Breaking News

Laxminews 24x7

ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಧೂಳಿಪಟ, ಬಹುಮತದೊಂದಿಗೆ ಕೈ ಅಧಿಕಾರಕ್ಕೆ: ಎಸ್.ಆರ್. ಪಾಟೀಲ

ಬೀದರ್: ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಜನಾದೇಶದಿಂದ ಬಂದ ಸರ್ಕಾರ ಇಲ್ಲ. ಹಣದ ಹೊಳೆ ಹರಿಸಿ ಅಧಿಕಾರಕ್ಕೆ ಬಂದಿದೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಧೂಳಿಪಟವಾಗಲಿದ್ದು, ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ ಭವಿಷ್ಯ ನುಡಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಉತ್ತರ ಕರ್ನಾಟಕ ಭಾಗದವರು. ಅಭಿವೃದ್ಧಿ ಕೆಲಸಗಳು ನಡೆಯಬೇಕಾದರೆ ಸ್ಥಿರ ಸರ್ಕಾರ ಇರಬೇಕು ಎನ್ನುವದು ನಮ್ಮ …

Read More »

2ಎ ಮೀಸಲಾತಿ ನೀಡದಿದ್ದರೆ ಅ. 1ರಿಂದ ವಿವಿಧ ಹಂತದ ಹೋರಾಟ: ಬಸವಜಯ ಮೃತ್ಯುಂಜಯ ಸ್ವಾಮೀಜಿ

ಹುಬ್ಬಳ್ಳಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಸೆ.15 ರೊಳಗೆ 2ಎ ಮೀಸಲಾತಿ ನೀಡದಿದ್ದರೆ, ಅ 1ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ ಸೇರಿದಂತೆ ವಿವಿಧ ಹಂತದ ಹೋರಾಟ ಕೈಗೊಳ್ಳಲು, ಪಂಚಮಸಾಲಿ ಮೀಸಲಾತಿ ಚಳವಳಿಗಾರರ ದುಂಡು ಮೇಜಿನ ಸಭೆ ನಿರ್ಣಯಿಸಿದೆ. ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಸವಜಯ ಮೃತ್ಯುಂಜಯ ಸ್ವಾಮೀಜಿ, 2ಎ ಮೀಸಲಾತಿಗೆ ಒತ್ತಾಯಿಸಿ ಕೂಡಲಸಂಗಮದಿಂದ ಬೇಂಗಳೂರುವರೆಗೆ ನಡೆಸಿದ ಪಾದಯಾತ್ರೆ ಹಾಗೂ ಹೋರಾಟದ ವೇಳೆ ಅಂದಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಗೃಹ …

Read More »

ಪಿಯುಸಿಯಲ್ಲಿ ಶೇ.94 ಅಂಕ ಪಡೆದ ವಿದ್ಯಾರ್ಥಿಯನ್ನು ಕೂಲಿ ಕೆಲಸಕ್ಕಿಳಿಸಿದ ಚಾಮರಾಜನಗರ ಆಕ್ಸಿಜನ್​ ದುರಂತ!

ಚಾಮರಾಜನಗರ: 2021ರ ಮೇ 2ರಂದು ಚಾಮರಾಜನಗರದ ಕೋವಿಡ್​ ಆಸ್ಪತ್ರೆಯಲ್ಲಿ ಸಂಭವಿಸಿದ ಆಕ್ಸಿಜನ್​ ದುರಂತಕ್ಕೆ 36 ಮಂದಿ ಬಲಿಯಾಗಿದ್ದರು. ಇಂದಿಗೆ ಆಕ್ಸಿಜನ್ ದುರಂತಕ್ಕೆ ನೂರು ದಿನ ಆಗಿದ್ದು, ಮೃತರ ಕುಟುಂಬಗಳು ಕಣ್ಣೀರಿನಲ್ಲಿ ಕೈ ತೊಳೆಯುತ್ತಿವೆ. ಈ ಪೈಕಿ ದೊಡ್ಡಯ್ಯ ಕುಟುಂಬವೂ ಒಂದು. ಚಾಮರಾಜನಗರ ತಾಲೂಕು ಮಂಗಲ ಹೊಸೂರು ಗ್ರಾಮದ ದೊಡ್ಡಯ್ಯ ಮೃತಪಟ್ಟ ಬಳಿಕ ಕುಟುಂಬ ಭಾರೀ ಅಂಕಷ್ಟಕ್ಕೆ ಸಿಲುಕಿದೆ. ಜೀವನೋಪಾಯಕ್ಕೆ ಬೇರೆ ದಾರಿ ಇಲ್ಲದೆ ದೊಡ್ಡಯ್ಯರ ಮಗ ಶಶಾಂಕ್​ ವಿದ್ಯಾಭ್ಯಾಸವನ್ನು ಅರ್ಧಕ್ಕೆ …

