ಬೆಂಗಳೂರು: ಮೈಕ್ರೋ ಫೈನಾನ್ಸಿಯರ್ಗಳ ಕಿರುಕುಳಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡ ಜನರ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಧಾನಪರಿಷತ್ನಲ್ಲಿ ಘೋಷಿಸಿದ್ದಾರೆ. ಸಾಲಬಾಧೆಗೆ ತತ್ತರಿಸಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಅವರ ಕುಟುಂಬಕ್ಕೆ ನೀಡಲಾಗುವ ಪರಿಹಾರ ಮಾದರಿಯಲ್ಲೇ ಮೈಕ್ರೋ ಫೈನಾನ್ಸ್ಗಳ ಹಾವಳಿಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಗಳ ಕುಟುಂಬಕ್ಕೂ 5 ಲಕ್ಷ ರೂ ನೀಡಲಾಗುವುದು. ಆತ್ಮಹತ್ಯೆ ಪ್ರಮಾಣವನ್ನು ಶೂನ್ಯಕ್ಕೆ ಇಳಿಸುವುದೇ ನಮ್ಮ ಉದ್ದೇಶ. ಈ ಬಗ್ಗೆ ಹಣಕಾಸು ಇಲಾಖೆ ಹಾಗೂ ಮುಖ್ಯ …
Read More »ಉನ್ನತ ಶಿಕ್ಷಣಕ್ಕೆ ಸರ್ಕಾರಿ ಸೇವಾ ನಿರತ ವೈದ್ಯರನ್ನು ಬಿಡುಗಡೆಗೊಳಿಸದ ಸರ್ಕಾರ ಕ್ರಮಕ್ಕೆ ಹೈಕೋರ್ಟ್ ತರಾಟೆ
ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾನಿರತ ವೈದ್ಯರಿಗೆ ಉನ್ನತ ಶಿಕ್ಷಣ ಪಡೆಯಲು ಸೇವೆಯಿಂದ ಬಿಡುಗಡೆಗೊಳಿಸಲು ನ್ಯಾಯಾಲಯ ನೀಡಿದ ಆದೇಶ ಪಾಲಿಸದ ಸರ್ಕಾರದ ಕ್ರಮವನ್ನು ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಉನ್ನತ ಶಿಕ್ಷಣ ಪಡೆಯಲು ತಮ್ಮನ್ನು ಸೇವೆಯಿಂದ ಬಿಡುಗಡೆಗೊಳಿಸುವಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಏಕಸದಸ್ಯ ನ್ಯಾಯಪೀಠ 2025ರ ಜೂನ್ 24ರಂದು ಆದೇಶ ಹೊರಡಿಸಿತ್ತು. ಈ ಆದೇಶ ಪಾಲಿಸದ ಆರೋಗ್ಯ ಇಲಾಖೆಯ ಕ್ರಮ ಪ್ರಶ್ನಿಸಿ ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕು ಬಾಚಿಗೊಂಡನಹಳ್ಳಿಯ ಪ್ರಾಥಮಿಕ …
Read More »ಚಿನ್ನಸ್ವಾಮಿ ಕಾಲ್ತುಳಿತ ಘಟನೆಗೆ ಆಯೋಜಕರು ಹೆಚ್ಚಿನ ಕಾರಣೀಕರ್ತರಾಗಿದ್ದಾರೆ: ಸಚಿವ ಜಿ.ಪರಮೇಶ್ವರ್
