Breaking News

Laxminews 24x7

ಮಾವಿನ ಹಣ್ಣು ಸೇವಿಸಿ ಅಸ್ವಸ್ಥ: ಬೀದರ್ ಮೂಲದ ಇಬ್ಬರು ಸಹೋದರಿಯರು ಅನುಮಾನಾಸ್ಪದ ಸಾವು

ಬೀದರ್: ಮಾವಿನ ಹಣ್ಣು ಸೇವಿಸಿದ ಬಳಿಕ ಅಸ್ವಸ್ಥಗೊಂಡ ಬೀದರ್ ಮೂಲದ ಇಬ್ಬರು ಸಹೋದರಿಯರು ಹೈದರಾಬಾದ್‌ನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಶೆಂಬೆಳ್ಳಿ ಗ್ರಾಮದ ಇಬ್ಬರು ಬಾಲಕಿಯರು ದುರಂತ ಅಂತ್ಯ ಕಂಡಿದ್ದಾರೆ. 17 ವರ್ಷದ ಭವಾನಿ ವೈಜಿನಾಥ ಮೇತ್ರೆ ಹಾಗೂ 14 ವರ್ಷದ ಸಂಧ್ಯಾರಾಣಿ ಮೇತ್ರೆ ಮೃತ ಯುವತಿಯರು. ಜೂನ್ 9ರಂದು ಮನೆಯಲ್ಲಿ ಊಟ ಮಾಡಿದ ಬಳಿಕ ಮಾವಿನ ಹಣ್ಣು ಸೇವಿಸಿದ್ದ ವೇಳೆ ಕುಟುಂಬದ ಸದಸ್ಯರ ಆರೋಗ್ಯದಲ್ಲಿ …

Read More »

ಶ್ರೀರಾಮನ ಕುರಿತು ಅವಹೇಳನಕಾರಿ ಹೇಳಿಕೆ: ಪ್ರೊ. ಭಗವಾನ್ ವಿರುದ್ಧ ಶಿವಸೇನೆ ದೂರು

ಧಾರವಾಡ: ಶ್ರೀರಾಮ ಹಾಗೂ ಹಿಂದೂ ಧರ್ಮಗ್ರಂಥಗಳ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದಡಿ ಪ್ರೊ. ಕೆ.ಎಸ್. ಭಗವಾನ್ ವಿರುದ್ಧ ಧಾರವಾಡ  ಶಹರ ಪೊಲೀಸ್ ಠಾಣೆಗೆ ಶಿವಸೇನೆ (Shiv Sena) ಕಾರ್ಯಕರ್ತರು ದೂರು ನೀಡಿದ್ದಾರೆ. ಪ್ರೊ. ಭಗವಾನ್ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಶಿವಸೇನೆ ಮುಖಂಡರು ಆಗ್ರಹಿಸಿದ್ದಾರೆ. ಇತ್ತೀಚೆಗೆ ದಾವಣಗೆರೆ ಜಿಲ್ಲೆಯ ಹರಿಹರದಲ್ಲಿರುವ ಬಿ. ಕೃಷ್ಣಪ್ಪ ಮೈತ್ರಿವನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಯೋಜಿಸಿದ್ದ ಪ್ರೊ. …

Read More »

