Breaking News

Laxminews 24x7

ತಂಬಾಕು ಮುಕ್ತ ಜಾಗೃತಿ ರ‍್ಯಾಲಿ

ತಂಬಾಕು ಸೇವನೆಯು ಕ್ಯಾನ್ಸರ್, ಹೃದಯರೋಗ, ಶ್ವಾಸಕೋಶದ ಕಾಯಿಲೆಗಳು ಸೇರಿದಂತೆ ಅನೇಕ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಆರೋಗ್ಯಕರ ಮತ್ತು ಸಂತೋಷದ ಜೀವನಕ್ಕಾಗಿ ತಂಬಾಕು ಸೇವನೆಯನ್ನು ಸಂಪೂರ್ಣವಾಗಿ ತ್ಯಜಿಸಬೇಕು ಎಂದು 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವಿಜಯಕುಮಾರ ಅವರು ಹೇಳಿದರು. ಅವರು ಚಿಕ್ಕೋಡಿಯಲ್ಲಿ ಕೆ.ಎಲ್.ಇ. ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಕೆ.ಎಲ್.ಇ. ನರ್ಸಿಂಗ್ ಮಹಾವಿದ್ಯಾಲಯ, ಉಪವಿಭಾಗಾಧಿಕಾರಿಗಳ ಕಚೇರಿ, ಕಂದಾಯ ಇಲಾಖೆ, ಅಪರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ …

Read More »

ಗ್ರಾಮಗಳತ್ತ ಲಕ್ಷ್ಮೀ ಹೆಬ್ಬಾಳಕರ್ ಹೆಜ್ಜೆ; ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದನೆ

ಬೆಳಗಾವಿ: ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ತಮ್ಮ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಖುದ್ದಾಗಿ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸುವ ಕಾರ್ಯವನ್ನು ನಿರಂತರವಾಗಿ ಮುಂದುವರಿಸಿದ್ದಾರೆ. ಗೃಹ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸುವುದರ ಜೊತೆಗೆ, ತಾವೇ ಗ್ರಾಮಗಳಿಗೆ ತೆರಳಿ ಅಲ್ಲಿನ ವಾಸ್ತವ ಸ್ಥಿತಿಗತಿಗಳನ್ನು ಪರಿಶೀಲಿಸುತ್ತಿದ್ದು, ಜನರ ಅಗತ್ಯಗಳು ಹಾಗೂ ಮೂಲಸೌಕರ್ಯ ಸಮಸ್ಯೆಗಳ ಬಗ್ಗೆ ನೇರವಾಗಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಓಂಕಾರ್ …

Read More »

ಜೂ.21ರಂದು ಜಗನ್ನಾಥರಾವ್ ಜೋಶಿ ಸ್ಮಾರಕ ಭವನ ಲೋಕಾರ್ಪಣೆ

 ಬೆಳಗಾವಿ : ಕರ್ನಾಟಕ ಕೇಸರಿ ಎಂದೇ ಖ್ಯಾತರಾಗಿದ್ದ ಮಾಜಿ ಸಂಸದ ದಿ. ಶ್ರೀ ಜಗನ್ನಾಥರಾವ್ ಜೋಶಿಯವರ ಅವರ ಹೆಸರಿನಲ್ಲಿ ಬೆಳಗಾವಿಯಲ್ಲಿ ನಿರ್ಮಿಸಲಾಗಿರುವ *ಶ್ರೀ ಜಗನ್ನಾಥರಾವ್ ಜೋಶಿ ಸ್ಮಾರಕ ಭವನ*ವನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸುವ ಲೋಕಾರ್ಪಣೆ ಸಮಾರಂಭ ಜೂನ್ 21ರಂದು ನಡೆಯಲಿದೆ. ಜನಕಲ್ಯಾಣ ಟ್ರಸ್ಟ್, ಬೆಳಗಾವಿ ವತಿಯಿಂದ ಆಯೋಜಿಸಲಾಗಿರುವ ಈ ಕಾರ್ಯಕ್ರಮವು ನಗರದ ಗೂಡ್ಸ್ ಶೆಡ್ ರಸ್ತೆಯ ಸಂಘ ಸಧನದಲ್ಲಿ ಅಂದು ಬೆಳಗ್ಗೆ 11 ಗಂಟೆಗೆ ಜರುಗಲಿದೆ. ಕಾರಂಜಿಮಠದ ಶ್ರೀ ಗರುಸಿದ್ಧ ಮಹಾಸ್ವಾಮಿಗಳು  ದಿವ್ಯ ಸಾನ್ನಿಧ್ಯ ವಹಿಸಲಿದ್ದು, …

