ಟೀಂ ಇಂಡಿಯಾದ ಮಾಜಿ ನಾಯಕ, ಖ್ಯಾತ ಕ್ರಿಕೆಟಿಗ, ದಾದಾ ಎಂದೇ ಖ್ಯಾತಿಗಳಿಸಿರುವ ಸೌರವ್ ಗಂಗೂಲಿ ಜೀವನಚರಿತ್ರೆ ತೆರೆಮೇಲೆ ಬರಲು ಸಜ್ಜಾಗುತ್ತಿದೆ. ತನ್ನ ಜೀವನವನ್ನು ಸಿನಿಮಾ ಮಾಡಲು ದಾದಾ ಗಂಗೂಲಿ ಅನುಮತಿ ನೀಡಿದ್ದಾರೆ. ಈಗಾಗಲೇ ಸಾಕಷ್ಟು ಕ್ರಿಕೆಟ್ ಆಟಗಾರರ ಜೀವನ ತೆರೆಮೇಲೆ ಬಂದಿದೆ ಮತ್ತು ಬರಲು ಸಿದ್ಧವಾಗುತ್ತಿದೆ. ಇದೀಗ ಗಂಗೂಲಿ ಬಯೋಪಿಕ್ ಕೂಡ ಸೇರಿಕೊಂಡಿದ್ದಾರೆ. ಇತ್ತೀಚಿಗೆ ಮತ್ತೋರ್ವ ಖ್ಯಾತ ಆಟಗಾರ ಸುರೇಶ್ ರೈನಾ ಬಯೋಪಿಕ್ ಸುದ್ದಿಯಲ್ಲಿತ್ತು. ಅಲ್ಲದೆ ತನ್ನ ಬಯೋಪಿಕ್ ಸೌತ್ …
Read More »ಟೂರಿಸ್ಟ್ ವ್ಯಾನ್ ಸುತ್ತುವರೆದ ದೈತ್ಯಾಕಾರದ 3 ಹುಲಿಗಳು
ಸಾಮಾಜಿಕ ಜಾಲತಾಣದಲ್ಲಿ ಅದೆಷ್ಟೋ ವಿಡಿಯೋಗಳು ಹರಿದಾಡುತ್ತಿರುತ್ತವೆ. ಕೆಲವೊಂದಿಷ್ಟು ಕ್ಯೂಟ್ ವಿಡಿಯೋಗಳಾಗಿದ್ದರೆ ಇನ್ನು ಕೆಲವು ಬೆಚ್ಚಿಬೀಳಿಸುವ ಕಥೆಯನ್ನು ಹೇಳುತ್ತವೆ. ಕೆಲವು ಭಯಾನಕ ಸನ್ನಿವೇಶಗಳೂ ಸಹ ಭಾರೀ ಚರ್ಚೆಯಾಗುತ್ತವೆ. ಇದೀಗ ವೈರಲ್ ಆಗುತ್ತಿರುವ ವಿಡಿಯೋ(Viral Video) ಕೂಡಾ ಅಂಥದ್ದೇ! ವಿಡಿಯೋ ನೋಡಿದಾಕ್ಷಣ ಒಮ್ಮೆಲೆ ಭಯವಾಗುತ್ತದೆ. ಕೆಲವರು ಇಂಥಹ ಭಯಾನಕ ದೃಶ್ಯವನ್ನು ಇನ್ನೂ ನೋಡಿಲ್ಲ ಎಂದು ಹೇಳಿದ್ದರೆ ಇನ್ನೊರ್ವರು, ನಾನಲ್ಲಿದ್ದಿದ್ದರೆ ಹೃದಯ ಬಡಿತವೇ ನಿಂತೋಗ್ಬಿಟ್ತಿತ್ತೇನೋ.. ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಒಟ್ಟಿನಲ್ಲಿ ವಿಡಿಯೋ ಭಾರೀ ಸುದ್ದಿಯಲ್ಲಿರುವುದಂತೂ …
Read More »ರಾಜ್ಯದಲ್ಲಿ ಮುಂದಿನ ವಾರ ಮತ್ತೊಂದು ಸುತ್ತಿನ ಅನ್ಲಾಕ್: ನೈಟ್ ಕರ್ಫ್ಯೂನಿಂದ ವಿನಾಯ್ತಿ, ಪಬ್ಗಳು ಪುನಾರಂಭ ಸಾಧ್ಯತೆ
ಕೊರೊನಾ ಪ್ರಕರಣಗಳಲ್ಲಿ ನಿರಂತರ ಇಳಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅನ್ಲಾಕ್ 4.0 ಜಾರಿಗೆ ಚಿಂತನೆ ನಡೆಸಿದೆ. ಜುಲೈ 19ರಿಂದ ಅನ್ಲಾಕ್ 4.0 ಜಾರಿಗೆ ಬರಲಿದ್ದು ಈ ಮೂಲಕ ಸದ್ಯ ಚಾಲ್ತಿಯಲ್ಲಿರುವ ನೈಟ್ ಕರ್ಫ್ಯೂಗೂ ಸರ್ಕಾರ ಇತಿಶ್ರೀ ಹೇಳುವ ಸಾಧ್ಯತೆ ಇದೆ. ಅನ್ಲಾಕ್ 3.0ದಲ್ಲಿ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂವನ್ನ ತೆರವುಗೊಳಿಸಿತ್ತು. ಹೀಗಾಗಿ ಸದ್ಯ ಜಾರಿಯಲ್ಲಿರುವ ನೈಟ್ ಕರ್ಫ್ಯೂ ಕೂಡ ಮುಂದಿನ ವಾರದಿಂದ ತೆರವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕರ್ನಾಟಕ …
