Breaking News

Laxminews 24x7

ಆಯತಪ್ಪಿ ಕಂದಕಕ್ಕೆ ಉರುಳಿದ ಆಟೋ ರಿಕ್ಷಾ;ಚಾಲಕ ಜಸ್ಟ್ ಮಿಸ್

ಆಯತಪ್ಪಿ ಕಂದಕಕ್ಕೆ ಉರುಳಿದ ಆಟೋ ರಿಕ್ಷಾ;ಚಾಲಕ ಜಸ್ಟ್ ಮಿಸ್ ಅಥಣಿ: ಇದು ಯಮಲೋಕದ ದ್ವಾರ ಬಾಗಿಲು ಅಂದ್ರು ತಪ್ಪಾಗಲಾರದು. ಜನ ಅನಿವಾರ್ಯವಾಗಿ ಈ ರಸ್ತೆ ದಾಟಲು ಹೋದರೆ ಸ್ವಲ್ಪ ಯಾಮಾರಿದ್ರು ನಿಮ್ಮ ಪ್ರಾಣಕ್ಕೆ ಕುತ್ತು ಗ್ಯಾರಂಟಿ. ಬೆಳಗಾವಿ ಜಿಲ್ಲೆ ಅಥಣಿ- ಜಮಖಂಡಿ ರಾಜ್ಯ ಹೆದ್ದಾರಿ ಮಾರ್ಗ ಮದ್ಯದಲ್ಲಿರುವ ಹಿಪ್ಪರಗಿ ಆಣೆಕಟ್ಟು ಸಂಪರ್ಕ ರಸ್ತೆಗೆ ತಡೆ ಗೋಡೆ ಇಲ್ಲದ ಪರಿಣಾಮ ಸಾಲು ಸಾಲು ಅಪಘಾತಗಳು ನಡೆಯುತ್ತಿವೆ. ಕಳೆದ ಒಂದು ತಿಂಗಳಲ್ಲಿ 14 …

Read More »

ಕಾಗವಾಡ ಪಟ್ಟಣ ಪಂಚಾಯಿತಿಯ ವ್ಯಾಪ್ತಿಯಲ್ಲಿಯ ಬಸವನಗರ ಬಡಾವಣೆಯಲ್ಲಿ ಅನೇಕ ದಲಿತ ಬಾಂಧವರಿಗೆ ಹಕ್ಕುಪತ್ರಗಳು ನೀಡಿಲ್ಲ

ಕಾಗವಾಡ ಪಟ್ಟಣ ಪಂಚಾಯಿತಿಯ ವ್ಯಾಪ್ತಿಯಲ್ಲಿಯ ಬಸವನಗರ ಬಡಾವಣೆಯಲ್ಲಿ ಅನೇಕ ದಲಿತ ಬಾಂಧವರಿಗೆ ಹಕ್ಕುಪತ್ರಗಳು ನೀಡಿಲ್ಲ ಅಲ್ಲದೆ ಮೂಲ ಸೌಕರ್ಯಗಳು ನೀಡಲು ವಿಳಂಬ ಮಾಡುತ್ತಿದ್ದರಿಂದ ಕಾಗವಾಡ ಹಾಗೂ ಅಥಣಿ ದಲಿತ ಸಂಘರ್ಷ ಸಮಿತಿಯ ಸದಸ್ಯರು ಕಾಗವಾಡ ತಹಸಿಲ್ದಾರ ಕಚೇರಿ ಎದುರು ಪ್ರತಿಭಟನೆ ಕೈಗೊಂಡು ತಮ್ಮ ಬೇಡಿಕೆಗಳ ಮನವಿ ತಹಸಿಲ್ದಾರ್ ಗೆ ಅರ್ಪಿಸಿದರು. ಮಂಗಳವಾರ ರಂದು ಕಾಗವಾಡ ತಹಸಿಲ್ದಾರ ರವೀಂದ್ರ ಹಾದಿಮನಿ ಇವರನ್ನು ಭೇಟಿಯಾಗಿ ಅವರ ಕಚೇರಿ ಎದುರು ಕಾಗವಾಡದ ಬಸವನಗರ ದಲಿತ …

Read More »

