ನವದೆಹಲಿ: ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆಯಾಗಿದೆ. ಪೆಟ್ರೋಲ್ ದರ 31ರಿಂದ 35 ಪೈಸೆ ಮತ್ತು ಡೀಸೆಲ್ ದರ 35 ಪೈಸೆ ಏರಿಕೆಯಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಸಂಸ್ಕರಣಾ ಕಂಪನಿಗಳು (ಒಎಂಸಿ) ಶನಿವಾರ ದೇಶದಾದ್ಯಂತ ಇಂಧನ ದರವನ್ನು ಮತ್ತೊಮ್ಮೆ ಏರಿಕೆ ಮಾಡಿವೆ. ಈ ಮೂಲಕ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೊಸ ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 101.45ಕ್ಕೆ ಏರಿಕೆಯಾಗಿದ್ದು, …
Read More »ವ್ಯಾಕ್ಸಿನ್ ಪಡೆಯದ ಆಟೋ ಚಾಲಕರು ಆಟೋವನ್ನು ರಸ್ತೆಗಿಳಿಸುವಂತಿಲ್ಲ: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ
ವಿಜಯಪುರ: ವ್ಯಾಕ್ಸಿನ್ ಹಾಕಿಸಿಕೊಳ್ಳದ ಆಟೋ ಚಾಲಕರು ಆಟೋಗಳನ್ನ ರಸ್ತೆಗೆ ಇಳಿಸುವ ಹಾಗಿಲ್ಲ. ಇನ್ನು ಈವರೆಗೂ ವ್ಯಾಕ್ಸಿನ್ ಪಡೆಯದ ಬೀದಿಬದಿ ವ್ಯಾಪಾರಸ್ಥರು ವ್ಯಾಪಾರ ಮಾಡುವ ಹಾಗಿಲ್ಲ ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ ಸುನೀಲ್ಕುಮಾರ್ ಖಡಕ್ ನಿರ್ಧಾರಕ್ಕೆ ಮುಂದಾಗಿದ್ದಾರೆ. ವ್ಯಾಕ್ಸಿನ್ ಹಾಕಿಸಿಕೊಳ್ಳಿ ಎಂದು ಎಷ್ಟೇ ಹೇಳಿದರೂ, ಆಟೋ ಚಾಲಕರು, ಬೀದಿ ಬದಿ ವ್ಯಾಪಾರಸ್ಥರು, ಕಟ್ಟಡ ಕಾರ್ಮಿಕರು ಕೇಳುತ್ತಿಲ್ಲ. ನಾವು ಆರೋಗ್ಯವಾಗಿದ್ದೀವಿ ವ್ಯಾಕ್ಸಿನ್ ಯಾಕೆ ಎಂದು ಹೇಳುತ್ತಿದ್ದಾರೆ. ಹೀಗಾಗಿ ಗರಂ ಆಗಿರುವ ಡಿಸಿ ಸುನೀಲ್ಕುಮಾರ್, …
Read More »ನಡು ರಸ್ತೆಯಲ್ಲಿ ಡೀಸೆಲ್ ಲಾರಿ ಪಲ್ಟಿ : ಬಕೆಟ್, ಪಾತ್ರೆ ಹಿಡಿದು ಮುಗಿಬಿದ್ದ ಜನರು.!
