Breaking News

Laxminews 24x7

ಕೋವಿಡ್ ನಿಂದ ರೈಲ್ವೆಗೆ 36000 ಕೋಟಿ ನಷ್ಟ

ಮುಂಬೈ: ಕೊರೊನಾದಿಂದಾಗಿ ಭಾರತೀಯ ರೈಲ್ವೆ ಇಲಾಖೆಗೆ 36,000 ಕೋಟಿ ರೂಪಾಯಿ ನಷ್ಟವಾಗಿರುವುದಾಗಿ ರೈಲ್ವೆ ಇಲಾಖೆ ರಾಜ್ಯ ಸಚಿವ ರಾವ್‌ ಸಾಹೇಬ್‌ ದಾನ್ವೆ ಹೇಳಿದ್ದಾರೆ. ಸರಕು ರೈಲುಗಳೇ ನಮಗೆ ನಿಜವಾದ ಆದಾಯ ತಂದು ಕೊಡುತ್ತಿರುವುದು ಎಂದು ಅವರು ತಿಳಿಸಿದ್ದಾರೆ. ಭಾನುವಾರದಂದು ಮಹಾರಾಷ್ಟ್ರದ ಜಲ್ನಾ ರೈಲು ನಿಲ್ದಾಣದ ಅಂಡರ್‌ ಪಾಸ್‌ ಗುದ್ದಲಿ ಪೂಜೆ ನೆರವೇರಿಸಿದ ಅವರು, “ಪ್ಯಾಸೆಂಜರ್‌ ರೈಲುಗಳಿಂದ ಯಾವಾಗಲೂ ಲಾಭ ಸಿಗುವುದಿಲ್ಲ. ಟಿಕೆಟ್‌ ದರ ಹೆಚ್ಚಿಸಿದರೆ ಜನರಿಗೆ ತೊಂದರೆಯೆಂದು ದರ ಹೆಚ್ಚಳ ಮಾಡಿಲ್ಲ. ಕೊರೊನಾದಿಂದಾಗಿ ಇಲಾಖೆಗೆ …

Read More »

ಮುಂದುವರಿದ ಕಾಬುಲ್ ಕಾರ್ಮೋಡ: ಏರ್​ಪೋರ್ಟ್​ನಲ್ಲಿ ಸಾವಿರಾರು ಜನರು ಅತಂತ್ರ; ಹಿಂಸೆ ನಡುವೆಯೂ ದೇಶ ತೊರೆಯಲು ಯತ್ನ

ಐಸಿಸ್ ದಾಳಿ ಆತಂಕ ತಾಲಿಬಾನಿಗಳ ಪೈಶಾಚಿಕ ಆಳ್ವಿಕೆಗೆ ಹೆದರಿ ಕಾಬುಲ್ ವಿಮಾನ ನಿಲ್ದಾಣಕ್ಕೆ ಜನಪ್ರವಾಹವೇ ಹರಿದುಬರುತ್ತಿದೆ. ಬಹುತೇಕರು ಅನ್ನಾಹಾರವಿಲ್ಲದೆ ನಿತ್ರಾಣರಾಗಿದ್ದಾರೆ. ಈ ನಡುವೆ, ಐಸಿಸ್ ಉಗ್ರರು ಏರ್​ಪೋರ್ಟ್ ಮೇಲೆ ದಾಳಿ ನಡೆಸಬಹುದು ಎಂಬ ಸುಳಿವು ಸಿಕ್ಕ ಕಾರಣ, ಅವರ ದಾರಿ ತಪ್ಪಿಸುವುದಕ್ಕಾಗಿ ವಿಮಾನದಲ್ಲಿರುವ ಹೀಟ್-ಸೀಕಿಂಗ್ ಟೆಕ್ನಾಲಜಿಯನ್ನು ಬಳಸಿ ಜ್ವಾಲೆ ಉಗುಳುವಂತೆ ಮಾಡಲಾಗಿದೆ. ಅಂತಾರಾಷ್ಟ್ರೀಯ ವಾಣಿಜ್ಯ ವಿಮಾನ ಹಾರಾಟ ಸ್ಥಗಿತವಾಗಿದ್ದರೂ, ಸೇನಾ ವಿಮಾನಗಳ ಮೂಲಕ ಸುರಕ್ಷಿತ ಸ್ಥಳಕ್ಕೆ ತೆರಳಲು ಧಾವಂತ ಎಲ್ಲರಲ್ಲೂ …

Read More »

