ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಟಾಟಾ ಸುಮೋ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮಹಿಳೆ ಮೃತಪಟ್ಟು, ಮೂವರ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ವರನಹೊಂಡ ಎಂಬಲ್ಲಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು ನೀಲಮ್ಮ (60) ಎಂದು ಗುರುತಿಸಲಾಗಿದ್ದು, ಗಂಭೀರ ಗಾಯಗೊಂಡ ಮೂವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತೀರ್ಥಹಳ್ಳಿ ರಸ್ತೆಯ ಜಂಬಳ್ಳಿ ಕಡೆಯಿಂದ ರಿಪ್ಪನ್ ಪೇಟೆಗೆ ಆಗಮಿಸುತ್ತಿದ್ದ ಟಾಟಾ …
Read More »ಸುಮಲತಾ ಹೋರಾಟಕ್ಕೆ ರೈತ ಸಂಘದಿಂದ ಸಂಪೂರ್ಣ ಬೆಂಬಲ: ಚಾಮರಸ ಮಾಲಿಪಾಟೀಲ್
ರಾಯಚೂರು: ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಸಂಸದೆ ಸುಮಲತಾ ಹೋರಾಟಕ್ಕೆ ರಾಜ್ಯ ರೈತ ಸಂಘದಿಂದ ಸಂಪೂರ್ಣ ಬೆಂಬಲವಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ್ ಹೇಳಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಚಾಮರಸ ಮಾಲಿಪಾಟೀಲ್ರವರು, ರಾಜ್ಯದ ಹಲವೆಡೆ ಅಕ್ರಮ ಕಲ್ಲುಗಣಿಗಾರಿಕೆ ನಿರಂತರವಾಗಿ ನಡೆಯುತ್ತಿದೆ. ಮಂಡ್ಯ ಜಿಲ್ಲೆಯ ಬೇಬಿಬೆಟ್ಟದಲ್ಲಿ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ. ಅದೂ ಕೆಆರ್ಎಸ್ ನಿಂದ 5-6 ಕಿ.ಮೀನಲ್ಲಿ ಗಣಿಗಾರಿಕೆ ನಡೆಯುತ್ತಿದೆ. 20 ಕಿ.ಮೀ ಒಳಗೆ …
Read More »16 ವರ್ಷ ತಲೆಮರೆಸಿಕೊಂಡಿದ್ದ ಮಂಗಳೂರಿನ ಆರೋಪಿ ಮುಂಬೈನಲ್ಲಿ ಬಂಧನ
ಮಂಗಳೂರು: ನಗರದ ಹೊರವಲಯದ ಪೆರ್ಮುದೆ ಗ್ರಾಮದಲ್ಲಿ ನಡೆದ ಹಲ್ಲೆ, ಜೀವ ಬೆದರಿಕೆ ಪ್ರಕರಣದಲ್ಲಿ ಭಾಗಿಯಾಗಿ 16 ವರ್ಷ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಜ್ಪೆ ಪೊಲೀಸರು ಮುಂಬೈನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೂಲತಃ ಮೂಲ್ಕಿ ನಿವಾಸಿ, ಸದ್ಯ ಮುಂಬೈನ ಸಕಿ ನಾಕಾದಲ್ಲಿ ವಾಸವಿರುವ ಚಂದ್ರಕಾಂತ್ ಪೂಜಾರಿ ಯಾನೆ ಅಣ್ಣು(55) ಬಂಧಿತ ಆರೋಪಿ ಎಂದು ವರದಿಯಾಗಿದೆ. ಏನಿದು ಪ್ರಕರಣ? ಬಜ್ಪೆ ವ್ಯಾಪ್ತಿಯ ಪೆರ್ಮುದೆ ಗ್ರಾಮದಲ್ಲಿ 2005ರ ಜನವರಿ 10 ರಂದು ರಾತ್ರಿ ವಿಶ್ವನಾಥ್, ಅಮೀನ್ ಎಂಬವರ …
Read More »ಕತ್ತಿಯವರನ್ನು ಯಾವುದಾದರೂ ರಾಜ್ಯಕ್ಕೆ ರಾಜ್ಯಪಾಲರನ್ನಾಗಿ ಮಾಡಿ: ರಾಜೂಗೌಡ
