ಸಿಂಧನೂರು: ನಿರ್ಗತಿಕ ರಿಗೆ ಅಂತ್ಯೋದಯ, ಕಡು ಬಡವರಿಗೆ ಬಿಪಿಎಲ್ ಕಾರ್ಡ್ ನೀಡಿ ಆಹಾರ ಧಾನ್ಯ ನೀಡುತ್ತಿರುವ ಇಲಾಖೆಯೇ ಆಂತರಿಕ ತಪಾಸಣೆ ವೇಳೆ ಬೆಚ್ಚಿಬಿದ್ದಿದೆ. 7.5 ಎಕರೆಗೂ ಮೇಲ್ಪಟ್ಟು ಜಮೀನು ಹೊಂದಿದವರೂ ಅನ್ನಭಾಗ್ಯಕ್ಕಾಗಿ ಕಡು ಬಡವರ ಪಟ್ಟಿಗೆ ಸೇರಿಕೊಂಡಿರುವುದು ಪತ್ತೆಯಾಗಿದೆ. ಅಷ್ಟೇ ಅಲ್ಲ 18,848 ಅನರ್ಹ ಅಂತ್ಯೋದಯ, 1,99,277 ಅನರ್ಹ ಬಿಪಿಎಲ್ ಕಾರ್ಡ್ಗಳು ಕೂಡ ಪತ್ತೆಯಾಗಿವೆ. ಇ-ಆಡಳಿತ ಇಲಾಖೆ ಸಹಯೋಗದಲ್ಲಿ ಭೂಮಿ ದಾಖಲೆಗಳನ್ನು ಪರಿಶೀಲಿಸಿದಾಗ ಆಹಾರ ಇಲಾಖೆಗೆ ಈ ಆಘಾತಕಾರಿ ಸಂಗತಿ ಗೊತ್ತಾಗಿದೆ. …
Read More »ಸಂಸದೆಮಂಗಳಾ ಅಂಗಡಿಯವರಿಗೆ ಹೊಸ ಜವಾಬ್ದಾರಿ
ನವದೆಹಲಿ: ಬೆಳಗಾವಿ ಲೋಕಸಭಾ ಕ್ಷೇತ್ರದ ನೂತನ ಸಂಸದೆ ಮಂಗಳಾ ಅಂಗಡಿ ಅವರಿಗೆ ಕೇಂದ್ರ ಸರ್ಕಾರ ಹೊಸ ಜವಾಬ್ದಾರಿ ನೀಡಿದೆ. ಮಂಗಳಾ ಅವರನ್ನು ಹಡಗು ಮತ್ತು ಜಲಮಾರ್ಗ ಸಚಿವಾಲಯ ಸಲಹಾ ಸಮಿತಿಗೆ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ ಸಂಸದೆಯಾಗಿ ಆಯ್ಕೆಯಾಗಿದ್ದ ಮಂಗಳಾ ಅಂಗಡಿಯವರಿಗೆ ಎರಡು ತಿಂಗಳಲ್ಲೇ ಸಲಹಾ ಸಮಿತಿ ಸದಸ್ಯರಾಗಿ ನೇಮಕವಾಗಿದ್ದಾರೆ. ಜಯಭೇರಿ ಬಾರಿಸಿದ್ದರು.