ನಮ್ಮವರು ಪಾರು : ಅಫ್ಘಾನ್‌ನಿಂದ 392 ಮಂದಿ ವಾಪಸ್‌; ಕಾರ್ಯಾಚರಣೆಗೆ ಯಶ

ಕಾಬೂಲ್‌/ಹೊಸದಿಲ್ಲಿ/ಲಂಡನ್‌: ಅಫ್ಘಾನಿಸ್ಥಾನದಲ್ಲಿ ತಾಲಿಬಾನಿ ಕಪಿಮುಷ್ಠಿ ಯಿಂದ 392 ಮಂದಿ ಭಾರತೀಯರನ್ನು ಪಾರು ಮಾಡಿ ಸ್ವದೇಶಕ್ಕೆ ಕರೆತರುವಲ್ಲಿ ಭಾರತ ಸರಕಾರ ಯಶಸ್ವಿಯಾಗಿದೆ. ಈ ಪೈಕಿ ಏಳು ಮಂದಿ ಕನ್ನಡಿಗರಿದ್ದಾರೆ. ಮೂವರು ಕಾಬೂಲ್‌ ವಿಮಾನ ನಿಲ್ದಾಣದಲ್ಲಿ ಸ್ವದೇಶಾಗಮನಕ್ಕೆ ಸಿದ್ಧರಾಗಿದ್ದಾರೆ. ಅಫ್ಘಾನಿಸ್ಥಾನವು ತಾಲಿಬಾನ್‌ ವಶವಾಗಿ 8 ದಿನಗಳು ಕಳೆದಿವೆ. ರವಿವಾರದ ವರೆಗೆ ಒಟ್ಟು 392 ಮಂದಿ ಭಾರತಕ್ಕೆ ಆಗಮಿಸಿದ್ದಾರೆ. ಇವರಲ್ಲಿ 23 ಮಂದಿ ಅಫ್ಘಾನಿ ಹಿಂದೂಗಳು ಮತ್ತು ಸಿಕ್ಖರಿದ್ದಾರೆ. ರವಿವಾರ 257 ಮಂದಿ ಆಗಮಿಸಿದ್ದಾರೆ. 168 …

Read More »

ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ : ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಆಗಸ್ಟ್ 26 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.   ಶ್ರೀಲಂಕಾದ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರ ಪರಿಣಾಮದಿಂದ ಆಗಸ್ಟ್‌ 26ರವರೆಗೆ ರಾಜ್ಯದ ಬಹುತೇಕ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್‌ 23ರಿಂದ 26ರವರೆಗೆ ಉತ್ತರ ಒಳನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಬಹುತೇಕ ಎಲ್ಲ ಸ್ಥಳಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ ಎಂದು …

Read More »

ಗೋವಾದಲ್ಲಿ ಆಲ್ಕೋಹಾಲ್‌ ಮ್ಯೂಸಿಯಂ!

ಪಣಜಿ: ಪ್ರವಾಸಿ ರಾಜ್ಯ ಗೋವಾದಲ್ಲಿ ಮೊದಲ ಆಲ್ಕೋಹಾಲ್‌ ಮ್ಯೂಸಿಯಂ ತೆರೆಯಲಾಗಿದೆ. ಸ್ಥಳೀಯ ವಿಶೇಷ ಮದ್ಯವೆನಿಸಿಕೊಂಡಿರುವ ಫೆನ್ನಿಯ ಪ್ರಸಿದ್ಧತೆಯನ್ನು ದೇಶ ವಿದೇಶಕ್ಕೆ ಹರಡಿಸುವ ಉದ್ದೇಶದೊಂದಿಗೆ ಈ ಮ್ಯೂಸಿಯಂ ತೆರೆಯಲಾಗಿದೆ. ಉದ್ಯಮಿ ನಂದನ್‌ ಕುಡcಡ್ಕರ್‌ “ಆಲ್‌ ಎಬೌಟ್‌ ಆಲ್ಕೋಹಾಲ್‌’ ಹೆಸರಿನ ಮ್ಯೂಸಿಯಂ ತೆರೆದಿದ್ದಾರೆ. ಕಾಂಡೋಲಿಮ್‌ ಬೀಚ್‌ ಗ್ರಾಮದ ಬಳಿ ಈ ಮ್ಯೂಸಿಯಂ ಇದೆ. ಇದರಲ್ಲಿ ವಿಶೇಷವಾಗಿ ಪೆನ್ನಿಗೆ ಸಂಬಂಧಪಟ್ಟ ಸಾಮಗ್ರಿಗಳನ್ನು ಪ್ರದರ್ಶಿಸಲಾಗುವುದು. ಹಿಂದಿನ ಕಾಲದಲ್ಲಿ ಪೆನ್ನಿಯನ್ನು ಸಂಗ್ರಹಿಸುಡುತ್ತಿದ್ದ ಬೃಹದಾಕಾರದ ಹೂಜಿಗಳು, ಪೆನ್ನಿಗೆ ಸಂಬಂಧಿಸಿದ …