Read More »ದಕ್ಷ ಅಧಿಕಾರಿ ಅಣ್ಣಾಮಲೈ ಹಾದಿಯಲ್ಲಿ ರವಿ.ಡಿ.ಚನ್ನಣ್ಣನವರ್ ?
ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ನಿಷ್ಠೆ, ಪ್ರಮಾಣಿಕ ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ ನಡೆ ತೀವ್ರ ಕೂತುಹಲ ಮೂಡಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಂತ ಚೆನ್ನಣ್ಣನವರನ್ನು ಈಚೆಗೆ ರಾಜ್ಯ ಸರ್ಕಾರ ಸಿಐಡಿ ಎಸ್ಪಿಯಾಗಿ ವರ್ಗಾವಣೆ ಮಾಡಿದೆ. ಪ್ರಸ್ತುತ ಸಿಐಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ಮಠಗಳಿಗೆ ಭೇಟಿ ನೀಡಿ ಆಶೀರ್ವಾದ ಪಡೆಯುತ್ತಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಮಠಯಾತ್ರೆ ಕೈಗೊಂಡಿರುವ ಅವರು, ಚಿತ್ರದುರ್ಗದ ಬಸವ ಮಾಚಿದೇವ ಸ್ವಾಮೀಜಿ, ಕಾಗಿನೆಲೆ ಪೀಠಕ್ಕೆ …
Read More »ಮಹಾರಾಷ್ಟ್ರ ಕಡೆಯಿಂದ ಬರುವವರಿಗೆ ಕೋವಿಡ್ ನೆಗೆಟಿವ್ ವರದಿ ಇದ್ದರಷ್ಟೇ ಪ್ರವೇಶ
ಬೆಳಗಾವಿ: ನೆರೆಯ ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗಡಿ ಚೆಕ್ಪೋಸ್ಟ್ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ. ಆ ರಾಜ್ಯಗಳಿಂದ ಬರುವ ವಾಹನಗಳನ್ನು ತಡೆದು ಕೋವಿಡ್ ನೆಗೆಟಿವ್ ಪ್ರಮಾಣಪತ್ರ (ಆರ್ಟಿಪಿಸಿಆರ್) ಕೇಳಲಾಗುತ್ತಿದೆ. ಇರುವವರಿಗೆ ಮಾತ್ರವೇ ಪ್ರವೇಶ ನೀಡಲಾಗುತ್ತಿದೆ. ಇಲ್ಲವಾದಲ್ಲಿ ವಾಪಸ್ ಕಳುಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಕಾಗವಾಡ ಹಾಗೂ ಕೊಗನೋಳ್ಳಿ ಚೆಕ್ಪೋಸ್ಟ್ನಲ್ಲಿ ಬುಧವಾರ ನಸುಕಿನಲ್ಲಿ ಕೆಲವು ಖಾಸಗಿ ಬಸ್ಗಳನ್ನು ವಾಪಸ್ ಕಳುಹಿಸಲಾಗಿದೆ. ಅವರ ಬಳಿ …
Read More »‘ಪೊಲೀಸ್ ಪೇದೆಯ ಎಸ್ಪಿ ಮಾಡ್ತೀನಿ ಹುಷಾರ್’ -SP ವೇದಮೂರ್ತಿಗೆ ಆರ್.ಶಂಕರ್ ಎಚ್ಚರಿಕೆ