ಕೂಲ್ ಡ್ರಿಂಕ್ಸ್ ಕುಡಿದು ಯುವಕ ಸಾವು

ಯಾದಗಿರಿ: ಕೂಲ್ ಡ್ರಿಂಕ್ಸ್ ಕುಡಿದು ಯುವಕ ಸಾವನ್ನಪ್ಪಿರುವ ಘಟನೆ ವಿಜಯಪುರ  ಜಿಲ್ಲೆಯ ಮುದ್ದೇಬಿಹಾಳದಲ್ಲಿ ನಡೆದಿದೆ. ಮೃತ ಯುವಕನನ್ನ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದ ನಿವಾಸಿ ಬಾಲಪ್ಪ (18) ಎಂದು ಗುರುತಿಸಲಾಗಿದ್ದು, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಪದವಿ ಓದುತ್ತಿದ್ದ ಎಂದು ತಿಳಿದುಬಂದಿದೆ. ಮೃತ ಯುವಕ ಅತಿಯಾಗಿ ಕೂಲ್‌ ಡ್ರಿಂಕ್ಸ್‌ ಕುಡಿಯುತ್ತಿದ್ದ. ಇದರ ಪರಿಣಾಮ ಕಿಡ್ನಿ ಫೇಲ್‌ ಆಗಿದ್ದವು. ಇತ್ತೀಚಿಗೆ ಅನಾರೋಗ್ಯದಿಂದಾಗಿ ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ ಇಂದು (ಜೂ.12) …

Read More »

ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ: ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ , ದಂತ ವೈದ್ಯಕೀಯ, ಸ್ನಾತಕ ಹಾಗೂ ಸ್ನಾತಕೋತ್ತರ ಕೋರ್ಸ್‌ಗಳ ಶುಲ್ಕವನ್ನ ಹೆಚ್ಚಳ ಮಾಡದೇ ಯಥಾಸ್ಥಿತಿಯಲ್ಲೇ ಮುಂದುವರೆಸುವ ಮಹತ್ವ ತೀರ್ಮಾನವನ್ನು ರಾಜ್ಯಸರ್ಕಾರ ತೆಗೆದುಕೊಂಡಿದೆ. ಸರ್ಕಾರದ ಇಂತಹ ನಿರ್ಧಾರದಿಂದಾಗಿ ಈ ಬಾರಿ ವೈದ್ಯಕೀಯ, ದಂತ ವೈದ್ಯಕೀಯ, ಸ್ನಾತಕ ಹಾಗೂ ಸ್ನಾತಕೋತ್ತರ ಕೋರ್ಸ್‌ಗಳ ಶುಲ್ಕ ) ಹಚ್ಚಳವಾಗುತ್ತದೆ ಎಂಬ ಆತಂಕದಲ್ಲಿದ್ದ ವಿದ್ಯಾರ್ಥಿಗಳು ಹಾಗೂ ಪೋಷಕರು ನೆಮದಿಯ ನಿಟ್ಟುಸಿರು ಬಿಡುವಂತಾಗಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌  …

Read More »

ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್‌

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ಜೋಸೆಫ್‌ ವಿಜಯ್‌ ಭೇಟಿ ನೀಡಿದ್ದಾರೆ. ವಿಜಯ್‌ ಅವರಿಗೆ ಹೂಗುಚ್ಛ ನೀಡಿ ಆಡಳಿತ ಮಂಡಳಿಯ ಟ್ರಸ್ಟಿಗಳು ಸ್ವಾಗತ ಕೋರಿದರು. ಮಂತ್ರಘೋಷದೊಂದಿಗೆ ಕ್ಷೇತ್ರದೊಳಗೆ ಅರ್ಚಕ ವೃಂದ ಬರಮಾಡಿಕೊಂಡಿತು. ಶಲ್ಯ ಧರಿಸಿ ಆಗಮಿಸುವ ಮೂಲಕ ಸಿಎಂ ವಿಜಯ್‌ ದೇವಸ್ಥಾನದ ಶಿಷ್ಟಾಚಾರ ಪಾಲನೆ ಮಾಡಿದರು. ಪ್ರಧಾನ ಅರ್ಚಕ ರಾಮಚಂದ್ರ ಅಡಿಗ ಅವರ ನೇತೃತ್ವದಲ್ಲಿ ಸಂಕಲ್ಪ ಪೂಜೆ ನೆರವೇರಿಸಲಾಯಿತು. ಸಿಎಂ ವಿಜಯ್‌ ಸಂಕಲ್ಪ ಪೂಜೆ ಮಾಡಿದರು. ಶಕ್ತಿ ದೇವಿಗೆ …

Read More »

