Breaking News

Laxminews 24x7

ನಿರಾಶದಾಯಕ ಬಜೆಟ್: ಡಾ. ಪ್ರಭಾಕರ್ ಕೋರೆ

ಗ್ಯಾರೆಂಟಿಗಳ ಭರಾಟೆಯಲ್ಲಿ ಸಿದ್ದರಾಮಯ್ಯನವರ ಸರಕಾರ ರಾಜ್ಯದ ಜನತೆಗೆ ಕೇವಲ ಆಶ್ವಾಸನೆಗಳನ್ನು ನೀಡಿದೆ. ಕೃಷಿ, ಆರೋಗ್ಯ,ಸಹಕಾರ ಹಾಗೂ ನೀರಾವರಿ ಕ್ಷೇತ್ರಗಳಿಗೆ ಕೊಡ ಬೇಕಾದಂತಹ ಪ್ರಮುಖ ಆದ್ಯತೆಗಳನ್ನು ನೀಡಿಲ್ಲ. ಜನತೆಯ ಮೂಗಿಗೆ ತುಪ್ಪವನ್ನು ಸವರಿದೆ. ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಇದೊಂದು ನಿರಾಶದಾಯಕವಾದ ಬಜೆಟ್. ಪ್ರಗತಿಯ ನಾಗಾಲೋಟದಲ್ಲಿ ಸಾಗಬೇಕಾದಂತಹ ರಾಜ್ಯ ಹಲವಾರು ಗ್ಯಾರಂಟಿಗಳ ಭರದಲ್ಲಿ ರಾಜ್ಯವನ್ನು ಸಾಲದ ಸುಲಿಗಿ ಸಿಲುಕಿಸಿದೆ. ಪ್ರಗತಿದಾಯಕ ಇದಲ್ಲ.

Read More »

ಜೆಸಿಬಿ ಕಾರ್ಯಾಚರಣೆ ವೇಳೆ ಮೇಘಾ ಗ್ಯಾಸ್ ಪೈಪ್‌ಲೈನ್ ಸೋರಿಕೆ: ಸ್ಥಳಕ್ಕೆ ಧಾವಿಸಿ ಅನಾಹುತ ತಪ್ಪಿಸಿದ ನಗರಸೇವಕ ನಿತೀನ್ ಜಾಧವ್

ಬೆಳಗಾವಿಯ ಹಿಂದವಾಡಿ ಭಾಗದಲ್ಲಿ ಇಂದು ಜೆಸಿಬಿ ಕಾರ್ಯಾಚರಣೆಯ ವೇಳೆ ಅನಿಲ ಪೈಪ್‌ಲೈನ್ ಸೋರಿಕೆಯಾಗಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿತ್ತು. ಸ್ಥಳೀಯ ನಗರಸೇವಕರ ಸಮಯಪ್ರಜ್ಞೆಯಿಂದಾಗಿ ಸಂಭವನೀಯ ಭಾರೀ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದಂತಾಗಿದೆ. ಬೆಳಗಾವಿಯ ಹಿಂದವಾಡಿ ಜೈನ್ ಕಾಲೇಜ್ ಪಕ್ಕದಲ್ಲಿರುವ ವಸತಿ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಮನೆ ನಿರ್ಮಾಣ ಕಾರ್ಯ ನಡೆಯುತ್ತಿತ್ತು. ಮನೆಯ ಕಾಂಪೌಂಡ್ ಗೋಡೆ ಕಟ್ಟುವ ಉದ್ದೇಶದಿಂದ ಜೆಸಿಬಿ ಮೂಲಕ ಮಣ್ಣು ಅಗೆಯುವಾಗ, ಅಕಸ್ಮಾತ್ತಾಗಿ ಭೂಮಿಯ ಅಡಿಯಲ್ಲಿದ್ದ ಮೇಘಾ ಗ್ಯಾಸ್ ಕಂಪನಿಯ …

Read More »

ಸಹಕಾರ ಸಂಘಗಳ ಬಲವರ್ಧನೆಗೆ ವಿಮೆ ಅನಿವಾರ್ಯ: ಆಣ್ಣಾಸಾಹೇಬ್ ಜೊಲ್ಲೆ

ಬೆಳಗಾವಿಯಲ್ಲಿ ಶೈಕ್ಷಣಿಕ ಕಾರ್ಯಾಗಾರ ಭಾರತದಲ್ಲಿ ಜೀವ ವಿಮೆಯ ಬಗ್ಗೆ ಜಾಗೃತಿ ಮೂಡುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಅಣ್ಣಾಸಾಹೇಬ್ ಜೊಲ್ಲೆ ಅವರು ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ಮತ್ತು ಮುಂಬೈನ ಪಾಲಿಸಿ ಗ್ರೇಸ್ ಇನ್ಶೂರೆನ್ಸ್ ಬ್ರೋಕರ್ಸ್ ಪ್ರೈವೆಟ್ ಲಿಮಿಟೆಡ್’ನ ಸಂಯುಕ್ತಾಶ್ರಯದಲ್ಲಿ ಬೆಳಗಾವಿ ವಿಭಾಗದ ಬೆಳಗಾವಿ, ಧಾರವಾಡ, ಕಾರವಾರ, ಗದಗ ಹಾಗೂ ಹಾವೇರಿ ವ್ಯಾಪ್ತಿಗೊಳಪಡುವ ಪತ್ತಿನ ಸಹಕಾರ ಸಂಘಗಳ …

