Breaking News

Laxminews 24x7

ತನ್ನ ವಿರುದ್ಧವೇ ತನಿಖೆ ನಡೆಸಲು ಲೋಕಾಯುಕ್ತರಿಗೆ ಪತ್ರ ಬರೆದ ಕೋಟಾ ಶ್ರೀನಿವಾಸ ಪೂಜಾರಿ

ಉಡುಪಿ, : ಸರಳ ಸಜ್ಜನಿಕೆಯಿಂದ ರಾಜ್ಯದ ಜನರ ಗಮನ ಸೆಳೆದಿರುವ ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರ ಮೇಲೆ ಆದಾಯಕ್ಕಿಂತ ಹೆಚ್ಚು ಗಳಿಕೆಯ ಟೀಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಮಾಡಲಾಗುತ್ತಿದೆ. ಕೋಟಾ ಶ್ರೀನಿವಾಸ ಪೂಜಾರಿಯವರು 6 ಕೋಟಿ ಮೌಲ್ಯದ ಮನೆಯನ್ನು ಕಟ್ಟಿಸುತ್ತಿದ್ದು, ಇದು ಸಾಮಾನ್ಯ ರಾಜಕಾರಣಿಯ ಲಕ್ಷಣ ಎಂದು ಕೆಲ ಕಾಂಗ್ರೆಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯವಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕೋಟಾ ಶ್ರೀನಿವಾಸ ಪೂಜಾರಿಯವರ ಅರು ಕೋಟಿಯ ಮನೆ ಅಂತಾ ಸುದ್ದಿ …

Read More »

ಮನೆ ಮುಂದೆ ನಿಲ್ಲಿಸಿದ ಬೈಕ್​ಗಳನ್ನು ಕ್ಷಣಮಾತ್ರದಲ್ಲಿ ದರೋಡೆ ಮಾಡುವ ಚಾಲಾಕಿ ಗ್ಯಾಂಗ್​..

ಬೆಂಗಳೂರು: ನೀವು ನಿಮ್ಮ ಬೈಕ್​ನ್ನ ಮನೆ ಹೊರಗಡೆ ನಿಲ್ಲಿಸ್ತಿದ್ದೀರಾ..? ಹಾಗಾದ್ರೆ ಹುಷಾರ್​ ಆಗಿರಿ. ಮನೆ ಮುಂದೆ ನಿಲ್ಲಿಸಿದ ಬೈಕ್​ಗಳನ್ನು ಕ್ಷಣಮಾತ್ರದಲ್ಲಿ ದರೋಡೆ ಮಾಡುವ ಚಾಲಾಕಿ ಗ್ಯಾಂಗ್​ ಒಂದು ಈಗ ನಗರದಲ್ಲಿ ಸಕ್ರಿಯವಾಗಿದೆ. ವೀರಣ್ಣ ಪಾಳ್ಯದಲ್ಲಿ ವ್ಯಕ್ತಿಯೊಬ್ಬರು ತಮ್ಮ ಬೈಕ್​ನ್ನು ಮನೆಯ ಹೊರಗೆ ನಿಲ್ಲಿಸಿ ತಮ್ಮ ಅಪಾರ್ಟ್​ಮೆಂಟ್​ಗೆ ಹೋಗಿ ಬರೋದ್ರೊಳಗಾಗಿ ನಿಲ್ಲಿಸಿದ ಬೈಕ್​ ನಾಪತ್ತೆಯಾಗಿದೆ. ಒಳಗಡೆ ಹೋಗಿ ಬರೋದ್ರೊಳಗಾಗಿ ಬೈಕ್​ ಕಾಣದ್ದನ್ನ ಕಂಡು ಮಾಲೀಕ ಅರೆ ಕ್ಷಣ ಗಲಿಬಿಲಿಗೊಂಡಿದ್ದಾನೆ. ತದನಂತರ ಸಿಸಿಟಿವಿ …

Read More »