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಘಟನೆಗೆ ಆಯೋಜನೆ ಮಾಡಿದವರು ಹೆಚ್ಚಿನ ಕಾರಣೀಕರ್ತರಾಗಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದರು. ಗುರುವಾರ ವಿಧಾನಸಭೆಯಲ್ಲಿ ನಿಯಮ 69ರಡಿ ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ ಸಂಬಂಧ ಚರ್ಚೆಗೆ ಅವರು ಉತ್ತರಿಸಿದರು. ಕರ್ನಾಟಕದ ಇತಿಹಾಸದಲ್ಲಿ ಯಾವತ್ತೂ ಇಂತಹ ಘಟನೆ ನಡೆದಿರಲಿಲ್ಲ. ಪ್ರಗತಿಶೀಲ ರಾಜ್ಯ ಇದನ್ನು ಲಘುವಾಗಿ ತೆಗೆದುಕೊಳ್ಳಲು ಆಗುವುದಿಲ್ಲ. ತಪ್ಪು ಆದ ಮೇಲೆ ಕ್ರಮ ಕೈಗೊಳ್ಳುವುದು ಅದು ಬಹಳ ಮುಖ್ಯವಾಗಿದೆ. ಐಪಿಎಲ್ನ್ನು ಕ್ರೀಡೆಯೂ ಆಗಬೇಕು, …
Read More »ದಿ. ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆ ಪೂರ್ವಭಾವಿ ಸಭೆ
ದಿ. ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯ ಹಿನ್ನೆಲೆಯಲ್ಲಿ, ಇಂದು ಪಾಚ್ಛಾಪುರ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕರಗುಪ್ಪಿ ಗ್ರಾಮದ ಶ್ರೀ ಸೀಮಿದೇವಿ ದೇವಸ್ಥಾನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ, ಮಾತನಾಡಿದೆ. ಈ ಸಂದರ್ಭದಲ್ಲಿ ದಿ. ಅಪ್ಪಣಗೌಡ ಪಾಟೀಲ ಸಹಕಾರಿ ಪೆನಲ್ಗೆ ಅಮೂಲ್ಯ ಮತವನ್ನು ಕೋರುತ್ತಾ, ಬಸವಣ್ಣನವರ ತತ್ವಗಳನ್ನು ಪಾಲಿಸಿ, ಬುದ್ಧ–ಅಂಬೇಡ್ಕರ್ ಅವರ ಮಾರ್ಗದಲ್ಲಿ ಜನಸೇವೆಯಲ್ಲಿ ತೊಡಗಿರುವ ಶ್ರೀ ಸತೀಶ ಜಾರಕಿಹೊಳಿಯವರ ನೇತೃತ್ವದಲ್ಲಿ ನಮ್ಮ ಪೆನಲ್ ಸದಾ ರೈತರ ಹಾಗೂ …
Read More »ಹುಕ್ಕೇರಿ ತಾಲೂಕಿನ ಕಮತನೂರ ಗ್ರಾಮದ ಶ್ರೀ ದುರುದುಂಡೇಶ್ವರ ಮಠದ ಮಹಾದಾಸೋಹ ಮಹೋತ್ಸವ
ಹುಕ್ಕೇರಿ ತಾಲೂಕಿನ ಕಮತನೂರ ಗ್ರಾಮದ ಶ್ರೀ ದುರುದುಂಡೇಶ್ವರ ಮಠದ ಮಹಾದಾಸೋಹ ಮಹೋತ್ಸವ ಕಾರ್ಯಕ್ರಮದಲ್ಲಿ ಇಂದು ಭಾಗವಹಿಸಲಾಯಿತು. ಈ ವೇಳೆ ಶ್ರೀ ಶಿವಲಿಂಗೇಶ್ವರ ಮಹಾಸ್ವಾಮಿಗಳು ಅವರು ಆಶೀರ್ವದಿಸಿ, ಸತ್ಕರಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಶ್ರೀ ಸುರೇಶ್ ಹುಣಶ್ಯಾಳಿ, ಶ್ರೀ ಬಸು ಕೋಳಿ, ಶ್ರೀ ಸಂತೋಷ ಮುಡಶಿ ಹಾಗೂ ಶ್ರೀ ಮೌನೇಶ್ವರ ಪೋತದಾರ ಸೇರಿ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.