Read More »

ಬೆಳಗಾವಿ ಮಹಾಪಾಲಿಕೆಯಿಂದ ‘ಆಪರೇಷನ್ ಲೈಸೆನ್ಸ್’: ನಿಯಮ ಉಲ್ಲಂಘಿಸಿದ ಖ್ಯಾತ ಮಳಿಗೆಗಳಿಗೆ ಭಾರಿ ದಂಡ!

ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರ ಆದೇಶದ ಬೆನ್ನಲ್ಲೇ ಈಗ ನಗರದಾದ್ಯಂತ ಹೆಲ್ತ್ ಇನ್ಸ್‌ಪೆಕ್ಟರ್‌ಗಳ ತಂಡ ಅಖಾಡಕ್ಕಿಳಿದಿದೆ. ವ್ಯಾಪಾರ ಪರವಾನಗಿ ಪಡೆಯದೆ ವಹಿವಾಟು ನಡೆಸುತ್ತಿರುವ ದೊಡ್ಡ ದೊಡ್ಡ ಮಳಿಗೆಗಳಿಗೆ ಪಾಲಿಕೆ ಅಧಿಕಾರಿಗಳು ಶಾಕ್ ನೀಡುತ್ತಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರ ಕಟ್ಟುನಿಟ್ಟಿನ ನಿರ್ದೇಶನದ ಮೇರೆಗೆ ನಗರದ ಉತ್ತರ ಮತ್ತು ದಕ್ಷಿಣ ವಲಯದ ಆರೋಗ್ಯ ನಿರೀಕ್ಷಕರು ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇಂದು ಸಮಾದೇವಿ ಗಲ್ಲಿಯಲ್ಲಿರುವ ಪ್ರಸಿದ್ಧ ‘ಕಲ್ಯಾಣಿ ಸ್ವೀಟ್ ಮಾರ್ಟ್’ ಮೇಲೆ ದಾಳಿ …

Read More »

ಮಾ.7 ರಂದು ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜನೆ : 100ಕ್ಕೂ ಹೆಚ್ಚು ಕಂಪನಿ ಭಾಗಿ

ಬೆಳಗಾವಿ : ಉದ್ಯೋಗದ ನಿರೀಕ್ಷೆಯಲ್ಲಿ ಇರುವವರಿಗೆ ಇದೀಗ ಸಿಹಿ ಸುದ್ದಿ ಇದ್ದು, ಶಿವಬಸವ ನಗರದಲ್ಲಿರುವ ಎಸ್.ಜಿ. ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಾ.7 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಜಿಲ್ಲಾಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್​ ಸಿಇಒ ರಾಹುಲ್ ಶಿಂಧೆ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್​, ಸಂಜೀವಿನಿ KSLRPS, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯ ಮಿಷನ್, …

Read More »

ಗ್ಯಾರಂಟಿ’ಗಳಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ನಿಜ, ಆದರೆ ಅಭಿವೃದ್ಧಿ ಕಾರ್ಯ ನಿಂತಿಲ್ಲ: ಸತೀಶ್ ಜಾರಕಿಹೊಳಿ

ಬೆಳಗಾವಿ: ಗ್ಯಾರಂಟಿ ಯೋಜನೆಗಳ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌, ಸಚಿವ ಎಂ.ಬಿ.ಪಾಟೀಲ್‌ ಅಪಸ್ವರ ಎತ್ತಿದ ಬೆನ್ನಲ್ಲೇ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಕೂಡ ಅದೇ ಧಾಟಿಯಲ್ಲಿ ಮಾತನಾಡಿದ್ದು, ಗ್ಯಾರಂಟಿ ಯೋಜನೆಗಳಿಗೆ ವಾರ್ಷಿಕ 50-60 ಸಾವಿರ ಕೋಟಿ ರೂ. ವೆಚ್ಚವಾಗುತ್ತಿರುವುದು ಸರ್ಕಾರದ ಮೇಲೆ ಆರ್ಥಿಕ ಹೊರೆಯಾಗಿದೆ. ಆದರೂ ಅಭಿವೃದ್ಧಿ ಕೆಲಸಗಳು ನಿಂತಿಲ್ಲ ಎಂದಿದ್ದಾರೆ. ಕಳೆದ 2-3 ವರ್ಷಗಳಲ್ಲಿ ಸರ್ಕಾರ ಏನೂ ಮಾಡಿಲ್ಲ ಎಂಬ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆರೋಪ ನಿರಾಧಾರ. ನಾವು …

