Breaking News

Laxminews 24x7

ತಂದೆಯೊಬ್ಬರು ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದು ಆತ್ಮಹತ್ಯೆ

ಆನೇಕಲ್ : ತಂದೆಯೊಬ್ಬರು ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಸತೀಶ್​ ರೆಡ್ಡಿ (45), ಮಕ್ಕಳಾದ ಕೀರ್ತಿ(19) , ಮೊನಿಷಾ(17) ಮೃತ ದುರ್ದೈವಿಗಳು. ಸತೀಶ್ ರೆಡ್ಡಿಯವರ ಪತ್ನಿ ಆಶಾ ಅವರಿಗೆ ಕೋವಿಡ್ ಸೋಂಕು ತಗುಲಿತ್ತು. ಚಿಕಿತ್ಸೆಯ ಬಳಿಕವೂ ಅಷ್ಟಾಗಿ ಚೇತರಿಸಿಕೊಳ್ಳದ ಆಶಾ ಮೇ.6 ರಂದು ಸಾವನ್ನಪ್ಪುತ್ತಾರೆ. ಅಮ್ಮ ಚೇತರಿಸಿಕೊಂಡು ಮತ್ತೆ ಮನೆಗೆ ಬರುತ್ತಾರೆ ಎಂದುಕೊಂಡಿದ್ದ …

Read More »

ರಮೇಶ ಜಾರಕಿಹೊಳಿ ಸರಕಾರಕ್ಕೆ ಮುಜುಗರ ತರುವ ಕೆಲಸ ಮಾಡುತ್ತಿಲ್ಲ : ಭೈರತಿ ಬಸವರಾಜ್

ಹುಬ್ಬಳ್ಳಿ: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರು ಸರಕಾರಕ್ಕೆ ಮುಜುಗರ ತರುವ ಕೆಲಸ ಮಾಡುತ್ತಿಲ್ಲ. ಬೇಸರ ಹಾಗೂ ಉದ್ವೇಗದಿಂದ ರಾಜೀನಾಮೆ ಸಲ್ಲಿಸುವುದಾಗಿ ಹೇಳಿದ್ದರು. ಅವರ ಸಹೋದರರೆಲ್ಲಾ ಸಮಾಧಾನ ಮಾಡಿದ್ದಾರೆ. ಯಾವುದೋ ಒಂದು ಪ್ರಕರಣವಿದೆ. ಅದು ಇತ್ಯರ್ಥವಾದ ನಂತರ ಸಚಿವರಾಗುತ್ತಾರೆ. ನಾವೆಲ್ಲರೂ ಅವರೊಂದಿಗೆ ಇದ್ದೇವೆ ಎಂದು ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ್ ತಿಳಿಸಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಅವರ ಜೊತೆಗೆ ಇದ್ದೇವೆ. ಇಂದು ನಿನ್ನೆಯ ಸ್ನೇಹವಲ್ಲ. ಯುವ ಕಾಂಗ್ರೆಸ್ ಹಂತದಿಂದಲೇ …

Read More »

ಕರ್ನಾಟಕದ ರಾಜಕೀಯ ಹುಲಿ ಸಿದ್ದರಾಮಯ್ಯ : ಅಭಿಮಾನಿಗಳ ಘೋಷಣೆ

ಮೈಸೂರು : ರಾಜ್ಯ ಕಾಂಗ್ರೆಸ್ ನಲ್ಲಿ ಮುಂದಿನ ಸಿಎಂ ಅಭ್ಯರ್ಥಿ ಯಾರು..? ಅನ್ನೋ ಚರ್ಚೆ ಆರಂಭವಾಗಿದ್ದು, ಪಕ್ಷದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಈ ಮಧ್ಯೆ ಸಿಎಂ ರೇಸ್ ನಲ್ಲಿರುವ ನಾಯಕರುಗಳ ಅಭಿಮಾನಿಗಳು ತರಹೇವಾರಿ ಘೋಷಣೆಗಳನ್ನು ಮೊಳಗಿಸುತ್ತಿದ್ದಾರೆ. ಇದಕ್ಕೆ ತಾಜಾ ಉದಾಹರಣೆ ಮೈಸೂರಿನಲ್ಲಿ ನಡೆದಿರುವ ಘಟನೆ. ಹೌದು..! ಸಿದ್ದರಾಮಯ್ಯ ಮುಂದಿನ ಸಿಎಂ ಅಭ್ಯರ್ಥಿ ಎಂದು ಸಿದ್ದು ಅಭಿಮಾನಿಗಳು ಈಗಾಗಲೇ ಫಿಕ್ಸ್ ಆಗಿದ್ದು, ಎಲ್ಲೆಲ್ಲೂ ಅದನ್ನೇ ಹೇಳುತ್ತಿದ್ದಾರೆ. ಈ ಮಧ್ಯೆ ಇಂದು ಸಿದ್ದರಾಮಯ್ಯ …