Read More »

ನಡುರಾತ್ರಿ ರಂಗೇರಿದ ಬೆಳಗಾವಿ ರಾಜಕೀಯ: ಪಾಲಿಕೆ ಚುನಾವಣೆಗೆ ಕೈ-ಕಮಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೆಳಗಾವಿ: ಬೆಳಗಾವಿಯ ಮಹಾನಗರ ಪಾಲಿಕೆಯ ಚುನಾವಣೆಯ ಕಾವು ರಂಗೇರುತ್ತಿದೆ. ಸೆಪ್ಟೆಂಬರ್ 3 ರಂದು 58 ವಾರ್ಡ್‌ಗಳಿಗೆ ಚುನಾವಣೆ ನಡೆಯಲಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ನಡುರಾತ್ರಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿವೆ. ಬಿಜೆಪಿಯಿಂದ ರಾತ್ರಿ ತುರ್ತು ಸುದ್ದಿ ಗೋಷ್ಠಿ ನಡೆಸಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಶಾಸಕ ಅಭಯ್ ಪಾಟೀಲ್, ಸಂಸದೆ ಮಂಗಲಾ ಅಂಗಡಿ, ಶಾಸಕ ಅನಿಲ್ ಬೆನಕೆ ನೇತೃತ್ವದಲ್ಲಿ 21 ಜನರ ಅಭ್ಯರ್ಥಿಗಳ ಮೊದಲ ಹಂತದ ಮೊದಲ …

Read More »

ಬೆಳಗಾವಿ :ಇಸ್ಪೀಟ್ ಅಡ್ಡೆಗಳ ಮೇಲೆ ಪೊಲೀಸರು ದಾಳಿ 28 ಜನರ ಬಂಧನ ನಗದು ಜಪ್ತಿ: ಡಿಸಿಪಿ ವಿಕ್ರಂ ಅಮಟೆ

ಬೆಳಗಾವಿ–  ಮೂರು ಕಡೆಗಳಲ್ಲಿ ಇಸ್ಪೀಟ್ ಅಡ್ಡೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದು, 28 ಜನರನ್ನು ಬಂಧಿಸಿದ್ದಾರೆ. ಈ ಕುರಿತು ಡಿಸಿಪಿ ವಿಕ್ರಂ ಅಮಟೆ ಮಾಹಿತಿ ನೀಡಿದ್ದಾ್ರೆ. ದಿ. 21/08/2021 ರಂದು ರಾತ್ರಿ  ಅಂಬೇಡ್ಕರ ನಗರದ ಸಾವ೯ಜನಿಕ ಸ್ಥಳದಲ್ಲಿ ಕುಳಿತುಕೊಂಡು  ಇಸ್ಪೀಟ್ ಎಲೆಗಳ ಮೇಲೆ ಹಣವನ್ನು ಪಣಕ್ಕೆ ಕಟ್ಟಿ ಅಂದರ ಬಾಹರ್ ಅನ್ನುವ ಜುಗಾರ ಆಟ ಆಡುತ್ತಿರುವವರ ದಾಳಿ ಮಾಡಿದ್ದು, ದಾಳಿ ಕಾಲಕ್ಕೆ 10 ಜನ ಆರೋಪಿತರನ್ನು ವಶಕ್ಕೆ ಪಡೆಯಲಾಗಿದೆ.  ಅವರಿಂದ  …

Read More »

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಕಾಂಗ್ರೆಸ್ ಪಟ್ಟಿ ರಾತ್ರೋ ರಾತ್ರಿ ಬಿಡುಗಡೆ, ಇಲ್ಲಿದೆ ಅಭ್ಯರ್ಥಿ ಗಳ ಡೀಟೇಲ್ಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ವಾರ್ಡ್ ನಂ 1– ಇಕ್ರಾ ಮುಲ್ಲಾ IQra mulla ವಾರ್ಡ್ ನಂ 2– ಮುಜಮ್ಮಿಲ್ಲ್ ಡೋಣಿ Mujammil doni ವಾರ್ಡ್ ನಂ– 3 ಜ್ಯೋತಿ ಕಡೋಲ್ಕರ್ Jyoti kadolkar ವಾರ್ಡ್ 4–ಲಕ್ಷ್ಮಣ ಬುರುಡ Laxman burud ವಾರ್ಡ್ ನಂ 5 ಅಫ್ರೋಜ್ ಮುಲ್ಲಾ Afroz mulla ವಾರ್ಡ್ ನಂ 6 ಮಹ್ಮದ ರಸೂಲ ಪೀರಜಾದೆ Mohmed rasool peerzade ವಾರ್ಡ್ ನಂ 7 ಗುಂಡು ಕುಕ್ಕಡೆ …

