Breaking News

Laxminews 24x7

ಅಗತ್ಯ ಸೇವೆಗಳ ಮುಷ್ಕರ ನಿಷೇಧಿಸಿ ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು, ಜೂನ್ 26: ಅಗತ್ಯ ಸೇವೆಗಳ ಮುಷ್ಕರ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮತ್ತೆ ಸಾರಿಗೆ ನೌಕರರು ಮುಷ್ಕರ ನಡೆಸುವ ಸುಳಿವು ಸಿಕ್ಕ ಕಾರಣ, ಪ್ರತಿಭಟನೆ ತಡೆಯಲು ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ. ಈಗಾಗಲೇ ಸಾರಿಗೆ ನಿಗಮ ನಷ್ಟದಲ್ಲಿದೆ ಈ ಸಂದರ್ಭದಲ್ಲಿ ಮತ್ತೆ ಮುಷ್ಕರ ನಡೆಸದರೆ ಮತ್ತಷ್ಟು ನಷ್ಟ ಅನುಭವಿಸಬೇಕಾಗುತ್ತದೆ ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟಾಗಲಿದೆ ಎಂಬುದು ಸರ್ಕಾರ ವಾದವಾಗಿದೆ.   ಜುಲೈ 1ರಿಂದ ಡಿಸೆಂಬರ್​​ 31ರವರೆಗೆ …

Read More »

ಮೋದಿ ಸಂಪುಟಕ್ಕೆ ಮೇಜರ್ ಸರ್ಜರಿ, ರಾಜ್ಯದ ರಾಜೀವ್ ಚಂದ್ರಶೇಖರ್ ಸೇರಿ 27 ಮಂದಿಗೆ ಸಚಿವ ಸ್ಥಾನ ಸಾಧ್ಯತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕ್ಯಾಬಿನೆಟ್ ವಿಸ್ತರಣೆ ಅಥವಾ ಪುನರ್ರಚನೆಯ ಕುರಿತು ಯಾವುದೇ ಅಧಿಕೃತ ಮಾತುಗಳು ಇಲ್ಲದಿದ್ದರೂ ಸಂಪುಟ ವಿಸ್ತರಣೆಯಂತೂ ಖಚಿತವೆಂದು ಹೇಳಲಾಗುತ್ತಿದೆ. ಪ್ರಮುಖ ನಾಯಕರಾದ ಜ್ಯೋತಿರಾಧಿತ್ಯ ಸಿಂಧ್ಯ, ಸುಶೀಲ್ ಮೋದಿ, ಸರ್ಬಾನಂದ ಸೋನೋವಾಲ್, ನಾರಾಯಣ ರಾಣೆ ಮತ್ತು ಭೂಪೆಂದ್ರ ಯದವ್ ಸೇರಿದಂತೆ 27 ಮಂದಿ ಮೋದಿ ಸಂಪುಟಕ್ಕೆ ಸೇರ್ಪಡೆಯಾಗುವ ಸಾಧ್ಯತೆ ದಟ್ಟವಾಗಿದೆ. ನರೇಂದ್ರ ಮೋದಿ ಸಂಪುಟಕ್ಕೆ ಸೇರುವ ಹೊಸ ಮಂತ್ರಿಗಳೆಂದರೆ, ಮಧ್ಯಪ್ರದೇಶದ ಕಾಂಗ್ರೆಸ್ ಮಾಜಿ …

Read More »

ತಮ್ಮನ ಮದ್ವೆಗಾಗಿ 2 ದಿನ ರಜೆ ತೆಗೆದುಕೊಳ್ಳಲಿಕ್ಕೂ ಪತ್ರ ಬರೆದು ಕೋರಿಕೊಂಡ ಗ್ರಾಮ ಪಂಚಾಯತ್ ಸದಸ್ಯ!