ರಾಜೀನಾಮೆ ಪರ್ವದ ನಡುವೆ ಟಿಎಂಸಿಗೆ ಶಾಕ್‌ – ಮಮತಾ ಬ್ಯಾನರ್ಜಿ ವಿರುದ್ಧ FIR

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್‌ ಪಕ್ಷದಲ್ಲಿ ಒಂದು ಕಡೆ ರಾಜೀನಾಮೆ ಪರ್ವ ಮುಂದುವರಿದಿದೆ. ಘಟಾನುಘಟಿ ನಾಯಕರು ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದಾರೆ. ಈ ಮಧ್ಯೆ ಮಾಜಿ ಸಿಎಂ ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್‌ ಎದುರಾಗಿದೆ. ಕಳೆದ ಮಾರ್ಚ್‌ ತಿಂಗಳಲ್ಲಿ ರಾಜಕೀಯ ಭಾಷಣದ ವೇಳೆ ಕೋಮುದ್ವೇಷ ಹರಡುವ ಹೇಳಿಕೆ ನೀಡಿದ್ದರ ಆರೋಪದ ಮೇಲೆ ಮಮತಾ ಬ್ಯಾನರ್ಜಿ ವಿರುದ್ಧ ಪ್ರಕರಣ ದಾಖಲಾಗಿದೆ. ರಾಜಕೀಯ ಭಾಷಣದ ವೇಳೆ ದೀದಿ, ʻಒಂದು ನಿರ್ದಿಷ್ಟ ಸಮುದಾಯ ಒಟ್ಟಿಗೆ ಬಂದರೆ ಅದು …

Read More »

ಕೊಲ್ಲೂರು ಮೂಕಾಂಬಿಕೆಗೆ 1.6 ಕೆಜಿ ತೂಕದ ಬೆಳ್ಳಿ ಖಡ್ಗ ಅರ್ಪಿಸಿದ ಸಿಎಂ ಸಿ. ಜೋಸೆಫ್‌

ಉಡುಪಿ: ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಉಡುಪಿಗೆ  ಆಗಮಿಸಿದ ಸಿಎಂ ಸಿ. ಜೋಸೆಫ್‌ ವಿಜಯ್‌  ಅವರು ಕೊಲ್ಲೂರು ಮೂಕಾಂಬಿಕೆ ದೇವಿಯ  ದರ್ಶನ ಪಡೆದುಕೊಂಡಿದ್ದಾರೆ. ಜೊತೆಗೆ ದೇವಿಗೆ ವಿಶೇಷ ಕಾಣಿಕೆಯನ್ನೂ ಅರ್ಪಿಸಿ ಕೃಪೆಗೆ ಪಾತ್ರರಾದರು. i ಶಕ್ತಿ ದೇವಿಗೆ ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿ ವಿಜಯ್‌ ಸುಮಾರು ಅರ್ಧ ಗಂಟೆಗಳ ಕಾಲ ಪ್ರಾರ್ಥನೆ ಸಲ್ಲಿಸಿದರು. ಬಳಿಕ ತಾಯಿಗೆ 1 ಕೆಜಿ 600 ಗ್ರಾಂ ತೂಕದ ಬೆಳ್ಳಿ ಖಡ್ಗವನ್ನ ಕಾಣಿಕೆಯಾಗಿ ಅರ್ಪಿಸಿದ್ದಾರೆ …

Read More »

