ಬೆಂಗಳೂರು: ದಲಿತ ಸಮಾವೇಶ ಮಾಡಬೇಡಿ ಅಂತ ಹೈಕಮಾಂಡ್ ಹೇಳಿಲ್ಲ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹಿಂದೆಯೇ ಹೈಕಮಾಂಡ್ ಎಸ್ಸಿ, ಎಸ್ಟಿ ಸಮುದಾಯಗಳನ್ನು ಒಗ್ಗೂಡಿಸಿ ಅಂತ ಹೇಳಿತ್ತು. ಹೈಕಮಾಂಡ್ ಯಾವಾಗ ಸಮಾವೇಶ ಮಾಡಬೇಕೆಂದು ಹೇಳುತ್ತದೋ ಆವಾಗ ಸಮಾವೇಶವನ್ನು ಮಾಡುತ್ತೇವೆ ಎಂದರು. ನಾನೇನೂ ಹೈಕಮಾಂಡ್ ಭೇಟಿಯಾಗಲ್ಲ. ಸಮಾವೇಶ ಮಾಡಬೇಕು ಅಂತ ರಾಜಣ್ಣ, ಪರಮೇಶ್ವರ್ ಸೇರಿ ಹಲವರು ಮನವಿ ಮಾಡಿದ್ದಾರೆ. ಬೇರೆಯವರು ಹೇಳಿದ್ದನ್ನೇ ನಾನು …
Read More »ಕಲಬುರಗಿಯಲ್ಲಿ ಕಾರ್ಮಿಕನ ಮೃತದೇಹವನ್ನು ಎಳೆದೊಯ್ದ ಘಟನೆ ಸಂಬಂಧ ಎಸ್ಪಿ ಜೊತೆ ಮಾತನಾಡಿದ್ದೇನೆ. ಕೆಲವು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದರು.
ಧಾರವಾಡ: ಕಾರ್ಮಿಕನ ಮೃತದೇಹವನ್ನು ಎಳೆದೊಯ್ದಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕೊಡ್ಲಾ ಗ್ರಾಮದ ಬಳಿಯ ಸಿಮೆಂಟ್ ಕಂಪನಿಯೊಂದರಲ್ಲಿ ನಡೆದಿದೆ. ಬಿಹಾರದ ಚಂದನಸಿಂಗ್ (35) ಮೃತ ಕಾರ್ಮಿಕ. ಕಾರ್ಮಿಕನನ್ನು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆ ಸಂಬಂಧ ಆರು ಮಂದಿ ವಿರುದ್ಧ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಕಲಬುರಗಿ ಎಸ್ಪಿ ಆಡೂರು ಶ್ರೀನಿವಾಸಲು ತಿಳಿಸಿದ್ದಾರೆ. “ಕಾರ್ಮಿಕ ಮೃತಪಟ್ಟಿದ್ದು ಕಾರ್ಖಾನೆಯ ಒಳಗಡೆ ಅಲ್ಲವೇ ಅಲ್ಲ. ಕಾರ್ಮಿಕ ಬಹಿರ್ದೆಸೆಗೆಂದು …
Read More »ಯಲ್ಲಾಪುರ ಬಳಿ ಲಾರಿ ಡಿಕ್ಕಿ: ಕಾರಲ್ಲಿದ್ದ ಪತಿ – ಪತ್ನಿ ಮತ್ತು ಏಳು ತಿಂಗಳ ಮಗ ಸಾವು
ಕಾರವಾರ: ಲಾರಿ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿ ಪತಿ, ಪತ್ನಿ ಮತ್ತು 7 ತಿಂಗಳ ಮಗ ಸೇರಿದಂತೆ ಮೂವರು ಸಾವನ್ನಪ್ಪಿದ ದಾರುಣ ಘಟನೆ ಯಲ್ಲಾಪುರದ ಅರೆಬೈಲ್ ಘಟ್ಟದ ಬಳಿ ಬುಧವಾರ ನಡೆದಿದೆ. ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೊಪ್ಪಳ ಮೂಲಕ ಶ್ರೀಕಾಂತ ರೆಡ್ಡಿ (37), ಅವರ ಪತ್ನಿ ಚೈತ್ರಾ ಆರ್(31) ಹಾಗೂ ಅವರ 7 ತಿಂಗಳ ಮಗು ಶ್ರೀಹಾನ್ ಅಪಘಾತದಲ್ಲಿ ಮೃತಟಪಟ್ಟವರು. ಕಾರು ಚಾಲಕ ಆರ್ ವೆಂಕಟೇಶ್ …