ಯಾದಗಿರಿ: ಜಿಲ್ಲಾ ಪ್ರವಾಸದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವ ಆರ್.ಶಂಕರ್, ಎಸ್ಪಿ ವೇದಮೂರ್ತಿಗೆ ಕ್ಲಾಸ್ ತೆಗೆದುಕೊಂಡ ಪ್ರಸಂಗ ನಡೆಯಿತು. ಜಿಲ್ಲೆಯ ದೋರನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ದ ಉಸ್ತುವಾರಿ ಸಚಿವ ಆರ್ ಶಂಕರ್, ಜನರ ಬಳಿ ತೆರಳಿ ಅವರ ಅಹವಾಲುಗಳನ್ನು ಸ್ವೀಕರಿಸುತ್ತಿದ್ದರು. ಈ ವೇಳೆ ಸಚಿವರಿಂದ ದೂರ ನಿಲ್ಲುತ್ತಿದ್ದ ಎಸ್ಪಿ ವೇದಮೂರ್ತಿಯನ್ನು ಕರೆದು ಪಕ್ಕದಲ್ಲಿ ನಿಂತು ಜನರ ಸಮಸ್ಯೆ ಆಲಿಸುವಂತೆ ಹೇಳಿದ್ದಾರೆ. ಹೀಗಿದ್ದರೂ ಮತ್ತೆ ಸಚಿವರಿಂದ ಅಂತರ ಕಾಯ್ದುಕೊಂಡು ದೂರದಲ್ಲಿ ವೇದಮೂರ್ತಿ …
Read More »ಬೆಳಗಾವಿ: ಅಗ್ನಿಶಾಮಕ ದಳದವರಿಗೆ ಮುಖ್ಯಮಂತ್ರಿ ಪದಕ ಪ್ರದಾನ
ಬೆಳಗಾವಿ: 2015ರಿಂದ 2020ರ ಅವಧಿಯಲ್ಲಿ ಶ್ಲಾಘನೀಯ ಕಾರ್ಯನಿರ್ವಹಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, ಗೃಹರಕ್ಷಕ ದಳ ಮತ್ತು ರಾಜ್ಯ ವಿಪತ್ತು ಸ್ಪಂದನಾ ಪಡೆಯ ಸಿಬ್ಬಂದಿಗೆ ಮುಖ್ಯಮಂತ್ರಿಯವರ ಚಿನ್ನದ ಪದಕವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬೆಂಗಳೂರಿನಲ್ಲಿ ಮಂಗಳವಾರ ಪ್ರದಾನ ಮಾಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ ಸಮಾರಂಭದಲ್ಲಿ, ಇಲ್ಲಿನ ಅಗ್ನಿಶಾಮಕ ಠಾಣೆಯ ಪ್ರಕಾಶ್ ಶಿಂಧೆ, ರಾಜ್ಯ ವಿಪತ್ತು ಸ್ಪಂದನಾ ಪಡೆ ‘ಸಿ’ ಕಂಪನಿಯ ಅಜಿತ ದುಂಡಪ್ಪ ಹಾಗೂ ಕಿರಣ ಕುರಬೇಟ ಪದಕಕ್ಕೆ …
Read More »ಗ್ರಾಮದೇವರಿಗೆ ಕೈಮುಗಿದ.. ಬಳಿಕ ಗಣೇಶ ವಿಗ್ರಹವನ್ನೇ ಕದ್ದ
ಧಾರವಾಡ: ದೇವರಿಗೆ ಕೈ ಮುಗಿಯಲು ಬಂದ ವ್ಯಕ್ತಿ ದೇವರ ಮೂರ್ತಿಯನ್ನೆ ದರೋಡೆ ಮಾಡಿ ಪರಾರಿಯಾದ ವಿಕ್ಷಿಪ್ತ ಘಟನೆಯೊಂದು ಅಳ್ನಾವರ ತಾಲೂಕಿನ ಬೆಣಚಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಗ್ರಾಮದೇವಿಯ ದೇವಸ್ಥಾನದಲ್ಲಿ ಗ್ರಾಮಸ್ಥರು ಬೆಳ್ಳಿ ಲೇಪಿತ ಗಣೇಶನ ಪ್ರದರ್ಶಿತ ಮೂರ್ತಿಯನ್ನ ಪ್ರತಿಷ್ಟಾಪಿಸಿದ್ದರು. ಈ ವಿಗ್ರಹದ ಮೇಲೆ ಕಳ್ಳನೊಬ್ಬನ ಕಣ್ಣು ಬಿದ್ದಿದ್ದು ಆ ವಿಗ್ರಹ ಶುದ್ಧ ಬೆಳ್ಳಿಯ ಮೂರ್ತಿಯೆಂದು ನಂಬಿ ದರೋಡೆ ಮಾಡಲು ಸಂಚು ರೂಪಿಸಿದ್ದಾನೆ. ತಡರಾತ್ರಿ ಭಕ್ತರ ಸೋಗಿನಲ್ಲಿ ದೇವಸ್ಥಾನಕ್ಕೆ ಆಗಮಿಸಿದ ಕಳ್ಳ …