ನಿರಂತರ ಮಳೆಯಿಂದ ಜಲಾವೃತಗೊಂಡಿರುವ ರಾಷ್ಟ್ರೀಯ ಹೆದ್ದಾರಿ

ಬೆಳಗಾವಿ ತಾಲೂಕಿನ ಬಡೇಕೊಳ್ಳಮಠ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಸಮಸ್ಯೆ ವಿಚಾರ ನಿಧಾನವಾಗಿ ಚಾಲನೆ ಮಾಡುವಂತೆ ಕಮಿಷನರ್ ಭೂಷಣ್ ಬೋಸರೆ ಮನವಿ ನಿರಂತರ ಮಳೆಯಿಂದ ಜಲಾವೃತಗೊಂಡಿರುವ ರಾಷ್ಟ್ರೀಯ ಹೆದ್ದಾರಿ ಅಪಘಾತ ವಲಯ ಹಿನ್ನೆಲೆ ನಿದಾನವಾಗಿ ವಾಹನ ಚಲಾವಣೆ ಮಾಡುವಂತೆ ಮನವಿ ಮತ್ತೊಂದು ಧಾರಾಕಾರವಾಗಿ ಸುರಿಯುವ ಮಳೆಯಲ್ಲಿ ಟ್ರಾಫಿಕ್ ಕ್ಲಿಯರ್ ಮಾಡಿಸುತ್ತಿರೋ ಪೊಲೀಸ ಸಿಬ್ಬಂದಿ ಹಿರೇಬಾಗೆವಾಡಿ ಪೊಲೀಸ ಠಾಣೆ ಪೊಲೀಸ ಪೇದೆ ಸುರಕಾಂತ್ ಬಾಬನ್ನವರ್ ಮಳೆಯಲ್ಲಿ ಕರ್ತವ್ಯ ನಿಧಾನವಾಗಿ ನಿಯಂತ್ರಣಕ್ಕೆ ಬರ್ತಿರೋ …

Read More »

ಅಧಿಕಾರ ಇದ್ದಾಗ ನವರಂಗಿ ಆಟ, ವಿಪಕ್ಷದಲ್ಲಿದ್ದಾಗ ಗೋಸುಂಬೆ ನಾಟಕ’: ಆರ್​ ಅಶೋಕ್​ ವಿರುದ್ಧ ಸಿಎಂ ಕಿಡಿ

ಬೆಂಗಳೂರು: ಅಧಿಕಾರ ಇದ್ದಾಗ ನವರಂಗಿ ಆಟ, ವಿರೋಧ ಪಕ್ಷದಲ್ಲಿದ್ದಾಗ ಗೋಸುಂಬೆ ನಾಟಕ. ಅಧಿಕಾರ ಇದ್ದಾಗ ಹಗಲುವೇಷ, ವಿರೋಧ ಪಕ್ಷದಲ್ಲಿದ್ದಾಗ ರೋಷಾವೇಶ. ಈ ಬಣ್ಣನೆ ನಿಮ್ಮ ಆತ್ಮವಂಚಕ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಸಾರಿಗೆ ನೌಕರರು ಮೊದಲ ಬಾರಿ ವೇತನ‌ ಪರಿಷ್ಕರಣೆಗಾಗಿ ಮುಷ್ಕರ ನಡೆಸಿದಾಗ ಸಾರಿಗೆ ಸಚಿವರಾಗಿದ್ದವರು ನೀವೇ ಅಲ್ಲವೇ? ಸಾರಿಗೆ ಸಂಸ್ಥೆಗಳ …

Read More »

ವೃದ್ಧನ ಡಿಜಿಟಲ್ ಅರೆಸ್ಟ್ ಮಾಡಿ ₹1.77 ಕೋಟಿ ದೋಚಿದ ಸೈಬರ್ ವಂಚಕರು

ಬೆಂಗಳೂರು: ವೃದ್ಧನನ್ನು ಒಂದು ವಾರ ಡಿಜಿಟಲ್ ಬಂಧನದಲ್ಲಿಟ್ಟ ಸೈಬರ್ ವಂಚಕರು 1.77 ಕೋಟಿ ರೂ. ವರ್ಗಾವಣೆ ಮಾಡಿಕೊಂಡು ವಂಚಿಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಸದಾನಂದನಗರದ ಎನ್‌ಜಿಇಎಫ್ ಲೇಔಟ್ ನಿವಾಸಿ ಜಿ.ವಸಂತ ಕುಮಾರ್ (81) ಸೈಬರ್ ವಂಚನೆಗೆ ಒಳಗಾದವರು. ಈ ಸಂಬಂಧ ಅವರು ನೀಡಿದ ದೂರಿನ ಮೇರೆಗೆ ನಗರದ ಪೂರ್ವ ವಿಭಾಗದ ಸಿಇಎನ್​​ ಪೊಲೀಸ್ ಠಾಣೆಯಲ್ಲಿ ಜುಲೈ 23ರಂದು ಪ್ರಕರಣ ದಾಖಲಾಗಿದೆ. ಮುಂಬೈನ ಕೊಲಾಬಾ ಪೊಲೀಸರ ಹೆಸರಿನಲ್ಲಿ ಜುಲೈ 5ರಂದು ಕರೆ …

