ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಸದ್ದು ಜೋರಾಗಿದೆ. ಅದರಲ್ಲೂ ಸ್ವತಹ ಸಿಎಂ ಯಡಿಯೂರಪ್ಪ ವಿರುದ್ಧವೇ ಅವರ ಸಚಿವ ಸಂಪುಟದ ಸಚಿವ ಸಿ.ಪಿ.ಯೋಗೇಶ್ವರ್ ಸಮರ ಸಾರಿದ್ದಾರೆ ಎನ್ನಲಾಗಿತ್ತು. ಹೀಗಾಗಿ ಸಿಎಂ ಯಡಿಯೂರಪ್ಪ ಬದಲಾವಣೆಯನ್ನು ವಿರೋಧಿಸಿ, ಅವರ ಬೆಂಬಲಕ್ಕೆ 18 ಬಿಜೆಪಿ ಶಾಸಕರು ನಿಂತಿದ್ದು, ಯೋಗೇಶ್ವರ್ ಪಕ್ಷಕ್ಕೆ ಆಮದು ಸರಕು, ಸಚಿವ ಸ್ಥಾನದಿಂದ ಕಿತ್ತೊಗೆಯಿರಿ, ನಿಮ್ಮ ಜೊತೆ ನಾವಿದ್ದೇವೆ ಎಂದಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಸಚಿವ ಸಂಪುಟದಿಂದ ಸಚಿವ ಸಿ.ಪಿ.ಯೋಗೇಶ್ವರ್ ಔಟ್ ಆಗ್ತಾ …
Read More »ಸಿಎಂ ಬದಲಾವಣೆ ವಿಚಾರಗಳು ಏಕೆ ಹುಟ್ಟಿಕೊಳ್ಳುತ್ತಿವೆಯೋ ನನಗೆ ಗೊತ್ತಾಗುತ್ತಿಲ್ಲ ; ಜಗದೀಶ ಶೆಟ್ಟರ್
ಧಾರವಾಡ: ಸಿಎಂ ಬದಲಾವಣೆ ವಿಚಾರವಾಗಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಅವರು ಜಾಣತನದ ಉತ್ತರ ನೀಡಿದ್ದಾರೆ. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿನಾಕಾರಣದ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಆಗಾಗ ಸಿಎಂ ಬದಲಾವಣೆ ವಿಚಾರಗಳು ಏಕೆ ಹುಟ್ಟಿಕೊಳ್ಳುತ್ತಿವೆಯೋ ನನಗೆ ಗೊತ್ತಾಗುತ್ತಿಲ್ಲ. ರೇಣುಕಾಚಾರ್ಯ ಅವರ ಸಹಿ ಸಂಗ್ರಹದ ವಿಚಾರ ನನಗೆ ಗೊತ್ತಿಲ್ಲ. ಈ ಎಲ್ಲ ವಿಚಾರವಾಗಿ ಯಾವ ವೇದಿಕೆಯಲ್ಲಿ ಮಾತನಾಡಬೇಕೋ ಅಲ್ಲಿ ಮಾತನಾಡುತ್ತೇನೆ. ಇದು ವೇದಿಕೆಯಲ್ಲ ಎಂಬ ಉತ್ತರ …
Read More »ಪ್ರಾಣದ ಹಂಗು ತೊರೆದು ಸೇವೆ: ನರ್ಸ್ ಕಾರ್ಯಕ್ಕೆ ಸಿಎಂ ಅಭಿನಂದನೆ
ಬೆಂಗಳೂರು: ಕೋವಿಡ್ ಸಂಕಷ್ಟ ಸಮಯದಲ್ಲಿ ನರ್ಸ್ಗಳು ಪ್ರಾಣದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ಅವರನ್ನು ಯಾವ ಶಬ್ಧದಿಂದ ಅಭಿನಂದಿಸಿದರೂ ಕಡಿಮೆಯೇ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು. ನರ್ಸ್ಗಳ ಜತೆ ಮಾತುಕತೆ ನಡೆಸಿದ್ದೇನೆ. ಅವರು ತಮ್ಮ ಕೆಲವು ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಅವುಗಳನ್ನು ಪರಿಹರಿಸುತ್ತೇವೆ. ಕೆಲವು ಸಲಹೆಗಳನ್ನೂ ಕೊಟ್ಟಿದ್ದಾರೆ. ಅವುಗಳನ್ನು ಪರಿಗಣಿಸುತ್ತೇವೆ ಎಂದು ವಿಧಾನಸೌಧದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಲಾಕ್ ಡೌನ್ ಕುರಿತು ಜೂನ್ ಮೇ 4 ಅಥವಾ 5ರ ಬಳಿಕ ಚರ್ಚೆ …
Read More »‘ಎಲ್ಲವನ್ನೂ ಸಿಎಂ ಮಾಡೋದಾದ್ರೆ ಬೆಳಗಾವಿಯ ನಾಲ್ವರು ಸಚಿವರು ಯಾಕೆ?’ – ಸತೀಶ್ ಜಾರಕಿಹೊಳಿ
ಬೆಳಗಾವಿ, ಮೇ 31: ”ಎಲ್ಲವನ್ನೂ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರೇ ಮಾಡುವುದಾದರೆ ಜಿಲ್ಲೆಯ ನಾಲ್ವರು ಸಚಿವರು ಯಾಕಾಗಿ ಇದ್ದಾರೆ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಟೀಕಿಸಿದ್ದಾರೆ. ಮಂಗಳ ಬಿಮ್ಸ್ ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಸರಿಪಡಿಸಲು ಸ್ವತಃ ಮುಖ್ಯಮಂತ್ರಿಗಳೇ ಬೆಳಗಾವಿಗೆ ಬರುವುದಾಗಿ ಹೇಳಿದ್ದರು. ಈ ವಿಚಾರದಲ್ಲಿ ಜಿಲ್ಲೆಯ ಸಚಿವರುಗಳ ಬಗ್ಗೆ ಲೇವಡಿ ಮಾಡಿರುವ ಸತೀಶ್ ಜಾರಕಿಹೊಳಿ, ”ಮುಖ್ಯಮಂತ್ರಿಗಳೇ ಬೆಳಗಾವಿಗೆ ಬರುವುದಾಗಿ ಹೇಳಿದ್ದಾರೆ. ಎಲ್ಲವೂ ಮುಖ್ಯಮಂತ್ರಿಗಳೇ ಮಾಡುವುದಾದರೆ ಜಿಲ್ಲೆಯ ನಾಲ್ವರು ಸಚಿವರು ಯಾಕೆ …
Read More »ಸಚಿವ ಪ್ರಭು ಚವ್ಹಾಣ್ ವಿರುದ್ಧ ಕಳಪೆ ಗುಣಮಟ್ಟದ ಆಹಾರ ವಿತರಣೆ ಆರೋಪ
ಬೀದರ್, ಮೇ 31: ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅವರು ವಿತರಿಸುತ್ತಿರುವ ಆಹಾರ ಕಳಪೆ ಗುಣಮಟ್ಟದಿಂದ ಕೂಡಿದೆ ಎಂಬ ಆರೋಪ ಕೇಳಿ ಬಂದಿದೆ. ಆಹಾರವನ್ನು ಮಕ್ಕಳು ಮುಟ್ಟುತ್ತಿಲ್ಲ, ನಾವು ಸಹ ತಿನ್ನುತ್ತಿಲ್ಲ. ಅದು ತಿನ್ನುವುದಕ್ಕೆ ಬಾರದಂತಿದೆ ಎಂಬ ಔರಾದ್ ಪಟ್ಟಣದ ಅಲೆಮಾರಿ ಜನಾಂಗದ ಮಹಿಳೆಯರು ಆರೋಪಿಸಿದ್ದಾರೆ. ಔರಾದ ಪಟ್ಟಣದ ಹೊರವಲಯದಲ್ಲಿರುವ ಅಲೆಮಾರಿ ಜನಾಂಗದವರು ವಾಸಿಸುವ ಗುಡಿಸಲುಗಳಿಗೆ ಕೆಲವು ಸಂಘಟನೆಯ ಪದಾಧಿಕಾರಿಗಳು ಹೋಗಿ ತಮ್ಮ ವತಿಯಿಂದ ಉಚಿತವಾಗಿ ಆಹಾರಗಳನ್ನು ಹಂಚುವ ಸಂದರ್ಭದಲ್ಲಿ …
