈ ಸಮ್ಮೇಳನವನ್ನು ಗಾಂಧೀಜಿಯ ನಿಷ್ಠಾವಂತ ಅನುಯಾಯಿ ಹಾಗೂ “ಕರ್ನಾಟಕದ ಗಾಂಧೀ” ಎಂದೇ ಖ್ಯಾತರಾದ ಗಂಗಾಧರರಾವ್ ದೇಶಪಾಂಡೆ ಅವರ ಆಹ್ವಾನದ ಮೇರೆಗೆ …

Read More »

ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಲಖಾಂಬ ಗ್ರಾಮದಲ್ಲಿ ‌ಇಂದು‌ ವಿವಿಧೋದ್ದೇಶ ಪ್ರಾಥಮಿಕ ‌ಗ್ರಾಮೀಣ ಕೃಷಿ‌‌ ಸಹಕಾರಿ ಸಂಘದ‌ ನೂತನ ಕಟ್ಟಡದ ಭೂಮಿಪೂಜೆ

ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಲಖಾಂಬ ಗ್ರಾಮದಲ್ಲಿ ‌ಇಂದು‌ ವಿವಿಧೋದ್ದೇಶ ಪ್ರಾಥಮಿಕ ‌ಗ್ರಾಮೀಣ ಕೃಷಿ‌‌ ಸಹಕಾರಿ ಸಂಘದ‌ ನೂತನ ಕಟ್ಟಡದ ಭೂಮಿಪೂಜೆಯನ್ನು ಇಂದು‌ ನೆರವೇರಿಸಿದ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ.. ಈ‌ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಶ್ರೀ ಅಪ್ಪಾಸಾಬ ಕುಲಗುಡೆ, ನಿರ್ದೇಶಕರಾದ ಶ್ರೀ ರಾಜು ಅಂಕಲಗಿ‌ ಹಾಗೂ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು‌, ಸರ್ವ ಸದಸ್ಯರು, ಗ್ರಾಮದ ಹಿರಿಯರು ‌ಮತ್ತು‌ ಮುಖಂಡರು ‌ಉಪಸ್ಥಿತರಿದ್ದರು.

Read More »

ಹಣಮಾಪುರ (ಕೌಲಗುಡ್ಡ) ನಲ್ಲಿ ಶ್ರೀ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಪ್ರವಚನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಚಿವ ಸತೀಶ ಜಾರಕಿಹೊಳಿ.

ಅಥಣಿ ಸಮೀಪದ ಹಣಮಾಪುರ (ಕೌಲಗುಡ್ಡ) ನಲ್ಲಿ ಶ್ರೀ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಪ್ರವಚನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಚಿವ ಸತೀಶ ಜಾರಕಿಹೊಳಿ. ಈ ವೇಳೆ ಪರಮಪೂಜ್ಯ ಶ್ರೀ ಅಮರೇಶ್ವರ ಮಹಾರಾಜ್ ಅವರು ಉಪಸ್ಥಿತರಿದ್ದರು. ಇದಕ್ಕೂ ಮುಂಚೆ ಅಥಣಿ ತಾಲೂಕಿನ ರಡೇರಹಟ್ಟಿ ಸರ್ಕಾರಿ ಕನ್ನಡ ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ‌ ನೀಡಿ, ಶಾಲೆಯ ಕುಂದುಕೊರತೆಗಳನ್ನು ಆಲಿಸಿದೆ. ಈ ವೇಳೆ ಶಾಸಕರಾದ ಶ್ರೀ ಗಣೇಶ ಹುಕ್ಕೇರಿ ಅವರು …

Read More »

ನೇತೃತ್ವವನ್ನು ಧಾರವಾಡದಲ್ಲಿ ಬೀದಿಗೆ ಇಳಿದ ವಿದ್ಯಾರ್ಥಿಗಳು… ರಾಜ್ಯ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಪರಿಹರಿಸಲು ಆಗ್ರಹ.

