Breaking News

Laxminews 24x7

5 ಜಿಲ್ಲೆಗಳ ವ್ಯಾಪ್ತಿಯಲ್ಲಿ ಬೆಳೆ ಹಾನಿ: ಮಳೆ, ರೋಗಬಾಧೆಗೆ ತುತ್ತಾದ ದ್ರಾಕ್ಷಿ

ಹುಬ್ಬಳ್ಳಿ: ಇತ್ತೀಚೆಗೆ ಸುರಿದ ಮಳೆ, ಮೋಡ ಕವಿದ ವಾತಾವರಣ ಹಾಗೂ ರೋಗಬಾಧೆಯಿಂದ ರಾಜ್ಯದಲ್ಲಿ ದ್ರಾಕ್ಷಿ ಬೆಳೆ ಅಪಾರ ಹಾನಿಗೊಳಗಾಗಿದೆ. ದ್ರಾಕ್ಷಿ ಬೆಳೆಯುವ ಸುಮಾರು 32,000 ಹೆಕ್ಟೇರ್‌ ಪ್ರದೇಶದ ಪೈಕಿ ಶೇ 60ರಿಂದ ಶೇ 65ರಷ್ಟು ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.   ರಾಜ್ಯದಲ್ಲಿ ಬೆಳಗಾವಿ, ವಿಜಯಪುರ, ಬಾಗಲಕೋಟೆಯಲ್ಲಿ ಅಂದಾಜು 26,500 ಹೆಕ್ಟೇರ್‌ ಪ್ರದೇಶದಲ್ಲಿ ದ್ರಾಕ್ಷಿ ಬೆಳೆಯಲಾಗುತ್ತಿದೆ. ಉಳಿದಂತೆ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿಯೂ ಬೆಳೆಯಲಾಗುತ್ತಿದೆ. ಸಾಮಾನ್ಯವಾಗಿ ದ್ರಾಕ್ಷಿ ಗಿಡವನ್ನು ಚಾಟ್ನಿ (ಪ್ರುನಿಂಗ್‌) …

Read More »

ಟ್ರಾವೆಲ್ಸ್ ಹೆಸರಲ್ಲಿ ನೂರಾರು ಟ್ಯಾಕ್ಸಿ ಮಾಲಕರಿಗೆ ಪಂಗನಾಮ ಹಾಕಿ ಟ್ರಾವೆಲ್ಸ್ ಬಾಗಿಲು ಹಾಕಿ ಸುಮಾರು 10 ಕೋಟಿ ಮೌಲ್ಯದ ವಾಹನಗಳ ಜೊತೆ ಪರಾರಿ

ಬೆಂಗಳೂರು : ಟ್ರಾವೆಲ್ಸ್ ಹೆಸರಲ್ಲಿ ನೂರಾರು ಟ್ಯಾಕ್ಸಿ ಮಾಲಕರಿಗೆ ಪಂಗನಾಮ ಹಾಕಿ ಟ್ರಾವೆಲ್ಸ್ ಬಾಗಿಲು ಹಾಕಿ ಸುಮಾರು 10 ಕೋಟಿ ಮೌಲ್ಯದ ವಾಹನಗಳ ಜೊತೆ ಪರಾರಿಯಾದ ಘಟನೆ ನಡೆದಿದೆ. ಬಾಗಲಗುಂಟೆ ಸಮೀಪದ ಎಂಇಐ ಲೆಯೊಟ್ ನಲ್ಲಿ ತಮಿಳುನಾಡು ಮೂಲದ ಶಿವಕುಮಾರ ಎಂಬಾತ ಆರ್ ಎಸ್ ಟ್ರಾವೆಲ್ಸ್ ಕಂಪನಿ ಆರಂಭಿಸಿದ್ದ,ಮೊದ ಮೊದಲು ಅಟ್ಯಾಚ ಹೆಸರಲ್ಲಿ ಕೆಲವು ವಾಹನಗಳಿಗೆ ತಿಂಗಳು ತಿಂಗಳು ಸರಿಯಾಗಿ ಬಾಡಿಗೆ ಕೊಡುತ್ತಾ ನಂಬಿಕೆ ಗಳಿಸಿದ್ದ. ಈತನ ಮೇಲಿನ ನಂಬಿಕೆಯಿಂದ …

Read More »