ಅನೈತಿಕ ಸಂಬಂಧ ಪ್ರಶ್ನೆ ‌ಮಾಡಿದ್ದಕ್ಕೆ ಗಂಡ ತನ್ನ ಹೆಂಡತಿಯನ್ನೇ ಕೊಲೆ ಮಾಡಿದ ಪತಿ

ಕೊಪ್ಪಳ: ಅನೈತಿಕ ಸಂಬಂಧ ಪ್ರಶ್ನೆ ‌ಮಾಡಿದ್ದಕ್ಕೆ ಗಂಡ ತನ್ನ ಹೆಂಡತಿಯನ್ನೇ ಕೊಲೆ ಮಾಡಿದ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿ ಪಟ್ಟಣದಲ್ಲಿ ನಡೆದಿದೆ. ಮೊಬೈಲ್ ಚಾರ್ಜರ್​ ಬಳಸಿ ಮಡದಿ ಮಂಜುಳಾ (25) ಕತ್ತು ಬಿಗಿದು ಮಂಜುನಾಥ್ ಕಟ್ಟಿಮನಿ ಎಂಬಾತ ಹೆಂಡತಿಯನ್ನು ಕೊಲೆ ಮಾಡಿದ್ದಾನೆ. ಮಂಜುಳಾ ಪತಿ ಮಂಜುನಾಥ್ ಕಟ್ಟಿಮನಿ ಬೇರೊಬ್ಬ ಯುವತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಇದೇ ವಿಷಯಕ್ಕೆ ಗಂಡ ಹೆಂಡತಿ ಮದ್ಯೆ ಪದೇ ಪದೇ ಗಲಾಟೆ ಆಗ್ತಿತ್ತು ಎಂದು …

Read More »

ಇಬ್ಬರು ಮಹಿಳೆಯರ ಹತ್ಯೆ, ಕೊಳೆತ ಸ್ಥಿತಿಯಲ್ಲಿ ಪತ್ತೆ

ದಾವಣಗೆರೆ, ಜುಲೈ 30; ಇಬ್ಬರು ಮಹಿಳೆಯಯನ್ನು ಕೊಲೆ ಮಾಡಿರುವ ಘಟನೆ ದಾವಣಗೆರೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕೊಳೆತ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆಯನ್ನು ನಡೆಸಿದ್ದಾರೆ. ದಾವಣಗೆರೆ ನಗರದ ಹೊರಭಾಗದ ಆಂಜನೇಯ ಕಾಟನ್ ಮಿಲ್ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಕೊಲೆಯಾದವರನ್ನು ಮೂಲತಃ ಬಳ್ಳಾರಿ ಜಿಲ್ಲೆಯ ಕೂಡ್ಲಗಿ ತಾಲೂಕಿನ ಬೆನಕನಹಳ್ಳಿ ಗ್ರಾಮದವರಾದ ಗೌರಮ್ಮ (34) ಹಾಗೂ ರಾಧಿಕಾ (32) ಎಂದು ಗುರುತಿಸಲಾಗಿದೆ. ಆಂಜನೇಯ ಕಾಟನ್ ಮಿಲ್ ಬಡಾವಣೆಯ …

Read More »

ಹೆಚ್ಚಾಯ್ತು ರೌಡಿಶೀಟರ್​​ಗಳ ಹಾವಳಿ; ಹಾಡಹಗಲೇ ನಡೆಯುವ ಕೊಲೆಗಳಿಗೆ ಬೆಚ್ಚಿಬಿದ್ದ ಬೆಂಗಳೂರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ ಕೊಲೆಗಳು ನಡೆಯುತ್ತಿದ್ದು ಬೆಂಗಳೂರು ಬೆಚ್ಚಿಬಿದ್ದಿದೆ. ಒಂದೆಡೆ ಪೊಲೀಸರು ದಿಢೀರ್ ರೌಡಿಶೀಟರ್​​ಗಳ ಮನೆ ಮೇಲೆ ದಾಳಿ ನಡೆಸಿ, ರೌಡಿಗಳ ಪರೇಡ್ ನಡೆಸಿದ್ರೂ ಕ್ರೈಮ್​ಗಳು ಮಾತ್ರ ಕಡಿಮೆಯಾದಂತೆ ಕಾಣುತ್ತಿಲ್ಲ. ಅದ್ರಲ್ಲೂ ಲಾಕ್​ಡೌನ್ ಸಡಿಲಿಕೆಯಾಗಿ ಅನ್​ಲಾಕ್​ ಜಾರಿಯಾದ ಮೇಲೆ ಹಾಡಹಗಲೇ ಕೊಲೆಗಳು ನಡೆಯುತ್ತಿವೆ. ಇತ್ತೀಚೆಗೆ ನಡೆದ ಕ್ರೈಂಗಳು.. 1. ಜು. 19- ಯೂನಿಬ್ಯಾಂಕ್ ಒಳಗೆ ರೌಡಿಶೀಟರ್ ಬಬ್ಲಿ ಬರ್ಬರ ಹತ್ಯೆ. 2..ಜು. 2- ರಂದು ಹಾಡಹಗಲೇ ಬನಶಂಕರಿ …