ದಾವಣಗೆರೆ : ಇಂದು ಡೀಸೆಲ್ ತುಂಬಿದ ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ನಂದಿಬೇವೂರು ಗ್ರಾಮದಲ್ಲಿ ನಡೆದಿದೆ. ಜಿಲ್ಲೆ ಹರಪನಹಳ್ಳಿ ತಾಲೂಕಿನ ನಂದಿಬೇವೂರು ಗ್ರಾಮದಲ್ಲಿ ಡೀಸೆಲ್ ತುಂಬಿದ ಲಾರಿ ನಿಯಂತ್ರಣ ತಪ್ಪಿ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಪಘಾತದಲ್ಲಿ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೂ ಲಾರಿಯಿಂದ ಡೀಸೆಲ್ ಸೋರಿಕೆಯಾಗುತ್ತಲೇ ಮುಗಿಬಿದ್ದ ಜನರು ಪಾತ್ರೆ, ಬಕೆಟ್ …
Read More »ಸಂಭ್ರಮದಲ್ಲಿದ್ದ ಈ ಗ್ರಾಮದಲ್ಲೀಗ ಸೂತಕ.. ಎತ್ತು ಹಿಡಿಯಲು ಹೋಗಿ ಪ್ರಾಣ ಕಳ್ಕೊಂಡ ಯುವಕ
ಗದಗ: ಕಾರಹುಣ್ಣಿಮೆ ಸಂಭ್ರಮದ ವೇಳೆ ರಾಸು ಹಾಯ್ದು ಯುವಕನೊಬ್ಬ ಮೃತಪಟ್ಟ ಘಟನೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಸಂಭವಿಸಿದೆ.. ಕಿರಣಕುಮಾರ್ ನರ್ತಿ ಮೃತ ದುದೈವಿ. ಉತ್ತರ ಕರ್ನಾಟಕ ಭಾಗದಲ್ಲಿ ಗುರುವಾರ ಕಾರಹುಣ್ಣಿಮೆ ಸಡಗರ ಕಳೆಗಟ್ಟಿತ್ತು. ಗದಗ ಜಿಲ್ಲೆಯ ಸೂರಣಗಿ ಗ್ರಾಮದಲ್ಲೂ ಕಾರಹುಣ್ಣಿಮೆ ಪ್ರಯುಕ್ತ ಆಯೋಜಿಸಿದ್ದ ಕರಿ ಹರಿಯುವ ಕಾರ್ಯಕ್ರಮದಲ್ಲಿ ರಾಸುಗಳನ್ನು ಓಡಿಸುವಾಗ ಯುವಕ ಕಿರಣಕುಮಾರ್ಗೆ ರಾಸು ಡಿಕ್ಕಿ ಹೊಡೆದಿತ್ತು. ಡಿಕ್ಕಿಯಾದ ರಭಸಕ್ಕೆ ನೆಲಕ್ಕುರುಳಿದ್ದ ಕಿರಣಕುಮಾರ್ ಗಂಭೀರ ಗಾಯಗೊಂಡಿದ್ದ. ಹುಬ್ಬಳ್ಳಿ …
Read More »ಐಎಂಎ ಹಗರಣ: ರೋಷನ್ ಬೇಗ್ ಆಸ್ತಿ ಜಪ್ತಿಗೆ ಕ್ರಮ ಕೈಗೊಂಡ ಸರ್ಕಾರ
ಬೆಂಗಳೂರು: ಐಎಂಎ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಆರ್.ರೋಷನ್ ಬೇಗ್ ಅವರ ಆಸ್ತಿಯನ್ನು ಜಪ್ತಿ ಮಾಡಲು ಕ್ರಮ ಕೈಗೊಂಡಿರುವುದಾಗಿ ಹೈಕೋರ್ಟ್’ಗೆ ರಾಜ್ಯ ಸರ್ಕಾರ ಶುಕ್ರವಾರ ಮಾಹಿತಿ ನೀಡಿದೆ. ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಮ್ರಾನ್ ಪಾಷಾ ಹಾಗೂ ಇತರರು ಸಲ್ಲಿಸಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವದ ವಿಭಾಗೀಯ ಪೀಠಕ್ಕೆ ಸರ್ಕಾರದ ಪರ ವಕೀಲರು ಈ ಮಾಹಿತಿ ನೀಡಿದರು. ಅರ್ಜಿ …