ಹಾವೇರಿ ಜಿಲ್ಲೆಯ ಬಸಾಪುರ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದ ಪರಿಣಾಮ ನಾಲ್ಕು ಜನ ಗಂಭೀರವಾಗಿ ಗಾಯ

ಹಾವೇರಿ : ಹಾವೇರಿ ಜಿಲ್ಲೆಯ ಬಸಾಪುರ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದ ಪರಿಣಾಮ ನಾಲ್ಕು ಜನ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಇಂದು ಬಸಾಪುರ ಗ್ರಾಮದಲ್ಲಿ ರಾಜ್ಯಮಟ್ಟದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಈ ಅವಘಡ ಸಂಭವಿಸಿದ್ದು ಗಂಭೀರವಾಗಿ ಗಾಯಗೊಂಡ ನಾಲ್ಕು ಜನರನ್ನು ಹಾವೇರಿ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆಯನ್ನು ನೀಡಲಾಗುತ್ತಿದ್ದು. ಗುತ್ತಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More »

ಹುಬ್ಬಳ್ಳಿ : ಹುಬ್ಬಳ್ಳಿಯ ಸಿದ್ದಾರೊಡ ಮಠದಲ್ಲಿರುವ ಕಲ್ಯಾಣಿ ಒಳಗೆ ವಿದ್ಯಾರ್ಥಿ ಈಜಲು ಹೋಗಿ ಮೃತಪಟ್ಟ ಘಟನೆ ನಡೆದಿದೆ.

ಹುಬ್ಬಳ್ಳಿ : ಹುಬ್ಬಳ್ಳಿಯ ಸಿದ್ದಾರೊಡ ಮಠದಲ್ಲಿರುವ ಕಲ್ಯಾಣಿ ಒಳಗೆ ವಿದ್ಯಾರ್ಥಿ ಈಜಲು ಹೋಗಿ ಮೃತಪಟ್ಟ ಘಟನೆ ನಡೆದಿದೆ. ಇಂದು ಮುಂಜಾನೆ ಸಿದ್ದಾರೊಡ ರ ಮಠದ ಕೆರೆಯಲ್ಲಿನ ಶ್ರೀ ಗುರುನಾಥರೂಢರ ಪೂಜೆಯನ್ನು ಸಲ್ಲಿಸಲು ಹೋಗಿದ್ದ ವಿದ್ಯಾರ್ಥಿ ಈಜಲು ಹೋಗಿ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ಹಲವು ವರ್ಷಗಳಿಂದ ಸಿದ್ದಾರೊಡರ ಮಠದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಉಮೇಶಪ್ಪ ಜಾಳಿಹಾಳ ಎಂದು ತಿಳಿದು ಬಂದಿದೆ. ಸುದ್ದಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ NDRF ಸಿಬ್ಬಂದಿ ಬಂದು …

Read More »

ಣ್ಣೆ ಪಾರ್ಟಿಗೆಂದು ಆಹ್ವಾನಿಸಿ ಸ್ನೇಹಿತನನ್ನೇ ದುಷ್ಕರ್ಮಿಗಳು ಹತ್ಯೆಗೈದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ : ಎಣ್ಣೆ ಪಾರ್ಟಿಗೆಂದು ಆಹ್ವಾನಿಸಿ ಸ್ನೇಹಿತನನ್ನೇ ದುಷ್ಕರ್ಮಿಗಳು ಹತ್ಯೆಗೈದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ವಡಗಾವಿಯ ಸೂರಜ್ ಗೊಂದವಾಡ್ಕರ್ (23) ಕೊಲೆಯಾದ ದುರ್ದೈವಿ. ಮನೆಯಲ್ಲಿದ್ದ ಸೂರಜ್​ಗೆ ಫೋನ್ ಮಾಡಿರುವ ದುಷ್ಕರ್ಮಿಗಳು, ಎಣ್ಣೆ ಪಾರ್ಟಿಗೆ ಆಹ್ವಾನಿಸಿದ್ದಾರೆ. ನಂತರ ಹಳೆ ಬೆಳಗಾವಿಯ ಯಡಿಯೂರಪ್ಪ ಮಾರ್ಗದಲ್ಲಿ ಸ್ನೇಹಿತರೆಲ್ಲರೂ ಪಾರ್ಟಿ ಮಾಡಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ಮಧ್ಯೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿದೆ. ಬಳಿಕ ಸೂರಜ್​ಗೆ ರಾಡ್​ನಿಂದ ಹೊಡೆದು ಹತ್ಯೆಗೈದಿರುವ ದುಷ್ಕರ್ಮಿಗಳು, ರಸ್ತೆ ಪಕ್ಕ ಶವ ಎಸೆದು …