Read More »

ಜನಗಣತಿಯ ಧರ್ಮದ ಕಾಲಂನಲ್ಲಿ ಲಿಂಗಾಯತ ಎಂದು ಬರೆಸಲು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ ತೀರ್ಮಾನ

ದಾವಣಗೆರೆ : ಮುಂಬರುವ ಜಾತಿ ಗಣತಿಯ ಧರ್ಮದ ಕಾಲಂನಲ್ಲಿ ‘ಲಿಂಗಾಯತ’ ಹಾಗೂ ಜಾತಿಯ ಕಾಲಂನಲ್ಲಿ ‘ಉಪಪಂಗಡ’ ಎಂದು ದಾಖಲಿಸುವಂತೆ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ತೀರ್ಮಾನ ಕೈಗೊಂಡಿದೆ ಎಂದು ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರು ಹೇಳಿದ್ದಾರೆ. ಇಲ್ಲಿ ಬಸವ ಸಂಸ್ಕೃತಿ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಲಿಂಗಾಯತ ಸಮುದಾಯದ ಹಲವು ಒಳಪಂಗಡಗಳು ಸರ್ಕಾರದ ಹಲವು ಸೌಲಭ್ಯಗಳನ್ನು ಪಡೆಯುತ್ತಿವೆ. ಜಾತಿಗಣತಿಯಲ್ಲಿ ಉಪಪಂಗಡವನ್ನು ನಮೂದಿಸದೇ ಇದ್ದರೆ ಈ ಸೌಲಭ್ಯ ಕೈ ತಪ್ಪುವ ಅಪಾಯವಿದೆ. …

Read More »

ಬೆಳಗಾವಿಯ ಸದಾಶಿವ ನಗರದ ಲಕ್ಷ್ಮೀ ಕಾಂಪ್ಲೆಕ್ಸ್ ಬಳಿ ಮಾರಕಾಸ್ತ್ರಗಳಿಂದ ಹಲ್ಲೆಗೈದು ಮಹಿಳೆ ಬರ್ಬರ ಹ ತ್ಯೆ!

ಬೆಳಗಾವಿಯಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆಗೈದು ಮಹಿಳೆ ಬರ್ಬರ ಹ ತ್ಯೆ! ಬೆಳಗಾವಿ ಸದಾಶಿವ ನಗರದ ಲಕ್ಷ್ಮೀ ಕಾಂಪ್ಲೆಕ್ಸ್ ಬಳಿಯ ಘಟನೆ ಬೆಳಗಾವಿ ವಡ್ಡರವಾಡಿಯ ರಾಮನಗರದ ನಿವಾಸಿ ಮಹಾದೇವಿ ಕರೆನ್ನವರ (45)ಕೊ ಲೆಯಾದ ದುರ್ದೈವಿ ಮಹಿಳೆಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ ಸ್ಥಳಕ್ಕೆ ಕಮಿಷನರ್ ಭೂಷಣ್ ಬೋಸರೆ, ಡಿಸಿಪಿ ನಾರಾಯಣ್ ಭರಮನಿ ಭೇಟಿ,ಪರಿಶೀಲನೆ ಘಟನಾ ಸ್ಥಳಕ್ಕೆ ಎಫ್ಎಸ್ಎಲ್ ತಂಡ ಸಿಬ್ಬಂದಿಗಳು ಆಗಮನ ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿ ಬೀಮ್ಸ್ ಆಸ್ಪತ್ರೆ ಶ ವಗಾರಕ್ಕೆ ರವಾನೆ ಕಳೆದ …

Read More »

ಲಾಲ್‌ಬಾಗನಲ್ಲಿ ಆ.7ರಿಂದ ಫಲಪುಷ್ಪ ಪ್ರದರ್ಶನ;