11 ಕೋಟಿ ಮೌಲ್ಯದ ಹೈಡ್ರೋಪೋನಿಕ್ಸ್ ಗಾಂಜಾ ಸಮೇತ ಸಿಕ್ಕಿಬಿದ್ದ ಕೇರಳದ ಬ್ಯೂಟಿ ಕಂಟೆಸ್ಟೆಂಟ್

ಮುಂಬೈ: ಸುಮಾರು 11 ಕೋಟಿ ಮೌಲ್ಯದ ಹೈಡ್ರೋಪೋನಿಕ್ಸ್ ಗಾಂಜಾವನ್ನು ಬ್ಯಾಂಕಾಕ್‌ನಿಂದ ಭಾರತಕ್ಕೆ ಸಾಗಿಸುತ್ತಿದ್ದ ಆರೋಪದ ಮೇಲೆ ಮಿಸೆಸ್ ಕೇರಳ ಸೌಂದರ್ಯ ಸ್ಪರ್ಧೆಯ ಮಾಜಿ ಸ್ಪರ್ಧಿಯನ್ನು  ಕಸ್ಟಮ್ಸ್‌ ಅಧಿಕಾರಿಗಳು ಬಂಧಿಸಿದ್ದಾರೆ. ಮಾಡೆಲ್‌ ಹರ್ಷ ಸನ್ನಿ (28) , ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗಾಂಜಾ ಸಮೇತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ಏರ್ ಇಂಟೆಲಿಜೆನ್ಸ್ ಯೂನಿಟ್ (AIU) ಪ್ರಕಾರ, ಮಾಡೆಲ್‌ ಹರ್ಷ ಸನ್ನಿ ಜೂನ್ 10-11ರ ರಾತ್ರಿ ಬ್ಯಾಂಕಾಕ್‌ನಿಂದ ಏರ್ ಇಂಡಿಯಾ …

Read More »

ಕಾಡುಗೋಡಿ ಮಗು ಕೊಲೆ ಕೇಸ್‌: ಮೂವರು ಪೊಲೀಸರ ತಲೆದಂಡ

ಬೆಂಗಳೂರು: ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬಾಲಕಿ ವೆನ್ನಿಲಾ ಕೊಲೆ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದಡಿ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಅಮಾನತುಗೊಂಡವರಲ್ಲಿ ಕಾಡುಗೋಡಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರಂಗಸ್ವಾಮಿ, ಪಿಎಸ್‌ಐ ನಿಂಗರಾಜು ಹಾಗೂ ಸಿಬ್ಬಂದಿ ಹಾಲೇಶ್ ನಾಯ್ಕ್ ಸೇರಿದ್ದಾರೆ. ಇನ್ನು ಪ್ರಿಯಕರನೊಂದಿಗೆ ತನ್ನ ಐದೂವರೆ ವರ್ಷದ ಮಗಳು ವೆನ್ನಿಲಾಳನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿಯಾಗಿದ್ದ ಪ್ರಿಯಾಂಕಾ, ಎಫ್‌ಐಆರ್‌ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದಳು. ಆದರೆ, ಇದೀಗ …

Read More »

ದೆಹಲಿಯಿಂದ ಹೊರಟ ತ.ನಾಡು ಸಿಎಂ ವಿಜಯ್‌; ಉಡುಪಿಯತ್ತ ಪ್ರಯಾಣ

ನವದೆಹಲಿ: ಮೂರು ದಿನಗಳ ಅಧಿಕೃತ ಭೇಟಿಯನ್ನು ಮುಗಿಸಿ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್‌ ವಿಜಯ್‌  ಅವರು ದೆಹಲಿಯಿಂದ ಹೊರಟಿದ್ದಾರೆ. ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲು ಉಡುಪಿಯತ್ತ ಸಿಎಂ ಪ್ರಯಾಣ ಬೆಳೆಸಿದ್ದಾರೆ ಇಂದು ಬೆಳಗ್ಗೆ ಸಿಎಂ ವಿಜಯ್‌ ಅವರು ದೆಹಲಿಯ ತಮಿಳುನಾಡು ಭವನದಿಂದ ಹೊರಟರು. ಬಳಿಕ ದೆಹಲಿ ಏರ್‌ಪೋರ್ಟ್‌ಗೆ ಬಂದು ಇಳಿದಿದ್ದು, ಕರ್ನಾಟಕದ ಮಂಗಳೂರಿನ ಕಡೆ ಪ್ರಯಾಣ ಬೆಳೆಸಲಿದ್ದಾರೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ ಸಿಎಂ ವಿಜಯ್‌ ಉಡುಪಿಯಲ್ಲಿ ಕೊಲ್ಲೂರು ಮೂಕಾಂಬಿಕಾ  ದೇವಸ್ಥಾನಕ್ಕೆ …

Read More »