Read More »

ಹಮ್ ದೋ ಹಮಾರೆ ದೋ’ ಅಂದುಕೊಂಡು ದೇಶದ ಆಸ್ತಿಯನ್ನ ಅಂಬಾನಿ, ಅದಾನಿಗೆ ಮಾರೊದೊಂದೆ ಬಿಜೆಪಿಯ ಉದ್ಯೋಗ: ಲಕ್ಷ್ಮಿ ಹೆಬ್ಬಾಳ್ಕರ್

ಚಿಕ್ಕೋಡಿ: ಬಿಜೆಪಿ ಪಕ್ಷ ಏಳು ವರ್ಷದಲ್ಲಿ ಎಷ್ಟು ಕಡಿದುಕಟ್ಟೆ ಹಾಕಿದ್ದಾರೆ ಅನ್ನೋದನ್ನ ನೋಡಿದ್ದೇವೆ. ಕಾಂಗ್ರೆಸ್ ಪಕ್ಷ ಮಾಡಿಟ್ಟ ಆಸ್ತಿ ಮಾರೋದೇ ಬಿಜೆಪಿ ಅಭಿವೃದ್ಧಿ ಕಾರ್ಯವಾಗಿದೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ತಾಲೂಕಿನ ಯಕ್ಸಂಬಾದಲ್ಲಿ ಆಯೋಜಿಸಲಾಗಿದ್ದ ವಿಧಾನ ಪರಿಷತ್​​ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಸಮಯದ ಕೊರತೆ, ಅಭಾವದಿಂದಾಗಿ ಮನೆ‌ಮನೆಗೆ ಬಂದುಪ್ರಚಾರ ಮಾಡಲು ಆಗುತ್ತಿಲ್ಲ. ಹೀಗಾಗಿ ನಿಮ್ಮ ವಿನಂತಿಗೆ ಚಿಕ್ಕೋಡಿಗೆ ಬಂದಿದ್ದೇನೆ. ಚುನಾಯಿತ ಎಲ್ಲ ಪ್ರತಿನಿಧಿಗಳು ನಮಗೆ ಬೆಂಬಲಿಸಬೇಕು. ಕಳೆದ ಇಪ್ಪತ್ತು …

Read More »

ಒಮಿಕ್ರಾನ್ ಭೀತಿ.. ಮುಂಜಾಗ್ರತಾ ಕ್ರಮ, ಚಟುವಟಿಕೆ ನಿರ್ಬಂಧ ಕುರಿತು ಇಂದು ನಿರ್ಧಾರ- ಸಚಿವ ಸುಧಾಕರ್​

ಬೆಂಗಳೂರು: ಹೊಸ ಪ್ರಬೇಧದ ಕೊರೊನಾ ವೈರಸ್​ ಭೀತಿ ಹಿನ್ನೆಲೆಯಲ್ಲಿ ಯಾವ ರೀತಿ ರಾಜ್ಯದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಚಟುವಟಿಕೆಗಳ ಮೇಲೆ ನಿರ್ಬಂಧದ ಬಗ್ಗೆ ಇಂದು ನಡೆಯುವ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿವಿಧ ದೇಶಗಳಲ್ಲಿ ಹೊಸ ಪ್ರಬೇಧದ ವೈರಸ್ ಒಮಿಕ್ರೋನ್​ ಪತ್ತೆಯಾಗಿದೆ. ಬೆಂಗಳೂರು, ಮಂಗಳೂರು ವಿಮಾನ ನಿಲ್ದಾಣ ಮತ್ತು ಬಂದರುಗಳಲ್ಲಿ ಯಾವೆಲ್ಲಾ ರೀತಿಯ ನಿರ್ಬಂಧ ಹೇರಬೇಕು. ಅಲ್ಲದೇ …

Read More »