Read More »

ಹಗೇದಾಳ ಗುಟಗುದ್ದಿ ರಾಮದ ಯುವಕರಿಂದ ರಾಹುಲ್ ಜಾರಕಿಹೊಳಿಗೆ ಸತ್ಕಾರ

ಹಗೇದಾಳ ಗ್ರಾಮದ ಯುವಕರಿಂದ ರಾಹುಲ್ ಜಾರಕಿಹೊಳಿಗೆ ಸತ್ಕಾರ ಹುಕ್ಕೇರಿ : ತಾಲ್ಲೂಕಿನ ಹಗೇದಾಳ ಗ್ರಾಮದ ಯುವಕರು ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರನ್ನು ಬುಧವಾರ ಸತ್ಕರಿಸಿ ಗೌರವಿಸಿದರು. ಗುಟಗುದ್ದಿ ಗ್ರಾಮದಲ್ಲಿ ಇಂದು ನಡೆಯಲಿರುವ ರಾಹುಲ್ ಜಾರಕಿಹೊಳಿ ಯುವಕ ಸಂಘದ ಉದ್ಘಾಟನೆ ಕಾರ್ಯಕ್ರಮಕ್ಕೆ ತೆರಳುವ ಸಂದರ್ಭದಲ್ಲಿ ದಾರಿ ಮಧ್ಯದಲ್ಲಿ ಹಗೇದಾಳ ಗ್ರಾಮದ ಯುವಕರು, ರಾಹುಲ್ ಅವರನ್ನು ಭೇಟಿ ಮಾಡಿ ಸನ್ಮಾನಿಸಿದರು.   ಸನ್ಮಾನ ಸ್ವೀಕರಿಸಿ ಯುವ ನಾಯಕ ರಾಹುಲ್ ಜಾರಕಿಹೊಳಿ …

Read More »

ಆ ಲೆವಲ್ ಗೆ ಬಿಲ್ಡಪ್ ಕೊಡಲು ಅವರೇನು ಪ್ರಧಾನ ಮಂತ್ರಿನಾ.? ಅರುಣ್ ಸಿಂಗ್ ರಾಜ್ಯ ಭೇಟಿಗೆ ಯತ್ನಾಳ್ ವ್ಯಂಗ್ಯ

ಬೆಂಗಳೂರು: ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡಿದ್ದರ ಬಗ್ಗೆ ಲೇವಡಿ ಮಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಅವರೇನು ಪ್ರಧಾನಮಂತ್ರಿನಾ? ಅಷ್ಟೊಂದು ಬಿಲ್ಡಪ್ ಕೊಡಲು? ಅವರು ಬರುವಾಗಲೇ ಗೊತ್ತಿತ್ತು ಏನ್ ಹೇಳ್ತಾರೆ ಎಂದು ಅದಕ್ಕೆ ಭೇಟಿ ಮಾಡಿಲ್ಲ ಎಂದು ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಯತ್ನಾಳ್, ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡುವಾಗಲೇ ಗೊತ್ತಿತ್ತು, ನಾಯಕತ್ವ ಬದಲಾವಣೆ ವಿಚಾರವಾಗಿ ಅವರು ಏನು ಹೇಳುತ್ತಾರೆ ಎಂದು. ಗೊತ್ತಿದ್ದೇ ಅವರನ್ನು ಭೇಟಿಯಾಗಿಲ್ಲ. …

Read More »