ನೇತೃತ್ವವನ್ನು ಧಾರವಾಡದಲ್ಲಿ ಬೀದಿಗೆ ಇಳಿದ ವಿದ್ಯಾರ್ಥಿಗಳು… ರಾಜ್ಯ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಪರಿಹರಿಸಲು ಆಗ್ರಹ. ರಾಜ್ಯದ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಪರಿಹರಿಸುವಂತೆ ಆಗ್ರಹಿಸಿ, ಧಾರವಾಡದಲ್ಲಿ ಪದವಿ ವಿದ್ಯಾರ್ಥಿಗಳು ಬೀದಿಗೆ ಇಳಿದು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು. AIDSO ಧಾರವಾಡ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ‌ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಪದವಿ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯಾದ್ಯಂತ ಪದವಿ …

Read More »

ಕ್ರಾಂತಿ ಮಹಿಳಾ ಮಂಡಳ, ಉಮಾ ಸಂಗೀತ ಪ್ರತಿಷ್ಠಾನದಿಂದ ಸ್ವಾತಂತ್ರ್ಯ ದಿನಾಚರಣೆ ಮಕ್ಕಳಿಗೆ ದೇಶಾಭಿಮಾನ ಬೆಳೆಸಿ: ಸಂತೋಷ್ ಮಠಪತಿ

ಬೆಳಗಾವಿ: ಪ್ರಾಥಮಿಕ ಹಂತದಲ್ಲೆ ಮಕ್ಕಳಿಗೆ ದೇಶಾಭಿಮಾನ ಬೆಳೆಸಿ, ದೇಶದ ಉತ್ತಮ ನಾಗರಿಕನನ್ನಾಗಿ ಮಾಡುವ ಜವಾಬ್ದಾರಿ ಪೋಷಕರ ಮೇಲಿದೆ ಎಂದು ಸ್ಪೂರ್ತಿ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷರು, ಮಾಜಿ ಸೈನಿಕರಾದ ಸಂತೋಷ್ ಮಠಪತಿ ಅವರು ಹೇಳಿದರು. ನಗರದ ಹಿಂದವಾಡಿಯಲ್ಲಿರುವ ಗೊಮ್‌ಟೇಶ ವಿದ್ಯಾಪೀಠದಲ್ಲಿ ಕ್ರಾಂತಿ ಮಹಿಳಾ ಮಂಡಳ ಮತ್ತು ಉಮಾ ಸಂಗೀತ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾದ ಸ್ವಾತಂತ್ರ್ಯೋತ್ಸವದ ದಿನಾಚರಣೆ ಕಾರ್ಯಕ್ರಮವನ್ನು ನೆರವೇರಿಸಿ, ಭಾರತಾಂಬೆಗೆ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು. ಮಕ್ಕಳಲ್ಲಿ ಶಿಸ್ತು, …

Read More »

ಗಣೇಶ, ಈದ್ ಮಿಲಾದ್ ಹಬ್ಬದ ಹಿನ್ನೆಲೆ ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರ ನೇತೃತ್ವದಲ್ಲಿ ಅವಳಿನಗರದಲ್ಲಿನ 400 ಡ್ರಗ್ ಪೆಡ್ಲರ್ಸ್ ಹಾಗೂ ಸೇವನೆ ಮಾಡುವವರ ಪರೇಡ್

ಗಣೇಶ, ಈದ್ ಮಿಲಾದ್ ಹಬ್ಬದ ಹಿನ್ನೆಲೆ ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರ ನೇತೃತ್ವದಲ್ಲಿ ಅವಳಿನಗರದಲ್ಲಿನ 400 ಡ್ರಗ್ ಪೆಡ್ಲರ್ಸ್ ಹಾಗೂ ಸೇವನೆ ಮಾಡುವವರ ಪರೇಡ್ ಮಾಡಲಾಯಿತು. ಈ ಕುರಿತು ನಗರದಲ್ಲಿ ಮಾತನಾಡಿದ ಅವರು ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ತಾಕೀತು ಮಾಡಲಾಗಿದ್ದು. ಗಣೇಶ, ಈದ್ ಮಿಲಾದ್ ಹಬ್ಬದ ಹಿನ್ನೆಲೆ ತಯಾರಿ ಮಾಡಿಕೊಂಡಿದ್ದೇವೆ . ರೌಡಿ ಶೀಟರ್ ಗಳ ಮೇಲೆ ಹಲವು ರೀತಿಯ ಕ್ರಮ ಕೈಗೊಂಡಿದ್ದೇವೆ …