ಯಾದಗಿರಿ: ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಹೇಳಿಕೆ ನೀಡಿದ ಸಚಿವ ಉಮೇಶ್ ಕತ್ತಿ ಅವರನ್ನು ಯಾವುದಾದರೂ ರಾಜ್ಯಕ್ಕೆ ರಾಜ್ಯಪಾಲರನ್ನಾಗಿ ಮಾಡಿ ಎಂದು ಸುರಪುರ ಶಾಸಕ ರಾಜೂಗೌಡ ಸ್ವಪಕ್ಷದ ಸಚಿವರಿಗೆ ಟಾಂಗ್ ನೀಡಿದ್ದಾರೆ. ಈ ಸರ್ಕಾರದಲ್ಲಿ ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯವಾಗಿದೆ. ನಮ್ಮದೇ ಸರ್ಕಾರದಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಮೋಸ ಆಗಿದೆ ಎಂದು ಸ್ವಪಕ್ಷದ ಸಚಿವರಾದ ಉಮೇಶ್ ಕತ್ತಿಯವರು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ರಾಜೂಗೌಡ, ಬೆಳಗಾವಿಗೆ ಇನ್ನೂ ಏನು ಕೊಡಬೇಕು, ಅನ್ಯಾಯ …
Read More »ಎಸ್.ಎಸ್.ಎಲ್.ಸಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ
ಬೆಳಗಾವಿ : ಬೆಳಗಾವಿ ನಗರದ ಎಸ್.ಎಸ್.ಎಲ್.ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಜು. ೧೯ ರಿಂದ ಜು. ೨೨ ರಂದು ಮುಂಜಾನೆ ೦೯ ಗಂಟೆಯಿಂದ ಸಾಯಂಕಾಲ ೬ ಗಂಟೆಯವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಲು ೨೦೦ ಮೀಟರ್ ವ್ಯಾಪ್ತಿಯಲ್ಲಿ ಗುಂಪು ಗುಂಪಾಗಿ ಸೇರುವುದನ್ನು ನಿಷೇಧಿಸಿ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳು ಮತ್ತು ಪೊಲೀಸ್ ಆಯುಕ್ತರಾದ ಡಾ ಕೆ.ತ್ಯಾಗರಾಜನ್ ಆದೇಶ ಹೊರಡಿಸಿರುತ್ತಾರೆ. ನಿಷೇಧಾಜ್ಞೆ ಜಾರಿ ಪ್ರದೇಶದಲ್ಲಿ ಸಿ.ಆರ್ಪಿ.ಸಿ ಕಲಂ ೧೪೪ ರ ಪ್ರಕಾರ ಈ ಕೆಳಕಂಡ ಷರತ್ತುಗಳನ್ನು …
Read More »ಬೆಳಗಾವಿ, ಕಾಗವಾಡ, ಬೈಲಹೊಂಗಲ, ಖಾನಾಪುರ ತಾಲೂಕುಗಳಲ್ಲಿ ಹಲವು ಹುದ್ದೆ
ಬೆಳಗಾವಿ : ಕಾಗವಾಡ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ೪ ಅಂಗನವಾಡಿ ಕಾರ್ಯಕರ್ತೆ ಹಾಗೂ ೧೬ ಸಹಾಯಕಿಯರ ಆಯ್ಕೆಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿ ಜು.೧೩ ರಂದು ಅಧಿಸೂಚನೆ ಹೊರಡಿಸಲಾಗಿದೆ. ಅರ್ಜಿ ಸಲ್ಲಿಸಲು ಜು.೧೪ ರಂದು ಪ್ರಾರಂಭ ದಿನಾಂಕವಾಗಿದ್ದು, ಅಗಸ್ಟ್.೧೪ ರಂದು ಕೊನೆಯ ದಿನಾಂಕವಾಗಿರುತ್ತದೆ. ಆಸಕ್ತ ಸ್ಥಳೀಯ ಮಹಿಳಾ ಅಭ್ಯರ್ಥಿಗಳು anganwadirecruit.kar.nic.in ವೆಬ್ ಸೈಟ್ …
Read More »ತುಕ್ಕಾನಟ್ಟಿ ಗ್ರಾಮದಲ್ಲಿ 1.54 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ.
ಮೂಡಲಗಿ : ಚುನಾವಣೆ ಬಂದಾಗ ಮಾತ್ರ ರಾಜಕೀಯ ಮಾಡಿ. ಚುನಾವಣೆ ಮುಗಿದ ಬಳಿಕ ಎಲ್ಲರೂ ಒಂದಾಗಿ-ಒಗ್ಗಟ್ಟಾಗಿ ಗ್ರಾಮದ ಅಭಿವೃದ್ಧಿಗೆ ಪಣತೊಡಿ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಗ್ರಾಮಸ್ಥರಿಗೆ ಕಿವಿಮಾತು ಹೇಳಿದರು. ಗುರುವಾರದಂದು ತಾಲೂಕಿನ ತುಕ್ಕಾನಟ್ಟಿ ಗ್ರಾಮಕ್ಕೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಸೋತವರು ನಮ್ಮವರೇ. ಗೆದ್ದವರು ನಮ್ಮವರೇ. ತಮ್ಮಲ್ಲಿರುವ ಸಣ್ಣಪುಟ್ಟ ವ್ಯತ್ಯಾಸಗಳನ್ನು ಮರೆತು ಅಭಿವೃದ್ಧಿಯತ್ತ …
Read More »ದೇಸಿ ಬೀಡಿ ಪ್ರಚಾರಕ್ಕಿಳಿದ್ರಾ ಫುಟ್ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ?