Read More »ಉಚಿತ ಕೃತಕ ಕಾಲು ಜೋಡಣೆಗೆ ಅರ್ಜಿ ಆಹ್ವಾನ: ಫೆ.25 ಕೊನೆಯ ದಿನ
ಬೆಳಗಾವಿ: ರಸ್ತೆ ಅಪಘಾತ ಇಲ್ಲವೇ ಗ್ಯಾಂಗ್ರೀನ್ ಸೇರಿ ಮತ್ತಿತ್ತರ ರೋಗಗಳಿಂದ ಕಾಲು ಕಳೆದುಕೊಂಡು, ಇನ್ನೇನು ನಮಗೆ ನಡೆಯೋಕೆ ಆಗೋದಿಲ್ಲ ಎಂದು ದುಃಖಿಸುತ್ತಿದ್ದಿರಾ..? ಹಾಗಾದರೆ, ಚಿಂತೆ ಬಿಡಿ ಜೈಪುರದ ಕೃತಕ ಕಾಲು ಎಲ್ಲರಂತೆ ನೀವು ಸ್ವತಂತ್ರವಾಗಿ ನಡೆದಾಡುವಂತೆ ಮಾಡುತ್ತದೆ. ಅದೂ ಸಂಪೂರ್ಣ ಉಚಿತವಾಗಿ. ಹೌದು, ಬೆಳಗಾವಿಯ ಲಯನ್ಸ್ ಕ್ಲಬ್ ಹಾಗೂ ಹುಬ್ಬಳ್ಳಿಯ ಮಹಾವೀರ ಲಿಂಬ್ ಸೆಂಟರ್ ಸಹಯೋಗದಲ್ಲಿ ಉಚಿತ ಕೃತಕ ಕಾಲು ಜೋಡಣೆಗೆ ಅರ್ಜಿ ಆಹ್ವಾನಿಸಲಾಗಿದೆ. ಇದು ಬೆಳಗಾವಿ ಜನತೆಗೆ ಒಂದು ಸುವರ್ಣಾವಕಾಶ. …
Read More »ಯಲ್ಲಮ್ಮಾ ದೇವಸ್ಥಾನ ಪ್ರಾಧಿಕಾರ ಹಾಗೂ ಮಂಡಳಿ ವತಿಯಿಂದ ಸಭೆ
ಇಂದು ಸಂಜೆ ಸವದತ್ತಿ ತಾಲೂಕು ಪಂಚಾಯತ್ ಸಭಾಭವನದಲ್ಲಿ ಮಾನ್ಯ ಸವದತ್ತಿ ಮತಕ್ಷೇತ್ರದ ಶಾಸಕರ ಘನ ಉಪಸ್ಥಿತಿಯಲ್ಲಿ ಉಗರಗೋಳ ಗ್ರಾಮ ಪಂಚಾಯತಿ ಸದಸ್ಯರೊಂದಿಗೆ / ಗ್ರಾಮಸ್ಥರೊಂದಿಗೆ ಶ್ರೀ ರೇಣುಕಾ ಯಲ್ಲಮ್ಮಾ ದೇವಸ್ಥಾನ ಪ್ರಾಧಿಕಾರ ಹಾಗೂ ಮಂಡಳಿ ವತಿಯಿಂದ ಕೈಗೊಳ್ಳಲಾಗುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಹಾಗೂ ಜಮೀನಿನ ವಿಷಯದ ಕುರಿತು ಸಭೆ ಜರುಗಿಸಿ ಚರ್ಚಿಸಲಾಯಿತು. ಜಿಲ್ಲಾಧಿಕಾರಿ ಯವರ ಜೊತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು …
Read More »ಬೆಳಗಾವಿ ಗ್ರಾಮೀಣ ಕ್ಷೇತ್ರದ ತುರಮುರಿ ಗ್ರಾಮದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ನೂತನ ಮೂರ್ತಿಯ ಪ್ರತಿಷ್ಟಾಪನೆಯ ಕಾರ್ಯಕ್ರಮ
