Breaking News

Laxminews 24x7

ಉಲ್ಟಾ ಮಚ್ಚೆ ಹೇಳಿಕೆ ನಿಜವಾಗಲಿ; ಸಿ.ಟಿ. ರವಿ ಶೀಘ್ರ ಸಂಪುಟ ಸಚಿವರಾಗಲಿ; ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಏನು ಹೇಳುತ್ತಾರೆ ಅದು ಉಲ್ಟಾ ಆಗುತ್ತೆ, ಅವರ ನಾಲಿಗೆಯಲ್ಲಿ ಉಲ್ಟಾ ಮಚ್ಚೆ ಇದೆ ಎಂದು ವಾಗ್ದಾಳಿ ನಡೆಸಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿಕೆಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, ಸಿ.ಟಿ. ರವಿ ಶೀಘ್ರ ಸಂಪುಟ ಸಚಿವರಾಗಲಿ ಎಂದಿದ್ದಾರೆ. ಸಿ.ಟಿ. ರವಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಸಿ.ಟಿ. ರವಿ ಶೀಘ್ರ ಸಚಿವರಾಗಲಿ ಎಂದು ಹಾರೈಸುತ್ತೇನೆ. ಆ ಮೂಲಕ ನನ್ನ ನಾಲಿಗೆ ಮೇಲೆ ಉಲ್ಟಾ …

Read More »

ಆಫ್ಘಾನ್​​ನಿಂದ ತಾಯ್ನಾಡಿಗೆ 120 ಮಂದಿ ಭಾರತೀಯರು- ರಣಾಂಗಣದಂತಾದ ಅಫ್ಘಾನಿಸ್ತಾನದಿಂದ ರಕ್ಷಣೆಯೇ ರೋಚಕ

ಅಫ್ಘಾನಿಸ್ತಾನವನ್ನ ಇದೀಗ ತಾಲಿಬಾನಿಗಳು ವಶಪಡಿಸಿಕೊಂಡು ತಮ್ಮದೇ ಸರ್ಕಾರ ರಚಿಸಲು ಬೇಕಾದ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ. ಮಾನವ ಹಕ್ಕುಗಳಿಗೆ ಮಾರಕವಾದ ಸಿದ್ಧಾಂತಗಳನ್ನ ನಂಬಿರುವ ತಾಲಿಬಾನಿಗಳು ಅಫ್ಘಾನಿಸ್ತಾನದ ಜನರನ್ನ ಹಿಂಸಿಸಲು ಮುಂದಾಗಬಹುದು ಎಂಬ ಆತಂಕ ಜಗತ್ತಿನಾದ್ಯಂತ ಮನೆಮಾಡಿದೆ. ಈ ಮಧ್ಯೆ ಅಫ್ಘಾನಿಸ್ತಾನದ ಮೊದಲ ಮಹಿಳಾ ಮೇಯರ್ ಒಬ್ಬರ ಮಾತುಗಳು ಎಂಥವರ ಹೃದಯವನ್ನೂ ಹಿಂಡುವಂತಿದೆ.   : ಸರ್ಕಾರಿ ಅಧಿಕಾರಿಗಳಿಗೆ ‘ಸಾರ್ವತ್ರಿಕ ಕ್ಷಮಾದಾನ’ ಕೋರಿದ ತಾಲಿಬಾನಿಗಳು   ತಾಲಿಬಾನಿಗಳು ನನ್ನನ್ನು ಕೊಲ್ತಾರೆ, ನಮ್ಮ ಕುಟುಂಬವನ್ನು ಕೊಲ್ತಾರೆ.. …

Read More »