Read More »ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡಿರುವ ಅನಾಥ ಮಕ್ಕಳಿಗೆ ಧನಸಹಾಯ: ಸಚಿವೆ ಜೊಲ್ಲೆ
ಧಾರವಾಡ: ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡು ಅನಾಥವಾಗಿರುವ ಪ್ರತಿ ಮಕ್ಕಳ ಬ್ಯಾಂಕ್ ಖಾತೆಗೆ ಮುಖ್ಯಮಂತ್ರಿ ಬಾಲ ಸೇವಾ ಯೋಜನೆಯಡಿ ಪ್ರತಿ ತಿಂಗಳು 3,500 ರೂ.ಗಳನ್ನು ಜಮೆ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ನಗರದ ಕಮಲಾಪುರದಲ್ಲಿ ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಇಬ್ಬರು ಮಕ್ಕಳನ್ನು ಭೇಟಿ ಮಾಡಿ ಅವರಿಗೆ ಸಾಂತ್ವನ ಹೇಳಿದ ನಂತರ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು. ಹುಬ್ಬಳ್ಳಿ- ಧಾರವಾಡದಲ್ಲಿ ಮೂರು ಜನ …
Read More »ಇಬ್ಬರೂ ಬೇರೆ ಮದುವೆಯಾಗಿದ್ರೂ ಬೆಳೆದ ಅಕ್ರಮ ಸಂಬಂಧ, ನಂತರ ದುಡುಕಿನ ನಿರ್ಧಾರ
ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಗ್ರಾಮದ ಬಳಿ ಮಹಿಳೆಯೊಬ್ಬರು ಪ್ರಿಯಕರನ ತೊಡೆಯ ಮೇಲೆಯೇ ಪ್ರಾಣ ಬಿಟ್ಟಿದ್ದಾರೆ. ರೇಣುಕಾ(36) ಮೃತಪಟ್ಟ ಮಹಿಳೆ ಎಂದು ಹೇಳಲಾಗಿದೆ. ಗಂಗೂರು ಗ್ರಾಮದ ಅಶೋಕ, ರೇಣುಕಾ ದಂಪತಿಗೆ ಇಬ್ಬರು ಮಕ್ಕಳಿದ್ದು, ಅಶೋಕ ಕೇರಳಕ್ಕೆ ಕೆಲಸಕ್ಕಾಗಿ ತೆರಳಿದ್ದ. ಈ ವೇಳೆ ಆತನ ಸ್ನೇಹಿತ ಹಡಲಗೇರಿ ಗ್ರಾಮದ ಬಸವರಾಜ ರೇಣುಕ ಜೊತೆಗೆ ಸಂಬಂಧ ಬೆಳೆಸಿದ್ದಾನೆ. ಬಸವರಾಜನಿಗೂ ಮದುವೆಯಾಗಿ ಮಕ್ಕಳಿದ್ದಾರೆ. ಅದೇನಾಯ್ತೋ ರೇಣುಕಾ ಮತ್ತು ಬಸವರಾಜ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದು, …
Read More »ಅನುಪ ಮಂಡಲ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ಜೈನ ಸಮಾಜದ ಮನವಿ
ಬೆಳಗಾವಿ,.ಜು.23: ರಾಜಸ್ಥಾನ ಮೂಲದ ಅನುಪ ಸಂಘಟನೆಯು ಕಳೆದ ಹಲವಾರು ವರ್ಷಗಳಿಂದ ಜೈನ ಧರ್ಮ ಮತ್ತು ಜೈನ ಸಮಾಜದ ವಿರುದ್ದ ಅಪಪ್ರಚಾರ ನಡೆಸುತ್ತಿದ್ದು, ಈ ಸಂಘಟನೆಯನ್ನು ದೇಶಾದ್ಯಂತ ನಿಷೇಧಿಸಬೇಕೆಂದು ಪ್ರಧಾನ ಮಂತ್ರಿಗಳನ್ನು ಆಗ್ರಹಿಸಿ ಇಂದು ಬುಧವಾರ ವಿವಿಧ ಜೈನ ಸಂಘಟನೆಗಳು ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಅನುಪ ಮಂಡಲ ಸಂಘಟನೆಯು ಜೈನ ಧರ್ಮ ಮತ್ತು ಜೈನ ಸಮಾಜ ಕುರಿತಂತೆ ಅಪಪ್ರಚಾರ ಮಾಡುತ್ತಿದೆ. ಜೈನ ಸಾಧು ಸಾಧ್ವಿಗಳ ವಿರುದ್ದ ಇಲ್ಲ …