Read More »ಪ್ರಧಾನಮಂತ್ರಿ ಆವಾಸ್ ಯೋಜನೆ : 80 ಸಾವಿರ ಬಹುಮಹಡಿ ಮನೆಗಳಿಗೆ ಸೀಮಿತ : ವಿ.ಸೋಮಣ್ಣ
\: ಪ್ರಧಾನಮಂತ್ರಿ ಅವಾಸ್ ಯೋಜನೆಯಡಿ ಬಡ ಜನರಿಗೆ ವಿತರಿಸಲು ಬೆಂಗಳೂರು ನಗರ ಜಿಲ್ಲೆಯಲ್ಲಿ ನಿರ್ಮಾಣ ಮಾಡುತ್ತಿರುವ ಒಂದು ಲಕ್ಷ ಬಹುಮಹಡಿ ಮನೆಗಳ ಯೋಜನೆ 80 ಸಾವಿರಕ್ಕೆ ಸೀಮಿತಗೊಳ್ಳಲಿದೆ. ಜಮೀನು ಕೊರತೆ ಹಿನ್ನೆಲೆಯಲ್ಲಿ ಒಂದು ಲಕ್ಷ ಮನೆಗಳ ಬದಲಿಗೆ 80 ಸಾವಿರ ಮನೆ ಮಾತ್ರ ನಿರ್ಮಾಣವಾಗಲಿದೆ. ಆಗಸ್ಟ್ 15 ರೊಳಗೆ 5 ಸಾವಿರ ಮನೆಗಳು ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ವಿಕಾಸಸೌಧಲ್ಲಿ ಶುಕ್ರವಾರ ರಾಜೀವ್ಗಾಂಧಿ ವಸತಿ …
Read More »ಮುಂದಿನ ಸಿ.ಎಂ. ಚರ್ಚೆ ನೇಣು ಹಾಕಿಕೊಂಡಂತೆ: ಕಾಗೋಡು ತಿಮ್ಮಪ್ಪ
ಸಾಗರ: ‘ರಾಜ್ಯದ ಮುಂದಿನ ಸಿ.ಎಂ. ಯಾರು ಎಂದು ಕಾಂಗ್ರೆಸ್ ನಾಯಕರು ಈಗಲೇ ಚರ್ಚಿಸುವುದು ನೇಣು ಹಾಕಿಕೊಂಡಂತಾಗಲಿದೆ’ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು. ತಾಲ್ಲೂಕು ಆಡಳಿತದ ವೈಫಲ್ಯ ಖಂಡಿಸಿ ಕಾಂಗ್ರೆಸ್ ಶುಕ್ರವಾರ ಏರ್ಪಡಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ‘ಮುಂದಿನ ವಿಧಾನಸಭೆ ಚುನಾವಣೆ ಬರುವವರೆಗೂ ಜನರ ಸಮಸ್ಯೆಗಳನ್ನು ಕೈಗೆತ್ತಿಕೊಂಡು ಕಾಂಗ್ರೆಸ್ ಹೋರಾಟ ನಡೆಸಬೇಕೇ ಹೊರತು, ಈಗಲೇ ಮುಂದಿನ ಸಿ.ಎಂ. ಯಾರು ಎಂದು ಚರ್ಚಿಸುವುದು ಸಾಧುವಲ್ಲ’ ಎಂದು ಅವರು ಅಭಿಪ್ರಾಯಪಟ್ಟರು.
Read More »ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷೆಇಂದು ಮುಂಜಾನೆ ತೀರಿಕೊಂಡರು.