Read More »

ವರ್ಕ್ ಫ್ರಮ್ ಹೋಮ್ ಹೆಸರಿನಲ್ಲಿ ಕೋಟಿ ಕೋಟಿ ವಂಚನೆ? ಸಾವಿರಾರು ಮಹಿಳೆಯರ ಆರೋಪ..!!

ಹಾವೇರಿ: ಬೆಳಗಾವಿಯ ಶಿವಂ ಅಸೋಶಿಯೇಟ್ಸ್ ಹಗರಣದ ಮಾದರಿಯಲ್ಲೇ ಹಾವೇರಿಯಲ್ಲೂ ಭಾರೀ ವಂಚನೆ ನಡೆದಿರುವ ಆರೋಪ ಕೇಳಿಬಂದಿದೆ. ಸ್ವಯಂ ಉದ್ಯೋಗ ಹಾಗೂ ಮನೆಯಲ್ಲೇ ಕೆಲಸ ಮಾಡಿ ಆದಾಯ ಗಳಿಸುವ ಭರವಸೆ ನೀಡಿ ಸಾವಿರಾರು ಮಹಿಳೆಯರಿಂದ ಕೋಟ್ಯಂತರ ರೂಪಾಯಿ ಸಂಗ್ರಹಿಸಿ ಕಂಪನಿ ಮಾಲೀಕರು ನಾಪತ್ತೆಯಾಗಿದ್ದಾರೆ ಎಂದು ನೊಂದವರು ಆರೋಪಿಸಿದ್ದಾರೆ. ಹಾವೇರಿ ನಗರದ ಅಶ್ವಿನಿ ನಗರದಲ್ಲಿರುವ ಎಸ್‌ಎಲ್‌ವಿ ಮಹಿಳಾ ಮಾರ್ಟ್ ಆ್ಯಂಡ್ ಮಾರ್ಕೆಟಿಂಗ್ ಸಂಸ್ಥೆಯ ವಿರುದ್ಧ ಈ ಆರೋಪ ಕೇಳಿಬಂದಿದೆ. ಕಂಪನಿಯ ಪ್ರಮುಖರಾದ ವಿನಾಯಕ …

Read More »

ಬಂಧನ ಮಗಳು ವೆನ್ನೆಲಾಳನ್ನು ಕೊಂದು ಓಡುತ್ತಿದ್ದ ಪಾಪಿ ತಾಯಿ ಪ್ರಿಯಾಂಕ ಕೊನೆಗೂ ಸಕಲೇಶಪುರದಲ್ಲಿ ಅರೆಸ್ಟ್!

​ಬೆಂಗಳೂರು: ರಾಜಧಾನಿಯ ಕಾಡುಗೋಡಿಯಲ್ಲಿ ಸ್ವಂತ ಮಗಳು ವೆನ್ನೆಲಾಳನ್ನು ಭೀಕರವಾಗಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಕಲ್ಲೆದೆಯ ತಾಯಿ ಪ್ರಿಯಾಂಕಳನ್ನು ಪೊಲೀಸರು ಕೊನೆಗೂ ಹೆಡೆಮುರಿ ಕಟ್ಟಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚುತ್ತಿದ್ದ ಈಕೆಯನ್ನು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಕಾಡುಗೋಡಿ ಪೊಲೀಸರು ಬಂಧಿಸಿದ್ದಾರೆ ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್ (Asianet Suwarna News) ವರದಿ ಮಾಡಿದೆ. ​ಮಾರ್ಚ್ ತಿಂಗಳಲ್ಲೇ ನಡೆದಿದ್ದ ಈ ಘೋರ ಹತ್ಯೆ ತಡವಾಗಿ ಬೆಳಕಿಗೆ ಬಂದಿದ್ದು, ಇಡೀ ರಾಜ್ಯವನ್ನೇ …

Read More »

ಶಾಕಿಂಗ್ ರೇಡ್: ಇಂಜಿನಿಯರ್ ಮನೆಯಲ್ಲಿ ₹200 ಕೋಟಿ ಅಕ್ರಮ ಆಸ್ತಿ ಪತ್ತೆ! ಜನಸಾಮಾನ್ಯರ ರಕ್ತ ಹೀರುವ ಭ್ರಷ್ಟ ‘ರಾಜ’ನ ಕಥೆ ಇದು!