Read More »

ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ: ಬಿ.ವೈ.ವಿಜಯೇಂದ್ರ

ಕಲಬುರಗಿ: ನಾನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು‌ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ನಾನು ಬಿಜೆಪಿ ಉಪಾಧ್ಯಕ್ಷನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ‌. ಹುದ್ದೆಯನ್ನು ಹುಡುಕಿಕೊಂಡು ನಾನು ಹೋಗಲ್ಲ ಎಂದರು. ಬೊಮ್ಮಾಯಿ ಸರ್ಕಾರದಲ್ಲೂ ನಾನು ಸಚಿವ ಸ್ಥಾನ, ಡಿಸಿಎಂ ಸ್ಥಾನದ ಆಕಾಂಕ್ಷಿಯಾಗಿರಲಿಲ್ಲ. ಆದರೆ, ಯಾವುದೇ ಜವಾಬ್ದಾರಿ ನೀಡಿದರೂ ಅದನ್ನು ನಿಭಾಯಿಸುತ್ತೇನೆ ಎಂದರು. ಯಡಿಯೂರಪ್ಪನವರು ತಾವು ರಾಜೀನಾಮೆ ನೀಡುವಾಗ ಯಾವುದೇ ಬೇಡಿಕೆ ಇಟ್ಟಿರಲಿಲ್ಲ. ನನಗೆ ಇನ್ನೂ …

Read More »

ಸರ್ಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಛ ನಿಷೇಧಿಸಿ ಆದೇಶ: ಹೂವು ಬೆಳೆಗಾರರ ಪ್ರತಿಭಟನೆ

ಬೆಂಗಳೂರು: ‘ಸರ್ಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಛ ಹಾಗೂ ಹೂವಿನ ಹಾರ ನಿಷೇಧಿಸಿರುವ ಆದೇಶವನ್ನು ಕೂಡಲೇ ವಾಪಸ್ ಪಡೆಯಬೇಕು’ ಎಂದು ಆಗ್ರಹಿಸಿ ದಕ್ಷಿಣ ಭಾರತ ಪುಷ್ಪ ಬೆಳೆಗಾರರ ಸಂಘದ ನೇತೃತ್ವದಲ್ಲಿ ಹೂವಿನ ಬೆಳೆಗಾರರು ಮತ್ತು ಮಾರಾಟಗಾರರು ಹೆಬ್ಬಾಳದ ಬೆಂಗಳೂರು ಅಂತರರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರದ (ಐಎಫ್‌ಎಬಿ) ಬಳಿ ಗುರುವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ರಾಜ್ಯದ ಎಲ್ಲ ಪುಷ್ಪ ಬೆಳೆಗಾರರು ಹಾಗೂ ಮಾರಾಟಗಾರರ ಸಂಘಟನೆಗಳ ಸದಸ್ಯರು ಭಾಗವಹಿಸಿದ್ದರು. ಕೈಯಲ್ಲಿ ಹೂಗುಚ್ಚ, ಹಾರ, ಹಣ್ಣಿನ ಬುಟ್ಟಿಯನ್ನು …

Read More »

