ಬೆಂಗಳೂರು : ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಎರಡು ತಿಂಗಳಿಗೆ ಅರ್ಧ ಕೆಜಿ ಕೆನೆಭರಿತ ಪೌಷ್ಠಿಕ ಹಾಲಿನ ಪುಡಿಯನ್ನು ಅವರ ಮನೆಗೆ ವಿತರಿಸಲು ಕೆಎಂಎಫ್ ಮಾಡಿಕೊಂಡ ಮನವಿಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಗುರುವಾರ ರಾತ್ರಿ ಮುಖ್ಯಮಂತ್ರಿಗಳ ಗೃಹ ಕಛೇರಿಯಲ್ಲಿ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ್ದಾರೆ. ಈ ಮೂಲಕ ಮಕ್ಕಳ …
Read More »ಆದಿತ್ಯ ಬಿಸ್ವಾಸ್ ಬೆಳಗಾವಿ ಜಿಲ್ಲಾ ಆಸ್ಪತ್ರೆ ಮತ್ತು ಬಿಮ್ಸ್ ಆಡಳಿತಾಧಿಕಾರಿ ತಕ್ಷಣದಿಂದಲೇ ಅಧಿಕಾರ: B.S.Y.
ಬೆಳಗಾವಿ : ಬೆಳಗಾವಿ ಜಿಲ್ಲಾ ಆಸ್ಪತ್ರೆ ಮತ್ತು ಬಿಮ್ಸ್ ಆಡಳಿತಾಧಿಕಾರಿಯನ್ನಾಗಿ ಪ್ರಾದೇಶಿಕ ಆಯುಕ್ತ ಅಮ್ಲನ್ ಆದಿತ್ಯ ಬಿಸ್ವಾಸ್ ಅವರನ್ನು ನೇಮಿಸಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಜಿಲ್ಲೆಯ ಕೊರೋನಾ ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸಿದ ನಂತರ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಆದಿತ್ಯ ಬಿಸ್ವಾಸ್ ತಕ್ಷಣ ಅಧಿಕಾರ ವಹಿಸಿಕೊಳ್ಳಲಿದ್ದು, ಅಲ್ಲಿನ ಸಮಸ್ಯೆಗಳನ್ನು ಪರಿಹರಿಸಿ ಉತ್ತಮ ಆಡಳಿತ ನೀಡಲಿದ್ದಾರೆ ಎಂದು ಸಿಎಂ …
Read More »ಪಡಿತರ ಚೀಟಿ ಹೊಂದಿಲ್ಲದವರಿಗೆ ಗುಡ್ ನ್ಯೂಸ್: ಉಚಿತ ರೇಷನ್ ಗಾಗಿ ಆನ್ ಲೈನ್ ಮೂಲಕವೂ ಕಾರ್ಡ್ ನೋಂದಣಿಗೆ ಅವಕಾಶ
ಪಡಿತರ ಚೀಟಿ ಇದ್ದವರಿಗೆ ಸರ್ಕಾರದ ವಿಶೇಷ ಯೋಜನೆ ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಅನ್ನ ಯೋಜನೆಯಡಿ ಪಡಿತರ ಸಿಗಲಿದೆ. ಕೊರೊನಾ ಕಾರಣದಿಂದಾಗಿ ಬಡವರಿಗೆ ಉಚಿತ ಪಡಿತರ ನೀಡುವುದಾಗಿ ಸರ್ಕಾರ ಘೋಷಿಸಿತ್ತು. ಅನೇಕ ರಾಜ್ಯಗಳು ತಮ್ಮ ನಾಗರಿಕರಿಗೆ ಉಚಿತ ಪಡಿತರವನ್ನು ನೀಡುತ್ತಿವೆ. ಈಗ್ಲೂ ನಿಮ್ಮ ಬಳಿ ಪಡಿತರ ಚೀಟಿ ಇಲ್ಲವೆಂದ್ರೆ ಚಿಂತಿಸುವ ಅಗತ್ಯವಿಲ್ಲ. ಸ್ಮಾರ್ಟ್ಫೋನ್ನಿಂದ ಪಡಿತರ ಚೀಟಿಗಾಗಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ನೀವು ಮೊದಲು ರಾಜ್ಯದ …