Read More »ಮೇ 31, ಜೂನ್ 1 ರಂದು ಸಿನಿಮಾ ಕಲಾವಿದರಿಗೆ ಉಚಿತ ಕೋವಿಡ್ ಲಸಿಕೆ
ಚಿತ್ರರಂಗದ ಸದಸ್ಯರಿಗೆ ಉಚಿತವಾಗಿ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಮೇ 31 ಹಾಗೂ ಜೂನ್ 1 ರಂದು ಎರಡು ದಿನಗಳ ಕಾಲ ಸ್ಯಾಂಡಲ್ವುಡ್ ಇಂಡಸ್ಟ್ರಿಯ ನೋಂದಾಯಿತ ಕಲಾವಿದರಿಗೆ ಲಸಿಕೆ ನೀಡಲು ಕಾರ್ಯಕ್ರಮ ಆಯೋಜನೆಯಾಗಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ ಭವನ ಕಟ್ಟಡದಲ್ಲಿ ಉಚಿತ ಕೋವಿಡ್ ಲಸಿಕೆ ಅಭಿಯಾನಕ್ಕೆ ಡಿಸಿಎಂ ಅಶ್ವಥ್ ನಾರಾಯಣ, ಸಂಸದೆ ಸುಮಲತಾ ಚಾಲನೆ ನೀಡಲಿದ್ದಾರೆ. ಈ ವೇಳೆ ಕನ್ನಡ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್, ಕಲಾವಿದರ ಸಂಘದ ಕಾರ್ಯದರ್ಶಿ …
Read More »ಮಗಳು ವಮಿಕಾ ಹೆಸರಿನ ಅರ್ಥ ಹೇಳಿದ ವಿರಾಟ್ ಕೊಹ್ಲಿ
ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ದಂಪತಿಗೆ ಹೆಣ್ಣು ಜನಿಸಿದ ಎಂದು ತಿಳಿದಾಗ ಮಗುವಿಗೆ ಏನೆಂದು ಹೆಸರಿಡಬಹುದು ಎನ್ನುವ ದೊಡ್ಡ ಚರ್ಚೆಯೇ ನಡೆದಿತ್ತು. ಕುತೂಹಲದ ನಡುವೆ ಮಗಳಿಗೆ ‘ವಮಿಕಾ’ ಎಂದು ನಾಮಕರಣ ಮಾಡಿದ್ದರು ತಾರಾ ದಂಪತಿ. ವಮಿಕಾ ಎಂದು ಹೆಸರಿನ ಒಳ ಅರ್ಥವೇನು? ಯಾವ ಕಾರಣದಿಂದ ಮಗಳಿಗೆ ಅನುಷ್ಕಾ-ಕೊಹ್ಲಿ ದಂಪತಿ ಈ ಹೆಸರಿಟ್ಟರು ಎನ್ನುವುದು ಅಷ್ಟೇ ಚರ್ಚೆಯಾಗಿತ್ತು. ವಿರಾಟ್ ಹೆಸರಿನಿಂದ ‘ವ’, ಅನುಷ್ಕಾ ಹೆಸರಿನಿಂದ ‘ಕಾ’ ಒಳಗೊಂಡು ವಮಿಕಾ ಆಗಿದೆ …
Read More »ಸದ್ದಿಲ್ಲದ ಹಸೆಮಣೆ ಏರಿದ ಜನಪ್ರಿಯ ನಟಿ ಪ್ರಣಿತಾ ಸುಭಾಷ್