ಏನೇ ಮಾಡಿದರೂ ನೇರವಾಗಿ ಮಾಡುತ್ತೇನೆ; ಸ್ಪೀಕರ್ ಭೇಟಿ ಅವಶ್ಯಕತೆಯಿಲ್ಲ; ಆನಂದ್ ಸಿಂಗ್

ಕಾರವಾರ: ಖಾತೆ ಹಂಚಿಕೆ ವಿಚಾರದಲ್ಲಿ ತೀವ್ರ ಅಸಮಾಧಾನಗೊಂಡಿರುವ ಸಚಿವ ಆನಂದ್ ಸಿಂಗ್ ರಾಜೀನಾಮೆ ಕೊಡುವ ವಿಚಾರ ದಿನದಿಂದ ದಿನಕ್ಕೆ ಕುತೂಹಲ ಕೆರಳಿಸಿದೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆನಂದ್ ಸಿಂಗ್, ತಮ್ಮ ಮುಂದಿನ ನಡೆ ಬಗ್ಗೆ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ. ನಾನು ಮಾತಿನ ಮೇಲೆ ನಿಲ್ಲುವ ವ್ಯಕ್ತಿ. ಕೆಲವರ ಟೀಕೆಗಳಿಗೆ ಪ್ರತಿಕ್ರಿಯಿಸಲು ಇಚ್ಛಿಸಲ್ಲ. ನನ್ನ ಆತ್ಮಸಾಕ್ಷಿಗೆ ನಾನು ಉತ್ತರ ಕೊಡಬೇಕಾಗಿದೆ ಎಂದು ಹೇಳಿದರು. ಇಂದು ಸ್ಪೀಕರ್ ಕಾಗೇರಿ …

Read More »

ಇನ್ನು 4 ದಿನಗಳಲ್ಲಿ ಎಲ್ಲವೂ ನಿರ್ಧಾರ; ಶಾಸಕ ಶ್ರೀಮಂತ ಪಾಟೀಲ್

ಬೆಳಗಾವಿ: ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಟ್ಟರೆ ನನಗೆ ಬೇಡ. ನಾನು ಕೆಳಗೆ ಬರೋದಿಲ್ಲ. ಮೇಲಿನ ಸ್ಥಾನ ಕೊಟ್ಟರೆ ನಿಭಾಯಿಸುವೆ. ಅದು ಪಕ್ಷಕ್ಕೂ ಸರಿ ಅಲ್ಲ, ನನಗೂ ಸರಿಯಲ್ಲ ಅಂತ ಬೆಳಗಾವಿಯಲ್ಲಿ ಶಾಸಕ ಶ್ರೀಮಂತ ಪಾಟೀಲ್ (Shrimant Patil) ಹೇಳಿದ್ದಾರೆ. ಇನ್ನು ಮರಾಠಾ ಸಮುದಾಯಕ್ಕೆ ಸಚಿವ ಸ್ಥಾನ ಸಿಗದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕ, ಸಾಕಷ್ಟು ಸಮಯವಿದೆ, ಸಚಿವ ಸ್ಥಾನ ಕೊಡಬಹುದು. ಮರಾಠಾ ಸಮುದಾಯದವರು ಬೇಸರ ಮಾಡಿಕೊಳ್ಳಬೇಡಿ. 4 ದಿನದಲ್ಲಿ …

Read More »

ಮಂಗಳೂರು ದಂಪತಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಕೊರೊ

ಮಂಗಳೂರು ಹೊರವಲಯದ ಸುರತ್ಕಲ್‌ನ ರಹೇಜಾ ಅಪಾರ್ಟ್‌ಮೆಂಟ್‌ನಲ್ಲಿ ರಮೇಶ್‌ ಹಾಗೂ ಗುಣಾ ದಂಪತಿಗಳ ಆತ್ಮಹತ್ಯೆ ಪ್ರಕರಣ ಆತಂಕವನ್ನು ಮೂಡಿಸಿತ್ತು. ಡೆತ್‌ನೋಟ್‌ ನಲ್ಲಿ ಕೊರೊನಾ ಹಾಗೂ ಬ್ಲ್ಯಾಕ್‌ ಫಂಗಸ್‌ಗೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬರೆದಿಟ್ಟಿದ್ದರು. ಇದರ ಬೆನ್ನಲ್ಲೇ ಇದೀಗ ಮೃತದೇಹದ ಪರೀಕ್ಷೆಯನ್ನು ನಡೆಸಲಾಗಿದ್ದು, ಕೊರೊನಾ ನೆಗೆಟಿವ್‌ ವರದಿ ಬಂದಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಪಡುಬಿದ್ರಿ ಮೂಲದ ರಮೇಶ್‌ ಸುವರ್ಣ ಹಾಗೂ ಗುಣಾ ಆರ್.‌ ಸುವರ್ಣ ದಂಪತಿ ಮನೆಯವರಿಗೆ ಕೊರೊನಾ ಸೋಂಕು …