ಬೆಳಗಾವಿ ಗ್ರಾಮೀಣ ಕ್ಷೇತ್ರದ ತುರಮುರಿ ಗ್ರಾಮದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ನೂತನ ಮೂರ್ತಿಯ ಪ್ರತಿಷ್ಟಾಪನೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದೆ. ಶಿವಾಜಿ ಮಹಾರಾಜರ ಜಯಂತಿಯ ಪ್ರಯುಕ್ತವಾಗಿ ಮೂರ್ತಿಯನ್ನು ಅನಾವರಣಗೊಳಿಸಲಾಗಿದೆ. ಕ್ಷೇತ್ರದ ಎಲ್ಲ ಗ್ರಾಮಗಳ, ಸರ್ವ ಜನಾಂಗಗಳ ಹಿತ ದೃಷ್ಟಿಯಿಂದ ಎಲ್ಲ ಮಹನೀಯರ ಮೂರ್ತಿಗಳ ಪ್ರತಿಷ್ಟಾಪನೆಗೆ ಮಹತ್ವ ನೀಡಲಾಗುತ್ತಿದೆ. ಬರುವ ದಿನಗಳಲ್ಲಿ ಕ್ಷೇತ್ರದಲ್ಲಿ ಮತ್ತಷ್ಟು ಮಹನೀಯರ ಮೂರ್ತಿಗಳು ತಲೆ ಎತ್ತಲಿವೆ. ಈ ಸಂದರ್ಭದಲ್ಲಿ ಯುವರಾಜಣ್ಣ ಕದಂ, ಜಯವಂತ ಬಾಳೇಕುಂದ್ರಿ, ಯುವ ಕಾಂಗ್ರೆಸ್ ಮುಖಂಡ …
Read More »ತಹಶೀಲ್ದಾರ್ ಸಹಿ ನಕಲು ಮಾಡಿ ಮುಜರಾಯಿ ಇಲಾಖೆಯ 63 ಲಕ್ಷ ರೂ. ಲಪಟಾಯಿಸಿದ ಆರ್ಐ!
ದೇವನಹಳ್ಳಿ, ಫೆಬ್ರವರಿ 20: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ರೆವಿನ್ಯೂ ಇನ್ಸ್ಪೆಕ್ಟರ್ ಹೇಮಂತ್ ಕುಮಾರ್ ಮುಜರಾಯಿ ಇಲಾಖೆಯ ಲಕ್ಷಾಂತರ ರೂಪಾಯಿ ಲಪಟಾಯಿಸಿ ಸಿಕ್ಕಿ ಬಿದ್ದಿದ್ದಾರೆ. ರೆವಿನ್ಯೂ ಇನ್ಸ್ಪೆಕ್ಟರ್ (ಆರ್ಐ) ಆಗಿ ಬರುವ ಮೊದಲು ಮುಜರಾಯಿ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಹೇಮಂತ್ ಇಲಾಖೆಯ ಬಗ್ಗೆ ಹೆಚ್ಚು ಮಾಹಿತಿ ತಿಳಿದಿದ್ದರಿಂದ, 2023 ರಿಂದ ಇಲ್ಲಿಯವರೆಗೆ ಇಬ್ಬರು ತಹಶಿಲ್ದಾರ್, ಓರ್ವ ಕೇಸ್ ವರ್ಕರ್ ಸಹಿ ಮತ್ತು ಸೀಲ್ ಬಳಸಿ ಮುಜುರಾಯಿ ಇಲಾಖೆಯಲ್ಲಿನ …
Read More »ಸಾಲಗಾರನ ಕಿರುಕುಳಕ್ಕೆ ವ್ಯಕ್ತಿ ಆತ್ಮಹತ್ಯೆ
ಧಾರವಾಡ, ಫೆಬ್ರವರಿ 19: ಕಿರುಕುಳ ತಪ್ಪಿಸಬೇಕು ಮತ್ತು ಸಾವಿನ ಸರಣಿ ನಿಲ್ಲಬೇಕು ಅಂತಾ ಸರ್ಕಾರ ಫೈನಾನ್ಸ್ ವಿರುದ್ಧ ಸುಗ್ರೀವಾಜ್ಞೆ ತಂದಿದೆ. ಆದರೆ ಫೈನಾನ್ಸ್ (Microfinance) ಅಟ್ಟಹಾಸ ಮಾತ್ರ ನಿಲ್ಲುತ್ತಿಲ್ಲ. ಕರ್ನಾಟಕದಲ್ಲಿ ಮತ್ತೆ ಸಾವುಗಳು ಸಂಭವಿಸುತ್ತಲ್ಲೇ ಇದ್ದಾವೆ. ಇದೀಗ ಸಾಲಗಾರನ ಕಿರುಕುಳದಿಂದಾಗಿ ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಕುಂದಗೋಳ ತಾಲೂಕಿನ ಉಣಕಲ್ಕೆರೆಯಲ್ಲಿ ನಡೆದಿದೆ. ಹುಬ್ಬಳ್ಳಿಯ ಉಣಕಲ್ ಕೆರೆಗೆ ಹಾರಿ ಯಲಿವಾಳ ಗ್ರಾಮದ ನಿವಾಸಿ ಶಿವಾನಂದ ಕಳ್ಳಿಮನಿ (36) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ತಿಕ್ …
Read More »ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಆಟವಾಡುತ್ತಿದ್ದ ಮಗು ಮೇಲೆ ಹರಿದ ಜೆಸಿಬಿ
ಬೆಂಗಳೂರು, ಫೆಬ್ರವರಿ 19: ಜೆಸಿಬಿ ಹರಿದು ಆಟವಾಡುತ್ತಿದ್ದ 2 ವರ್ಷದ ಮಗು ದುರ್ಮರಣ (death) ಹೊಂದಿರುವಂತಹ ಘಟನೆ ಬೆಂಗಳೂರಿನ ಕಾಡುಗೋಡಿ ಬಳಿಯ ಸಿಟಿ ಲೇಔಟ್ನಲ್ಲಿ ನಡೆದಿದೆ. ಥನವ್ ರೆಡ್ಡಿ ಮೃತ ಮಗು. ಜೆಸಿಬಿ ಚಾಲಕನ ಅತಿವೇಗ, ಅಜಾಗರೂಕತೆಯಿಂದ ಘಟನೆ ಸಂಭವಿಸಿದೆ. ಮಹದೇವಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ತಲೆ ಮರೆಸಿಕೊಂಡಿರುವ ಜೆಸಿಬಿ ಚಾಲಕನಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಮನೆ ಮುಂದೆ ಥನವ್ ರೆಡ್ಡಿ ಆಟವಾಡುತ್ತಿದ್ದ. ಈ ವೇಳೆ ಆತನ ಮೇಲೆ ಜೆಸಿಬಿ ಹರಿದಿದೆ. …
Read More »ಮಹಾಕುಂಭಕ್ಕೆ ನಿರೀಕ್ಷೆಮೀರಿದ ಜನಸಾಗರ; ವ್ಯಾಪಾರ ವಹಿವಾಟು ಮೂರು ಲಕ್ಷ ಕೋಟಿ
ನವದೆಹಲಿ, ಫೆಬ್ರುವರಿ 19: ಉತ್ತರಪ್ರದೇಶದ ಪ್ರಯಾಗರಾಜ್ನಲ್ಲಿ ಮುಂದಿನ ವಾರ ಸಮಾಪ್ತಿಗೊಳ್ಳಲಿರುವ ಮಹಾಕುಂಭ ಮೇಳ ನಿರೀಕ್ಷೆಮೀರಿದ ಯಶಸ್ಸು ಕಾಣುತ್ತಿದೆ. ಜನವರಿ 13ರಂದು ಆರಂಭವಾಗಿರುವ ಮತ್ತು ಪ್ರತೀ 144 ವರ್ಷಗಳಿಗೊಮ್ಮೆ ನಡೆಯುವ ಈ ಕುಂಭಮೇಳದಲ್ಲಿ ನಿರೀಕ್ಷಿಸಿದುದಕ್ಕಿಂತಲೂ ಹೆಚ್ಚಿನ ಜನರು ಈವರೆಗೆ ಭೇಟಿ ನೀಡಿದ್ದಾರೆ. ಇಡೀ ಕುಂಭಮೇಳದ ಆರು ವಾರದಲ್ಲಿ ಒಟ್ಟು 40 ಕೋಟಿ ಭಕ್ತರು ಆಗಮಿಸಬಹುದು ಎಂದು ಭಾವಿಸಲಾಗಿತ್ತು. ಆದರೆ, ಈವರೆಗಿನ ಸಂಖ್ಯೆ 55 ಕೋಟಿ ಮೀರಿದೆ. ಇನ್ನೊಂದು ವಾರ ಬಾಕಿ ಇದ್ದು ಒಟ್ಟು …
Read More »