ದಾವಣಗೆರೆ: ಜನಪ್ರತಿನಿಧಿಗಳೆಂದರೆ ಸಾಮಾನ್ಯವಾಗಿ ಭೇಟಿಗೆ ಸಿಗುವುದೇ ಅಪರೂಪ. ಇನ್ನು ಏನಾದರೂ ಕೆಲಸ ಆಗಬೇಕೆಂದರೆ ಗೆದ್ದ ಮೇಲೆ ಅವರು ಪ್ರಜೆಗಳ ಪಾಲಿಗೆ ಗಗನಕುಸುಮ. ಹೀಗಿರುವಾಗ ಇಲ್ಲೊಬ್ಬ ಜನಪ್ರತಿನಿಧಿ ತನ್ನ ತಮ್ಮನ ಮದುವೆಗಾಗಿ ಎರಡು ದಿನ ರಜೆ ತೆಗೆದುಕೊಳ್ಳಲಿಕ್ಕೂ ಅರ್ಜಿ ಹಾಕಿ ಮನವಿ ಮಾಡಿಕೊಂಡಿದ್ದಾರೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕಾರಿಗನೂರು ಗ್ರಾಮಪಂಚಾಯಿತಿಯ ಅರೇಹಳ್ಳಿ ಗ್ರಾಮದ ವಾರ್ಡ್-04ರ ಸದಸ್ಯ ಚೇತನ್​ ಕುಮಾರ್ ಅರೇಹಳ್ಳಿ ಹೀಗೆ ರಜೆ ಅರ್ಜಿ ಸಲ್ಲಿಸಿ ವಿನಂತಿಸಿಕೊಳ್ಳುವ ಮೂಲಕ ಹಲವರ …

Read More »

ಪೊಲೀಸರೊಂದಿಗೆ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ವಾಗ್ವಾದ

ಬಾಗಲಕೋಟೆ : ಜಿಲ್ಲೆಯ ಇಳಕಲ್ಲ ನಗರದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಮತ್ತು ಪೊಲೀಸರೊಂದಿಗೆ ವಾಗ್ವಾದ ನಡೆದ ಪ್ರಸಂಗ ಶನಿವಾರ ಸಂಜೆ ನಡೆದಿದೆ. ಮಾಜಿ ಶಾಸಕ ಕಾಶಪ್ಪನವರ ಅವರಿಗೆ ಬೆಂಗಳೂರಿನ ಜನ ಪ್ರತಿನಿಧಿಗಳ ನ್ಯಾಯಾಲಯದಿಂದ ವಿಚಾರಣೆಗೆ ಹಾಜರಾಗುವ ಜಾಮೀನುಸಹಿತ ವಾರೆಂಟ್ ಜಾರಿಯಾಗಿದ್ದು, ಅದನ್ನು ತಲುಪಿಸಲು ಪೊಲೀಸರು ಅವರ ಮನೆಗೆ ತೆರಳಿದ್ದರು. ಇದಕ್ಕೂ ಮುಂಚೆ ಕಾಶಪ್ಪನವರ ಮನೆಯಲ್ಲಿ ಕೌಟುಂಬಿಕ ಜಗಳ ನಡೆದಿದೆ ಎಂದು ಅಕ್ಕ-ಪಕ್ಕದ ಮನೆಯವರು ಫೋನ್ ಕಾಲ್ ಮಾಡಿ, ದೂರಿದ್ದರು. …

Read More »

ದಕ್ಷಿಣ ಕನ್ನಡ: ಪದವಿ ವಿದ್ಯಾರ್ಥಿಗಳಿಗೆ, ಭೋಧಕರಿಗೆ ಕೋವಿಡ್‌ ಲಸಿಕೆ ನಾಳೆಯಿಂದ

ಮಂಗಳೂರು: ಮುಂದಿನ ತಿಂಗಳಿಂದ ಕಾಲೇಜುಗಳನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪದವಿ ವಿದ್ಯಾರ್ಥಿಗಳು, ಬೋಧಕ, ಬೋಧಕೇತರ ಸಿಬ್ಬಂದಿಗೆ ಲಸಿಕೆ ನೀಡಲಾಗುತ್ತಿದೆ. ಸೋಮವಾರದಿಂದ ಜಿಲ್ಲೆಯ ಎಲ್ಲ ಪದವಿ, ಡಿಪ್ಲೊಮಾ, ಐಟಿಐ, ಎಂಜಿನಿಯರಿಂಗ್‌, ಪ್ಯಾರಾಮೆಡಿಕಲ್‌ ಕಾಲೇಜುಗಳ 18 ವರ್ಷ ಮೇಲಿನ ವಿದ್ಯಾರ್ಥಿಗಳು, ಬೋಧಕ, ಬೋಧಕೇತರ ಸಿಬ್ಬಂದಿಗೆ ಲಭ್ಯತೆಗೆ ಅನುಗುಣವಾಗಿ ಲಸಿಕಾ ಶಿಬಿರ ನಡೆಸಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್‌ಕುಮಾರ್ ಹೇಳಿದ್ದಾರೆ. ಜೂನ್‌ 28 ರಿಂದ ಜಿಲ್ಲೆಯ ಎಲ್ಲ …

Read More »