ಬೆಳಗಾವಿ: ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷೆ ಹಾಗೂ ಚಿಕ್ಕೋಡಿ ಜಿಲ್ಲಾ ಕೆಪಿಸಿಸಿ ಮಹಿಳಾ ಮೋರ್ಚಾದ ಅಧ್ಯಕ್ಷೆ ತೇಜಸ್ವಿನಿ ಅರ್ಜುನ ನಾಯಿಕವಾಡಿ (51) ಇಂದು ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ತಮ್ಮ ಮೃದು ಸ್ವಭಾವದದ ವ್ಯಕ್ತಿತ್ವದಿಂದ ಪರಿಚಿತರಾಗಿದ್ದ ರಾಯಬಾಗ ತಾಲೂಕು ಕಂಕಣವಾಡಿ ಮೂಲದವರಾದ ತೇಜಸ್ವಿನಿ ಅವರು, ಕೆಲವು ದಿನಗಳ ಹಿಂದಷ್ಟೆ ಕೋವಿಡ್ ನಿಂದ ಗುಣಮುಖರಾಗಿದ್ದರು. ಆದರೆ ಕಡಿಮೆ ರಕ್ತದೊತ್ತಡದ ಕಾರಣಕ್ಕೆ ಆಕಸ್ಮಿಕವಾಗಿ ಇಂದು ಮುಂಜಾನೆ ತೀರಿಕೊಂಡರು. ಇಂದು ಮಧ್ಯಾಹ್ನ ಕಂಕಣವಾಡಿಯಲ್ಲಿ ಅಂತ್ಯಕ್ರಿಯೆ …
Read More »ಸುಪ್ರೀಂ ಚಾಟಿ ಬಳಿಕ SSLC,PUC ಪರೀಕ್ಷೆ ಬ್ಯಾನ್ ಮಾಡಿದ ಸರ್ಕಾರ
ಅಮರಾವತಿ: ಹೆಮ್ಮಾರಿ ಸೋಂಕಿನ ಮಧ್ಯೆಯೂ ಎಸ್ ಎಸ್ ಎಲ್ ಸಿ ಮತ್ತು ದ್ವಿತಿಯ ಪಿಯುಸಿ ಪರೀಕ್ಷೆ ರದ್ದು ಮಾಡದ ಆಂಧ್ರ ಪ್ರದೇಶದ ಸರ್ಕಾರದ ವಿರುದ್ಧ ಸುಪ್ರೀಂ ಚಾಟಿ ಬೀಸಿದ ಬೆನ್ನಲ್ಲೇ ಸರ್ಕಾರ ಪರೀಕ್ಷೆ ಬ್ಯಾನ್ ಮಾಡಿದೆ.ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ಪರೀಕ್ಷೆ ನಡೆಸುವ ವಿಚಾರವಾಗಿ ನಿನ್ನೆ ಸುಪ್ರೀಂ ಕೋರ್ಟ್ ಆಂಧ್ರ ಪ್ರದೇಶ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ಕೋವಿಡ್ ನಿಂದಾಗಿ ಯಾವುದೇ ಮಾರಣಾಂತಿಕ ಘಟನೆಗಳು ಸಂಭವಿಸಿದಲ್ಲಿ ರಾಜ್ಯ ಸರ್ಕಾರವನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. …
Read More »ಜುಲೈ 31ರೊಳಗೆ ದ್ವಿತೀಯ ಪಿಯು ಫಲಿತಾಂಶ: ಸುರೇಶ್ ಕುಮಾರ್
ಬೆಂಗಳೂರು: ರಾಜ್ಯ ಪಠ್ಯಕ್ರಮದ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಜುಲೈ 31ರೊಳಗೆ ಫಲಿತಾಂಶ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು. ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿಬಿಎಸ್ಇ ಪಠ್ಯಕ್ರಮದ ಶಾಲೆಗಳ 12ನೇ ತರಗತಿ ಮಕ್ಕಳಿಗೆ ಜು.31ರೊಳಗೆ ಫಲಿತಾಂಶ ನೀಡಲು ಸುಪ್ರೀಂ ಕೋರ್ಟ್ ಆದೇಶ ಮಾಡಿದೆ. ರಾಜ್ಯದಲ್ಲೂ ಅಷ್ಟರೊಳಗೆ ಫಲಿತಾಂಶ ನೀಡುತ್ತೇವೆ’ ಎಂದು ಹೇಳಿದರು. ‘ಶೀಘ್ರದಲ್ಲೇ ಎಸ್ಎಸ್ಎಲ್ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಲಾಗುವುದು. ವಿದ್ಯಾರ್ಥಿಗಳಿಗೆ ಯಾವುದೇ …
Read More »
Laxmi News 24×7