​ಸರ್ಕಾರಿ ಕೆಲಸ ಅಂದರೆ ಸಾಕು, ಅದು ಕೆಲವರಿಗೆ ಅಕ್ಷಯ ಪಾತ್ರೆ ಇದ್ದಂತೆ ಆಗಿಬಿಟ್ಟಿದೆ! ಹೈದರಾಬಾದ್‌ನ ಆರ್‌ ಅಂಡ್ ಬಿ (R&B) ಇಂಜಿನಿಯರ್-ಇನ್-ಚೀಫ್ ಮೋಹನ್ ನಾಯಕ್ ಅವರ ಮನೆಯ ಮೇಲೆ ಎಸಿಬಿ (ಭ್ರಷ್ಟಾಚಾರ ನಿಗ್ರಹ ದಳ) ಅಧಿಕಾರಿಗಳು ನಡೆಸಿರುವ ದಾಳಿ ಈಗ ಇಡೀ ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಸಂಚಲನ ಸೃಷ್ಟಿಸಿದೆ. ಕಣ್ಣು ಹಾಯಿಸಿದ ಕಡೆಯಲ್ಲೆಲ್ಲಾ ನೋಟುಗಳು, ಚಿನ್ನದ ರಾಶಿ ಪತ್ತೆಯಾಗಿದ್ದು, ಇವರ ಒಟ್ಟು ಆಸ್ತಿಯ ಮೌಲ್ಯ ಬರೋಬ್ಬರಿ ₹200 ಕೋಟಿಗೂ ಅಧಿಕ …

Read More »

ಚಿಕ್ಕೋಡಿಯಲ್ಲಿ ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರ ದಾಳಿ

ಚಿಕ್ಕೋಡಿಯಲ್ಲಿ ರೌಡಿಶೀಟರ್‌ಗಳ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುರುತಿಸಲ್ಪಟ್ಟ ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ. DySP ಅವರ ಮಾರ್ಗದರ್ಶನದಲ್ಲಿ ಸಿಪಿಐ, ನೇತೃತ್ವದಲ್ಲಿ ಪಿಎಸ್‌ಐ, ಹಾಗೂ ಪೊಲೀಸ್ ಸಿಬ್ಬಂದಿಇಂದ ಈ ಕಾರ್ಯಾಚರಣೆ ನಡೆಸಿದ್ದಾರೆ. ಒಟ್ಟು 7 ರೌಡಿಶೀಟರ್‌ಗಳ ಮನೆಗಳಿಗೆ ಭೇಟಿ ನೀಡಿ ಅವರ ಚಟುವಟಿಕೆಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ. ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಆರೋಪ ಹೊಂದಿರುವ ರೌಡಿಶೀಟರ್‌ಗಳ ಮೇಲೆ ನಿಗಾ …

Read More »

ಜೂನ್ ತಿಂಗಳಲ್ಲಿ ಸಾಲು ಸಾಲು ಖಗೋಳ ವಿಸ್ಮಯ: ಆಗಸದಲ್ಲಿ ಮೂಡಲಿದೆ ಕೌತುಕ!