Read More »ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆ ಇಲ್ಲ: ಶಿಕ್ಷಣ ಸಚಿವ ಸುರೇಶ್ ಕುಮಾರ್
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ನಡೆಸದಿರಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಪರೀಕ್ಷೆ ಇಲ್ಲದೆ ಯಾವ ರೀತಿ ಗ್ರೇಡ್ ಕೊಡಬೇಕು ಎಂದು ಬಹಳ ಯೋಚಿಸಬೇಕಿದೆ ಎಂದು ಅವರು ಹೇಳಿದ್ದಾರೆ. ಮಕ್ಕಳ ಯೋಗಕ್ಷೇಮ ಮತ್ತು ಮಕ್ಕಳ ಶೈಕ್ಷಣಿಕ ಭವಿಷ್ಯದ ಬಗ್ಗೆ ವಿಸ್ತೃತ ಚರ್ಚೆ ನಡೆಸಿದ್ದೇವೆ ಎಂದು ಅವರು ಹೇಳಿದ್ದರೆ. ಎಸ್ಸೆಸ್ಸೆಎಲ್ಸಿ, ಪಿಯುಸಿ ಪರೀಕ್ಷೆ ಈ ವರ್ಷ ಬಹುಚರ್ಚಿತ ವಿಚಾರ . ಕಳೆದ ವರ್ಷ ಪರಿಸ್ಥಿತಿ …
Read More »ಕೋವಿಡ್ ಕೇರ್ ಸೆಂಟರ್ ನಲ್ಲಿ ವಾಸ್ತವ್ಯ ಹೂಡಿ ರೋಗಿಗಳಿಗೆ ಉತ್ತೇಜನ ನೀಡಲು ಮುಂದಾದ ಶಾಸಕ ರೇಣುಕಾಚಾರ್ಯ
ದಾವಣಗೆರೆ: ಕೊರೋನಾ ಸೋಂಕಿನ ವಿಚಾರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ದಾವಣಗೆರೆಯ ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದಾರೆ. ಕೊರೋನಾ ಸೋಂಕಿತರು ಉಳಿದುಕೊಂಡಿರುವ ದಾವಣಗೆರೆಯ ಅರಬಗಟ್ಟೆ ಕೋವಿಡ್ ಕೇಂದ್ರದಲ್ಲಿ ಪ್ರತ್ಯೇಕ ಕೊಠಡಿಯಲ್ಲಿ ಶಾಸಕ ರೇಣುಕಾಚಾರ್ಯ ವಾಸ್ತವ್ಯ ಹೂಡಿದ್ದಾರೆ. ಸೋಂಕಿತರಲ್ಲಿ ಆತ್ಮವಿಶ್ವಾಸ ಮೂಡಲು, ಅವರಿಗೆ ಉತ್ತೇಜನ ನೀಡಲು ಈ ಕ್ರಮ ಕೈಗೊಳ್ಳಲಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ಅರಬಗಟ್ಟೆಯ ಕೋವಿಡ್ ಕೇರ್ ಸೆಂಟರ್ ನಲ್ಲಿ ವಾಸ್ತವ್ಯ ಮಾಡಿ ಸೋಂಕಿತರಿಗೆ …
Read More »ಬೆಳಗಾವಿ: ಮುಖ್ಯಮಂತ್ರಿಗೆ ಮುತ್ತಿಗೆ ಹಾಕಲು ಬಂದಿದ್ದ ರೈತರು ವಶಕ್ಕೆ