Read More »

ರಾಜ್ಯದಲ್ಲಿ ತೈಲದರ ಇಳಿಕೆ ಪ್ರಸ್ತಾಪ ಇಲ್ಲ- ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ತಮಿಳುನಾಡಿನಲ್ಲಿ ಪೆಟ್ರೋಲ್ ಬೆಲೆ 3 ರೂ. ಕಡಿತ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಮ್ಮ ರಾಜ್ಯದಲ್ಲಿ ಆ ರೀತಿಯ ಪ್ರಸ್ತಾಪ ಇಲ್ಲ ಎಂದಿದ್ದಾರೆ.   ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ತಮಿಳುನಾಡು ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಕಡಿತ ಮಾಡಿದಂತೆ ರಾಜ್ಯದಲ್ಲೂ ಕಡಿತ ಮಾಡುವ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟನೆ ನೀಡಿದರು.   ಇಂದು 3 ಇಲಾಖೆಗಳ ಪದಾಧಿಕಾರಿಗಳ ಸಭೆ ಮಾಡುತ್ತೇನೆ. …

Read More »

ಕಾಡಾಪೂರ ಗ್ರಾಮದಲ್ಲಿ ಯೋಧನ ತಾಯಿಯ ಮೇಲೆ ಹಲ್ಲೇ ಖಂಡಿಸಿ ಅಂಕಲಿ ಗ್ರಾಮದಲ್ಲಿ ಮಾಜಿ ಸೈನಿಕರಿಂದ ಪಾದಯಾತ್ರೆ ಮೂಲಕ ಪ್ರತಿಭಟನೆ

    ಅಂಕಲಿ : ಅತ್ಯಂತ ಪ್ರತಿಕೂಲ ಸನ್ನಿವೇಶದಲ್ಲೂ ತಮ್ಮ ಪ್ರಾಣದ ಹಂಗು ತೊರೆದು ದೇಶದ ಗಡಿ ಕಾಯುವ ಯೋಧರಯ ನಮ್ಮ ದೇಶದ ಅಮೂಲ್ಯ ಆಸ್ತಿ ಅತಂಹ ಗಡಿ ಕಾಯುವ ಕರ್ತವ್ಯ ನಿರಂತ ಯೋಧನ ತಾಯಿಯ ಮೇಲೆ ಐದಾರು ಜನ ಹಲ್ಲೆ ಮಾಡಿದ್ದಾರೆ. ಅವರುಗಳ ವಿರುದ್ಧ ಸಾಮಾನ್ಯವಾದ ಪ್ರಕರಣವನ್ನು ಫೋಲಿಸ್ ಅಧಿಕಾರಿಗಳು ದಾಖಲು ಮಾಡಿದ್ದಾರೆಂದು ಮಾಜಿ ಸೈನಿಕ ಕ್ಷೇಮಾಭಿವೃದ್ಧಿ ಸಂಘದ ರಾಜಾಧ್ಯಕ್ಷರಾದ ಕೆ. ಶಿವಾನಂದ ಆರೋಪಿಸಿದ್ದಾರೆ. ಅಂಕಲಿ ಪೋಲಿಸ್ ಠಾಣೆಯ …

Read More »

ರಾಜ್ಯದಲ್ಲಿ 3,000 ವೈದ್ಯರು, 7,000 ನರ್ಸ್, 7,000 ಗ್ರೂಪ್ ಡಿ. ಸಿಬ್ಬಂದಿ ನೇಮಕ : ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: 3ನೇ ಅಲೆ ಮಾತ್ರವಲ್ಲ ಭವಿಷ್ಯದಲ್ಲಿ ಯಾವುದೇ ರೀತಿಯ ಆರೋಗ್ಯ ತುರ್ತು ಸಂದರ್ಭ ಬಂದರೂ ಸಶಕ್ತವಾಗಿ ಎದುರಿಸಲು ಸಾಧ್ಯವಾಗುವಂತೆ ರಾಜ್ಯದ ಎಲ್ಲ ಜಿಲ್ಲಾ, ತಾಲೂಕು ಆಸ್ಪತ್ರೆ, ಸಮುದಾಯ ಮತ್ತು ಪ್ರಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ಮೂಲಭೂತ ಸೌಲಭ್ಯಗಳನ್ನು ಆಮೂಲಾಗ್ರವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ-ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಖಾತೆ ಸಚಿವ ಡಾ.ಅಶ್ವತ್ಥನಾರಾಯಣ ಹೇಳಿದರು. ಇದೇ ನಿಟ್ಟಿನಲ್ಲಿ 3,000 ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇದರಲ್ಲಿ 2,000 ಮಂದಿ ತಜ್ಞ …