ಬ್ಲಾಕ್‍ಮೇಲ್‍ಗಳಿಗೆ ಜಗ್ಗಬೇಡಿ, ಸಿಎಂಗೆ ಹೈಕಮಾಂಡ್ ಅಭಯ

ಬೆಂಗಳೂರು,ಆ.12- ಸಚಿವರು ಮತ್ತು ಶಾಸಕರ ಬ್ಲಾಕ್‍ಮೇಲ್‍ಗಳಿಗೆ ಯಾವುದೇ ಕಾರಣಕ್ಕೂ ಜಗ್ಗಬಾರದು. ಎಂಥದೇ ಪರಿಸ್ಥಿತಿ ಎದುರಾದರೂ ನಾವು ನೋಡಿಕೊಳ್ಳುತ್ತೇವೆ ಎಂದು ಕೇಂದ್ರ ಬಿಜೆಪಿ ವರಿಷ್ಠರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಯ ನೀಡಿದ್ದಾರೆ. ಉಳಿದಿರುವ ಅವಧಿಯಲ್ಲಿ ಆಡಳಿತದ ಕಡೆ ಹೆಚ್ಚು ಗಮನಹರಿಸಿ ಜನಪರವಾದ ಕಾರ್ಯಕ್ರಮಗಳನ್ನು ರೂಪಿಸಬೇಕು. 2023ರ ಚುನಾವಣೆಯಲ್ಲಿ ಪಕ್ಷವು ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲು ಶ್ರಮಿಸಬೇಕೆಂದು ಸೂಚಿಸಿದ್ದಾರೆ. ನಿರೀಕ್ಷಿತ ಖಾತೆ ಸಿಗದೆ ಅಸಮಾಧಾನಗೊಂಡು ಕ್ಯಾತೆ ತೆಗೆದಿದ್ದ ಆನಂದ್ ಸಿಂಗ್ …

Read More »

ಬೆಂಗಳೂರಿನಲ್ಲಿ ಬಿಎಸ್ ಯಡಿಯೂರಪ್ಪರನ್ನು ಭೇಟಿಯಾದ ಆನಂದ್ ಸಿಂಗ್ ಹಾಗೂ ಶಾಸಕ ರಾಜೂಗೌಡ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಹಂಚಿಕೆ ಮಾಡಿರುವ ಖಾತೆಯ ಬದಲಾವಣೆಗೆ ಪಟ್ಟು ಹಿಡಿದಿರುವ ಸಚಿವ ಆನಂದ್ ಸಿಂಗ್ ಇದೀಗ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಆದರೆ, ಬಿಎಸ್ವೈ ಭೇಟಿ ನಂತರ ಯಾವುದೇ ಪ್ರತಿಕ್ರಿಯೆ ನೀಡದೆ ಆನಂದ್ ಸಿಂಗ್ ತೆರಳಿದ್ದಾರೆ. ಈ ಮಧ್ಯೆ ಯಡಿಯೂರಪ್ಪ ಆಪ್ತ ರಾಜೂಗೌಡ ಅವರು ಆನಂದ್ ಸಿಂಗ್ ಅವರನ್ನು ಭೇಟಿ ಮಾಡಿ ಅವರನ್ನು ಬೆಂಗಳೂರಿಗೆ ಕರೆತರಲು ಯಶಸ್ವಿ ಆಗಿದ್ದಾರೆ. …

Read More »

‘ಖಾತೆ ಬದಲಾವಣೆಗೆ ಪಟ್ಟು ಹಿಡಿದವರನ್ನು ಸಂಪುಟದಿಂದ ವಜಾ ಮಾಡಿ’