ಆಟೋ ಚಾಲಕರಿಗೆ ಇನ್ನೂ ಬಾರದ ಕೊವಿಡ್​ ಪರಿಹಾರ ಪ್ಯಾಕೇಜ್​; ಧಾರವಾಡ ಆಟೋ ಚಾಲಕರ ಆಕ್ರೋಶ

ಧಾರವಾಡ: ಕರ್ನಾಟಕ ಸರ್ಕಾರ ಕೊರೊನಾ ಲಾಕ್​ಡೌನ್​​ ಪರಿಣಾಮ ಸಂತ್ರಸ್ತರಾದ ಕೆಲ ವರ್ಗದವರಿಗೆ ಪರಿಹಾರ ಘೋಷಿಸಿದೆ. ಆದರೆ ಈ ಮಹತ್ವಾಕಾಂಕ್ಷಿ ಯೋಜನೆ ಫಲಾನುಭವಿಗಳಿಗೆ ಸಕಾಲಕ್ಕೆ ತಲುಪುತ್ತಿಲ್ಲ ಎಂಬ ಕೂಗು ಎದ್ದಿದೆ. ಅದರಲ್ಲೂ ಆಟೋ ಚಾಲಕರಿಗೆ ಪರಿಹಾರ ಕೈಗೆ ಬಾರದೆ ಪರದಾಡುವಂತಾಗಿದೆ. ರಾಜ್ಯ ಸರ್ಕಾರ ಘೋಷಿಸಿದ್ದ 3 ಸಾವಿರ ರೂ. ಪರಿಹಾರ ಮೊತ್ತ ರಾಜ್ಯದ ಅನೇಕ ಕಡೆ ಆಟೋ ಚಾಲಕರಿಗೆ ಇನ್ನೂ ತಲುಪಿಲ್ಲ. ​ಧಾರವಾಡದಲ್ಲಿಯೂ ಆಟೋ ಚಾಲಕರಿಗೆ ಪರಿಹಾರ ಸಿಗದಿರುವುದರಿಂದ ಭಾರೀ ಆಕ್ರೋಶ …

Read More »

ಮನೆಗೆ ಬಂದ ಸೊಸೆಯ ಹಾಗೆ ಸಿದ್ದರಾಮಯ್ಯ ಕೈಗೆ ಕೀಲಿ ಕೈ ಸಿಕ್ಕಿದೆ ,ಯಡಿಯೂರಪ್ಪ ಬಿಜೆಪಿ ಬಿಟ್ಟರೆ ಬರೋದು 40 ಸೀಟು ಮಾತ್ರ : ಸಿಎಂ.ಇಬ್ರಾಹಿಂ

ಬೆಂಗಳೂರು: ಮನೆಗೆ ಬರುವಾಗ ಸೊಸೆ ಹೊಸದಾಗಿಯೇ ಬರುವುದು. ಸೊಸೆಗೆ ನೀನು ವಲಸೆ ಬಂದವಳೆಂದು ಹೇಳಲು ಆಗುತ್ತದೆಯೇ? ಸ್ವಲ್ಪ ದಿನವಾದರೆ ಅವಳ ಕೈಗೆ ಕೀಲಿ ಕೈ ಹೋಗುತ್ತದೆ. ಹಾಗೆಯೇ ಈಗ ಸಿದ್ದರಾಮಯ್ಯ ಕೈಗೆ ಕೀಲಿ ಕೈ ಸಿಕ್ಕಿದೆ. ಹಾಗಾಗಿ ವಲಸಿಗ, ಹೊಸಬ ಎನ್ನುವ ಭೇದಭಾವ ಇಲ್ಲ ಎಂದು ಸಿಎಂ ಇಬ್ರಾಹಿಂ ಹೇಳಿದರು. ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ಅವರು,ಸಿದ್ದರಾಮಯ್ಯನ್ನು ಮುಖ್ಯಮಂತ್ರಿ ಮಾಡಿದ್ದು ಯಾರು? ಬಳ್ಳಾರಿ ಪಾದಯಾತ್ರೆಯಲ್ಲಿ ಮುಂದೆ ತಂದವರು ಯಾರು? ಇಂತವನೊಬ್ಬ …

Read More »