Read More »ದೊಡ್ಡ ಕುಟುಂಬದಲ್ಲಿ ಅಸಮಾಧಾನ ಸಾಮಾನ್ಯ: ಸಚಿವ ನಿರಾಣಿ
ಕಲಬುರಗಿ: ಒಂದು ಕುಟುಂಬ ಎಂದ ಮೇಲೆ ಅಸಮಾಧಾನ ಇರುತ್ತದೆ. ಅದರಲ್ಲೂ ಬಿಜೆಪಿ ದೊಡ್ಡ ಕುಟುಂಬ. ಇಬ್ಬರು-ಮೂರು ಶಾಸಕರಿಗೆ ಅಸಮಾಧಾನ ಇರುವುದು ಸಾಮಾನ್ಯ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ ನಿರಾಣಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ ಜಾರಕಿಹೊಳಿ ಮುಂಬೈ ಭೇಟಿ ಬಗ್ಗೆ ಗೊತ್ತಿಲ್ಲ. ಅದರ ಬಗ್ಗೆ ಮಾತನಾಡಲೂ ನಾನು ಹೋಗಲ್ಲ. ನಮ್ಮ ಹೈಕಮಾಂಡ್ ಸಮರ್ಥವಾಗಿದೆ. ಯಾವುದೇ ಸಮಸ್ಯೆ ಇದ್ದರೂ ಪರಿಹರಿಸುವ ಕೆಲಸ ಮಾಡುತ್ತಿದೆ ಎಂದರು. ಇತ್ತೀಚಿನ ಬೆಳವಣಿಗೆಗಳ …
Read More »ಆಕೆ’ಗೆ ತಾಳಿ- ‘ಈಕೆ’ಗೆ ತಾಳಿ ಭರವಸೆ: ಶ್ರೀಮಂತನ ಠಾಣೆಗೆ ಬಂದಳು ಪ್ರಿಯತಮೆ…!
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಠಾಣೆಗಳಲ್ಲಿ ಪೊಲೀಸರ ಪ್ರೇಮ ಪ್ರಕರಣಗಳು ಅವರದ್ದೆ ಠಾಣೆಯ ಮೆಟ್ಟಿಲೇರನ್ನೇರುತ್ತಿರುವುದು ಕಂಡು ಬರುತ್ತಿದೆ. ಶಂಭೋ ಶಂಭೋ ಪೊಲೀಸಪ್ಪನ ಪ್ರಿಯತಮೆ ಠಾಣೆಗೆ ಬಂದು ಹೋಗಿದ್ದು, ಇನ್ನೂ ಹಸಿರಿರುವಾಗಲೇ ಮತ್ತೊಂದು ಠಾಣೆಯಲ್ಲಿ ಇಂತಹದ್ದೆ ಪ್ರಕರಣ ನಡೆದಿರುವುದು ಬೆಳಕಿಗೆ ಬಂದಿದೆ. ತನ್ನ ಹೆಸರಿನಲ್ಲೇ ‘ಶ್ರೀಮಂತ’ ಎಂದು ಕೊಳ್ಳುವ ಆಸಾಮಿಯೇ ಹುಬ್ಬಳ್ಳಿಯ ಎಪಿಎಂಸಿಯಲ್ಲಿ ಆಗಾಗ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾಗಲೇ, ಆಕೆಯೊಂದಿಗೆ ಎಲ್ಲವನ್ನೂ ಮುಗಿಸಿ, ಈಗ ಕೈ ತೊಳೆದುಕೊಳ್ಳಲು ಮುಂದಾಗಿದ್ದಾನಂತೆ. ಈ ವಿಷಯ ಗೊತ್ತಾದ …
Read More »“ಖಾಕಿ” ಭರ್ಜರಿ ಬೇಟೆ: 16 ಲಕ್ಷದ ಚಿನ್ನಾಭರಣ ದೋಚಿದ್ದ ಕಿಡಿಗೇಡಿಗಳು ಅರೆಸ್ಟ್..! ಬಂಧಿತರಿಂದ 11 ಲಕ್ಷ ರೂ. ಮೌಲ್ಯದ 225 ಗ್ರಾಂ ಚಿನ್ನ ವಶ