Read More »

ತೋಟದಲ್ಲಿ ಈಜು ಕಲಿಯಲು ಹೋಗಿ ಇಬ್ಬರು ಮೃತಪಪಟ್ಟರು

ಕಬ್ಬೂರ – ಪಟ್ಟಣದ ಹೊರವಲಯದ ಗಣೇಶ ನಗರದ ನಾವಗೇರ ತೋಟದಲ್ಲಿ ಈಜು ಕಲಿಯಲು ಹೋಗಿ ಇಬ್ಬರು ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ೨ ಗಂಟೆಯ ಸಮಯದಲ್ಲಿ ನಡೆದಿದೆ. ಮೃತಪಟ್ಟವರು ಮಹಾಂತೇಶ ಶ್ರೀಕಾಂತ ನಾವಿ(೨೫) ಮತ್ತು ಶ್ರೀಶೈಲ ಬಸವರಾಜ ನಾವಲಗೇರ(೧೦). ತಮ್ಮ ಬಾವಿಯಲ್ಲಿ ಈಜು ಕಲಿಯಲು ಡಬ್ಬಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಈಜುವಾಗ ಡಬ್ಬಿ ಬಿಚ್ಚಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿರುತ್ತಾರೆ.ಘಟನಾ ಸ್ಥಳಕ್ಕೆ ಚಿಕ್ಕೋಡಿ ಪ್ರಮುಖ ಅಗ್ನಿಶಾಮಕ ದಳದ ಟಿ.ಬಿ.ಪರೀಟ ಹಾಗೂ ಸಿಬ್ಬಂದಿಗಳು ಬಾವಿಯಲ್ಲಿ …

Read More »

ಬಿಜೆಪಿ ಹೈಕಮಾಂಡ್ ಎದುರು ಪಂಚಮಸಾಲಿ ಸಮುದಾಯ ಇಟ್ಟ ಹೊಸ ಬೇಡಿಕೆ ಇದು!

ಬೆಂಗಳೂರು, ಜು. 30: ಈ ಸಲ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಮುಖ್ಯಮಂತ್ರಿ ಹುದ್ದೆ ಖಚಿತ ಎಂಬ ಮಾಹಿತಿ ಬಂದಿತ್ತು. ಅದರಂತೆಯೆ ಆರ್‌ಎಸ್‌ಎಸ್‌ ಪ್ರಮುಖರು ಹಾಗೂ ಬಿಜೆಪಿ ಹೈಕಮಾಂಡ್ ಕೂಡ ಲಿಂಗಾಯತ ಪಂಚಮಸಾಲಿ ಸಮುದಾಯದ ನಾಯಕರಿಗೆ ಮುಖ್ಯಮಂತ್ರಿ ಹುದ್ದೆ ಕೊಡಲು ತೀರ್ಮಾನಿಸಿತ್ತು. ಆದರೆ ಕೊನೆಯ ಕ್ಷಣದಲ್ಲಿ ಮುಖ್ಯಮಂತ್ರಿ ಹುದ್ದೆ ಆ ಸಮುದಾಯಕ್ಕೆ ಸಿಗಲಿಲ್ಲ ಎಂಬ ನಂಬಿಕೆ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಖಚಿತ ಮಾಹಿತಿಯಿದೆ. ಹೀಗಾಗಿ ಮುಖ್ಯಮಂತ್ರಿ ಹುದ್ದೆ ತಪ್ಪಿಸಿಕೊಂಡಿರುವ ಲಿಂಗಾಯತ ಪಂಚಮಸಾಲಿ …

Read More »

ಮಹಾರಾಷ್ಟ್ರದಲ್ಲಿ ಮತ್ತೆ ಮುಂದುವರೆದ ಮಳೆಯ ಅಬ್ಬರ; ಬೆಳಗಾವಿ ಜಿಲ್ಲೆಯಲ್ಲಿ ನೆರೆ ಸಂತ್ರಸ್ತರ ಸ್ಥಿತಿ ಅತಂತ್ರ