Read More »

ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ವಿಶೇಷ ಒತ್ತು ನೀಡಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಮೂಲಸೌಕರ್ಯ, ಕುಡಿಯುವ ನೀರು, ರಸ್ತೆ ಸಂಪರ್ಕ ಮತ್ತು ಸ್ವಚ್ಛತೆಗೆ ದೊಡ್ಡ ಹಂಚಿಕೆ ಮಾಡಲಾಗಿದ್ದು, ರೈತರು ಮತ್ತು ಗ್ರಾಮೀಣ ಜನರ ಜೀವನಮಟ್ಟ ಸುಧಾರಣೆಗೆ ಈ ಬಜೆಟ್ ಹೊಸ ಆಶಾಕಿರಣವಾಗಿದೆ. ಪ್ರಮುಖ ಘೋಷಣೆಗಳು ಮತ್ತು ಹಂಚಿಕೆಗಳು ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ …

Read More »

ಬಜೆಟ್ ನಲ್ಲಿ ಸಾರಿಗೆ ಇಲಾಖೆಗೆ ಸಿಕ್ಕಿದ್ದೇನು?

ಶಕ್ತಿ ಯೋಜನೆಗೆ 5,300 ಕೋಟಿ ರೂ. ಸಾರಿಗೆ ಸಿಬ್ಬಂದಿ ವೇತನ ಬಾಕಿ ಪಾವತಿಗೆ 1,271 ಕೋಟಿ ರೂ. 1 ಸಾವಿರ ಡೀಸೆಲ್ ಬಸ್ ಖರೀದಿ ಕರ್ನಾಟಕ ಎಲೆಕ್ಟ್ರಿಕ್ ಬಸ್ ಯೋಜನೆಗೆ 2,000 ಕೋಟಿ ರೂ. 4 ಸಾವಿರ ವಿದ್ಯುತ್ ಚಾಲಿತ ಬಸ್ ಬಿಎಂಟಿಸಿಯ 32, ಸಾರಿಗೆ ನಿಗಮಗಳ 62 ಡಿಪೋ ಅಭಿವೃದ್ಧಿ ಅಪಘಾತ ಸ್ಥಳ ಗುರುತಿಸಲು ಸಾಫ್ಟ್‌ವೇರ್ ಮತ್ತು ಡ್ಯಾಶ್ ಬೋರ್ಡ್ – 5 ಕೋಟಿ ರೂ. ರಾಜ್ಯಸ 25 …

Read More »

ಸಾಲದ ಭಾರ ಹೊರೆಸುವ ಬಜೆಟ್

ಲಕ್ಷಾಂತರ ಕೋಟಿ ಸಾಲದ ಭಾರ ಹಾಗೂ ಸಾವಿರಾರು ಸುಳ್ಳಿನ ಭರವಸೆಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಜೆಟ್ ಮಂಡಿಸಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಯಾವುದೇ ಸ್ಪಷ್ಟ ದಿಕ್ಕು-ದಿಶೆ ಇಲ್ಲದೆ, ಜನಸಾಮಾನ್ಯರ ಆಶಾ-ಆಕಾಂಕ್ಷೆಗಳಿಗೆ ಭಂಗ ತರುವಂತಹ ಬಜೆಟ್ ಇದಾಗಿದೆ.

Read More »

ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ- ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರವು ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ (GST Rationalization) ಮತ್ತು ತೆರಿಗೆ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ ಆಗಿದೆ. ಆದಾಗ್ಯೂ ರಾಜ್ಯ ಸರ್ಕಾರ ಮೂರು ವರ್ಷಗಳಿಂದ ವಿತ್ತೀಯ ಶಿಸ್ತು ಕಾಯ್ದುಕೊಂಡು ಜವಾಬ್ದಾರಿತನ ಮೆರೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದಾಖಲೆಯ 4.48 ಲಕ್ಷ ಕೋಟಿ ರೂ ಮೊತ್ತದ ಮುಂಗಡಪತ್ರವನ್ನು ವಿಧಾನಸಭೆಯಲ್ಲಿ ಇಂದು ಮಂಡಿಸಿದ ಸಿದ್ದರಾಮಯ್ಯ, ಜಿಎಸ್​ಟಿ ಹಂಚಿಕೆಯಲ್ಲಿ ರಾಜ್ಯಗಳಿಗೆ ಆಗಿರುವ ಅನ್ಯಾಯವನ್ನು ವಿವರಿಸಿದ್ದಾರೆ. “ಕರ್ನಾಟಕವು ಸಂಪನ್ಮೂಲ ಕ್ರೋಢೀಕರಣ …

Read More »