Read More »

ನೀವು ಯುವತಿ ಜತೆ ನಗ್ನವಾಗಿರುವ ವಿಡಿಯೋ ನನ್ನ ಬಳಿ ಇದೆ’ ಎಂದು ಬಿಜೆಪಿ ಮುಖಂಡನಿಗೆ ಬ್ಲ್ಯಾಕ್​ಮೇಲ್​ ಮಾಡಿದ ಅಪರಿಚಿತ

ಬೆಂಗಳೂರು: ‘ನೀವು ಯುವತಿ ಜತೆ ನಗ್ನವಾಗಿರುವ ವಿಡಿಯೋ ನನ್ನ ಬಳಿ ಇದೆ’ ಎಂದು ಬಿಜೆಪಿ ಮುಖಂಡನಿಗೆ ಅಪರಿಚಿತನೊಬ್ಬ ಬ್ಲ್ಯಾಕ್​ಮೇಲ್​ ಮಾಡಿದ್ದು, ಸುಮಾರು 30 ಸಾವಿರ ರೂಪಾಯಿ ವಸೂಲಿ ಕೂಡ ಮಾಡಿಕೊಂಡಿದ್ದಾನೆ. ಅಪರಿಚಿತ ವ್ಯಕ್ತಿಯ ಬೆದರಿಕೆ ಕರೆ ಕುರಿತು ಬಿಜೆಪಿ ಮುಖಂಡ ಪೊಲೀಸರಿಗೆ ದೂರು ನೀಡಿದ್ದಾರೆ. ಬಿಜೆಪಿ ಮುಖಂಡ ಚಿ.ನಾ. ರಾಮು ಇಂಥದ್ದೊಂದು ಬೆದರಿಕೆ ಕರೆಗೆ ಒಳಗಾಗಿದ್ದಾರೆ. ಕೇಂದ್ರ ಸರ್ಕಾರದ ಸಾಮಾಜಿಕ ಸಬಲೀಕರಣ ಇಲಾಖೆ ಅಧೀನದ ಅಂಬೇಡ್ಕರ್ ಫೌಂಡೇಷನ್​ ನಿರ್ದೇಶಕ ಆಗಿರುವ …

Read More »

ಹೆಣ್ಣು ನೋಡುವ ಶಾಸ್ತ್ರಕ್ಕೆಂದು ಹೋದವರು ಹೆಣವಾಗಿ ಹೋದರು; ಸ್ಥಳದಲ್ಲೇ ಸಾವಿಗೀಡಾದ ದಂಪತಿ

ಆನೇಕಲ್: ಕ್ಯಾಂಟರ್ ಹಾಗೂ ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಭೀಕರ ಅಪಘಾತ ಎರಡು ಜೀವಗಳನ್ನು ಬಲಿ ಪಡೆದಿದ್ದು, ಹೆಣ್ಣು ನೋಡುವ ಶಾಸ್ತ್ರಕ್ಕೆಂದು ಹೋದವರು ಹೆಣವಾಗಿ ಹೋದಂತಾಗಿದೆ. ಆನೇಕಲ್ ತಾಲೂಕಿನ ಚೂಡಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ. ಚಂದಾಪುರ ಸಮೀಪದ ಕಿತ್ತಗಾನಹಳ್ಳಿಯ ನಿವಾಸಿಗಳಾದ ಮುನಿರಾಜಾಚಾರಿ (55), ಅಕ್ಕಯಮ್ಮ (50) ಮೃತಪಟ್ಟ ದಂಪತಿ. ಹೆಣ್ಣು ನೋಡುವ ಶಾಸ್ತ್ರಕ್ಕೆಂದು ಇವರು ದ್ವಿಚಕ್ರವಾಹನದಲ್ಲಿ ಆನೇಕಲ್ ತಾಲೂಕಿನ ಚೂಡಹಳ್ಳಿಗೆ ಹೋಗಿದ್ದರು. ಚೂಡಗಾನಹಳ್ಳಿ ಬಳಿ ಎದುರುಗಡೆಯಿಂದ ಬರುತ್ತಿದ್ದ ತಮಿಳುನಾಡು …

Read More »