ಬಿಎಸ್ ವೈ ವಿರುದ್ದ ಮಾತನಾಡಿದ್ರೆ ನಾವು ಸುಟ್ಟು ಹೋಗ್ತೀವಿ : ಸಿ ಪಿ ಯೋಗೇಶ್ವರ್

ಕೊಪ್ಪಳ: ಸಿಎಂ ಬಿ ಎಸ್ ಯಡಿಯೂರಪ್ಪ ಅವರ ವಿರುದ್ದ ನನ್ನನ್ನು ವಿಲನ್ ಮಾಡಬೇಡಿ, ಅವರ ವಿರುದ್ದ ಮಾತನಾಡಿದ್ರೆ ನಾವು ಸುಟ್ಟು ಹೋಗ್ತೀವಿ ಎಂದು ಪ್ರವಾಸೋದ್ಯಮ ಸಚಿವ ಸಿ ಪಿ ಯೋಗೇಶ್ವರ್ ಅವರು ಹೇಳಿದರು. ಕೊಪ್ಪಳದ ಅಂಜನಾದ್ರಿ ಬೆಟ್ಟದ ಬಳಿ ಸುದ್ದಿಗಾರರ ಜೊತೆ ಮಾತನಾಡಿ, ಬಿಎಸ್ ವೈ ಅವರು ನಮ್ಮ ನಾಯಕರು. ಅವರನ್ನು ನಾವು ಟಾರ್ಗೇಟ್ ಮಾಡಲ್ಲ. ಅವರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸುವ ಕೆಲಸವನ್ನೂ ನಾವು ಮಾಡುತ್ತಿಲ್ಲ. ನಮ್ಮ ದೆಹಲಿ ಭೇಟಿ …

Read More »

ನಟ ಸಂಚಾರಿ ವಿಜಯ್‌ಗೆ ಅಮೆರಿಕ ಫ್ರಾಂಕ್ಲಿನ್‌ ಥಿಯೇಟರ್‌ ನಿಂದ ವಿಭಿನ್ನ ಗೌರವ ಸಲ್ಲಿಕೆ

ವಾಷಿಂಗ್ಟನ್: ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಅವರಿಗೆ ಅಮೆರಿಕಾದ ಫ್ರಾಂಕ್ಲಿನ್ ಥಿಯೇಟರ್ ವತಿಯಿಂದ ವಿಭಿನ್ನವಾಗಿ ಗೌರವ ಸಲ್ಲಿಸಲಾಗಿದೆ. ನಾನು ಅವನಲ್ಲ ಅವಳು, ಹರಿವು, ನಾತಿಚರಾಮಿ ಖ್ಯಾತಿಯ ನಟ ಸಂಚಾರಿ ವಿಜಯ್ ಅವರು ಜೂನ್ 15ರಂದು ಕೊನೆಯುಸಿರೆಳೆದಿದ್ದರು. ಅವರಿಗೆ ಗೌರವ ಸಲ್ಲಿಸಲು ಅಮೆರಿಕದ ಪ್ರತಿಷ್ಠಿತ ಫ್ರಾಂಕ್ಲಿನ್ ಥಿಯೇಟರ್ ವತಿಯಿಂದ ಒಂದು ಸಂದೇಶವನ್ನು ಬಿತ್ತರಿಸಲಾಗಿದೆ. ‘Always in our Heart, Sanchari Vijay, Gone Yet Not Forgotten’ ಇದು …

Read More »