ಬೆಳಗಾವಿ: ಬೆಳಗಾವಿಗೆ ಆಗಮಿಸಿದ ಮುಖ್ಯಮಂತ್ರಿಗೆ ರೈತರ ಪ್ರತಿಭಟನೆಯ ಬಿಸಿ ತಟ್ಟಿದ್ದು, ಕಬ್ಬಿನ ಬಾಕಿ ಬಿಲ್ ಗಾಗಿ ಆಗ್ರಹಿಸಿ ರೈತರು ಶುಕ್ರವಾರ ಪ್ರತಿಭಟನೆ ನಡೆಸಿದರು. ಸುವರ್ಣ ವಿಧಾನಸೌಧದಲ್ಲಿ ಪ್ರಮುಖ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಗೆ ಆಗಮಿಸಿದ ಮುಖ್ಯಮಂತ್ರಿಗಳಿಗೆ ರೈತರು ಪ್ರತಿಭಟನೆ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಶುಕ್ರವಾರ ಬೆಳಗ್ಗೆ ಸುವರ್ಣ ವಿಧಾನಸೌಧ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ರೈತರು ಪ್ರತಿಭಟನೆ ನಡೆಸಿದರು. ಕಬ್ಬಿನ ಬಿಲ್ ಬಾಕಿ ಪಾವತಿಸಲು ಸಿಎಂ ಕ್ರಮ ಕೈಗೊಳ್ಳಬೇಕು. ತರಕಾರಿ ಬೆಳೆದ …
Read More »ಉಡುಪಿ: ಧಾರಕಾರ ಮಳೆಗೆ ಮುಳುಗಿತು ಕಾರು- ಬೈಕ್ ಗಳು
ಉಡುಪಿ: ನಗರದಲ್ಲಿ ಗುರುವಾರ ರಾತ್ರಿಯಿಂದ ಸುರಿದ ಧಾರಾಕಾರ ಮಳೆಯಿಂದಾಗಿ ಹಲವೆಡೆ ಅವಾಂತಗಳು ಸಂಭವಿಸಿದೆ, ನಗರದ ಬಿಗ್ ಬಜಾರ್ ಪಾರ್ಕಿಂಗ್ ಪ್ರದೇಶದಲ್ಲಿ ಮಳೆ ನೀರು ನುಗ್ಗಿ ಹತ್ತಾರು ಬೈಕ್ ಗಳು ಮತ್ತು ಕಾರುಗಳು ನೀರಿನಲ್ಲಿ ಮುಳುಗಿದೆ. ತಡ ರಾತ್ರಿಯಿಂದ ಸುರಿದ ಭಾರಿ ಮಳೆಯಿಂದಾಗಿ ಬಿಗ್ ಬಜಾರ್ ಕಟ್ಟಡದ ಪಾರ್ಕಿಂಗ್ ಪ್ರದೇಶ ಸಂಪೂರ್ಣ ಜಲಾವೃತಗೊಂಡಿದೆ. ಕಟ್ಟಡದ ನೆಲ ಮಳಿಗೆಗೆ ಮಳೆ ನೀರು ತುಂಬಿಕೊಂಡು ಪರಿಣಾಮ ಪಾರ್ಕಿಂಗ್ ಮಾಡಲಾಗಿದ್ದ ಆರು ಕಾರುಗಳು ಹಾಗೂ ಹತ್ತಕ್ಕೂ …
Read More »ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಮುಹೂರ್ತ ಫಿಕ್ಸ್: ಜುಲೈ 3ನೇ ವಾರ ಪರೀಕ್ಷೆ
ಕೊರೊನಾ ಎರಡನೇ ಅಲೆಯ ಅಬ್ಬರದ ನಡುವೆಯೂ ರಾಜ್ಯ ಸರಕಾರ ಎಸ್ ಎಸ್ ಎಲ್ ಸಿ ಪರೀಕ್ಷೆ ಯನ್ನು ಜುಲೈ 3 ನೇ ವಾರದಲ್ಲಿ ನಡೆಸಲು ತೀರ್ಮಾನಿಸಿದೆ. ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಗಳಿಗೆ 3 ವಿಷಯದಲ್ಲಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯಗಳು ಸೇರಿ ಒಂದೇ ಪರೀಕ್ಷೆ ನಡೆಯಲು ನಿರ್ಧರಿಸಲಾಗಿದ್ದು, 120 ಅಂಕಗಳಿಗೆ ಮಲ್ಟಿಪಲ್ ಚಾಯ್ಸ್ ಪ್ರಶ್ನೆ ಪತ್ರಿಕೆ ಇರುತ್ತದೆ. ಪ್ರತಿ ವಿಷಯಕ್ಕೆ 40 …
