Breaking News

Laxminews 24x7

ರಾಜ್ಯದ ಕೋವಿಡ್ ಸ್ಥಿತಿಗತಿ ಬಗ್ಗೆ ಪ್ರಧಾನಿಗೆ ಮಾಹಿತಿ ನೀಡಿದ ಸಿಎಂ ಬಿಎಸ್ ವೈ

ಬೆಂಗಳೂರು: ರಾಜ್ಯದಲ್ಲಿನ ಕೋವಿಡ್ ಸ್ಥಿತಿಗತಿ ಹಾಗೂ ನಿರ್ವಹಣೆಯ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಹಿತಿ ನೀಡಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಸಭೆ ನಡೆಸಿದರು. ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಧಾನಿ ಮೋದಿಯವರಿಗೆ ಮಾಹಿತಿ ನೀಡಿದರು. ಆರೋಗ್ಯ ಸಚಿವ ಡಾ. ಸುಧಾಕರ್, ಗೃಹ ಸಚಿವ ಬಸವರಾಜ …

Read More »

ಯುವಕರ ಜೊತೆ ಪ್ರೇಯಸಿಯ ಚಾಟಿಂಗ್ ನೋಡಿ ಪ್ರಿಯಕರ ಮಾಡಿದ್ದೇನು ಗೊತ್ತಾ..?

ಮೈಸೂರು: ಪ್ರೇಯಸಿಯ ನಡತೆ ಪ್ರಶ್ನಿಸಿ ಪ್ರಿಯಕರನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮೈಸೂರಿನ ಹರ್ಷ ರಸ್ತೆಯಲ್ಲಿ ನಡೆದಿದೆ. ನಂಜನಗೂಡಿನ ಶ್ರೀರಾಂಪುರದ 26 ವರ್ಷದ ಯುವತಿ ಪ್ರಿಯಕರನಿಂದ ಹಲ್ಲೆಗೊಳಗಾದ ಯುವತಿ. ಹೆಚ್.ಡಿ. ಕೋಟೆ ತಾಲೂಕಿನ ಅಂತರಸಂತೆಯ ನಿವಾಸಿ ರಮೇಶ್ ಎಂಬಾತನಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಮೈಸೂರಿನ ಖಾಸಗಿ ಮಾಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಹಾಗೂ ರಮೇಶ್ ಕಳೆದ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆಕೆಗೆ ಬರುತ್ತಿದ್ದ ಮೆಸೇಜ್​ಗಳನ್ನು ತನ್ನ …

Read More »

ಬೈಕ್ ಗೆ ನಾಯಿ ಕಟ್ಟಿ ರಾಕ್ಷಸೀಯ ಕೃತ್ಯ ಮೆರೆದಿದ್ದ ಆರೋಪಿ ಬಂಧನ

ಮಂಗಳೂರು : ಬೈಕ್‌ ಗೆ ನಾಯಿಯನ್ನು ಕಟ್ಟಿ ಅಮಾನವೀಯತೆಯಿಂದ ಎಳೆದೊಯ್ದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳಲ್ಲಿ ಒಬ್ಬನನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ. ಕೊಪ್ಪಳ ಜಿಲ್ಲೆಯ ನೀಲಪ್ಪ ಎಂಬಾತನನ್ನು ಸದ್ಯ ಪೊಲೀಸರು ಬಂಧಿಸಿದ್ದು, ಇನ್ನೊಬ್ಬ ಆರೋಪಿ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಶೀಘ್ರದಲ್ಲಿ ತಲೆ ಮರೆಸಿಕೊಂಡಿರುವ ಆರೋಪಿಯನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳೂರು ನಗರ ಹೊರವಲಯದ ಸುರತ್ಕಲ್ ಸಮೀಪದ ಎನ್‌ ಐಟಿಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಯಿಯನ್ನು ಬೈಕ್ ಗೆ ಕಟ್ಟಿಕೊಂಡು …

Read More »