ಬೆಳಗಾವಿ: ಮಹಾರಾಷ್ಟ್ರದಲ್ಲಿ ಮತ್ತೆ ಮಳೆ ಮುಂದುವರೆದಿದ್ದು, ಕೋಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 60 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಹೀಗಾಗಿ ಕೃಷ್ಣಾ ನದಿಯಲ್ಲಿ 3.70 ಲಕ್ಷ ಕ್ಯುಸೆಕ್ ಹೊರ ಹರಿವು ಉಂಟಾಗಿದೆ. ಈಗಾಗಲೇ‌ 105 ಟಿಎಂಸಿ ಸಾಮರ್ಥ್ಯದ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕೋಯ್ನಾ ಜಲಾಶಯ 90 ಟಿಎಂಸಿ ಭರ್ತಿಯಾಗಿದ್ದು, ಮಳೆ ಮುಂದುವರೆದರೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರು ಕೃಷ್ಣಾ ನದಿಗೆ ಬಿಡುವ ಸಾಧ್ಯತೆ ಇದೆ. ಇದರಿಂದ ಬೆಳಗಾವಿ ಜಿಲ್ಲೆಯ …

Read More »

ಕೃಷ್ಣಾ ನದಿಯಲ್ಲಿ ತಗ್ಗಿದ ನೀರಿನ ಪ್ರಮಾಣ : ಸಂತ್ರಸ್ತರು ನಿರಾಳ

ಬನಹಟ್ಟಿ : ಕಳೆದ ಹಲವಾರು ದಿನಗಳಿಂದ ಮಹಾರಾಷ್ಟ್ರದಲ್ಲಿನ ಮಳೆ ಮತ್ತು ಜಲಾಶಯದಿಂದ ಕೃಷ್ಣಾ ನದಿಗೆ ಅಪಾರ ನೀರು ಹರಿದು ಬರುತ್ತಿರುವುದರಿಂದ ಬಾಘಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಹಿಪ್ಪರಗಿ ಜಲಾಶಯಕ್ಕೆ 4 ಲಕ್ಷ ಕ್ಯೂಸೆಕ್ಸ್ ಗೂ ಹೆಚ್ಚು ನೀರು ಹರಿದು ಬರುತ್ತಿತ್ತು. ಇಂದು ಶುಕ್ರವಾರ ಅದರ ಪ್ರಮಾಣದಲ್ಲಿ ಕುಸಿತ ಕಂಡಿದ್ದು, ಸಂತ್ರಸ್ತರಲ್ಲಿ ನೆಮ್ಮದಿ ಮೂಡಿಸಿದೆ. ಗುರುವಾರ ಯಾವುದೇ ರೀತಿಯ ಏರಿಳಿತವಾಗದಿದ್ದರೂ ಇಂದು ಶುಕ್ರವಾರ ಸುಮಾರು 70 ಸಾವಿರ ಕ್ಯೂಸೆಕ್ಸ್ ನಷ್ಟು ನೀರು …

Read More »

ಜೆಡಿಎಸ್ ಗೆ ಹೋಗಿದ್ದಾಗ ಎಲ್ಲಿತ್ತು ಹಿಂದುತ್ವ: ಯತ್ನಾಳ್ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ

ಬೆಂಗಳೂರು: “ನೀವು ಜೆಡಿಎಸ್ ಗೆ ಹೋಗಿದ್ದಾಗ ಹಿಂದುತ್ವ ಎಲ್ಲಿ ಹೋಗಿತ್ತು ಸ್ವಾರ್ಥಕ್ಕಾಗಿ ನಿಮಗೆ ಹಿಂದುತ್ವ ಬೇಕಾ? ಜೆಡಿಎಸ್‌ ನಲ್ಲಿದ್ದಾಗ ಅಲ್ಪಸಂಖ್ಯಾತ ಓಲೈಕೆ ಮಾಡಿಲ್ಲವೇ: ಇದು ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ವಾಗ್ದಾಳಿ ನಡೆಸಿದ ರೀತಿ. ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಯತ್ನಾಳ್ ನಡೆಸಿದ ಆರೋಪಗಳಿಗೆ ತಿರುಗೇಟು ನೀಡಿದ ರೇಣುಕಾಚಾರ್ಯ, ಯಡಿಯೂರಪ್ಪನವರ ಸಾಮರ್ಥ್ಯ, ನಾಯಕತ್ವ, ಹೋರಾಟ ದೊಡ್ಡದು. ನೂರಾರು ಪಾದಯಾತ್ರೆ, ಸಾವಿರಾರು ಹೋರಾಟ ಮಾಡಿದ್ದಾರೆ. ಅನೇಕ …

Read More »