ಬೆಳಗಾವಿ: ತಮಗೆ ನೀಡಲಾದ ಖಾತೆಗಳ ಗೌಪ್ಯತೆ ಕಾಪಾಡದ ಸಚಿವರನ್ನು ಸಂಪುಟದಿಂದ ವಜಾ ಮಾಡುವಂತೆ ಸಿಎಂಗೆ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯಪಾಲರಿಗೆ ಪತ್ರ ಬರೆದಿರುವ ಭೀಮಪ್ಪ ಗಡಾದ ಅವರು, 1992ರಲ್ಲಿ ಸಚಿವರಿಗಾಗಿ ಆಡಳಿತ ಸುಧಾರಣೆ ಸಚಿವಾಲಯದಿಂದ ನೀತಿ ಸಂಹಿತೆ ಜಾರಿ ಮಾಡಲಾಗಿದೆ. ಆದರೆ ಸಚಿವರಾದ ಆನಂದ ಸಿಂಗ್, ಎಂಟಿಬಿ ನಾಗರಾಜ್, ಶ್ರೀರಾಮುಲು, ಶಶಿಕಲಾ ಜೊಲ್ಲೆ ಪ್ರಬಲ ಖಾತೆಗಳಿಗಾಗಿ ಲಾಬಿ ಮಾಡಿ ನೀತಿ ಸಂಹಿತೆಯಲ್ಲಿನ ಕ್ರಮ ಸಂಖ್ಯೆ 13 …

Read More »

ಆ.23ರಿಂದ ಶಾಲಾ-ಕಾಲೇಜು ಪ್ರಾರಂಭ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್

ಬೆಂಗಳೂರು,ಆ.12-ಕೋವಿಡ್ ಸೋಂಕು ಉಲ್ಬಣವಾಗದಿದ್ದರೆ ಈಗಾಗಲೇ ಪ್ರಕಟಿಸಿರುವಂತೆ ಶಾಲಾಕಾಲೇಜುಗಳನ್ನು ಆ.23ರಿಂದ ಪ್ರಾರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು. ಸಾರ್ವಜನಿಕ ಗ್ರಂಥಾಲಯ ಇಲಾಖೆ ಗ್ರಂಥಾಲಯ ದಿನಾಚರಣೆ ಅಂಗವಾಗಿ ಕಬ್ಬನ್ ಉದ್ಯಾನವನದಲ್ಲಿರುವ ರಾಜ್ಯ ಕೇಂದ್ರ ಗ್ರಂಥಾಲಯದಲ್ಲಿ ಏರ್ಪಡಿಸಿದ್ದ ಪುಸ್ತಕ ಪ್ರದರ್ಶನವನ್ನು ಉದ್ಘಾಟಿಸಿ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದದರು. ಮಕ್ಕಳಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿರುವುದನ್ನು ಗಮನಿಸಿದ್ದೇನೆ. ಯಾವ ವಯಸ್ಸಿನವರಲ್ಲಿ ಸೋಂಕು ಹೆಚ್ಚಾಗುತ್ತಿದೆ ಮತ್ತು ಅದರ ತೀವ್ರತೆ ಬಗ್ಗೆ …

Read More »

ಗೊಂದಲಗಳನ್ನು ನಿಭಾಯಿಸಲು ಸಿಎಂ ಬೊಮ್ಮಾಯಿ ಸಮರ್ಥರಿದ್ದಾರೆ : ದೇವೇಗೌಡರು

ನವದೆಹಲಿ,ಆ.12-ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗೊಂದಲಗಳನ್ನು ನಿಭಾಯಿಸಲು ಸಮರ್ಥರಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ನಡೆಯುವ ವಿದ್ಯಮಾನಗಳ ಬಗ್ಗೆ ಚರ್ಚೆ ಮಾಡುವುದಿಲ್ಲ. ಆದರೆ ಗೊಂದಲಗಳನ್ನು ನಿಭಾಯಿಸಲು ಮುಖ್ಯಮಂತ್ರಿ ಸಮರ್ಥರಿದ್ದಾರೆ ಎಂದುಕೊಂಡಿದ್ದೇನೆ. ಬೊಮ್ಮಾಯಿ ಅವರು ಮತ್ತು ನಾನು ಉತ್ತಮ ಗೆಳೆಯರು. ಮುಖ್ಯಮಂತ್ರಿಯಾದ ಬಳಿಕ ನನ್ನ ಮನೆಗೆ ಬಂದಿದ್ದರು. ಆಗ ರಾಜ್ಯ ಸರ್ಕಾರಕ್ಕೆ ನಮ್ಮಿಂದ ಏನೂ ತೊಂದರೆಯಾಗುವುದಿಲ್ಲ. ನೆಲ-ಜಲ …

Read More »