ಲಾಠಿ ಪ್ರಹಾರದಿಂದ ಕೋವಿಡ್ ಹೋಗಲ್ಲ, ಬೆಡ್, ಆಕ್ಸಿಜನ್ ನೀಡಿ : ಸಿಎಂ ವಿರುದ್ಧ ಶರವಣ ಕಿಡಿ

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ನೈಟ್ ಕರ್ಫ್ಯೂ ಜೊತೆ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. ಅಲ್ಲದೆ ಅಗತ್ಯ ಸೇವೆಗಳನ್ನು ಹೊರತು ಪಡಿಸಿ ರಾಜ್ಯದಲ್ಲಿ ಎಲ್ಲವನ್ನೂ ಬಂದ್ ಮಾಡಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಫೇಸ್ ಬುಕ್ ನಲ್ಲಿ ಸಿಎಂ ವಿರುದ್ಧ ಹರಿ ಹಾಯ್ದಿದ್ದಾರೆ. ಮಾನ್ಯ ಯಡಿಯೂರಪ್ಪ ನವರೇ ಕೊರೋನಾ ಹತೋಟಿಗೆ ತರಲು ಸರ್ಕಾರ ವಿಫಲವಾದ ನಂತರ ಜನರ ಮೇಲೆ ಲಾಠಿ ಪ್ರಹಾರ …

Read More »

ನಾಳೆ ರಾಜ್ಯಾಧ್ಯಂತ ‘ವೀಕ್ ಎಂಡ್ ಕರ್ಪ್ಯೂ’ ಹಿನ್ನಲೆ : ‘KSRTC, BMTC ಬಸ್ ಸಂಚಾರ’ ಇರುತ್ತೋ.? ಇಲ್ಲವೋ.? ಇಲ್ಲಿದೆ ಮಾಹಿತಿ.!

ಬೆಂಗಳೂರು : ನಾಳೆ ರಾಜ್ಯಾಧ್ಯಂಕ ಕೊರೋನಾ ಸೋಂಕಿನ ನಿಯಂತ್ರವಾಗಿ ವೀಕ್ ಎಂಡ್ ಕರ್ಪ್ಯೂ ಜಾರಿಯಲ್ಲಿರಲಿದೆ. ಇಂದು ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವೀಕ್ ಎಂಡ್ ಕರ್ಪ್ಯೂ ಜಾರಿಯಲ್ಲಿ ಇರಲಿದ್ದು, ಮನೆಯಿಂದ ಅನಗತ್ಯವಾಗಿ ಹೊರ ಬರೋರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರು ಸಿದ್ಧತೆ ಕೂಡ ನಡೆಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಅಗತ್ಯ ಸೇವೆ ಒದಗಿಸುವಂತೆ ಕೆ ಎಸ್ ಆರ್ ಟಿ ಸಿ ಹಾಗೂ ಬಿಎಂಟಿಸಿ ಬಸ್ ಸಂಚಾರಕ್ಕೆ …

Read More »