ಬೆಂಗಳೂರು: ಖಗೋಳ ಆಸಕ್ತರಿಗೆ ಹಾಗೂ ಸಾರ್ವಜನಿಕರಿಗೆ ಜೂನ್ ತಿಂಗಳು ವಿಶೇಷ ರಸದೌತಣ ನೀಡಲು ಸಜ್ಜಾಗಿದೆ. ಈ ತಿಂಗಳಲ್ಲಿ ಬ್ಯಾಕ್-ಟು-ಬ್ಯಾಕ್ ಎಂಬಂತೆ ಸಾಲು ಸಾಲು ಖಗೋಳ ವಿಸ್ಮಯಗಳು ಜರುಗಲಿದ್ದು, ಆಕಾಶದಲ್ಲಿ ಅಪರೂಪದ ಕೌತುಕಗಳು ಸೃಷ್ಟಿಯಾಗಲಿವೆ. ವಿಶೇಷವೆಂದರೆ, ಈ ಅದ್ಭುತ ವಿದ್ಯಮಾನಗಳನ್ನು ಯಾವುದೇ ವಿಶೇಷ ಉಪಕರಣಗಳಿಲ್ಲದೆ ಬರಿಗಣ್ಣಿನಿಂದಲೇ ವೀಕ್ಷಿಸಿ ಕಣ್ತುಂಬಿಕೊಳ್ಳಬಹುದು. ಇತ್ತೀಚೆಗಷ್ಟೇ ನಡೆದ ‘ಗುರು-ಶುಕ್ರ ಸಂಯೋಗ’ದ ಅಪರೂಪದ ಘಟನೆ ಜನರಲ್ಲಿ ಕುತೂಹಲ ಮೂಡಿಸಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ರೋಮಾಂಚಕ ವಿದ್ಯಮಾನಗಳು ಸಂಭವಿಸಲಿವೆ. ಜೂನ್ …

Read More »

ತಾಯಿಗೆ ಮಗಳ ಅಶ್ಲೀಲ ಫೋಟೋ ಕಳಿಸಿ ಬ್ಲ್ಯಾಕ್‌ಮೇಲ್‌ – ಆರೋಪಿ ಅರೆಸ್ಟ್‌

ಚಿಕ್ಕಮಗಳೂರು: ತರಿಕೆರೆ ತಾಲೂಕಿನ ಲಕ್ಕವಳ್ಳಿ  ಮೂಲದ ಮಹಿಳೆಗೆ ಆಕೆಯ ಮಗಳ ಅಶ್ಲೀಲ ಫೋಟೋ ಕಳಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಮೂಲದ ಯೋಗೀಶ್ ಬಂಧಿತ ಆರೋಪಿ. ಈತ 25 ವರ್ಷದ ಯುವತಿಯ ಅಶ್ಲೀಲ ಫೋಟೋವನ್ನು ಆಕೆಯ ತಾಯಿಗೆ ಕಳಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದ. ಅಲ್ಲದೇ ಹಣ ಕೊಡದಿದ್ರೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದ. ರಾತ್ರಿ ವೇಳೆ ಫೋನ್ ಮಾಡಿ ಹಣ ಕೊಡುವಂತೆ ಆರೋಪಿ …

Read More »

ನನ್ನ, ಸಿದ್ದರಾಮಯ್ಯ ನಡುವೆ ಭಿನ್ನಾಭಿಪ್ರಾಯ ಇಲ್ಲ: ಸತೀಶ್ ಜಾರಕಿಹೊಳಿ ಸ್ಪಷ್ಟನೆ

ಬೆಂಗಳೂರು: ಸಿದ್ದರಾಮಯ್ಯ  ಮತ್ತು ನಮ್ಮ ನಡುವೆ ಭಿನ್ನಾಭಿಪ್ರಾಯ ಇಲ್ಲ. ನನ್ನ, ಸಿದ್ದರಾಮಯ್ಯ ನಡುವಿನ ಸಂಬಂಧದ ಬಗ್ಗೆ ಚರ್ಚೆ ಅನವಶ್ಯಕ. ಅವರ, ನನ್ನ ಸಂಬಂಧ ಹಾಳಾಗಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ  ಸ್ಪಷ್ಟನೆ ನೀಡಿದ್ದಾರೆ. ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ ನಡುವೆ ಭಿನ್ನಮತ ವಿಚಾರದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದಲಿನಿಂದಲೂ ನಾನೂ ಹೇಳಿದ್ದೇನೆ. ನಮ್ಮ ನಡುವೆ ಗೊಂದಲವೇ ಇಲ್ಲ. ಕೆಲವು ಐಟಿ ಸೆಲ್‌ನವರು ಸ್ವಲ್ಪ ಹೆಚ್ಚಿನ ಪ್ರಚಾರ ಮಾಡಿದರು. ನಮಗೆ ಗೊತ್ತಿರುವ …

Read More »