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ದಾಳಿ

ಬೆಂಗಳೂರು: ರಾಜಧಾನಿಯ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಅಧಿಕಾರಗಳು ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಜೈಲಿನಲ್ಲಿದ್ದುಕೊಂಡೇ ಅಕ್ರಮ ಚಟುವಟಿಕೆ ನಡೆಸುತ್ತಿರುವ ಆರೋಪದ ಮೇಲೆ ಮತ್ತು ಮೊಬೈಲ್, ಗಾಂಜಾ, ಇತರೆ ವಸ್ತುಗಳ ಪೂರೈಕೆ ಆರೋಪದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಈ ದಾಳಿ ನಡೆಸಿದ್ದಾರೆ. ಸಿಸಿಬಿ ಪೊಲೀಸರ ದಾಳಿ ಇನ್ನೂ ಮುಂದುವರೆದಿದೆ.

Read More »

ಕಚೇರಿಯಲ್ಲೇ ತಬ್ಕೊಂಡು ಪೀಡಿಸಿದ್ರೂ 9 ಮಹಿಳೆಯರಲ್ಲಿ ಯಾರೊಬ್ಬರೂ ಬಾಯ್ಬಿಟ್ಟಿಲ್ಲ ಏಕೆ?

ಮಂಗಳೂರು: ಆಯುಷ್​ ಇಲಾಖೆ ವೈದ್ಯಾಧಿಕಾರಿ ಡಾ.ರತ್ನಾಕರ್​ನ ಕಾಮಪುರಾಣದ ಅಸಹ್ಯ ಉಟ್ಟಿಸೋ ದೃಶ್ಯಗಳು ವೈರಲ್​ ಆಗಿದ್ದು, ಆರೋಗ್ಯ ಕಚೇರಿಯಲ್ಲೇ ಹಲವು ದಿನದಿಂದ ಚೆಲ್ಲಾಟ ನಡೆಸಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಕೊಟ್ಟಿದ್ದರೂ ತಡವಾಗಿ ಪ್ರಕರಣ ಬೆಳಕಿಗೆ ಬಂದಿದ್ದೇಕೆ? ಈ ಹಿಂದೆಯೇ ವೈದ್ಯ ಕಚೇರಿಯಲ್ಲಿ ಮಹಿಳಾ ಸಿಬ್ಬಂದಿ ಜತೆ ರತ್ನಾಕರ್​ ನಡೆದುಕೊಳ್ಳುತ್ತಿರುವ ರೀತಿಯ ವಿರುದ್ಧ ಅನಾಮಿಕ ಪತ್ರವೊಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಬಂದಿತ್ತು. ಆಗಲೂ ಸಂತ್ರಸ್ತ ಮಹಿಳೆಯರೂ ಬಾಯ್ಬಿಟ್ಟಿರಲಿಲ್ಲ ಏಕೆ? ರತ್ನಾಕರ್​ ಕಂಡರೆ ಸಂತ್ರಸ್ತೆಯರಿಗೆ …

Read More »

ಈಶ್ವರಪ್ಪ ಹೇಳಿದ ಹಾಗೆ ಬೊಮ್ಮಾಯಿ ರಾಜೀನಾಮೆ ಖಚಿತ….ಡಿಕೆಶಿ ವಿಜಯಪುರದಲ್ಲಿ ಹೊಸ ಬಾಂಬ್

ವಿಜಯಪುರ: ರಾಜ್ಯ ಬಿಜೆಪಿ ಸರಕಾರದಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿ ಬದಲಾವಣೆ ಖಚಿತ. ಈ ಹಿಂದೆ ಯಡಿಯೂರಪ್ಪ ಮೇಲೆ ವಿಶ್ವಾಸ ಕಳೆದುಕೊಂಡರೆಂದು ರಾಜೀನಾಮೆ ಪಡೆಯಲಾಯಿತು. ಅನಂತರ ಅಧಿಕಾರಕ್ಕೆ ಬಂದ ಬಸವರಾಜ ಬೊಮ್ಮಾಯಿ ಸರಕಾರದ ಮೇಲೂ ಅವರದೇ ಸಚಿವರು ಇದೀಗ ಸಂಶಯ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಬೊಮ್ಮಾಯಿ ಕೂಡ ರಾಜೀನಾಮೆ ಕೊಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆಗ್ರಹಿಸಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರಕಾರದ ಭ್ರಷ್ಟಾಚಾರ, ಆಡಳಿತ ಯಂತ್ರದ ಕುಸಿತದ ಕುರಿತು …

Read More »