Read More »5.7 ಲಕ್ಷದ ನಶೆ ಮಾತ್ರೆ, ಇಬ್ಬರು ವಶಕ್ಕೆ
ಹೊಸಪೇಟೆ (ವಿಜಯನಗರ): ಅಕ್ರಮವಾಗಿ ಸಾಗಿಸುತ್ತಿದ್ದ ₹5.7 ಲಕ್ಷ ಮೌಲ್ಯದ ಎಲ್.ಎಸ್.ಡಿ. ನಶೆ ಮಾತ್ರೆ ಹಾಗೂ ಇಬ್ಬರನ್ನು ಇಲ್ಲಿನ ಚಿತ್ತವಾಡ್ಗಿ ಪೊಲೀಸರು ಗುರುವಾರ ವಶಕ್ಕೆ ತೆಗೆದುಕೊಂಡಿದ್ದಾರೆ. ಬೆಂಗಳೂರಿನ ರಘುನಾಥ ಕುಮಾರ್, ಹಿರಿಯೂರಿನ ಸೊಲಮನ್ ಹಾಗೂ ಅವರಿಂದ ಹುಂಡೈ ಕಾರು, ಎರಡು ಮೊಬೈಲ್, ₹35 ಸಾವಿರ ನಗದು ಸಹ ವಶಪಡಿಸಿಕೊಂಡಿದ್ದಾರೆ. ಎಲ್ಲದರ ಒಟ್ಟು ಮೊತ್ತ ₹16.2 ಲಕ್ಷವಾಗಲಿದೆ. ‘ನಗರದ ಕಾಲೇಜು ರಸ್ತೆಯ ಚೆಕ್ಪೋಸ್ಟ್ನಲ್ಲಿ ಕಾರು ತಡೆದು ಪರಿಶೀಲನೆ ನಡೆಸಿದಾಗ ನಶೆ ಮಾತ್ರೆ ಇರುವುದು …
Read More »ಕಪ್ಪು ಶಿಲೀಂಧ್ರ ಚುಚ್ಚುಮದ್ದು ಕಾಳಸಂತೆಯಲ್ಲಿ ಮಾರಾಟ: ಹುಬ್ಬಳ್ಳಿಯಲ್ಲಿ ಮೂವರ ಬಂಧನ
ಹುಬ್ಬಳ್ಳಿ: ಕಪ್ಪು ಶಿಲೀಂಧ್ರ (ಬ್ಲ್ಯಾಕ್ ಫಂಗಸ್) ಚುಚ್ಚುಮದ್ದು ಕಾಳಸಂತೆಯಲ್ಲಿ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಲ್ಲಿನ ಖಾಸಗಿ ಆಸ್ಪತ್ರೆಯೊಂದರ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಇಲ್ಲಿನ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಆಸ್ಪತ್ರೆಯಲ್ಲಿ ಪಿಆರ್ ಒ, ವಾರ್ಡ್ ಬಾಯ್ ಸೇರಿದಂತೆ ಮೂವರನ್ನು ಚುಚ್ಚುಮದ್ದು ಕಾಳಸಂತೆಯಲ್ಲಿ ಮಾರಾಟ ಆರೋಪದಡಿ, ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇಲ್ಲಿನ ಕಿಮ್ಸ್ ಆಸ್ಪತ್ರೆ ಹಿಂಭಾಗದ ಬೈಲಪ್ಪನವರ ನಗರದ ಪೈ ಹೊಟೇಲ್ ಬಳಿಯ ಔಷಧ ಅಂಗಡಿಯಲ್ಲಿ ಕಾಳಸಂತೆಯಲ್ಲಿ ಮಾರಾಟ …
Read More »
Laxmi News 24×7