ಬಾಗಲಕೋಟೆ: ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ, ಮೂವರು ಕಿಡಿಗೇಡಿಗಳನ್ನು ಮುಧೋಳ “ಖಾಕಿ” ಭರ್ಜರಿ ಭರ್ಜರಿ ಬೇಟೆಯಾಡಿದ್ದಾರೆ. ಸಿದ್ಧು, ಸಿದ್ದಪ್ಪ ಜಿಮ್ಮಿ, ಅಡಿವೆವ್ವ ಹಾದಿಮನಿ, ಕಲ್ಮೇಶ , ಮಟ್ಯಾ, ಪುಟ್ಯಾ, ಪುಟ್ಟು , ಪುಟ್ಯಾ, ದುರ್ಗಪ್ಪ ರಾನವ್ವಗೋಳ , ಜಾನಮಟ್ಟಿ, ಮುತ್ತಪ್ಪ ಯಮನಪ್ಪ ಪೂಜಾರಿ ಬಂಧಿತ ಆರೋಪಿಗಳು, ಮುಧೋಳ ತಾಲೂಕಿನ ಮಳಲಿ ಗ್ರಾಮದ ಎಂದು ತಿಳಿದು ಬಂದಿದೆ. ಬಂಧಿತರಿಂದ 11 ಲಕ್ಷ ರೂ. ಮೌಲ್ಯದ 225 ಗ್ರಾಂ ಚಿನ್ನ ಹಾಗೂ …
Read More »ಪ್ರಿಯಕರ ತೊಡೆಯ ಮೇಲೆ ಒದ್ದಾಡಿ ಪ್ರಾಣ ಬಿಟ್ಟ ಮಹಿಳೆ
ವಿಜಯಪುರ : ಮದುವೆಯಾದ್ದರೂ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆ ಹೆಣವಾಗಿ ಬಿದ್ದಿರುವ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಬಿದರಕುಂದಿ ಗ್ರಾಮದಲ್ಲಿ ನಡೆದಿದೆ. ಗಂಗೂರು ಗ್ರಾಮದ ರೇಣುಕಾ ಝಳಕಿ(36) ಮೃತ ಮಹಿಳೆ. ರೇಣುಕಾ ಹಾಗೂ ಹಡಲಗೇರಿ ಗ್ರಾಮದ 40ವರ್ಷದ ಬಸವರಾಜ್ ಕಿಲಾರಹಟ್ಟಿ ಪರಸ್ಪರ ಪ್ರೀತಿಸುತ್ತಿದ್ದರು. ರೇಣುಕಾಗೆ 3 ಮಕ್ಕಳು, ಬಸವರಾಜ್ ಗೆ 6 ಮಕ್ಕಳು, ಇಬ್ಬರಿಗೂ ಮದುವೆಯಾಗಿದ್ದರೂ ಅನೈತಿಕ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ನಿನ್ನೆ ಇಬ್ಬರೂ ಬಿದಕುಂದಿ ಗ್ರಾಮದ ಹೊರವಲಯದಲ್ಲಿ ಸೇರಿ …
Read More »25 ಲಕ್ಷ ಮನೆಗಳಿಗೆ ನಲ್ಲಿಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಬೆಂಗಳೂರು: ಈ ವರ್ಷ ‘ಜಲಜೀವನ್ ಮಿಷನ್’ ಯೋಜನೆಯಡಿ ಗ್ರಾಮೀಣ ಪ್ರದೇಶದ 25 ಲಕ್ಷ ಮನೆಗಳಿಗೆ ನಲ್ಲಿಗಳ ಮೂಲಕ ಕುಡಿಯುವ ನೀರು ಒದಗಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಯವರ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ‘ಜಲಜೀವನ್ ಮಿಷನ್’ ಯೋಜನೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ರಾಜ್ಯದಲ್ಲಿ 91.91 ಲಕ್ಷ ಗ್ರಾಮೀಣ ಕುಟುಂಬಗಳಿದ್ದು, ಈಗಾಗಲೇ 28 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ನಲ್ಲಿ ಸಂಪರ್ಕ ಒದಗಿಸಲಾಗಿದೆ. 2021-22 ನೇ ಸಾಲಿನಲ್ಲಿ …
Read More »
Laxmi News 24×7