ಬೆಂಗಳೂರು :ಕನ್ನಡ ಚಿತ್ರರಂಗದ ಜನಪ್ರಿಯ ನಟಿ ಪ್ರಣಿತಾ ಸುಭಾಷ್ ಲಾಕ್ ಡೌನ್ ಸಮಯದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಲಾಕ್ಡೌನ್ನಲ್ಲಿ ಅವರು ಸದ್ದಿಲ್ಲದೆ ಮದುವೆ ಆಗಿದ್ದಾರೆ ಎಂಬ ಸುದ್ದಿ ಕೆಲವು ದಿನಗಳಿಂದಲೇ ಹರಿದಾಡುತ್ತಿತ್ತು . ಆದರೆ ಆ ಬಗ್ಗೆ ಪ್ರಣಿತಾ ಅವರು ಬಹಿರಂಗವಾಗಿ ಎಲ್ಲಿಯೂ ಹೇಳಿಕೊಂಡಿರಲಿಲ್ಲ . ಈಗ ಪ್ರಣಿತಾ ಮದುವೆಯ ಫೋಟೋಗಳ ಬಹಿರಂಗ ಆಗಿವೆ . ಆ ಮೂಲಕ ಅವರು ಸಪ್ತಪದಿ ತುಳಿದಿರುವುದಕ್ಕೆ ಸೂಕ್ತ ಸಾಕ್ಷಿ ಸಿಕ್ಕಂತಾಗಿದೆ . ಮೊನ್ನೆಯಷ್ಟೇ …
Read More »ಹಾಲು ಸಾಗಿಸುವ ಗುತ್ತಿಗೆ ಪಡೆದಿರುವವರಿಂದಲೇ ಹಾಲಿಗೆ ನೀರು ಮಿಕ್ಸ್! ಮಂಡ್ಯದಲ್ಲಿ ಬೆಳಕಿಗೆ ಬಂತು ಭಾರೀ ಗೋಲ್ಮಾಲ್
ಮಂಡ್ಯ: ಹಾಲಿಗೆ ನೀರು ಮಿಶ್ರಣ ಮಾಡಿ ವಂಚಿಸುತ್ತಿದ್ದ ಜಾಲ ಪತ್ತೆಯಾಗಿದ್ದು ಜಿಲ್ಲಾದ್ಯಂತ ಸಂಚಲನ ಸೃಷ್ಟಿಸಿದೆ. ಹಾಲು ಸಾಗಿಸುವ ಗುತ್ತಿಗೆ ಪಡೆದಿರುವವರಿಂದಲೇ ನಿತ್ಯ ಸಾವಿರಾರು ಲೀಟರ್ ಹಾಲಿಗೆ ನೀರು ಮಿಶ್ರಣ ಮಾಡಿ ಸಾಗಿಸುತ್ತಿದ್ದ ಜಾಲವೊಂದು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿ ಸಿಕ್ಕಿಬಿದ್ದಿದೆ. ಶಿಥಿಲೀಕರಣ ಕೇಂದ್ರಗಳಿಂದ ಒಕ್ಕೂಟಕ್ಕೆ ಸಾಗಿಸುವ ಹಾಲಿಗೆ ನೀರು ಮಿಶ್ರಣ ಮಾಡಿ ವಂಚಿಸಲಾಗುತ್ತಿದ್ದು, ಹಾಲಿನ ಪರೀಕ್ಷೆ ಮುಗಿದ ಬಳಿಕ ನೀರು ಮಿಶ್ರಣವಾಗುತ್ತಿತ್ತು ಎಂದು ಹೇಳಲಾಗಿದೆ. ನೀರು ಮಿಶ್ರಿತ ಹಾಲು …
Read More »ಸೆಖೆಯಾಗ್ತಿದೆ ಎಂದು ಮನೆಯ ಹೊರಗೆ ಹೋದವ ಶವವಾಗಿ ಪತ್ತೆ! ಬೆಚ್ಚಿಬೀಳಿಸುತ್ತೆ ನಿನ್ನೆ ರಾತ್ರಿಯ ಘಟನೆ
ರಾಯಚೂರು: ಮದುವೆ ಮಾಡಿಕೊಳ್ಳಲೆಂದು ಆತ ಹೆಣ್ಣು ಹುಡುಕುತಿದ್ದ. ಎರಡು ದಿನದ ಹಿಂದೆ ಮಾರಮ್ಮ ದೇವಿಗೆ ಪೂಜೆಯನ್ನೂ ಮಾಡಿಸಿದ್ದ. ಯಾವುದೇ ಅಡ್ಡಿ-ಆತಂಕವಿಲ್ಲದೆ ಮಗನಿಗೆ ಒಳ್ಳೆಯ ಜೀವನ ಸಿಗಲೆಂದು ಆತನ ತಾಯಿಯೂ ದೇವರಲ್ಲಿ ಬೇಡಿಕೊಂಡಿದ್ದರು. ಆದರೆ, ನಿನ್ನೆ ರಾತ್ರಿ ಆ ಯುವಕ ದುರಂತ ಅಂತ್ಯಕಂಡಿದ್ದಾನೆ. ರಾಯಚೂರು ತಾಲೂಕಿನ ಮರ್ಚಡ್ ಗ್ರಾಮದ ತಾಯಪ್ಪ(26) ಮೃತ ದುರ್ದೈವಿ. ನಿನ್ನೆ ರಾತ್ರಿ ವಿದ್ಯುತ್ ಇಲ್ಲದ ಕಾರಣಕ್ಕೆ ಸೆಖೆಯೆಂದು ಮನೆಯ ಹೊರಗೆ ಮಲಗುವುದಾಗಿ ಹೋಗಿದ್ದ. ದೇವಸ್ಥಾನದ ಬಳಿ ಕೆಲ …
Read More »
Laxmi News 24×7