Read More »ಹುಬ್ಬಳ್ಳಿ ರೌಡಿಶೀಟರ್ಗಳ ಮನೆ ಮೇಲೆ ದಿಢೀರ್ ದಾಳಿ ನಡೆಸಿದ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಕಮಿಷನರ್ ಲಾಭುರಾಮ್ ರೌಡಿಶೀಟರ್ಗಳಿಗೆ ವಾರ್ನ್
ಹುಬ್ಬಳ್ಳಿ: ರೌಡಿಶೀಟರ್ಗಳ ಮನೆ ಮೇಲೆ ದಿಢೀರ್ ದಾಳಿ ನಡೆಸಿದ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಕಮಿಷನರ್ ಲಾಭುರಾಮ್ ರೌಡಿಶೀಟರ್ಗಳಿಗೆ ವಾರ್ನ್ ಮಾಡಿದ್ದಾರೆ. ಛೋಟಾ ಮುಂಬೈ ಎಂದೇ ಕರೆಯಲಾಗುವ ಅವಳಿ ನಗರದಲ್ಲಿ ಲಾಕ್ಡೌನ್ ಓಪನ್ ಆದಾಗಿನಿಂದ ಹತ್ಯೆ ಪ್ರಕರಣಗಳು ಜಾಸ್ತಿಯಾಗಿದೆ ಎನ್ನಲಾಗಿದೆ. ಹೀಗಾಗಿ, ಹುಬ್ಬಳ್ಳಿ-ಧಾರವಾಡ ನಗರದ ರೌಡಿಗಳ ಮನೆಗೆ ಕಮಿಷನರ್ ವಾರ್ನ್ ಮಾಡಿದ್ದಾರೆ. ಈ ಹಿನ್ನೆಲೆ ಹು-ಧಾ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ರೌಡಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಹು-ಧಾ ನಗರದ 570ಕ್ಕೂ ಹೆಚ್ಚು ಜನ …
Read More »ಈ ವರ್ಷವೂ ಪಠ್ಯಕ್ರಮ ಕಡಿತ : ಕಲಿಕಾ ಅಂತರ ಇನ್ನಷ್ಟು ಹೆಚ್ಚು ಸಾಧ್ಯತೆ
ಕೊರೊನಾ ಹಿನ್ನೆಲೆಯಲ್ಲಿ ಭೌತಿಕ ತರಗತಿ ಆರಂಭ ವಿಳಂಬವಾಗುತ್ತಿರುವುದರಿಂದ ಪ್ರಸಕ್ತ ಸಾಲಿಗೂ ಶೇ.30ರಷ್ಟು ಪಠ್ಯ ಕಡಿತಕ್ಕೆ ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ. 2020-21ನೇ ಸಾಲಿನಲ್ಲಿ ಕೊರೊನಾದಿಂದ ಭೌತಿಕ ತರಗತಿಗಳು ಸರಿಯಾಗಿ ನಡೆಯದೇ ಇರುವ ಹಿನ್ನೆಲೆಯಲ್ಲಿ ಪಿಯುಸಿ ಹಾಗೂ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಶೇ.30ರಷ್ಟು ಪಠ್ಯ ಕಡಿತ ಮಾಡಿ, ಉಳಿದ ಶೇ.70ರಷ್ಟು ಪಠ್ಯದಂತೆ ತರಗತಿಗಳನ್ನು ಆನ್ಲೈನ್, ಆಫ್ಲೈನ್ ವ್ಯವಸ್ಥೆ ಮೂಲಕ ನಡೆಸಲಾಗಿತ್ತು ಮತ್ತು ಸದ್ಯ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಕೂಡ ಶೇ.70ರಷ್ಟು ಪಠ್ಯದಂತೆಯೇ …
Read More »
Laxmi News 24×7