ಯೋಗೇಶ್ವರ್-ಯತ್ನಾಳ್ ರಹಸ್ಯ ಭೇಟಿ: ಬಿಜೆಪಿಯಲ್ಲಿ ಶುರುವಾದ ತಳಮಳ

ವಿಜಯಪುರ: ಆಡಳಿತಾರೂಢ ರಾಜ್ಯ ಬಿಜೆಪಿಯಲ್ಲಿ ಮತ್ತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇತ್ತೀಚೆಗಷ್ಟೇ ರಾಜ್ಯ ಬಿಜೆಪಿ ಉಸ್ತುವಾರಿ ನಾಯಕ ಅರುಣ್​ ಸಿಂಗ್​ ಬೆಂಗಳೂರಿಗೆ ಬಂದು ಪಕ್ಷದಲ್ಲಿ ಬಂಡಾಯಕ್ಕೆ ಮುಲಾಮು ಹಚ್ಚಲು ಯತ್ನಿಸಿದ್ದರು. ರಾಜ್ಯದಲ್ಲಿ ನಾಯಕತ್ವ ಬದಲಾಣೆಯಿಲ್ಲ ಎಂದು ಘಂಟಾಘೋಷವಾಗಿ ಹೇಳಿದ್ದರು. ಆದರೆ ಬಂಡಾಯ/ ಅತೃಪ್ತಿಗಳು ಇನ್ನೂ ರಾಜ್ಯ ಬಿಜೆಪಿಯಲ್ಲಿ ಮನೆಮಾಡಿದೆ ಎನ್ನಲು ಕೆಲ ದಿಢೀರ್ ಬೆಳವಣಿಗೆಗಳು ಕಂಡು ಬಂದಿವೆ. ಅತ್ತ ರಾಜಧಾನಿ ಬೆಂಗಳೂರಿಗೆ ಬಂದಿದ್ದ ಶಾಸಕ ರಮೇಶ್ ಜಾರಕಿಹೊಳಿ ಇದ್ದಕ್ಕಿದ್ದಂತೆ ದೆಹಲಿಗೆ …

Read More »

ಬಿಜೆಪಿಯ ಮೂವರಿಂದ ಅನ್ಯಾಯ : ದಿಲ್ಲಿಯಲ್ಲಿ ರಮೇಶ ಜಾರಕಿಹೊಳಿ ಹೇಳಿಕೆ

ಬೆಂಗಳೂರು : ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ದಿಢೀರ್‌ ದಿಲ್ಲಿಗೆ ತೆರಳಿದ್ದು, ಬಿಜೆಪಿ ವರಿಷ್ಠರನ್ನು ಭೇಟಿಯಾಗುವ ಸುಳಿವು ನೀಡಿದ್ದಾರೆ. ದಿಲ್ಲಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಜಾರಕಿಹೊಳಿ, ಬಿಜೆಪಿಯ ಮೂವರು ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇವರು ತಮಗೆ ಅನ್ಯಾಯ ಮಾಡಿದ್ದು, ತಕ್ಕ ಪಾಠ ಕಲಿಸುತ್ತೇನೆ ಎಂದು ಪರೋಕ್ಷ ಎಚ್ಚರಿಕೆಯನ್ನೂ ನೀಡಿದ್ದಾರೆ. ಸೋಮವಾರ ರಾತ್ರಿ 2 ಗಂಟೆಗೆ ದಿಲ್ಲಿಯಿಂದ ಕರೆ ಬಂದಿತ್ತು. ಅವರ ಆಹ್ವಾನದ ಮೇರೆಗೆ ನಾನು ಬಂದಿದ್ದೇನೆ. ಯಾರನ್ನು ಭೇಟಿಯಾಗುತ್ತೇನೆ …

Read More »

ಏಳು ಐಎಎಸ್ ಅಧಿಕಾರಿಗಳ ವರ್ಗಾವಣೆ : ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ ಏಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಅಜಯ್ ನಾಗಭೂಷಣ್- ನಗರಾಭಿವೃದ್ದಿ ಇಲಾಖೆ ಕಾರ್ಯದರ್ಶಿ, ಸಿ.ಶಿಖಾ- ಆಯುಕ್ತರು, ವಾಣಿಜ್ಯ ತೆರಿಗೆ ಇಲಾಖೆ, ಸಲ್ಮಾ ಫಾಹಿಮಾ- ಹೆಚ್ಚುವರಿ ಕಾರ್ಯದರ್ಶಿ, ಮೂಲ ಸೌಕರ್ಯ ಇಲಾಖೆ, ಕಣಗವಲ್ಲಿ- ಪರೀಕ್ಷಾ ನಿಯಂತ್ರಕರು. ಕೆಪಿಎಸ್ ಸಿ, ರಘುನಂದನ ಮೂರ್ತಿ- ಆಯುಕ್ತರು( ಜಾರಿ) ವಾಣಿಜ್ಯ ತೆರಿಗೆ ಇಲಾಖೆ,ಅರ್ಚನಾ ಎಂ,ಎಸ್.- ಸದಸ್ಯರು. ಕೆ ಎ ಟಿ. ರಮ್ಯಾ ಎಸ್- ಕಾರ್ಯಕಾರಿ ನಿರ್ದೇಶಕರು, ಕರ್ನಾಟಕ ಪರೀಕ್ಷಾ …

Read More »