ಧಾರವಾಡದಿಂದ ಬೆಂಗಳೂರಿಗೆ ಯಕೃತ್ತು ರವಾನೆ:ಏರ್ ಪೋರ್ಟ್ ವರೆಗೆ ಜಿರೋಟ್ರಾಫಿಕ್ ಮಾಡಿದ ಪೊಲೀಸರು

ಹುಬ್ಬಳ್ಳಿ: ಧಾರವಾಡ ಸಮೀಪದ ಎಸ್‌ಡಿಎಂ ಆಸ್ಪತ್ರೆಯಿಂದ ಲಿವರ್ (ಯಕೃತ್ತು) ಅನ್ನು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಾಗಿಸಲು ಸುಮಾರು 16 ಕಿ.ಮೀ ದೂರದ ಮಾರ್ಗವನ್ನು ಪೊಲೀಸರು ಹಸಿರು ಕಾರಿಡಾರ್ ಮೂಲಕ ಅಂಬ್ಯುಲೆನ್ಸ್ ತ್ವರಿತ ತಲುಪಲು ಅನುವು ಮಾಡಿಕೊಟ್ಟರು. ಜಿರೋ ಟ್ರಾಫಿಕ್ ನಲ್ಲಿ ಯಕೃತ್ ಇದ್ದ ಅಂಬ್ಯುಲೆನ್ಸ್ ನಿಗದಿಪಡಿಸಿದ ಸಮಯಕ್ಕೆ ವಿಮಾನ ನಿಲ್ದಾಣ ತಲುಪಿತಲ್ಲದೆ, ಯಕೃತ್ ನ್ನು ವಿಮಾನದಲ್ಲಿ ಬೆಂಗಳೂರಿಗೆ ಕಳುಹಿಸಲಾಯಿತು. ಮೃತ ಮಹಿಳೆಯೊಬ್ಬರ ಕಣ್ಣು, ಕಿಡ್ನಿ ಮತ್ತು ಲಿವರ್ ಸೇರಿದಂತೆ ವಿವಿಧ …

Read More »

ಕೊರೋನಾದಿಂದ ಸಂಕಷ್ಟದಲ್ಲಿರುವವರಿಗೆ ಕಾಂಗ್ರೆಸ್ ನೆರವು

ಬೆಂಗಳೂರು, ಜೂ.26- ಕೋವಿಡ್ ಮೊದಲ ಮತ್ತು ಎರಡನೇ ಅಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಆಳುವ ಸರ್ಕಾರಕ್ಕಿಂತಲೂ ಹೆಚ್ಚಿನದಾಗಿ ಸಂಕಷ್ಟದಲ್ಲಿ ಇರುವ ಜನರಿಗೆ ನೆರವಾಗಿದೆ ಎಂದು ರಾಜ್ಯ ಸಭಾಸದಸ್ಯ ಎಲ್.ಹನುಮಂತಯ್ಯ ಅವರ ನೇತೃತ್ವದ ಸಮಿತಿ ವರದಿ ನೀಡಿದೆ. ಕೋವಿಡ್ ಸಂದರ್ಭದಲ್ಲಿನ ಕಾರ್ಯಚಟುವಟಿಕೆಗಳ ಅಧ್ಯಯನಕ್ಕಾಗಿ ರಚಿಸಲಾಗಿದ್ದ ಸಮಿತಿ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮಧ್ಯಂತರ ವರದಿ ನೀಡಿದೆ. ಬೂತ್ ಮಟ್ಟದಿಂದಲೂ ಮಾಹಿತಿ ಕಲೆ ಹಾಕಿರುವ ಸಮಿತಿ ಕಾಂಗ್ರೆಸ್ ಕಾರ್ಯಕರ್ತರು ನಾಯಕರು ಎಷ್ಟು …

Read More »

ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರು ಆರ್.ಟಿ.ಪಿ.ಸಿ.ಆರ್‌. ನೆಗೆಟಿವ್ ವರದಿ ಕಡ್ಡಾಯ

ಬೆಳಗಾವಿ, – ಕೋವಿಡ್ 3ನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿರುವ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ರಾಜ್ಯದ ಗಡಿಭಾಗದಲ್ಲಿ ಇರುವ ಕೊಗನೊಳ್ಳಿ ರಾಷ್ಟ್ರೀಯ ಹೆದ್ದಾರಿ ಚೆಕ್ ಪೋಸ್ಟ್ ಗೆ ಶನಿವಾರ(ಜೂ.26) ಭೇಟಿ ನೀಡಿ, ಕೋವಿಡ್ ನಿಯಂತ್ರಣ ಕ್ರಮಗಳನ್ನು ಪರಿಶೀಲಿಸಿದರು. ನೆರೆಯ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರು ಆರ್.ಟಿ.ಪಿ.ಸಿ.ಆರ್‌. ನೆಗೆಟಿವ್ ವರದಿಯನ್ನು ಕಡ್ಡಾಯವಾಗಿ ಹೊಂದಿರಬೇಕು. ವರದಿಯನ್ನು ಹೊಂದಿರುವವರಿಗೆ ಮಾತ್ರ ಪ್ರಯಾಣಿಸಲು ಅವಕಾಶ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.   ಒಂದು ವೇಳೆ …

Read More »