Read More »

26 ಕರ್ನಾಟಕ ಎನ್‌ಸಿಸಿ ಬಟಾಲಿಯನ್ ವಾರ್ಷಿಕ ಶಿಬಿರದಲ್ಲಿ ರಕ್ತದಾನ ರಕ್ತದಾನ ಶ್ರೇಷ್ಠ ದಾನ: ಕರ್ನಲ್ ಸುನಿಲ್ ದಾಗರ

ಬೆಳಗಾವಿ 25: ಸರ್ವದಾನಗಳಲ್ಲಿ ರಕ್ತದಾನ ಮಹಾದಾನವಾಗಿದೆ. ರಕ್ತದಾನವನ್ನು ಮಾಡುವುದರಿಂದ ಒಬ್ಬ ರೋಗಿಯ ಜೀವನ ಉಳಿಸಲು ಸಾಧ್ಯ. ಪ್ರತಿಯೊಬ್ಬ ವ್ಯಕ್ತಿಯು ರಕ್ತದಾನ ಮಾಡಿ ಸಾಮಾಜಿಕ ಸೇವೆಯಲ್ಲಿ ತೊಡಗಬೇಕೆಂದು 26 ಕಮಾಂಡಿAಗ್ ಆಫೀಸರ್ ಕರ್ನಲ್ ಸುನಿಲ್ ದಾಗರ್ ಹೇಳಿದರು. ಅವರು ಬೆಳಗಾಮ್ ಬ್ಲಡ್ ಬ್ಯಾಂಕ್ ಸೆಂಟರ್ ಸಹಯೋಗದಲ್ಲಿ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. ರಕ್ತದಾನ ಮಾಡುವುದರಿಂದ ನಮ್ಮ ಆರೋಗ್ಯವು ಸದೃಢವಾಗಿರುವುದು. ಹೃದಯ ಸಂಬAಧಿ ಕಾಯಿಲೆಗಳು ಸಂಭವಿಸುವುದಿಲ್ಲ. 18 ಮೀರಿದ ವಿದ್ಯಾರ್ಥಿಗಳು ರಕ್ತದಾನವನ್ನು …

Read More »

ಪ್ರಾಥಃಸ್ಮರಣೀಯ, ಸಮಾಧಿ ಸಾಮ್ರಾಟ, ಚಾರಿತ್ರ್ಯ ಚಕ್ರವರ್ತಿ ಪ್ರಥಮಾಚಾರ್ಯ ಪ.ಪೂ. ಶ್ರೀ 108 ಶಾಂತಿಸಾಗರ ಮಹಾರಾಜರವರ 70ನೇ ಪುಣ್ಯತಿಥಿ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ದಕ್ಷಿಣ ಭಾರತ ಜೈನ ಸಭಾ ವೀರ ಸೇವಾದಳ ಮಧ್ಯವರ್ತಿ ಸಮಿತಿಯವರಿಂದ, ಪ್ರಾಥಃಸ್ಮರಣೀಯ, ಸಮಾಧಿ ಸಾಮ್ರಾಟ, ಚಾರಿತ್ರ್ಯ ಚಕ್ರವರ್ತಿ ಪ್ರಥಮಾಚಾರ್ಯ ಪ.ಪೂ. ಶ್ರೀ 108 ಶಾಂತಿಸಾಗರ ಮಹಾರಾಜರವರ 70ನೇ ಪುಣ್ಯತಿಥಿ ನಿಮಿತ್ತವಾಗಿ ಹಮ್ಮಿಕೊಂಡಿದ್ದ ‌ಕಾರ್ಯಕ್ರಮದಲ್ಲಿ ಪಾಲ್ಗೊಂಡು, ನುಡಿ‌ ನಮನಗಳನ್ನು ಸಲ್ಲಿಸಿದೆ.

Read More »