ದಕ್ಷಿಣ ಅಮೆರಿಕಾ ತಂಡ ಬ್ರೆಜಿಲ್ಅನ್ನು ಸೋಲಿಸಿ ಕೋಪಾ ಅಮೇರಿಕಾ ಪ್ರಶಸ್ತಿಯನ್ನು ಬಾಚಿಕೊಂಡಿದ್ದಾರೆ, ಅರ್ಜೆಂಟೀನಾದ ಫುಟ್ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ. ಇದೀಗ ಭಾರೀ ಸುದ್ದಿಯಲ್ಲಿರುವ ವಿಷಯ ಏನಂದ್ರೆ.. ಮೆಸ್ಸಿ ಬಿಡಿ ಪ್ಯಾಕೆಟ್. ತಂಬಾಕು ಉತ್ಪನ್ನದ ಪ್ಯಾಕೆಟ್ನಲ್ಲಿರುವ ಮೆಸ್ಸಿ ಅವರ ಫೋಟೋ ಫುಲ್ ವೈರಲ್ ಆಗುತ್ತಿದೆ. ಹಳದಿ ಬಣ್ಣದ ಬಾಕ್ಸ್ ಒಳಗೆ ಮೆಸ್ಸಿ ಅವರ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಬೀಡಿ, ತಂಬಾಕು ಪದರಗಳಿಂದ ತುಂಬಿದ ತೆಳುವಾದ ಸಿಗರೇಟ್ ಮತ್ತು ಸಾಮಾನ್ಯವಾಗಿ …
Read More »ಡಿಸೆಂಬರ್ ವರೆಗೆ ತಾ. ಪಂ, ಜಿ.ಪಂ ಚುನಾವಣೆ ಇಲ್ಲ: ಸಂಪುಟ ಸಭೆಯಲ್ಲಿ ತೀರ್ಮಾನ
ಬೆಂಗಳೂರು: ಸಹಕಾರ ಸಂಘಗಳು, ಸೊಸೈಟಿಗಳು, ಎಪಿಎಂಸಿಗಳ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಪದಾಧಿಕಾರಿಗಳ ಸ್ಥಾನಗಳಿಗೆ ಚುನಾವಣೆ ನಡೆಸಲು ಅನುಮತಿ ನೀಡಲಾಗಿದೆ. ಆದರೆ, ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಡಿಸೆಂಬರ್ ವರೆಗೆ ಚುನಾವಣೆ ನಡೆಸದಿರಲು ನಿರ್ಧರಿಸಲಾಗಿದೆ. ಗೃಹ ಮತ್ತು ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದರು. ಸಹಕಾರ ಇಲಾಖೆ ವ್ಯಾಪ್ತಿಗೆ ಬರುವ ಸಹಕಾರ ಸಂಘಗಳು, ಸೊಸೈಟಿಗಳು, ಎಪಿಎಂಸಿಗಳಲ್ಲಿ ಅವಧಿ …
Read More »ನಳಿನ್ ಕುಮಾರ್ ಕಟೀಲ್ ನೇರ ಚರ್ಚೆಗೆ ಬರಲಿ: ಡಿ ಕೆ ಶಿವಕುಮಾರ್ ಸವಾಲು
ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ನುಡಿದಂತೆ ನಡೆದಿದ್ದಾರೆ, ಮಾತು ತಪ್ಪಿಲ್ಲ. ಬಸವ ಜಯಂತಿ ದಿನ ಪ್ರಮಾಣ ವಚನ ಸ್ವೀಕರಿಸಿ ವಿಧಾನಸೌಧ ಪ್ರವೇಶ ಮಾಡಿದ್ದ ಅವರು, ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪೈಕಿ ಶೇ.99ರಷ್ಟು ಕೆಲಸ ಮಾಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬೇಕಿದ್ದರೆ ಈ ಬಗ್ಗೆ ನೇರ ಚರ್ಚೆಗೆ ಬರಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆಹ್ವಾನ ನೀಡಿದರು. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ …
Read More »
Laxmi News 24×7