ಖಾಸಗಿ ಕಂಪೆನಿಗಳೊಂದಿಗೆ ಸಾರಿಗೆ ಅಧಿಕಾರಿಗಳ ದೋಸ್ತಿ, ಬೈಕ್‍ಟ್ಯಾಕ್ಸಿ ಚಾಲಕರ ಜತೆ ಕುಸ್ತಿ

ಬೆಂಗಳೂರು,ಏ.22- ಖಾಸಗಿ ಕಂಪೆನಿ ಗಳ ಲಾಭದಾಸೆ, ಅಧಿಕಾರಿಗಳ ಬೇಜವಾಬ್ದಾರಿತನ ದಿಂದಾಗಿ ಬೈಕ್ ಟ್ಯಾಕ್ಸಿ ಸೇವೆಯಲ್ಲಿ ಭಾರೀ ಗೊಂದಲಗಳು ಉಂಟಾಗಿದ್ದು, ಸಂಘರ್ಷದ ವಾತಾವರಣ ನಿರ್ಮಾಣವಾಗಿದೆ. ಬೆಂಗಳೂರಿನಲ್ಲಿ ರ್ಯಾಪಿಡೋ, ಓಲಾ, ಊಬರ್ ಸೇರಿದಂತೆ ಹಲವಾರು ಕಂಪೆನಿಗಳು ಬೈಕ್ ಟ್ಯಾಕ್ಸಿ ಸೇವೆಯನ್ನು ಒದಗಿಸುತ್ತಿವೆ. ಇದು ಸಂಪೂರ್ಣ ಅಕ್ರಮ ಅನಕೃತ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ಔಪಚಾರಿಕವಾಗಿ ಹೇಳುತ್ತಿದ್ದಾರೆ. ಆದರೆ, ರ್ಯಾಪಿಡೊ ಸೇರಿದಂತೆ ಬಹಳಷ್ಟು ಖಾಸಗಿ ಕಂಪೆನಿಗಳು ರಾಜಾರೋಷವಾಗಿ ದೃಶ್ಯ ಮಾಧ್ಯಮಗಳಲ್ಲಿ ಜಾಹಿರಾತು ನೀಡಿ ಗ್ರಾಹಕ …

Read More »

ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಲು ಮನವಿ ಮಾಡಿದ ಶಶಿಕಲಾ ಜೊಲ್ಲೆ

ವಿಜಯಪುರ: ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ನಗರದ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ, ಕೋವಿಡ್‌ನಿಂದ ರಕ್ಷಿಸಿಕೊಳ್ಳಲು ತಪ್ಪದೇ ಮಾಸ್ಕ್‌ ಧರಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು. ನಗರದ ಗಾಂಧಿ ವೃತ್ತ, ಸಿದ್ಧೇಶ್ವರ ದೇವಸ್ಥಾನ ಮಾರ್ಗದಲ್ಲಿ ಬಿಸಿಲನ್ನು ಲೆಕ್ಕಿಸದೆ ಮಾಸ್ಕ್‌ ಧರಿಸುವ ಕುರಿತು ಜನ ಜಾಗೃತಿ ಮೂಡಿಸಿದರು. ಮಹಿಳೆಯರು, ಮಕ್ಕಳು ಹಾಗೂ ವೃದ್ಧರಿಗೆ ಗುಲಾಬಿ ಹೂವು ಹಾಗೂ ಮಾಸ್ಕ್‌ ನೀಡಿ, ತಮ್ಮ ಹಾಗೂ ಕುಟುಂಬದ ಸುರಕ್ಷತೆಗಾಗಿ ಮಾಸ್ಕ ಧರಿಸಲು ಮನವಿ ಮಾಡಿದ್ದು, ಜೊತೆಗೆ …

Read More »

ಬೆಡ್ ಸಿಗದೆ ರೋಗಿ ಪರದಾಟ, ಸೋದರನ ಕಣ್ಣೀರು

ಬೆಂಗಳೂರು, ಏ.23- ಕೋವಿಡ್ ಸೋಂಕಿತರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಲು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದರೂ ಬೆಡ್ ಸೌಕರ್ಯವಿಲ್ಲದೆ ಪರದಾಡುತ್ತಿರುವ ಘಟನೆಗಳು ನಗರದಲ್ಲಿ ಮತ್ತೆ ಮತ್ತೆ ಮರುಕಳಿಸುತ್ತಲೇ ಇವೆ. ನಿನ್ನೆ ರಾತ್ರಿಯಿಂದಲೂ ಸೋಂಕಿರೊಬ್ಬರನ್ನು ಆಸ್ಪತ್ರೆಗೆ ಸೇರಿಸಲು ಕುಟುಂಬಸ್ಥರು ಪರದಾಡುತ್ತ ರಾಜಾಜಿನಗರದ ಸುಗುಣ ಆಸ್ಪತ್ರೆಗೆ ಕರೆತಂದಿದ್ದರು. ಅಲ್ಲಿ ಅವರಿಗೆ ಬೆಡ್ ಖಾಲಿ ಇಲ್ಲದೆ ದಾಖಲಿಸಿಕೊಂಡಿಲ್ಲದ್ದರಿಂದ ದಿಕ್ಕು ತೋಚದೆ ಕುಟುಂಬಸ್ಥರು ತಮ್ಮ ನೋವು ತೋಡಿಕೊಂಡರು.ಮುಂಬೈ ಮೂಲದ ಗೌತಮ್ ಜಯನಗರದ 3ನೆ ಬ್ಲಾಕ್‍ನಲ್ಲಿ ವಾಸವಿದ್ದಾರೆ. ಇವರಿಗೆ ಕೋವಿಡ್ …