Read More »

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಮುಗಿಯದೇ ಬಿಜೆಪಿ ಶಾಸಕರು ಬೆಂಗಳೂರಿಗೆ ಬರುವಂತಿಲ್ಲ: ನಳಿನ್ ಕುಮಾರ್

ನಿಮ್ಮೆಲ್ಲರ ಮಾತಿನಂತೆ ಈಬಾರಿ ಪಕ್ಷದ ಚಿಹ್ನೆಯಡಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇವೆ. ಬಿಜೆಪಿ ಚಿಹ್ನೆಯಿಂದ ಸ್ಪರ್ಧೆ ಮಾಡುವ ನಿರ್ಧಾರ ನಾಯಕರದ್ದಲ್ಲ, ಕಾರ್ಯಕರ್ತರದ್ದು ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು ಬೆಳಗಾವಿ: ಮಂಗಳೂರಿನಲ್ಲಿ ಬಿಜೆಪಿ ಅಧಿಕಾರ ಹಿಡಿದಂತೆ ಬೆಳಗಾವಿಯಲ್ಲೂ ಬಿಜೆಪಿ ಅಧಿಕಾರ ಹಿಡಿದೇ ಹಿಡಿಯಲಿದೆ. ಚುನಾವಣೆಯಲ್ಲಿ ಒಂದೊಂದು ವಾರ್ಡ್ ಗೆ ಒಬ್ಬೊಬ್ಬ ಶಾಸಕರನ್ನು ನೇಮಿಸುತ್ತೇವೆ. ಹಾಕುತ್ತೇವೆ. ಸಭೆ ಸಮಾರಂಭಗಳನ್ನ ಮಾಡುವಂತಿಲ್ಲ. ಮಹಾನಗರ ಪಾಲಿಕೆ ಚುನಾವಣೆ ( Belagavi municipal corporation Election …

Read More »

ಸಚಿವರ ಸರ್ಕಾರಿ ಕಾರಿನಲ್ಲಿ ಉಲ್ಟಾ ಹಾರಿದ ರಾಷ್ಟ್ರ ಧ್ವಜ

ಬೆಂಗಳೂರು: ಕೇಂದ್ರ ರಾಜ್ಯ ಖಾತೆ ಸಚಿವ ನಾರಾಯಣ ಸ್ವಾಮಿ ಅವರ ಕಾರಿನಲ್ಲಿ ರಾಷ್ಟ್ರ ಧ್ವಜ ತಲೆ ಕೆಳಗಾಗಿ (ಉಲ್ಟಾ) ಹಾರಿದ ಘಟನೆ ನಡೆದಿದೆ. ಇಲ್ಲಿಯ ಬಿಜೆಪಿ ಕಚೇರಿಗೆ ಆಗಮಿಸಿದ ಗೂಟದ ಕಾರಿನಲ್ಲಿ ಉಲ್ಟಾ ಧ್ವಜ ಹಾರಾಡಿದೆ. ಕೇಸರಿ, ಬಿಳಿ, ಹಸಿರು ಬದಲಾಗಿ. ಹಸಿರು, ಬಿಳಿ, ಕೇಸರಿ ಧ್ವಜ ಹಾರಾಡಿದೆ. ಆದರೆ, ಈ ಯಡವಟ್ಟು ನಡೆದ ವೇಳೆ ಸಚಿವರು ಆ ಕಾರಿನಲ್ಲಿ ಇರಲಿಲ್ಲ. ಖಾಸಗಿ ಕಾರಿನಲ್ಲಿ ಸಚಿವ ನಾರಾಯಣ ಸ್ವಾಮಿ ಆಗಮಿಸಿದರು. …

Read More »