ಬೆಂಗಳೂರು : ಸ್ವಾತಂತ್ರ್ಯೋತ್ಸವದ ನಿಮಿತ್ತ ನಗರದ ಪುಷ್ಪಕಾಶಿ ಲಾಲ್​​ಭಾಗ್​ನಲ್ಲಿ ಹನ್ನೆರಡು ದಿನಗಳ ನಡೆಯುವ ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಿಷಯಾಧಾರಿತ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಚಾಲನೆ ನೀಡಲಿದ್ದಾರೆ. ಮಂಗಳವಾರ ಲಾಲ್‌ ಬಾಗ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ತೋಟಗಾರಿಕೆ ಇಲಾಖೆ ಕಾರ್ಯದರ್ಶಿ ಡಾ. ಶಮ್ಲಾ ಇಕ್ಬಾಲ್ ಮಾಹಿತಿ ನೀಡಿದರು. ಆಗಸ್ಟ್ 7 ರಂದು ಬೆಳಗ್ಗೆ 10ಕ್ಕೆ ಲಾಲ್​ಬಾಗ್​ ಗಾಜಿನಮನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 218ನೇ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದು, …

Read More »

ಬೆಳಗಾವಿ – ಬೆಂಗಳೂರು ವಂದೇ ಭಾರತಕ್ಕೆ ಮುಹೂರ್ತ ಫಿಕ್ಸ್ ; ಎಲ್ಲೆಲ್ಲಿ ನಿಲುಗಡೆ? ಹೀಗಿದೆ ವೇಳಾಪಟ್ಟಿ

ಬೆಳಗಾವಿ : ಬೆಳಗಾವಿ ಭಾಗದ ಜನರ ಬಹುದಿನದ ಬೇಡಿಕೆಯಾಗಿದ್ದ ಬೆಳಗಾವಿ – ಬೆಂಗಳೂರು ‘ವಂದೇ ಭಾರತ್’ ರೈಲು ಸಂಚರಿಸುವುದಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಇದೇ ಆಗಸ್ಟ್ 10 ರಂದು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನಿಂದ ಚಾಲನೆ ನೀಡಲಿದ್ದಾರೆ ಎಂದು ಸಂಸದ ಜಗದೀಶ ಶೆಟ್ಟರ್ ಮಾಹಿತಿ ನೀಡಿದ್ದಾರೆ. ಆಗಸ್ಟ್​ 10 ರಂದೇ ಮೋದಿ ಅವರಿಂದ ಗ್ರೀನ್​ ಸಿಗ್ನಲ್: ಈ ಕುರಿತು ಜಗದೀಶ ಶೆಟ್ಟರ್ ಅವರನ್ನು  ಪ್ರತಿನಿಧಿ ಸಂಪರ್ಕಿಸಿದಾಗ, ನಿನ್ನೆಯಷ್ಟೇ ದೆಹಲಿಯಲ್ಲಿ …

Read More »

ಗದಗದಲ್ಲಿ ಸಾರಿಗೆ ನೌಕರರ ಮುಷ್ಕರ ಎಫೆಕ್ಟ್: ಖಾಲಿ‌ ಮೈದಾನದಂತಾದ ಬಸ್ ನಿಲ್ದಾಣದಲ್ಲಿ ಕ್ರಿಕೆಟ್ ಮ್ಯಾಚ್

ಗದಗದಲ್ಲಿ ಸಾರಿಗೆ ನೌಕರರ ಮುಷ್ಕರ ಎಫೆಕ್ಟ್: ಖಾಲಿ‌ ಮೈದಾನದಂತಾದ ಬಸ್ ನಿಲ್ದಾಣದಲ್ಲಿ ಕ್ರಿಕೆಟ್ ಮ್ಯಾಚ್ ಗದಗ : ವಿವಿಧ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಸಾರಿಗೆ ನೌಕರರು ಬಸ್ ಮುಷ್ಕರಕ್ಕೆ ಮುಂದಾಗಿದ್ದಾರೆ. ಹೀಗಾಗಿ, ನಗರದಲ್ಲಿ ಸಂಚಾರ ವ್ಯತ್ಯಯವಾಗಿದೆ. ಇದೀಗ ಬಸ್​ಗಳಿಲ್ಲದೆ ಖಾಲಿ ಮೈದಾನದಂತಾಗಿದ್ದ ಬಸ್​​ ನಿಲ್ದಾಣದಲ್ಲಿಯೇ ಹೋಟೆಲ್, ಅಂಗಡಿಯಲ್ಲಿ ಕೆಲಸ ಮಾಡುವ ಹುಡುಗರು ಕ್ರಿಕೆಟ್ ಆಡಿ ಎಂಜಾಯ್ ಮಾಡಿದ್ದಾರೆ. ಬಸ್​ ಮೇಲೆ ಕಲ್ಲು ತೂರಾಟ: ಹುಬ್ಬಳ್ಳಿಯಿಂದ ಹೊಸಪೇಟೆಗೆ ತೆರಳುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ …

Read More »