Read More »ಮೂಡಲಗಿಯಲ್ಲಿ ಪ್ರಜಾ ಸೌಧ ಕಟ್ಟಡ ನಿರ್ಮಾಣಕ್ಕೆ 8.60 ಕೋಟಿ ರೂಪಾಯಿ ಆಡಳಿತಾತ್ಮಕ ಅನುಮೋದನೆ- ಶಾಸಕ ಬಾಲಚಂದ್ರ ಜಾರಕಿಹೊಳಿ*
ಮೂಡಲಗಿಯಲ್ಲಿ ಪ್ರಜಾ ಸೌಧ ಕಟ್ಟಡ ನಿರ್ಮಾಣಕ್ಕೆ 8.60 ಕೋಟಿ ರೂಪಾಯಿ ಆಡಳಿತಾತ್ಮಕ ಅನುಮೋದನೆ- ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ*- ಮೂಡಲಗಿ ತಾಲ್ಲೂಕಿನ ಸಾರ್ವಜನಿಕರ ಬಹು ದಿನಗಳ ಬೇಡಿಕೆಯಾದ *ಪ್ರಜಾ ಸೌಧ* ಆಡಳಿತ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ 8.60 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ಈ ಬಗ್ಗೆ ಗುರುವಾರದಂದು ಮಾಧ್ಯಮಗಳಿಗೆ ಪ್ರಕಟಣೆ ನೀಡಿರುವ ಅವರು, ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ …
Read More »ಕ್ಯಾನ್ಸರ್ ಪೀಡಿತನಿಂದ ವಿದ್ಯಾರ್ಥಿನಿ ಕೊಲೆ ಕೇಸ್: ಪ್ರೀ ಪ್ಲ್ಯಾನ್ಡ್ ಮರ್ಡರ್ ರಹಸ್ಯ ಬಯಲು
ಚಿತ್ರದುರ್ಗ, ಆಗಸ್ಟ್ 21: ಕ್ಯಾನ್ಸರ್ ಮೂರನೇ ಹಂತದಲ್ಲಿರುವ ಚೇತನ್ನಿಂದಲೇ ವಿದ್ಯಾರ್ಥಿನಿ (student) ವರ್ಷಿತಾ(19) ಕೊಲೆ (kill) ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಡಿವೈಎಸ್ಪಿ ಪಿ.ದಿನಕರ್, ಗ್ರಾಮಾಂತರ ಠಾಣೆ ಸಿಪಿಐ ಮುದ್ದುರಾಜ್, ಪಿಎಸ್ಐ ಸುರೇಶ್ ನೇತೃತ್ವದಲ್ಲಿ ತನಿಖೆ ಚುರುಕುಗೊಂಡಿದೆ. ಆರೋಪಿಯ ಪ್ರತಿ ಜಾಡು ಹಿಡಿದು ತನಿಖೆ ಮಾಡಲಾಗುತ್ತಿದೆ. ಈ ಮಧ್ಯೆ ಕಿರಾತಕ ಚೇತನ್ ಪ್ರೀ ಪ್ಲ್ಯಾನ್ಡ್ ಮರ್ಡರ್ ರಹಸ್ಯ ಬಯಲಾಗಿದೆ. ಟಿವಿ9ಗೆ ವರ್ಷಿತಾ ಮತ್ತು ಚೇತನ್ ಜೊತೆಗಿದ್ದ ಕೊನೆ ಕ್ಷಣದ ಸಿಸಿಟಿವಿ ದೃಶ್ಯ ಲಭ್ಯವಾಗಿದೆ. ಕೊಲೆಗೆ ಸಂಚು ರೂಪಿಸಿದ್ದ ಚೇತನ್ …
Read More »ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ
ಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ ಮಾಸ್ಕ್ ಮ್ಯಾನ್ (Mask Man) (ಭೀಮ) ಯಾರು ಏನು ಎನ್ನುವುದೇ ಗೊತ್ತಿಲ್ಲ. ಫುಲ್ ದೇಹ ಕವರ್ ಮಾಡಿಕೊಂಡು ಮುಖಕ್ಕೆ ಮಾಸ್ಕ್ ಹಾಕಿಕೊಂಡು ಕಾಣಿಸಿಕೊಂಡಿದ್ದಾನೆ. ಹೀಗಾಗಿ ಮಾಸ್ಕ್ ಮ್ಯಾನ್ ಯಾರು ಎನ್ನುವುದೇ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಆದ್ರೆ, ಇದೀಗ ಆ ಮಾಸ್ಕ್ ಮ್ಯಾನ್ ಯಾರು ಏನು? ಎಲ್ಲಿಯವನು ಎನ್ನುವ ಒಂದೊಂದೇ ಅಂಶಗಳು ಆಚೆ ಬರುತ್ತಿವೆ. ನಿನ್ನೆ …
Read More »ಧರ್ಮಸ್ಥಳ ಪ್ರಕರಣ: ಬಂಧನದ ಭೀತಿಯಲ್ಲಿದ್ದ ಯೂಟ್ಯೂಬರ್ ಸಮೀರ್ ಎಂಡಿಗೆ ಬಿಗ್ ರಿಲೀಫ್
ಮಂಗಳೂರು (ಆಗಸ್ಟ್ .21): ಧರ್ಮಸ್ಥಳ ವಿರುದ್ಧ ವಿಡಿಯೋ ಮೂಲಕ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಎಂಡಿಗೆ ಕೋರ್ಟ್ ಜಾಮೀನು ನೀಡಿದೆ. ಧರ್ಮಸ್ಥಳದ ಕುರಿತು ಮಾಡಿದ ಒಂದೇ ಒಂದು ವಿಡಿಯೋದಿಂದ ಯುಟ್ಯೂಬರ್ ಸಮೀರ್ ಎಂಡಿ ಸ್ಟಾರ್ ಆಗಿ ಬದಲಾಗಿದ್ದರು. ಅದೇ ವಿಡಿಯೋದಿಂದ ಸಮೀರ್ ಎಂಡಿಗೆ ಬಂಧನದ ಭೀತಿ ಎದುರಿಸುತ್ತಿದ್ದ. ಯಾವಾಗ ಪೊಲೀಸರು ಅರೆಸ್ಟ್ ಮಾಡಲು ಮುಂದಾದ್ದರೋ ಸಮೀರ್ ಕೂಡಲೇ ಮಂಗಳೂರು ಕೋರ್ಟ್ ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಇಂದು (ಆಗಸ್ಟ್ …
Read More »ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಿಂದ ಅಗಷ್ಟ 22ರಿಂದ 25ರ ವರೆಗೆ ಬೃಹತ್ ರಕ್ತಧಾನ ಶಿಬಿರ!!
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಿಂದ ಅಗಷ್ಟ 22ರಿಂದ 25ರ ವರೆಗೆ ಬೃಹತ್ ರಕ್ತಧಾನ ಶಿಬಿರ!! ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಿಂದಅಗಷ್ಟ 22ರಿಂದ 25ರ ವರೆಗೆ ಬೃಹತ್ ರಕ್ತಧಾನ ಶಿಬಿರವ್ಯಸನಗಳಿಂದ ಭಾರತ ದೇಶ ಕೆಲಮಟ್ಟಕ್ಕೆ ಇಳಿದಿದೆಭಾರತವನ್ನು ವ್ಯಸನಮುಕ್ತ ದೇಶವನ್ನಾಗಿ ಮಾಡಬೇಕಾಗಿದೆ:ಬಿ.ಕೆ.ಅಂಬಿಕಾ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ ಅಗಷ್ಟ 22ರಿಂದ 25ರ ವರೆಗೆ ಬೃಹತ್ ರಕ್ತಧಾನ ಶಿಬಿರ ಮತ್ತು ವ್ಯಸನಮುಕ್ತ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬಿ.ಕೆ. ಅಂಬಿಕಾ …
Read More »
Laxmi News 24×7