Read More »

ಕೊರೊನಾ ನಿರ್ವಹಣೆಗೆ ರಾಜ್ಯ ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ, ಸೂಕ್ತ ಯೋಜನೆಯೂ ಇಲ್ಲ: ಸತೀಶ ಜಾರಕಿಹೊಳಿ

ಬೆಳಗಾವಿ: ಕೊರೊನಾ ನಿರ್ವಹಣೆಗೆ ರಾಜ್ಯ ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ, ಸೂಕ್ತ ಯೋಜನೆಯೂ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಎರಡನೇ ಅಲೆ ಹರಡುವ ಬಗ್ಗೆ ತಜ್ಞರು ಮೊದಲೇ ತಿಳಿಸಿದ್ದರು. ಹೀಗಾಗಿ, ಸರ್ಕಾರ ಆಸ್ಪತ್ರೆಗಳ ತಯಾರಿ, ಬೆಡ್ ಗಳ ವ್ಯವಸ್ಥೆ, ಆಕ್ಸಿಜನ್ ಸಿಲಿಂಡರ್ ಹಾಗೂ ಔಷಧಿಗಳ ಸಂಗ್ರಹಣೆ ಸೇರಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕಿತ್ತು. ಸರ್ಕಾರದ ನಿರ್ಲಕ್ಷ್ಯದಿಂದ ಈಗ ಜನರಿಗೆ …

Read More »

I.P.L. ಸ್ಕೋರ್ ಹೇಳದಕ್ಕೆ ಗಲಾಟೆ – ಜಗಳ ಬಿಡಿಸಲು ಹೋದವನ ಮೇಲೆ ಮಾರಣಾಂತಿಕ ಹಲ್ಲೆ

ಧಾರವಾಡ: ಜಗಳ ಬಿಡಿಸಲು ಹೋದವರಿಗೆನೇ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಧಾರವಾಡ ನಗರದ ಹನುಮಂತನನಗರ ಬಡಾವಣೆಯಲ್ಲಿ ನಡೆದಿದೆ. ರೌಡಿಶೀಟರ್ ಮಂಜುನಾಥ್ ಹಿರೇಮನಿ ಹಾಗೂ ಆತನ ಸಹೋದರರಿಂದಲೇ ಈ ಹಲ್ಲೆ ನಡೆದಿದ್ದು, ಇಟ್ಟಿಗೆಗಳಿಂದ ಹಲ್ಲೆ ಮಾಡಿ ಗಾಯಗೊಳಿಸಲಾಗಿದೆ. ಐಪಿಎಲ್ ಸ್ಕೋರ್ ವಿಚಾರದಲ್ಲಿ ಅಣ್ಣಪ್ಪ ಹಾಗೂ ಲಕ್ಷ್ಮಣ್ ಎಂಬಾತನ ನಡುವೆ ಈ ಜಗಳ ಆರಂಭವಾಗಿತ್ತು. ಅಣ್ಣಪ್ಪ ಕಳೆದ ರಾತ್ರಿ ಲಕ್ಷ್ಮಣನಿಗೆ ಐಪಿಎಲ್ ಸ್ಕೋರ್ ಕೇಳಿದ್ದಾನೆ. ಆಗ ಲಕ್ಷ್ಮಣ್ ಗೊತ್ತಿಲ್ಲ ಎಂದಿದ್ದಕ್ಕೆ ಹಲ್ಲೆ ನಡೆಸಿದ್ದಾರೆ. …

Read More »